Homeಮುಖಪುಟಮಹಾರಾಷ್ಟ್ರ ರಾಜ್ಯಪಾಲರ ಮಾತಿನಲ್ಲಿ ನಿಯಂತ್ರಣ ಇರಬೇಕಿತ್ತು: ಅಮಿತ್ ಶಾ!

ಮಹಾರಾಷ್ಟ್ರ ರಾಜ್ಯಪಾಲರ ಮಾತಿನಲ್ಲಿ ನಿಯಂತ್ರಣ ಇರಬೇಕಿತ್ತು: ಅಮಿತ್ ಶಾ!

ಪೂಜಾ ಸ್ಥಳಗಳನ್ನು ಪುನಃ ತೆರೆಯುವುದನ್ನು ಮುಂದೂಡಲು ನೀವು ಯಾವುದಾದರೂ ದೈವಿಕ ಮುನ್ಸೂಚನೆಯನ್ನು ಸ್ವೀಕರಿಸಿದ್ದೀರಾ ಅಥವಾ ನೀವು ಜಾತ್ಯತೀತರಾಗಿ ಪರಿವರ್ತನೆಗೊಂಡಿದ್ದೀರಾ ಎಂದು ರಾಜ್ಯಪಾಲರು ಉದ್ಧವ್‌ಗೆ ಪತ್ರ ಬರೆದಿದ್ದರು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಪೂಜಾ ಸ್ಥಳಗಳನ್ನು ಪುನಃ ತೆರೆಯುವ ಕುರಿತು ಮಹಾರಾಷ್ಟ್ರ ಗವರ್ನರ್ ಭಗತ್ ಸಿಂಗ್ ಕೊಶ್ಯರಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರವನ್ನು ಅಮಿತ್ ಶಾ ಉಲ್ಲೇಖೀಸಿ, “ನಿಮ್ಮ ಮಾತುಗಳ ಮೇಲೆ ನಿಯಂತ್ರಣ ಇರಬೇಕಿತ್ತು” ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲರು ಸೋಮವಾರ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ, ರಾಜ್ಯದ ಧಾರ್ಮಿಕ ಸ್ಥಳಗಳನ್ನು ಮುಚ್ಚುವ ನಿರ್ಧಾರವನ್ನು ಪ್ರಶ್ನಿಸಿದ್ದು, “ನಮ್ಮ ದೇವರುಗಳು ಮತ್ತು ದೇವತೆಗಳನ್ನು ಲಾಕ್‌ಡೌನ್‌ನಲ್ಲಿಡುವ ನಿರ್ಧಾರಕ್ಕೆ ನನ್ನ ಖಂಡನೆಯಿದೆ. ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಿರುವುದು ವಿಪರ್ಯಾಸ. ಪೂಜಾ ಸ್ಥಳಗಳನ್ನು ಪುನಃ ತೆರೆಯುವುದನ್ನು ಮುಂದೂಡಲು ನೀವು ಯಾವುದಾದರೂ ದೈವಿಕ ಮುನ್ಸೂಚನೆಯನ್ನು ಸ್ವೀಕರಿಸಿದ್ದೀರಾ ಅಥವಾ ನೀವು ದ್ವೇಷಿಸುತ್ತಿದ್ದ ಪದವಾದ “ಜಾತ್ಯತೀತ”ವಾಗಿಯೇ ಪರಿವರ್ತನೆಗೊಂಡಿದ್ದೀರಾ ಎಂದು ನನಗೆ ಆಶ್ಚರ್ಯವಾಗುತ್ತಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

ಇದರ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಅವರಿಗೆ ಆ ನಿರ್ಧಿಷ್ಟ ಪದಗಳ ಮೇಲೆ ನಿಯಂತ್ರಣ ಇರಬೇಕಿತ್ತು” ಎಂದು ಹೇಳಿದ್ದಾರೆ.

ರಾಜ್ಯಪಾಲರ ಈ ಹೇಳಿಕೆಗೆ ಪ್ರತಿಯಾಗಿ ಉದ್ಧವ್ ಠಾಕ್ರೆ, “ಹಿಂದುತ್ವದ ಪ್ರಮಾಣಪತ್ರವನ್ನು ನಾವು ಯಾರಿಂದಲೂ ಪಡೆದುಕೊಳ್ಳಬೆಕಾಗಿಲ್ಲ” ಎಂದು ಖಾರವಾಗಿ ಹೇಳಿದ್ದರು.

ಅಕ್ಟೋಬರ್ 5 ರಿಂದ ರಾಜ್ಯದಲ್ಲಿ ಬಾರ್ ಮತ್ತು ರೆಸ್ಟೋರೆಂಟ್‌ಗಳು 50% ಗ್ರಾಹಕರಿಗೆ ಮಾತ್ರ ಅವಕಾಶ ನೀಡಿ ಕಾರ್ಯನಿರ್ವಹಿಸಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ

ಈ ಹಿಂದೆ ಹೊರಾಂಗಣ ಕ್ರೀಡಾ ಚಟುವಟಿಕೆಗಳು, ಎಲ್ಲಾ ಅನಿವಾರ್ಯವಲ್ಲದ ಅಂಗಡಿಗಳು ಮತ್ತು ಅಂತರ ಜಿಲ್ಲೆಗಳ ಪ್ರಯಾಣವನ್ನು ನಿರ್ಬಂಧಗಳಿಲ್ಲದೆ ಪುನಃ ಪ್ರಾರಂಭಿಸಲು ಅನುಮತಿ ನೀಡಿತ್ತು. ಆದಾಗ್ಯೂ, ಪೂಜಾ ಸ್ಥಳಗಳನ್ನು ಮತ್ತೆ ತೆರೆಯಲು ಅನುಮತಿಸದಿರಲು ಜನದಟ್ಟಣೆ ಕಾರಣ ಎಂದು ಸರ್ಕಾರ ಉಲ್ಲೇಖಿಸಿದೆ.

ಭಾರತದ ಎಲ್ಲ ರಾಜ್ಯಗಳಲ್ಲಿ ಪೈಕಿ ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ಮಹಾರಾಷ್ಟ್ರದಲ್ಲಿವೆ.

ಇಂದು 10,259 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ, 15,86,321 ಆಗಿದೆ. 1,58,750 ಸಕ್ರಿಯ ಪ್ರಕರಣಗಳಿದ್ದು, 13,58,606 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದುವರೆಗೂ 41,965 ಜನ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ಸಮಾನಾಂತರ ಆಡಳಿತ ಅನಗತ್ಯ: ಮಹಾರಾಷ್ಟ್ರ ರಾಜ್ಯಪಾಲರನ್ನು ತರಾಟೆ ತೆಗೆದುಕೊಂಡ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾಂಕ್ರಾಮಿಕ (ಸಂಸ್ಕ್ರುತ)>ಸೋಂಕು (ಕನ್ನಡ)
    ಪುನಃ(ಸಂಸ್ಕ್ರುತ)_ಮರು
    ನಿಯಂತ್ರಣ… ಕಡಿವಾಣ,ಅಂಕೆ
    ಸ್ಥಳ…ನೆಲೆ
    ದ್ವೇಷ.. ಹಗೆತನ
    ಕ್ರೀಡೆ…ಆಟ
    ಕ್ರೀಡಾ…ಆಟೋಟ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...