Homeಮುಖಪುಟ₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : 'ಮಹಾ' ಚುನಾವಣೆಗೆ ಮುನ್ನ ರಹಸ್ಯ ಬಯಲು

₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : ‘ಮಹಾ’ ಚುನಾವಣೆಗೆ ಮುನ್ನ ರಹಸ್ಯ ಬಯಲು

- Advertisement -
- Advertisement -

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳ ಸಮಗ್ರತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ.₹53 ಕೋಟಿಗೆ 

ಏಕೆಂದರೆ, ಸ್ವಘೋಷಿತ ಸೈಬರ್ ಎಕ್ಸ್‌ಪರ್ಟ್‌ ಓರ್ವ ಹಣ ಪಡೆದು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಡುವುದಾಗಿ ಇಂಡಿಯಾ ಟುಡೇ ರಹಸ್ಯ ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿದ್ದಾನೆ.

ಇಂಡಿಯಾ ಟುಡೇ ವರದಿಯ ಪ್ರಕಾರ, ಸೈಯದ್ ಶುಜಾ ಎಂಬಾತ ತಾನು ಯುಎಸ್ ರಕ್ಷಣಾ ಇಲಾಖೆಯ ತಂತ್ರಜ್ಞಾನ ಬಳಸಿಕೊಂಡು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುತ್ತೇನೆ ಎಂದಿದ್ದಾನೆ. ಯುಎಸ್ ರಕ್ಷಣಾ ಇಲಾಖೆ ಜೊತೆ ತಾನು ಗುತ್ತಿಗೆ ಹೊಂದಿದ್ದೆ ಎಂದು ಹೇಳಿಕೊಂಡಿದ್ದಾನೆ.₹53 ಕೋಟಿಗೆ 

ಇವಿಎಂ ಹ್ಯಾಕ್ ಮಾಡಲಾಗಿದೆ ಎಂದು ಸೈಯದ್ ಶುಜಾ ಅನೇಕ ಚುನಾವಣೆಗಳ ಸಂದರ್ಭ ಆರೋಪಿಸಿದ್ದ. ವಿಶೇಷವಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ್ದ 2014ರ ಲೋಕಸಭೆ ಚುನಾವಣೆಯಲ್ಲಿ ಈ ಆರೋಪ ಮಾಡಿದ್ದ. ಈ ಬಾರಿ ಮಹಾರಾಷ್ಟ್ರದ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯ ನಾಯಕರೊಬ್ಬರು ನನ್ನನ್ನು ಸಂಪರ್ಕಿಸಿದ್ದಾರೆ ಎಂದಿದ್ದಾನೆ.

ಇಂಡಿಯಾ ಟುಡೇ ವರದಿಗಾರರು ಮಹಾರಾಷ್ಟ್ರದ ಸಂಸದರೊಬ್ಬರ ಆಪ್ತ ಸಹಾಯಕನಂತೆ ಸೈಯದ್ ಶುಜಾನನ್ನು ಸಂಪರ್ಕಿಸಿದ್ದರು. ಈ ವೇಳೆ ಆತ, ತನ್ನ ಬಳಿ ರಾಜ್ಯದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 281 ಕ್ಷೇತ್ರಗಳ ಆಕ್ಸೆಸ್ (ಪ್ರವೇಶ) ಇದ್ದು, ವಿವಿಪ್ಯಾಟ್ ವಿವರಗಳನ್ನು ಒದಗಿಸಿದರೆ 63 ಕ್ಷೇತ್ರಗಳ ಇವಿಎಂಗಳನ್ನು ಟ್ಯಾಂಪರ್ ಮಾಡಿಕೊಡುತ್ತೇನೆ ಎಂದು ಒಪ್ಪಿಕೊಂಡಿದ್ದಾಗಿ ಎಂದು ತಿಳಿದು ಬಂದಿದೆ.

ವಿವಿಪ್ಯಾಟ್ ವಿವರ ಬಳಸಿಕೊಂಡು ನೀವು ಹೇಗೆ ಇವಿಎಂ ಟ್ಯಾಂಪರ್ ಮಾಡುತ್ತೀರಿ? ಎಂದು ವರದಿಗಾರ ಕೇಳಿದ್ದಕ್ಕೆ “ನಾನು ಫೈಲ್ ಪ್ರಿ ಪ್ರೋಗ್ರಾಂ ಮಾಡಿ ಇಟ್ಟಿರುತ್ತೇನೆ. ಉದಾಹರಣೆಗೆ ಅದು ಬಿಜೆಪಿ ಪರ ಫೈಲ್ ಆಗಿದ್ದರೆ, ಚುನಾವಣೆಯ ದಿನದಂದು ಟ್ರಾನ್ಸ್‌ಮಿಷನ್ ಪ್ರಾರಂಭವಾಗುವಾಗ, ಅವರ ಫೈಲ್ ತಡೆದು, ನನ್ನ ಫೈಲ್ ಅನ್ನು ಚುನಾವಣಾ ಆಯೋಗಕ್ಕೆ ಕಳುಹಿಸುತ್ತೇನೆ” ಎಂದು ಸೈಯದ್ ಶುಜಾ ಹೇಳಿಕೊಂಡಿರುವುದಾಗಿ ಇಂಡಿಯಾ ಟುಡೇ ವಿವರಿಸಿದೆ. ಇವಿಎಂಗಳು ಆನ್ ಇಲ್ಲದಿದ್ದರೂ ಟ್ರಾನ್ಸ್‌ಮಿಷನ್ ಮುಂದುವರಿಯುತ್ತದೆ ಎಂದು ಶುಜಾ ತಿಳಿಸಿದ್ದಾನೆ ಎಂದಿದೆ.

“ಇವಿಎಂ ತೆರೆದಾಗ, ಹೊಸ ಫೈಲ್ ಬರುತ್ತದೆ. ನಂತರ ಟ್ರಾನ್ಸ್‌ಮಿಷನ್ ಎಣಿಸಲಾಗುತ್ತದೆ. ಈ ಪ್ರಕ್ರಿಯೆ ಬಹಳ ಸುಲಭದ್ದಾಗಿದೆ. ಇವಿಎಂ ಟ್ಯಾಂಪರ್ ಮಾಡಿದ ಮುಂದಿನ ಮೂರು ದಿನಗಳವರೆಗೆ ನಾನು ಜಾಗರೂಕನಾಗಿರಬೇಕು. ಟ್ರಾನ್ಸ್‌ಮಿಷನ್ ಆಗುತ್ತಿದೆಯೋ ಇಲ್ಲವೋ ಎಂದು ಪ್ರತಿ ಗಂಟೆಗೆ ಸ್ಕ್ಯಾನ್ ಮಾಡಬೇಕು” ಎಂದು ಶುಜಾ ಹೇಳಿಕೊಂಡಿದ್ದಾನೆ.

ಗಣಿತಶಾಸ್ತ್ರದಲ್ಲಿ ಪಿಹೆಚ್‌ಡಿ ಮೈನರ್ ಆಗಿರುವ ಶುಜಾ ಇವಿಎಂ ಹ್ಯಾಕ್ ಮಾಡುವ ತನ್ನ ಕೆಲಸಕ್ಕಾಗಿ 6 ಮಿಲಿಯನ್ ಡಾಲರ್ (ಅಂದಾಜು ರೂ. 52-53 ಕೋಟಿ) ಬೇಡಿಕೆಯಿಟ್ಟಿದ್ದಾನೆ. ಇವಿಎಂ ಹ್ಯಾಕಿಂಗ್ ಕುರಿತು ಶುಜಾ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. 2019ರಲ್ಲಿ, ಶುಜಾ ಇವಿಎಂಗಳನ್ನು ಹ್ಯಾಕ್ ಮತ್ತು ರಿಗ್ಗಿಂಗ್ ಮಾಡಿರುವುದಾಗಿ ಆರೋಪಿಸಿ ಚುನಾವಣಾ ಆಯೋಗ ದೆಹಲಿ ಪೊಲೀರಿಗೆ ದೂರು ನೀಡಿತ್ತು. ಪೊಲೀಸರು ಪ್ರಕರಣ ದಾಖಲಿಸಿದ್ದರು.

ಸ್ಕೈಪ್ ಮೂಲಕ ಲಂಡನ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶುಜಾ, 2014 ರಲ್ಲಿ ತನ್ನ ತಂಡದ ಸದಸ್ಯರನ್ನು ಕೊಂದ ನಂತರ ದೇಶದಲ್ಲಿ ಬೆದರಿಕೆ ಇದೆ ಎಂದು ಭಾವಿಸಿದ್ದರಿಂದ ಭಾರತದಿಂದ ಪಲಾಯನ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಚುನಾವಣೆಯಲ್ಲಿ ಇವಿಎಂ ಹ್ಯಾಕಿಂಗ್ ಬಗ್ಗೆ ತಿಳಿದಿದ್ದರಿಂದ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರನ್ನು ‘ಕೊಲ್ಲಲಾಗಿದೆ’ ಎಂದು ಶುಜಾ ಆರೋಪಿಸಿದ್ದಾನೆ.

ಇವಿಎಂ ಟ್ಯಾಂಪರಿಂಗ್‌ನ ಆರೋಪಗಳು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೂ ಮಹಾರಾಷ್ಟ್ರದಲ್ಲಿ ಪ್ರತಿಧ್ವನಿಸಿತ್ತು. ಗೆದ್ದ ಶಿವಸೇನಾ ಸಂಸದ ರವೀಂದ್ರ ವೈಕರ್ ಅವರ ಸಂಬಂಧಿಯೋರ್ವ ಮತ ಎಣಿಕೆ ಕೇಂದ್ರದಲ್ಲಿ ಇವಿಎಂ ಹ್ಯಾಕ್ ಮಾಡಲು ಮೊಬೈಲ್ ಮೂಲಕ ಒಟಿಪಿ ಕ್ರಿಯೇಟ್ ಮಾಡುತ್ತಿದ್ದುದು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಚುನಾವಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಆಗಿದೆ ಎಂದು ಕಾಂಗ್ರೆಸ್ ಮಾಡಿದ್ದ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿತ್ತು. ಪ್ರತಿ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್ ಚುನಾವಣಾ ಆಯೋಗದ ಮೇಲೆ ಅನುಮಾನ ವ್ಯಕ್ತಪಡಿಸಿದೆ. ಇದು ಒಂದು ರಾಷ್ಟ್ರೀಯ ಪಕ್ಷದ ಕೀಳು ನಡೆ ಎಂದು ಹೇಳಿಕೊಂಡಿತ್ತು.

ಹರಿಯಾಣದ ಸುಮಾರು 26 ಕ್ಷೇತ್ರಗಳಲ್ಲಿ ಇವಿಎಂ ಟ್ಯಾಂಪರಿಂಗ್ ಆದ ಕುರಿತು ಅನುಮಾನ ವ್ಯಕ್ತಪಡಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿತ್ತು. ಇವಿಎಂಗಳ ಬ್ಯಾಟರಿಯ ಭಿನ್ನತೆಗಳ ಕುರಿತು ಗಮನ ಸೆಳೆದಿತ್ತು. ಆದರೆ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...