Homeಮುಖಪುಟ₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : 'ಮಹಾ' ಚುನಾವಣೆಗೆ ಮುನ್ನ ರಹಸ್ಯ ಬಯಲು

₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : ‘ಮಹಾ’ ಚುನಾವಣೆಗೆ ಮುನ್ನ ರಹಸ್ಯ ಬಯಲು

- Advertisement -
- Advertisement -

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳ ಸಮಗ್ರತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ.₹53 ಕೋಟಿಗೆ 

ಏಕೆಂದರೆ, ಸ್ವಘೋಷಿತ ಸೈಬರ್ ಎಕ್ಸ್‌ಪರ್ಟ್‌ ಓರ್ವ ಹಣ ಪಡೆದು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಡುವುದಾಗಿ ಇಂಡಿಯಾ ಟುಡೇ ರಹಸ್ಯ ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿದ್ದಾನೆ.

ಇಂಡಿಯಾ ಟುಡೇ ವರದಿಯ ಪ್ರಕಾರ, ಸೈಯದ್ ಶುಜಾ ಎಂಬಾತ ತಾನು ಯುಎಸ್ ರಕ್ಷಣಾ ಇಲಾಖೆಯ ತಂತ್ರಜ್ಞಾನ ಬಳಸಿಕೊಂಡು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುತ್ತೇನೆ ಎಂದಿದ್ದಾನೆ. ಯುಎಸ್ ರಕ್ಷಣಾ ಇಲಾಖೆ ಜೊತೆ ತಾನು ಗುತ್ತಿಗೆ ಹೊಂದಿದ್ದೆ ಎಂದು ಹೇಳಿಕೊಂಡಿದ್ದಾನೆ.₹53 ಕೋಟಿಗೆ 

ಇವಿಎಂ ಹ್ಯಾಕ್ ಮಾಡಲಾಗಿದೆ ಎಂದು ಸೈಯದ್ ಶುಜಾ ಅನೇಕ ಚುನಾವಣೆಗಳ ಸಂದರ್ಭ ಆರೋಪಿಸಿದ್ದ. ವಿಶೇಷವಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ್ದ 2014ರ ಲೋಕಸಭೆ ಚುನಾವಣೆಯಲ್ಲಿ ಈ ಆರೋಪ ಮಾಡಿದ್ದ. ಈ ಬಾರಿ ಮಹಾರಾಷ್ಟ್ರದ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯ ನಾಯಕರೊಬ್ಬರು ನನ್ನನ್ನು ಸಂಪರ್ಕಿಸಿದ್ದಾರೆ ಎಂದಿದ್ದಾನೆ.

ಇಂಡಿಯಾ ಟುಡೇ ವರದಿಗಾರರು ಮಹಾರಾಷ್ಟ್ರದ ಸಂಸದರೊಬ್ಬರ ಆಪ್ತ ಸಹಾಯಕನಂತೆ ಸೈಯದ್ ಶುಜಾನನ್ನು ಸಂಪರ್ಕಿಸಿದ್ದರು. ಈ ವೇಳೆ ಆತ, ತನ್ನ ಬಳಿ ರಾಜ್ಯದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 281 ಕ್ಷೇತ್ರಗಳ ಆಕ್ಸೆಸ್ (ಪ್ರವೇಶ) ಇದ್ದು, ವಿವಿಪ್ಯಾಟ್ ವಿವರಗಳನ್ನು ಒದಗಿಸಿದರೆ 63 ಕ್ಷೇತ್ರಗಳ ಇವಿಎಂಗಳನ್ನು ಟ್ಯಾಂಪರ್ ಮಾಡಿಕೊಡುತ್ತೇನೆ ಎಂದು ಒಪ್ಪಿಕೊಂಡಿದ್ದಾಗಿ ಎಂದು ತಿಳಿದು ಬಂದಿದೆ.

ವಿವಿಪ್ಯಾಟ್ ವಿವರ ಬಳಸಿಕೊಂಡು ನೀವು ಹೇಗೆ ಇವಿಎಂ ಟ್ಯಾಂಪರ್ ಮಾಡುತ್ತೀರಿ? ಎಂದು ವರದಿಗಾರ ಕೇಳಿದ್ದಕ್ಕೆ “ನಾನು ಫೈಲ್ ಪ್ರಿ ಪ್ರೋಗ್ರಾಂ ಮಾಡಿ ಇಟ್ಟಿರುತ್ತೇನೆ. ಉದಾಹರಣೆಗೆ ಅದು ಬಿಜೆಪಿ ಪರ ಫೈಲ್ ಆಗಿದ್ದರೆ, ಚುನಾವಣೆಯ ದಿನದಂದು ಟ್ರಾನ್ಸ್‌ಮಿಷನ್ ಪ್ರಾರಂಭವಾಗುವಾಗ, ಅವರ ಫೈಲ್ ತಡೆದು, ನನ್ನ ಫೈಲ್ ಅನ್ನು ಚುನಾವಣಾ ಆಯೋಗಕ್ಕೆ ಕಳುಹಿಸುತ್ತೇನೆ” ಎಂದು ಸೈಯದ್ ಶುಜಾ ಹೇಳಿಕೊಂಡಿರುವುದಾಗಿ ಇಂಡಿಯಾ ಟುಡೇ ವಿವರಿಸಿದೆ. ಇವಿಎಂಗಳು ಆನ್ ಇಲ್ಲದಿದ್ದರೂ ಟ್ರಾನ್ಸ್‌ಮಿಷನ್ ಮುಂದುವರಿಯುತ್ತದೆ ಎಂದು ಶುಜಾ ತಿಳಿಸಿದ್ದಾನೆ ಎಂದಿದೆ.

“ಇವಿಎಂ ತೆರೆದಾಗ, ಹೊಸ ಫೈಲ್ ಬರುತ್ತದೆ. ನಂತರ ಟ್ರಾನ್ಸ್‌ಮಿಷನ್ ಎಣಿಸಲಾಗುತ್ತದೆ. ಈ ಪ್ರಕ್ರಿಯೆ ಬಹಳ ಸುಲಭದ್ದಾಗಿದೆ. ಇವಿಎಂ ಟ್ಯಾಂಪರ್ ಮಾಡಿದ ಮುಂದಿನ ಮೂರು ದಿನಗಳವರೆಗೆ ನಾನು ಜಾಗರೂಕನಾಗಿರಬೇಕು. ಟ್ರಾನ್ಸ್‌ಮಿಷನ್ ಆಗುತ್ತಿದೆಯೋ ಇಲ್ಲವೋ ಎಂದು ಪ್ರತಿ ಗಂಟೆಗೆ ಸ್ಕ್ಯಾನ್ ಮಾಡಬೇಕು” ಎಂದು ಶುಜಾ ಹೇಳಿಕೊಂಡಿದ್ದಾನೆ.

ಗಣಿತಶಾಸ್ತ್ರದಲ್ಲಿ ಪಿಹೆಚ್‌ಡಿ ಮೈನರ್ ಆಗಿರುವ ಶುಜಾ ಇವಿಎಂ ಹ್ಯಾಕ್ ಮಾಡುವ ತನ್ನ ಕೆಲಸಕ್ಕಾಗಿ 6 ಮಿಲಿಯನ್ ಡಾಲರ್ (ಅಂದಾಜು ರೂ. 52-53 ಕೋಟಿ) ಬೇಡಿಕೆಯಿಟ್ಟಿದ್ದಾನೆ. ಇವಿಎಂ ಹ್ಯಾಕಿಂಗ್ ಕುರಿತು ಶುಜಾ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. 2019ರಲ್ಲಿ, ಶುಜಾ ಇವಿಎಂಗಳನ್ನು ಹ್ಯಾಕ್ ಮತ್ತು ರಿಗ್ಗಿಂಗ್ ಮಾಡಿರುವುದಾಗಿ ಆರೋಪಿಸಿ ಚುನಾವಣಾ ಆಯೋಗ ದೆಹಲಿ ಪೊಲೀರಿಗೆ ದೂರು ನೀಡಿತ್ತು. ಪೊಲೀಸರು ಪ್ರಕರಣ ದಾಖಲಿಸಿದ್ದರು.

ಸ್ಕೈಪ್ ಮೂಲಕ ಲಂಡನ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶುಜಾ, 2014 ರಲ್ಲಿ ತನ್ನ ತಂಡದ ಸದಸ್ಯರನ್ನು ಕೊಂದ ನಂತರ ದೇಶದಲ್ಲಿ ಬೆದರಿಕೆ ಇದೆ ಎಂದು ಭಾವಿಸಿದ್ದರಿಂದ ಭಾರತದಿಂದ ಪಲಾಯನ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಚುನಾವಣೆಯಲ್ಲಿ ಇವಿಎಂ ಹ್ಯಾಕಿಂಗ್ ಬಗ್ಗೆ ತಿಳಿದಿದ್ದರಿಂದ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರನ್ನು ‘ಕೊಲ್ಲಲಾಗಿದೆ’ ಎಂದು ಶುಜಾ ಆರೋಪಿಸಿದ್ದಾನೆ.

ಇವಿಎಂ ಟ್ಯಾಂಪರಿಂಗ್‌ನ ಆರೋಪಗಳು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೂ ಮಹಾರಾಷ್ಟ್ರದಲ್ಲಿ ಪ್ರತಿಧ್ವನಿಸಿತ್ತು. ಗೆದ್ದ ಶಿವಸೇನಾ ಸಂಸದ ರವೀಂದ್ರ ವೈಕರ್ ಅವರ ಸಂಬಂಧಿಯೋರ್ವ ಮತ ಎಣಿಕೆ ಕೇಂದ್ರದಲ್ಲಿ ಇವಿಎಂ ಹ್ಯಾಕ್ ಮಾಡಲು ಮೊಬೈಲ್ ಮೂಲಕ ಒಟಿಪಿ ಕ್ರಿಯೇಟ್ ಮಾಡುತ್ತಿದ್ದುದು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಚುನಾವಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಆಗಿದೆ ಎಂದು ಕಾಂಗ್ರೆಸ್ ಮಾಡಿದ್ದ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿತ್ತು. ಪ್ರತಿ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್ ಚುನಾವಣಾ ಆಯೋಗದ ಮೇಲೆ ಅನುಮಾನ ವ್ಯಕ್ತಪಡಿಸಿದೆ. ಇದು ಒಂದು ರಾಷ್ಟ್ರೀಯ ಪಕ್ಷದ ಕೀಳು ನಡೆ ಎಂದು ಹೇಳಿಕೊಂಡಿತ್ತು.

ಹರಿಯಾಣದ ಸುಮಾರು 26 ಕ್ಷೇತ್ರಗಳಲ್ಲಿ ಇವಿಎಂ ಟ್ಯಾಂಪರಿಂಗ್ ಆದ ಕುರಿತು ಅನುಮಾನ ವ್ಯಕ್ತಪಡಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿತ್ತು. ಇವಿಎಂಗಳ ಬ್ಯಾಟರಿಯ ಭಿನ್ನತೆಗಳ ಕುರಿತು ಗಮನ ಸೆಳೆದಿತ್ತು. ಆದರೆ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...