Homeಮುಖಪುಟ₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : 'ಮಹಾ' ಚುನಾವಣೆಗೆ ಮುನ್ನ ರಹಸ್ಯ ಬಯಲು

₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : ‘ಮಹಾ’ ಚುನಾವಣೆಗೆ ಮುನ್ನ ರಹಸ್ಯ ಬಯಲು

- Advertisement -
- Advertisement -

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳ ಸಮಗ್ರತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ.₹53 ಕೋಟಿಗೆ 

ಏಕೆಂದರೆ, ಸ್ವಘೋಷಿತ ಸೈಬರ್ ಎಕ್ಸ್‌ಪರ್ಟ್‌ ಓರ್ವ ಹಣ ಪಡೆದು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಡುವುದಾಗಿ ಇಂಡಿಯಾ ಟುಡೇ ರಹಸ್ಯ ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿದ್ದಾನೆ.

ಇಂಡಿಯಾ ಟುಡೇ ವರದಿಯ ಪ್ರಕಾರ, ಸೈಯದ್ ಶುಜಾ ಎಂಬಾತ ತಾನು ಯುಎಸ್ ರಕ್ಷಣಾ ಇಲಾಖೆಯ ತಂತ್ರಜ್ಞಾನ ಬಳಸಿಕೊಂಡು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುತ್ತೇನೆ ಎಂದಿದ್ದಾನೆ. ಯುಎಸ್ ರಕ್ಷಣಾ ಇಲಾಖೆ ಜೊತೆ ತಾನು ಗುತ್ತಿಗೆ ಹೊಂದಿದ್ದೆ ಎಂದು ಹೇಳಿಕೊಂಡಿದ್ದಾನೆ.₹53 ಕೋಟಿಗೆ 

ಇವಿಎಂ ಹ್ಯಾಕ್ ಮಾಡಲಾಗಿದೆ ಎಂದು ಸೈಯದ್ ಶುಜಾ ಅನೇಕ ಚುನಾವಣೆಗಳ ಸಂದರ್ಭ ಆರೋಪಿಸಿದ್ದ. ವಿಶೇಷವಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ್ದ 2014ರ ಲೋಕಸಭೆ ಚುನಾವಣೆಯಲ್ಲಿ ಈ ಆರೋಪ ಮಾಡಿದ್ದ. ಈ ಬಾರಿ ಮಹಾರಾಷ್ಟ್ರದ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯ ನಾಯಕರೊಬ್ಬರು ನನ್ನನ್ನು ಸಂಪರ್ಕಿಸಿದ್ದಾರೆ ಎಂದಿದ್ದಾನೆ.

ಇಂಡಿಯಾ ಟುಡೇ ವರದಿಗಾರರು ಮಹಾರಾಷ್ಟ್ರದ ಸಂಸದರೊಬ್ಬರ ಆಪ್ತ ಸಹಾಯಕನಂತೆ ಸೈಯದ್ ಶುಜಾನನ್ನು ಸಂಪರ್ಕಿಸಿದ್ದರು. ಈ ವೇಳೆ ಆತ, ತನ್ನ ಬಳಿ ರಾಜ್ಯದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 281 ಕ್ಷೇತ್ರಗಳ ಆಕ್ಸೆಸ್ (ಪ್ರವೇಶ) ಇದ್ದು, ವಿವಿಪ್ಯಾಟ್ ವಿವರಗಳನ್ನು ಒದಗಿಸಿದರೆ 63 ಕ್ಷೇತ್ರಗಳ ಇವಿಎಂಗಳನ್ನು ಟ್ಯಾಂಪರ್ ಮಾಡಿಕೊಡುತ್ತೇನೆ ಎಂದು ಒಪ್ಪಿಕೊಂಡಿದ್ದಾಗಿ ಎಂದು ತಿಳಿದು ಬಂದಿದೆ.

ವಿವಿಪ್ಯಾಟ್ ವಿವರ ಬಳಸಿಕೊಂಡು ನೀವು ಹೇಗೆ ಇವಿಎಂ ಟ್ಯಾಂಪರ್ ಮಾಡುತ್ತೀರಿ? ಎಂದು ವರದಿಗಾರ ಕೇಳಿದ್ದಕ್ಕೆ “ನಾನು ಫೈಲ್ ಪ್ರಿ ಪ್ರೋಗ್ರಾಂ ಮಾಡಿ ಇಟ್ಟಿರುತ್ತೇನೆ. ಉದಾಹರಣೆಗೆ ಅದು ಬಿಜೆಪಿ ಪರ ಫೈಲ್ ಆಗಿದ್ದರೆ, ಚುನಾವಣೆಯ ದಿನದಂದು ಟ್ರಾನ್ಸ್‌ಮಿಷನ್ ಪ್ರಾರಂಭವಾಗುವಾಗ, ಅವರ ಫೈಲ್ ತಡೆದು, ನನ್ನ ಫೈಲ್ ಅನ್ನು ಚುನಾವಣಾ ಆಯೋಗಕ್ಕೆ ಕಳುಹಿಸುತ್ತೇನೆ” ಎಂದು ಸೈಯದ್ ಶುಜಾ ಹೇಳಿಕೊಂಡಿರುವುದಾಗಿ ಇಂಡಿಯಾ ಟುಡೇ ವಿವರಿಸಿದೆ. ಇವಿಎಂಗಳು ಆನ್ ಇಲ್ಲದಿದ್ದರೂ ಟ್ರಾನ್ಸ್‌ಮಿಷನ್ ಮುಂದುವರಿಯುತ್ತದೆ ಎಂದು ಶುಜಾ ತಿಳಿಸಿದ್ದಾನೆ ಎಂದಿದೆ.

“ಇವಿಎಂ ತೆರೆದಾಗ, ಹೊಸ ಫೈಲ್ ಬರುತ್ತದೆ. ನಂತರ ಟ್ರಾನ್ಸ್‌ಮಿಷನ್ ಎಣಿಸಲಾಗುತ್ತದೆ. ಈ ಪ್ರಕ್ರಿಯೆ ಬಹಳ ಸುಲಭದ್ದಾಗಿದೆ. ಇವಿಎಂ ಟ್ಯಾಂಪರ್ ಮಾಡಿದ ಮುಂದಿನ ಮೂರು ದಿನಗಳವರೆಗೆ ನಾನು ಜಾಗರೂಕನಾಗಿರಬೇಕು. ಟ್ರಾನ್ಸ್‌ಮಿಷನ್ ಆಗುತ್ತಿದೆಯೋ ಇಲ್ಲವೋ ಎಂದು ಪ್ರತಿ ಗಂಟೆಗೆ ಸ್ಕ್ಯಾನ್ ಮಾಡಬೇಕು” ಎಂದು ಶುಜಾ ಹೇಳಿಕೊಂಡಿದ್ದಾನೆ.

ಗಣಿತಶಾಸ್ತ್ರದಲ್ಲಿ ಪಿಹೆಚ್‌ಡಿ ಮೈನರ್ ಆಗಿರುವ ಶುಜಾ ಇವಿಎಂ ಹ್ಯಾಕ್ ಮಾಡುವ ತನ್ನ ಕೆಲಸಕ್ಕಾಗಿ 6 ಮಿಲಿಯನ್ ಡಾಲರ್ (ಅಂದಾಜು ರೂ. 52-53 ಕೋಟಿ) ಬೇಡಿಕೆಯಿಟ್ಟಿದ್ದಾನೆ. ಇವಿಎಂ ಹ್ಯಾಕಿಂಗ್ ಕುರಿತು ಶುಜಾ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. 2019ರಲ್ಲಿ, ಶುಜಾ ಇವಿಎಂಗಳನ್ನು ಹ್ಯಾಕ್ ಮತ್ತು ರಿಗ್ಗಿಂಗ್ ಮಾಡಿರುವುದಾಗಿ ಆರೋಪಿಸಿ ಚುನಾವಣಾ ಆಯೋಗ ದೆಹಲಿ ಪೊಲೀರಿಗೆ ದೂರು ನೀಡಿತ್ತು. ಪೊಲೀಸರು ಪ್ರಕರಣ ದಾಖಲಿಸಿದ್ದರು.

ಸ್ಕೈಪ್ ಮೂಲಕ ಲಂಡನ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶುಜಾ, 2014 ರಲ್ಲಿ ತನ್ನ ತಂಡದ ಸದಸ್ಯರನ್ನು ಕೊಂದ ನಂತರ ದೇಶದಲ್ಲಿ ಬೆದರಿಕೆ ಇದೆ ಎಂದು ಭಾವಿಸಿದ್ದರಿಂದ ಭಾರತದಿಂದ ಪಲಾಯನ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಚುನಾವಣೆಯಲ್ಲಿ ಇವಿಎಂ ಹ್ಯಾಕಿಂಗ್ ಬಗ್ಗೆ ತಿಳಿದಿದ್ದರಿಂದ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರನ್ನು ‘ಕೊಲ್ಲಲಾಗಿದೆ’ ಎಂದು ಶುಜಾ ಆರೋಪಿಸಿದ್ದಾನೆ.

ಇವಿಎಂ ಟ್ಯಾಂಪರಿಂಗ್‌ನ ಆರೋಪಗಳು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೂ ಮಹಾರಾಷ್ಟ್ರದಲ್ಲಿ ಪ್ರತಿಧ್ವನಿಸಿತ್ತು. ಗೆದ್ದ ಶಿವಸೇನಾ ಸಂಸದ ರವೀಂದ್ರ ವೈಕರ್ ಅವರ ಸಂಬಂಧಿಯೋರ್ವ ಮತ ಎಣಿಕೆ ಕೇಂದ್ರದಲ್ಲಿ ಇವಿಎಂ ಹ್ಯಾಕ್ ಮಾಡಲು ಮೊಬೈಲ್ ಮೂಲಕ ಒಟಿಪಿ ಕ್ರಿಯೇಟ್ ಮಾಡುತ್ತಿದ್ದುದು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಚುನಾವಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಆಗಿದೆ ಎಂದು ಕಾಂಗ್ರೆಸ್ ಮಾಡಿದ್ದ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿತ್ತು. ಪ್ರತಿ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್ ಚುನಾವಣಾ ಆಯೋಗದ ಮೇಲೆ ಅನುಮಾನ ವ್ಯಕ್ತಪಡಿಸಿದೆ. ಇದು ಒಂದು ರಾಷ್ಟ್ರೀಯ ಪಕ್ಷದ ಕೀಳು ನಡೆ ಎಂದು ಹೇಳಿಕೊಂಡಿತ್ತು.

ಹರಿಯಾಣದ ಸುಮಾರು 26 ಕ್ಷೇತ್ರಗಳಲ್ಲಿ ಇವಿಎಂ ಟ್ಯಾಂಪರಿಂಗ್ ಆದ ಕುರಿತು ಅನುಮಾನ ವ್ಯಕ್ತಪಡಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿತ್ತು. ಇವಿಎಂಗಳ ಬ್ಯಾಟರಿಯ ಭಿನ್ನತೆಗಳ ಕುರಿತು ಗಮನ ಸೆಳೆದಿತ್ತು. ಆದರೆ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...