Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ: ಅಮರಾವತಿ ಸಂಪೂರ್ಣ ಲಾಕ್‌ಡೌನ್

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ: ಅಮರಾವತಿ ಸಂಪೂರ್ಣ ಲಾಕ್‌ಡೌನ್

ಫೆ.28 ರವರೆಗೆ ಪುಣೆಯ ಜಿಲ್ಲಾಡಳಿತ ಶಾಲೆಗಳು ಮತ್ತು ಕೋಚಿಂಗ್ ಕೇಂದ್ರಗಳನ್ನು ಸ್ಥಗಿತಗೊಳಿಸಿದ ಕೆಲವೇ ಗಂಟೆಗಳ ನಂತರ ಅಮರಾವತಿಯಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ.

- Advertisement -
- Advertisement -

ಮಹಾರಾಷ್ಟ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ ಮಹಾರಾಷ್ಟ್ರದ ಅಮರಾವತಿ  ಜಿಲ್ಲೆಯನ್ನು ಒಂದು ವಾರ ಲಾಕ್‌ಡೌನ್ ಮಾಡಲಾಗಿದೆ. ಸೋಮವಾರ (ಫೆ.22) ಸಂಜೆಯಿಂದ ಲಾಕ್‌ಡೌನ್ ಪ್ರಾರಂಭವಾಗಲಿದೆ ಎಂದು ಕ್ಯಾಬಿನೆಟ್ ಸಚಿವ ಯಶೋಮತಿ ಠಾಕೂರ್ ಹೇಳಿದ್ದಾರೆ.

ಕಟ್ಟುನಿಟ್ಟಾದ ಏಳು ದಿನಗಳ ಲಾಕ್‌ಡೌನ್ ಸಮಯದಲ್ಲಿ ಅಗತ್ಯ ಸೇವೆಗಳನ್ನು ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಜನರು ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದರೆ ಲಾಕ್‌ಡೌನ್ ವಿಸ್ತರಿಸಲಾಗುವುದು ಎಂದು ಹೇಳಿದರು, ಮಹಾರಾಷ್ಟ್ರದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಲೇ ‌ಇರುವುದರಿಂದ ಅನಿವಾರ್ಯವಾಗಿ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಮಹಾರಾಷ್ಟ್ರದಿಂದ ಬರುವವರಿಗೆ ನೆಗೆಟಿವ್ ಆರ್‌ಟಿ-ಪಿಸಿಆರ್‌ ಪ್ರಮಾಣಪತ್ರ ಕಡ್ಡಾಯ

ಫೆಬ್ರವರಿ 28 ರವರೆಗೆ ಪುಣೆಯ ಜಿಲ್ಲಾಡಳಿತ ಶಾಲೆಗಳು ಮತ್ತು ಕೋಚಿಂಗ್ ಕೇಂದ್ರಗಳನ್ನು ಸ್ಥಗಿತಗೊಳಿಸಿದ ಕೆಲವೇ ಗಂಟೆಗಳ ನಂತರ ಅಮರಾವತಿಯಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಕೊರೊನಾ ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಂಡಿದ್ದಾರೆ.

ನಾಗ್ಪುರ, ಅಕೋಲಾ, ಅಮರಾವತಿ, ಯವತ್ಮಾಲ್, ಮುಂಬೈ ಮತ್ತು ಪುಣೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಪರಿಸ್ಥಿತಿಯನ್ನು ಅವಲೋಕಿಸಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆ ಚರ್ಚಿಸಿ, ನಿರ್ಣಯಿಸಿದ ನಂತರ ಲಾಕ್‌ಡೌನ್ ಅಥವಾ ಇತರ ನಿರ್ಬಂಧಗಳ ಬಗ್ಗೆ ನಾವು ಜಿಲ್ಲಾಡಳಿತಕ್ಕೆ ತಿಳಿಸಲಿದ್ದೇವೆ’ ಎಂದು ಸಚಿವ ವಿಜಯ್ ವಾಡೆಟ್ಟಿವಾರ್ ಹೇಳಿದ್ದರು.

ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಕೂಡ ಅಲ್ಲಿಂದ ಬರುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಹೊರಡಿಸಿದ್ದು, ನೆಗೆಟಿವ್ ಆರ್‌ಟಿ-ಪಿಸಿಆರ್‌ ಪ್ರಮಾಣಪತ್ರ ಕಡ್ಡಾಯ ಮಾಡಲಾಗಿದೆ.

“ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ವೈಯಕ್ತಿಕ ಸಾರಿಗೆಯಿಂದ ಬರುವವರು 72 ಗಂಟೆಗಳ ನೆಗೆಟಿವ್ ಆರ್‌ಟಿ-ಪಿಸಿಆರ್ ಪ್ರಮಾಣಪತ್ರ ಹೊಂದಿರಬೇಕೆಂಬುದು ಕಡ್ಡಾಯವಾಗಿರುತ್ತದೆ” ಎಂದು ಆರೋಗ್ಯ ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಕೃಷಿ ಕಾನೂನುಗಳ ರದ್ದತಿಗೆ ಯಾವ ರಾಜ್ಯಗಳೂ ಒತ್ತಾಯಿಸಿಲ್ಲ: ನೀತಿ ಆಯೋಗದ ಉಪಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...