Homeಮುಖಪುಟ₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : 'ಮಹಾ' ಚುನಾವಣೆಗೆ ಮುನ್ನ ರಹಸ್ಯ ಬಯಲು

₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : ‘ಮಹಾ’ ಚುನಾವಣೆಗೆ ಮುನ್ನ ರಹಸ್ಯ ಬಯಲು

- Advertisement -
- Advertisement -

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳ ಸಮಗ್ರತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ.₹53 ಕೋಟಿಗೆ 

ಏಕೆಂದರೆ, ಸ್ವಘೋಷಿತ ಸೈಬರ್ ಎಕ್ಸ್‌ಪರ್ಟ್‌ ಓರ್ವ ಹಣ ಪಡೆದು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಡುವುದಾಗಿ ಇಂಡಿಯಾ ಟುಡೇ ರಹಸ್ಯ ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿದ್ದಾನೆ.

ಇಂಡಿಯಾ ಟುಡೇ ವರದಿಯ ಪ್ರಕಾರ, ಸೈಯದ್ ಶುಜಾ ಎಂಬಾತ ತಾನು ಯುಎಸ್ ರಕ್ಷಣಾ ಇಲಾಖೆಯ ತಂತ್ರಜ್ಞಾನ ಬಳಸಿಕೊಂಡು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುತ್ತೇನೆ ಎಂದಿದ್ದಾನೆ. ಯುಎಸ್ ರಕ್ಷಣಾ ಇಲಾಖೆ ಜೊತೆ ತಾನು ಗುತ್ತಿಗೆ ಹೊಂದಿದ್ದೆ ಎಂದು ಹೇಳಿಕೊಂಡಿದ್ದಾನೆ.₹53 ಕೋಟಿಗೆ 

ಇವಿಎಂ ಹ್ಯಾಕ್ ಮಾಡಲಾಗಿದೆ ಎಂದು ಸೈಯದ್ ಶುಜಾ ಅನೇಕ ಚುನಾವಣೆಗಳ ಸಂದರ್ಭ ಆರೋಪಿಸಿದ್ದ. ವಿಶೇಷವಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ್ದ 2014ರ ಲೋಕಸಭೆ ಚುನಾವಣೆಯಲ್ಲಿ ಈ ಆರೋಪ ಮಾಡಿದ್ದ. ಈ ಬಾರಿ ಮಹಾರಾಷ್ಟ್ರದ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯ ನಾಯಕರೊಬ್ಬರು ನನ್ನನ್ನು ಸಂಪರ್ಕಿಸಿದ್ದಾರೆ ಎಂದಿದ್ದಾನೆ.

ಇಂಡಿಯಾ ಟುಡೇ ವರದಿಗಾರರು ಮಹಾರಾಷ್ಟ್ರದ ಸಂಸದರೊಬ್ಬರ ಆಪ್ತ ಸಹಾಯಕನಂತೆ ಸೈಯದ್ ಶುಜಾನನ್ನು ಸಂಪರ್ಕಿಸಿದ್ದರು. ಈ ವೇಳೆ ಆತ, ತನ್ನ ಬಳಿ ರಾಜ್ಯದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 281 ಕ್ಷೇತ್ರಗಳ ಆಕ್ಸೆಸ್ (ಪ್ರವೇಶ) ಇದ್ದು, ವಿವಿಪ್ಯಾಟ್ ವಿವರಗಳನ್ನು ಒದಗಿಸಿದರೆ 63 ಕ್ಷೇತ್ರಗಳ ಇವಿಎಂಗಳನ್ನು ಟ್ಯಾಂಪರ್ ಮಾಡಿಕೊಡುತ್ತೇನೆ ಎಂದು ಒಪ್ಪಿಕೊಂಡಿದ್ದಾಗಿ ಎಂದು ತಿಳಿದು ಬಂದಿದೆ.

ವಿವಿಪ್ಯಾಟ್ ವಿವರ ಬಳಸಿಕೊಂಡು ನೀವು ಹೇಗೆ ಇವಿಎಂ ಟ್ಯಾಂಪರ್ ಮಾಡುತ್ತೀರಿ? ಎಂದು ವರದಿಗಾರ ಕೇಳಿದ್ದಕ್ಕೆ “ನಾನು ಫೈಲ್ ಪ್ರಿ ಪ್ರೋಗ್ರಾಂ ಮಾಡಿ ಇಟ್ಟಿರುತ್ತೇನೆ. ಉದಾಹರಣೆಗೆ ಅದು ಬಿಜೆಪಿ ಪರ ಫೈಲ್ ಆಗಿದ್ದರೆ, ಚುನಾವಣೆಯ ದಿನದಂದು ಟ್ರಾನ್ಸ್‌ಮಿಷನ್ ಪ್ರಾರಂಭವಾಗುವಾಗ, ಅವರ ಫೈಲ್ ತಡೆದು, ನನ್ನ ಫೈಲ್ ಅನ್ನು ಚುನಾವಣಾ ಆಯೋಗಕ್ಕೆ ಕಳುಹಿಸುತ್ತೇನೆ” ಎಂದು ಸೈಯದ್ ಶುಜಾ ಹೇಳಿಕೊಂಡಿರುವುದಾಗಿ ಇಂಡಿಯಾ ಟುಡೇ ವಿವರಿಸಿದೆ. ಇವಿಎಂಗಳು ಆನ್ ಇಲ್ಲದಿದ್ದರೂ ಟ್ರಾನ್ಸ್‌ಮಿಷನ್ ಮುಂದುವರಿಯುತ್ತದೆ ಎಂದು ಶುಜಾ ತಿಳಿಸಿದ್ದಾನೆ ಎಂದಿದೆ.

“ಇವಿಎಂ ತೆರೆದಾಗ, ಹೊಸ ಫೈಲ್ ಬರುತ್ತದೆ. ನಂತರ ಟ್ರಾನ್ಸ್‌ಮಿಷನ್ ಎಣಿಸಲಾಗುತ್ತದೆ. ಈ ಪ್ರಕ್ರಿಯೆ ಬಹಳ ಸುಲಭದ್ದಾಗಿದೆ. ಇವಿಎಂ ಟ್ಯಾಂಪರ್ ಮಾಡಿದ ಮುಂದಿನ ಮೂರು ದಿನಗಳವರೆಗೆ ನಾನು ಜಾಗರೂಕನಾಗಿರಬೇಕು. ಟ್ರಾನ್ಸ್‌ಮಿಷನ್ ಆಗುತ್ತಿದೆಯೋ ಇಲ್ಲವೋ ಎಂದು ಪ್ರತಿ ಗಂಟೆಗೆ ಸ್ಕ್ಯಾನ್ ಮಾಡಬೇಕು” ಎಂದು ಶುಜಾ ಹೇಳಿಕೊಂಡಿದ್ದಾನೆ.

ಗಣಿತಶಾಸ್ತ್ರದಲ್ಲಿ ಪಿಹೆಚ್‌ಡಿ ಮೈನರ್ ಆಗಿರುವ ಶುಜಾ ಇವಿಎಂ ಹ್ಯಾಕ್ ಮಾಡುವ ತನ್ನ ಕೆಲಸಕ್ಕಾಗಿ 6 ಮಿಲಿಯನ್ ಡಾಲರ್ (ಅಂದಾಜು ರೂ. 52-53 ಕೋಟಿ) ಬೇಡಿಕೆಯಿಟ್ಟಿದ್ದಾನೆ. ಇವಿಎಂ ಹ್ಯಾಕಿಂಗ್ ಕುರಿತು ಶುಜಾ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. 2019ರಲ್ಲಿ, ಶುಜಾ ಇವಿಎಂಗಳನ್ನು ಹ್ಯಾಕ್ ಮತ್ತು ರಿಗ್ಗಿಂಗ್ ಮಾಡಿರುವುದಾಗಿ ಆರೋಪಿಸಿ ಚುನಾವಣಾ ಆಯೋಗ ದೆಹಲಿ ಪೊಲೀರಿಗೆ ದೂರು ನೀಡಿತ್ತು. ಪೊಲೀಸರು ಪ್ರಕರಣ ದಾಖಲಿಸಿದ್ದರು.

ಸ್ಕೈಪ್ ಮೂಲಕ ಲಂಡನ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶುಜಾ, 2014 ರಲ್ಲಿ ತನ್ನ ತಂಡದ ಸದಸ್ಯರನ್ನು ಕೊಂದ ನಂತರ ದೇಶದಲ್ಲಿ ಬೆದರಿಕೆ ಇದೆ ಎಂದು ಭಾವಿಸಿದ್ದರಿಂದ ಭಾರತದಿಂದ ಪಲಾಯನ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಚುನಾವಣೆಯಲ್ಲಿ ಇವಿಎಂ ಹ್ಯಾಕಿಂಗ್ ಬಗ್ಗೆ ತಿಳಿದಿದ್ದರಿಂದ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರನ್ನು ‘ಕೊಲ್ಲಲಾಗಿದೆ’ ಎಂದು ಶುಜಾ ಆರೋಪಿಸಿದ್ದಾನೆ.

ಇವಿಎಂ ಟ್ಯಾಂಪರಿಂಗ್‌ನ ಆರೋಪಗಳು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೂ ಮಹಾರಾಷ್ಟ್ರದಲ್ಲಿ ಪ್ರತಿಧ್ವನಿಸಿತ್ತು. ಗೆದ್ದ ಶಿವಸೇನಾ ಸಂಸದ ರವೀಂದ್ರ ವೈಕರ್ ಅವರ ಸಂಬಂಧಿಯೋರ್ವ ಮತ ಎಣಿಕೆ ಕೇಂದ್ರದಲ್ಲಿ ಇವಿಎಂ ಹ್ಯಾಕ್ ಮಾಡಲು ಮೊಬೈಲ್ ಮೂಲಕ ಒಟಿಪಿ ಕ್ರಿಯೇಟ್ ಮಾಡುತ್ತಿದ್ದುದು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಚುನಾವಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಆಗಿದೆ ಎಂದು ಕಾಂಗ್ರೆಸ್ ಮಾಡಿದ್ದ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿತ್ತು. ಪ್ರತಿ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್ ಚುನಾವಣಾ ಆಯೋಗದ ಮೇಲೆ ಅನುಮಾನ ವ್ಯಕ್ತಪಡಿಸಿದೆ. ಇದು ಒಂದು ರಾಷ್ಟ್ರೀಯ ಪಕ್ಷದ ಕೀಳು ನಡೆ ಎಂದು ಹೇಳಿಕೊಂಡಿತ್ತು.

ಹರಿಯಾಣದ ಸುಮಾರು 26 ಕ್ಷೇತ್ರಗಳಲ್ಲಿ ಇವಿಎಂ ಟ್ಯಾಂಪರಿಂಗ್ ಆದ ಕುರಿತು ಅನುಮಾನ ವ್ಯಕ್ತಪಡಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿತ್ತು. ಇವಿಎಂಗಳ ಬ್ಯಾಟರಿಯ ಭಿನ್ನತೆಗಳ ಕುರಿತು ಗಮನ ಸೆಳೆದಿತ್ತು. ಆದರೆ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಸಂಬಂಧಿಕರಿಂದ ವಿಷಪ್ರಾಶನ

ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮರ್ಯಾದೆಗೇಡು ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳೆಯನ್ನು ಆಕೆಯ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ...

ಉತ್ತರ ಪ್ರದೇಶ: ಅಂಬೇಡ್ಕರ್ ಜಯಂತಿಯಂದು ಪ್ರತಿಮೆ ಸ್ಥಾಪನೆಗೆ ವಿರೋಧ: ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಘರ್ಷಣೆ 

ಸರ್ಕಾರಿ ಭೂಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ವಿವಾದವು ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದ ನಂತರ ಮಂಗಳವಾರ ಸಂಜೆ ಮೈಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಕೆಗಂಜ್...

‘ನಮಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ..’; ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಯ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ

2011 ರ ಜನಗಣತಿಯ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 27 ರಷ್ಟಿರುವ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮುಸ್ಲಿಂ ಸಮುದಾಯದ ಮತಗಳನ್ನು ಕೇಳುವ ಅಗತ್ಯವಿಲ್ಲ ಎಂದು ಬಂಗಾಳ...

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ (ಏ.15) ತಡೆ ನೀಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ...

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...