Homeಮುಖಪುಟಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

- Advertisement -
- Advertisement -

ಮಹಾರಾಷ್ಟ್ರದ ಆಢಳಿತರೂಡ ‘ಮಹಾಯುತಿ’ ಮೈತ್ರಿಕೂಟ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಪ್ರತಿಪಕ್ಷಗಳ ಒಕ್ಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ಕೂಡ ಇಂದು (ನ.7) ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿದೆ.

ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರ ಸಮ್ಮುಖದಲ್ಲಿ ಬಿಕೆಸಿಯಲ್ಲಿ ನಡೆದ ಎಂವಿಎ ಸಮಾವೇಶದಲ್ಲಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮಹಿಳೆಯರಿಗೆ ಮಾಸಿಕ 3 ಸಾವಿರ ರೂ. ಧನ ಸಹಾಯ, ‘ಮಹಾಲಕ್ಷಿ’ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಎಂವಿಎ ಅಧಿಕಾರಕ್ಕೆ ಬಂದರೆ ನೀಡಲಿದೆ ಎಂದು ಭರವಸೆ ನೀಡಿದರು.

ಉಚಿತ ಔಷಧಿಯೊಂದಿಗೆ 25 ಲಕ್ಷದ ರೂಪಾಯಿ ಉಚಿತ ಕುಟುಂಬ ವಿಮಾ ಯೋಜನೆ, ರೂ. 3 ಲಕ್ಷದವರೆಗಿನ ರೈತರ ಸಾಲ ಮನ್ನಾ ಜೊತೆಗೆ ಸಾಲ ಮರುಪಾವತಿ ಮಾಡದವರಿಗೆ ರೂ. 50,000 ಪ್ರೋತ್ಸಾಹ ಧನ, ಜಾತಿಗಣತಿ ನಡೆಸುವುದು, ಮೀಸಲಾತಿ ಮೇಲಿನ 50 ಶೇ. ಮಿತಿ ತೆಗೆದು ಹಾಕುವುದು, ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಮಾಸಿಕ 4 ಸಾವಿರ ರೂ. ಧನ ಸಹಾಯ ನೀಡುವುದು ಸೇರಿದಂತೆ ಇನ್ನೂ ಅನೇಕ ಭರವೆಸಗಳನ್ನು ಎಂವಿಎ ಜನರಿಗೆ ನೀಡಿದೆ.

ಸಮಾವೇಶದಲ್ಲಿ ಭಾಗವಹಿಸಿದ್ದ ನಾಯಕರು ಸಿಎಂ ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಸರ್ಕಾರವು ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದರು. ಮಹಾಯುತಿ ಸರ್ಕಾರವನ್ನು ಬಿಜೆಪಿಯು ಏಕನಾಥ್ ಶಿಂಧೆಯವರ ಜೊತೆಗೂಡಿ ರಹಸ್ಯವಾಗಿ ರಚಿಸಿದೆ ಎಂದು ಆರೋಪಿಸಿದ್ದಾರೆ.

ಸಂವಿಧಾನವನ್ನು ಆದಷ್ಟು ಬೇಗ ತೆಗೆದು ಹಾಕಲು ಎನ್‌ಡಿಎ ಮತ್ತು ಆರ್‌ಎಸ್‌ಎಸ್‌ ಸಿದ್ದತೆ ನಡೆಸುತ್ತಿದೆ. ಹಾಗಾಗಿ, ಸಂವಿಧಾನ ರಕ್ಷಣೆಗೆ ರಾಷ್ಟ್ರವ್ಯಾಪಿ ಚಳವಳಿಯ ಅಗತ್ಯವಿದೆ ಎಂದು ಎಂವಿಎ ನಾಯಕರು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಅವರು ಯುವಕರಿಗೆ ಆರ್ಥಿಕ ನೆರವು ನೀಡುವ ಕುರಿತು ಸುದೀರ್ಘವಾಗಿ ಮಾತನಾಡಿದರು.  ಧಾರಾವಿ ಯೋಜನೆ ಸೇರಿದಂತೆ ಅದಾನಿ ಜೊತೆಗಿನ ಎಲ್ಲಾ ಟೆಂಡರ್‌ಗಳನ್ನು ರದ್ದುಗೊಳಿಸುತ್ತೇವೆ ಎಂದು ಪುನರುಚ್ಚರಿಸಿದರು. ಶರದ್ ಪವಾರ್ ಸಾಲ ಮನ್ನಾ ಯೋಜನೆ ಕುರಿತು ಸುದೀರ್ಘವಾಗಿ ಮಾತನಾಡಿದರು.

ಇದನ್ನೂ ಓದಿ : ಮಹಾರಾಷ್ಟ್ರ ಬದಲಾವಣೆ ಬಯಸುತ್ತಿದೆ, ನಮ್ಮ ಮೈತ್ರಿ ಅದಕ್ಕಾಗಿ ಕೆಲಸ ಮಾಡುತ್ತಿದೆ: ಶರದ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...