Homeಮುಖಪುಟಚುನಾವಣೆ ಹೊಸ್ತಿಲಲ್ಲಿ ಶಿವಸೇನೆಗೆ ಬಿಗ್ ಶಾಕ್: 26 ಕಾರ್ಪೊರೇಟರ್, 300 ಕಾರ್ಯಕರ್ತರ ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಶಿವಸೇನೆಗೆ ಬಿಗ್ ಶಾಕ್: 26 ಕಾರ್ಪೊರೇಟರ್, 300 ಕಾರ್ಯಕರ್ತರ ರಾಜೀನಾಮೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ಈಗಾಗಲೇ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿದ್ದು, ಸ್ಥಾನಗಳನ್ನೂ ಹಂಚಿಕೊಂಡಿವೆ. ಆದರೆ ಸೀಟು ಹಂಚಿಕೆ ಬಗ್ಗೆ ಶಿವಸೇನೆ ಕಾರ್ಯಕರ್ತರು ಮತ್ತು ಪ್ರಮುಖರು ಅಸಮಾಧಾನಗೊಂಡಿದ್ದು, ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಚುನಾವಣೆಗೆ ಕೆಲ ದಿನಗಳು ಬಾಕಿಯಿದ್ದಾಗಲೇ ಕಾರ್ಯಕರ್ತರು ರಾಜೀನಾಮೆ ನೀಡಿರುವುದು ಶಿವಸೇನೆಗೆ ಶಾಕ್ ನೀಡಿದೆ.

ಶಿವಸೇನೆಯ 26 ಕಾರ್ಪೋರೇಟರ್ ಗಳು, ಸುಮಾರು 300 ಕಾರ್ಯಕರ್ತರು ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಸೀಟು ಹಂಚಿಕೆಯಲ್ಲಿ ಬಿಜೆಪಿ ತಾರತಮ್ಯ ಮಾಡಿದೆ. ಪ್ರಮುಖ ಸ್ಥಾನಗಳನ್ನು ತಾನು ತೆಗೆದುಕೊಂಡು, ಚಿಕ್ಕ ಚಿಕ್ಕ ಸ್ಥಾನಗಳನ್ನು ಶಿವಸೇನೆಗೆ ನೀಡಿದೆ. ಪೂರ್ವದ ಕಲ್ಯಾಣ ಕ್ಷೇತ್ರವನ್ನು ಶಿವಸೇನೆಗೆ ಬಿಟ್ಟು ಕೊಡುವಂತೆ ಶಿವಸೇನೆ ಒತ್ತಾಯಿಸಿದ್ದರೂ ಪ್ರಯೋಜನವಾಗಲಿಲ್ಲ. ಪಕ್ಷ ಯಾವುದೇ ಮುಜುಗರಕ್ಕೆ ಒಳಗಾಗದಿರಲಿ ಎಂದು ಮನನೊಂದು ರಾಜೀನಾಮೆ ನೀಡಿದ್ದೇವೆಂದು ಕಾರ್ಯಕರ್ತರು ಹೇಳಿದ್ದಾರೆ.

ರಾಜೀನಾಮೆ ಸಲ್ಲಿಸಿರುವ ಶರದ್ ಪಾಟೀಲ್ ಮಾತನಾಡಿ, ರಾಜೀನಾಮೆ ಪತ್ರಗಳನ್ನು ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ, ಕ್ಯಾಬಿನೆಟ್ ಮಿನಿಸ್ಟರ್ ಏಕನಾಥ್ ಶಿಂಧೆ, ಕಲ್ಯಾಣ ಎಂ.ಪಿ ಶ್ರೀಕಾಂತ್ ಶಿಂಧೆಗೆ ರವಾನಿಸಿದ್ದಾಗಿ ತಿಳಿಸಿದ್ದಾರೆ.

ಹೌದು… ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಾಬಲ್ಯವಿರುವ ಪಕ್ಷ ಶಿವಸೇನೆ. ಹಿಂದೂ ಹಾಗೂ ಮರಾಠಿಗರು ಬೆಂಬಲಿಸುವ ಪಕ್ಷ ಶಿವಸೇನೆ. ರಾಜ್ಯದಲ್ಲಿ ಒಟ್ಟು 288 ವಿಧಾನಸಭೆ ಕ್ಷೇತ್ರಗಳಿವೆ. ಪ್ರತಿಸಲದಂತೆ ಈ ಬಾರಿಯೂ ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಸೀಟು ಹಂಚಿಕೆ ಗೊಂದಲ ಸೃಷ್ಟಿಯಾಗಿತ್ತು. 120ಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಶಿವಸೇನೆಗೆ ಬಿಟ್ಟುಕೊಡಬೇಕು ಎಂದು ಉದ್ಧವ್ ಠಾಕ್ರೆ ಪಟ್ಟು ಹಿಡಿದಿದ್ದರು. ಅದರಂತೆ ಬಿಜೆಪಿ 150 ಸ್ಥಾನಗಳನ್ನು ಇಟ್ಟುಕೊಂಡು, ಶಿವಸೇನೆಗೆ 124 ಸ್ಥಾನಗಳನ್ನು ಬಿಟ್ಟು ಕೊಟ್ಟಿದೆ. ಆದರೆ ಶಿವಸೇನೆ ಪ್ರಮುಖರು ಮತ್ತು ಕಾರ್ಯಕರ್ತರು ಬಿಜೆಪಿ ನಡೆಯಿಂದ ಬೇಸರಗೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಪರಿಶ್ರಮ ವಹಿಸಿ ಕೆಲಸ ಮಾಡುವ ಶಿವಸೇನೆಗೆ ಕಡಿಮೆ ಸೀಟು ನೀಡಿರುವುದರಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಚುನಾವಣೆಗೆ ಬಿಜೆಪಿ ಹಾಗೂ ಶಿವಸೇನೆ ಮಧ್ಯೆ 50:50 ಸೀಟು ಹಂಚಿಕೆಯಾಗುತ್ತೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಶಿವಸೇನೆಗೆ ಕೇವಲ 124 ಸ್ಥಾನ ನೀಡಿರುವ ಬಿಜೆಪಿ 150 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಶಿವಸೇನೆಯ ನಾಯಕ ಧನಂಜಯ್ ಬೋಡಾರೆ ಮಾತನಾಡಿ, ನಾನು ಈ ಭಾರಿ ವಿಧಾನಸಭೆ ಚುನಾವಣೆಯಲ್ಲಿ ಪೂರ್ವ ಕಲ್ಯಾಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಅಲ್ಲಿ 10 ವರ್ಷಗಳಿಂದ ಮೂಲ ಸೌಕರ್ಯ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಆದರೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟು ಕೊಡಲಾಗಿದೆ ಎಂದು ಅತೃಪ್ತಿ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...