Homeಮುಖಪುಟಮಹಾರಾಷ್ಟ್ರ ರಾಜ್ಯಪಾಲರ ಮಾತಿನಲ್ಲಿ ನಿಯಂತ್ರಣ ಇರಬೇಕಿತ್ತು: ಅಮಿತ್ ಶಾ!

ಮಹಾರಾಷ್ಟ್ರ ರಾಜ್ಯಪಾಲರ ಮಾತಿನಲ್ಲಿ ನಿಯಂತ್ರಣ ಇರಬೇಕಿತ್ತು: ಅಮಿತ್ ಶಾ!

ಪೂಜಾ ಸ್ಥಳಗಳನ್ನು ಪುನಃ ತೆರೆಯುವುದನ್ನು ಮುಂದೂಡಲು ನೀವು ಯಾವುದಾದರೂ ದೈವಿಕ ಮುನ್ಸೂಚನೆಯನ್ನು ಸ್ವೀಕರಿಸಿದ್ದೀರಾ ಅಥವಾ ನೀವು ಜಾತ್ಯತೀತರಾಗಿ ಪರಿವರ್ತನೆಗೊಂಡಿದ್ದೀರಾ ಎಂದು ರಾಜ್ಯಪಾಲರು ಉದ್ಧವ್‌ಗೆ ಪತ್ರ ಬರೆದಿದ್ದರು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಪೂಜಾ ಸ್ಥಳಗಳನ್ನು ಪುನಃ ತೆರೆಯುವ ಕುರಿತು ಮಹಾರಾಷ್ಟ್ರ ಗವರ್ನರ್ ಭಗತ್ ಸಿಂಗ್ ಕೊಶ್ಯರಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರವನ್ನು ಅಮಿತ್ ಶಾ ಉಲ್ಲೇಖೀಸಿ, “ನಿಮ್ಮ ಮಾತುಗಳ ಮೇಲೆ ನಿಯಂತ್ರಣ ಇರಬೇಕಿತ್ತು” ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲರು ಸೋಮವಾರ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ, ರಾಜ್ಯದ ಧಾರ್ಮಿಕ ಸ್ಥಳಗಳನ್ನು ಮುಚ್ಚುವ ನಿರ್ಧಾರವನ್ನು ಪ್ರಶ್ನಿಸಿದ್ದು, “ನಮ್ಮ ದೇವರುಗಳು ಮತ್ತು ದೇವತೆಗಳನ್ನು ಲಾಕ್‌ಡೌನ್‌ನಲ್ಲಿಡುವ ನಿರ್ಧಾರಕ್ಕೆ ನನ್ನ ಖಂಡನೆಯಿದೆ. ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಿರುವುದು ವಿಪರ್ಯಾಸ. ಪೂಜಾ ಸ್ಥಳಗಳನ್ನು ಪುನಃ ತೆರೆಯುವುದನ್ನು ಮುಂದೂಡಲು ನೀವು ಯಾವುದಾದರೂ ದೈವಿಕ ಮುನ್ಸೂಚನೆಯನ್ನು ಸ್ವೀಕರಿಸಿದ್ದೀರಾ ಅಥವಾ ನೀವು ದ್ವೇಷಿಸುತ್ತಿದ್ದ ಪದವಾದ “ಜಾತ್ಯತೀತ”ವಾಗಿಯೇ ಪರಿವರ್ತನೆಗೊಂಡಿದ್ದೀರಾ ಎಂದು ನನಗೆ ಆಶ್ಚರ್ಯವಾಗುತ್ತಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

ಇದರ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಅವರಿಗೆ ಆ ನಿರ್ಧಿಷ್ಟ ಪದಗಳ ಮೇಲೆ ನಿಯಂತ್ರಣ ಇರಬೇಕಿತ್ತು” ಎಂದು ಹೇಳಿದ್ದಾರೆ.

ರಾಜ್ಯಪಾಲರ ಈ ಹೇಳಿಕೆಗೆ ಪ್ರತಿಯಾಗಿ ಉದ್ಧವ್ ಠಾಕ್ರೆ, “ಹಿಂದುತ್ವದ ಪ್ರಮಾಣಪತ್ರವನ್ನು ನಾವು ಯಾರಿಂದಲೂ ಪಡೆದುಕೊಳ್ಳಬೆಕಾಗಿಲ್ಲ” ಎಂದು ಖಾರವಾಗಿ ಹೇಳಿದ್ದರು.

ಅಕ್ಟೋಬರ್ 5 ರಿಂದ ರಾಜ್ಯದಲ್ಲಿ ಬಾರ್ ಮತ್ತು ರೆಸ್ಟೋರೆಂಟ್‌ಗಳು 50% ಗ್ರಾಹಕರಿಗೆ ಮಾತ್ರ ಅವಕಾಶ ನೀಡಿ ಕಾರ್ಯನಿರ್ವಹಿಸಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ

ಈ ಹಿಂದೆ ಹೊರಾಂಗಣ ಕ್ರೀಡಾ ಚಟುವಟಿಕೆಗಳು, ಎಲ್ಲಾ ಅನಿವಾರ್ಯವಲ್ಲದ ಅಂಗಡಿಗಳು ಮತ್ತು ಅಂತರ ಜಿಲ್ಲೆಗಳ ಪ್ರಯಾಣವನ್ನು ನಿರ್ಬಂಧಗಳಿಲ್ಲದೆ ಪುನಃ ಪ್ರಾರಂಭಿಸಲು ಅನುಮತಿ ನೀಡಿತ್ತು. ಆದಾಗ್ಯೂ, ಪೂಜಾ ಸ್ಥಳಗಳನ್ನು ಮತ್ತೆ ತೆರೆಯಲು ಅನುಮತಿಸದಿರಲು ಜನದಟ್ಟಣೆ ಕಾರಣ ಎಂದು ಸರ್ಕಾರ ಉಲ್ಲೇಖಿಸಿದೆ.

ಭಾರತದ ಎಲ್ಲ ರಾಜ್ಯಗಳಲ್ಲಿ ಪೈಕಿ ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ಮಹಾರಾಷ್ಟ್ರದಲ್ಲಿವೆ.

ಇಂದು 10,259 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ, 15,86,321 ಆಗಿದೆ. 1,58,750 ಸಕ್ರಿಯ ಪ್ರಕರಣಗಳಿದ್ದು, 13,58,606 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದುವರೆಗೂ 41,965 ಜನ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ಸಮಾನಾಂತರ ಆಡಳಿತ ಅನಗತ್ಯ: ಮಹಾರಾಷ್ಟ್ರ ರಾಜ್ಯಪಾಲರನ್ನು ತರಾಟೆ ತೆಗೆದುಕೊಂಡ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾಂಕ್ರಾಮಿಕ (ಸಂಸ್ಕ್ರುತ)>ಸೋಂಕು (ಕನ್ನಡ)
    ಪುನಃ(ಸಂಸ್ಕ್ರುತ)_ಮರು
    ನಿಯಂತ್ರಣ… ಕಡಿವಾಣ,ಅಂಕೆ
    ಸ್ಥಳ…ನೆಲೆ
    ದ್ವೇಷ.. ಹಗೆತನ
    ಕ್ರೀಡೆ…ಆಟ
    ಕ್ರೀಡಾ…ಆಟೋಟ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...