Homeಮುಖಪುಟ₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : 'ಮಹಾ' ಚುನಾವಣೆಗೆ ಮುನ್ನ ರಹಸ್ಯ ಬಯಲು

₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : ‘ಮಹಾ’ ಚುನಾವಣೆಗೆ ಮುನ್ನ ರಹಸ್ಯ ಬಯಲು

- Advertisement -
- Advertisement -

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳ ಸಮಗ್ರತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ.₹53 ಕೋಟಿಗೆ 

ಏಕೆಂದರೆ, ಸ್ವಘೋಷಿತ ಸೈಬರ್ ಎಕ್ಸ್‌ಪರ್ಟ್‌ ಓರ್ವ ಹಣ ಪಡೆದು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಡುವುದಾಗಿ ಇಂಡಿಯಾ ಟುಡೇ ರಹಸ್ಯ ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿದ್ದಾನೆ.

ಇಂಡಿಯಾ ಟುಡೇ ವರದಿಯ ಪ್ರಕಾರ, ಸೈಯದ್ ಶುಜಾ ಎಂಬಾತ ತಾನು ಯುಎಸ್ ರಕ್ಷಣಾ ಇಲಾಖೆಯ ತಂತ್ರಜ್ಞಾನ ಬಳಸಿಕೊಂಡು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುತ್ತೇನೆ ಎಂದಿದ್ದಾನೆ. ಯುಎಸ್ ರಕ್ಷಣಾ ಇಲಾಖೆ ಜೊತೆ ತಾನು ಗುತ್ತಿಗೆ ಹೊಂದಿದ್ದೆ ಎಂದು ಹೇಳಿಕೊಂಡಿದ್ದಾನೆ.₹53 ಕೋಟಿಗೆ 

ಇವಿಎಂ ಹ್ಯಾಕ್ ಮಾಡಲಾಗಿದೆ ಎಂದು ಸೈಯದ್ ಶುಜಾ ಅನೇಕ ಚುನಾವಣೆಗಳ ಸಂದರ್ಭ ಆರೋಪಿಸಿದ್ದ. ವಿಶೇಷವಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ್ದ 2014ರ ಲೋಕಸಭೆ ಚುನಾವಣೆಯಲ್ಲಿ ಈ ಆರೋಪ ಮಾಡಿದ್ದ. ಈ ಬಾರಿ ಮಹಾರಾಷ್ಟ್ರದ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯ ನಾಯಕರೊಬ್ಬರು ನನ್ನನ್ನು ಸಂಪರ್ಕಿಸಿದ್ದಾರೆ ಎಂದಿದ್ದಾನೆ.

ಇಂಡಿಯಾ ಟುಡೇ ವರದಿಗಾರರು ಮಹಾರಾಷ್ಟ್ರದ ಸಂಸದರೊಬ್ಬರ ಆಪ್ತ ಸಹಾಯಕನಂತೆ ಸೈಯದ್ ಶುಜಾನನ್ನು ಸಂಪರ್ಕಿಸಿದ್ದರು. ಈ ವೇಳೆ ಆತ, ತನ್ನ ಬಳಿ ರಾಜ್ಯದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 281 ಕ್ಷೇತ್ರಗಳ ಆಕ್ಸೆಸ್ (ಪ್ರವೇಶ) ಇದ್ದು, ವಿವಿಪ್ಯಾಟ್ ವಿವರಗಳನ್ನು ಒದಗಿಸಿದರೆ 63 ಕ್ಷೇತ್ರಗಳ ಇವಿಎಂಗಳನ್ನು ಟ್ಯಾಂಪರ್ ಮಾಡಿಕೊಡುತ್ತೇನೆ ಎಂದು ಒಪ್ಪಿಕೊಂಡಿದ್ದಾಗಿ ಎಂದು ತಿಳಿದು ಬಂದಿದೆ.

ವಿವಿಪ್ಯಾಟ್ ವಿವರ ಬಳಸಿಕೊಂಡು ನೀವು ಹೇಗೆ ಇವಿಎಂ ಟ್ಯಾಂಪರ್ ಮಾಡುತ್ತೀರಿ? ಎಂದು ವರದಿಗಾರ ಕೇಳಿದ್ದಕ್ಕೆ “ನಾನು ಫೈಲ್ ಪ್ರಿ ಪ್ರೋಗ್ರಾಂ ಮಾಡಿ ಇಟ್ಟಿರುತ್ತೇನೆ. ಉದಾಹರಣೆಗೆ ಅದು ಬಿಜೆಪಿ ಪರ ಫೈಲ್ ಆಗಿದ್ದರೆ, ಚುನಾವಣೆಯ ದಿನದಂದು ಟ್ರಾನ್ಸ್‌ಮಿಷನ್ ಪ್ರಾರಂಭವಾಗುವಾಗ, ಅವರ ಫೈಲ್ ತಡೆದು, ನನ್ನ ಫೈಲ್ ಅನ್ನು ಚುನಾವಣಾ ಆಯೋಗಕ್ಕೆ ಕಳುಹಿಸುತ್ತೇನೆ” ಎಂದು ಸೈಯದ್ ಶುಜಾ ಹೇಳಿಕೊಂಡಿರುವುದಾಗಿ ಇಂಡಿಯಾ ಟುಡೇ ವಿವರಿಸಿದೆ. ಇವಿಎಂಗಳು ಆನ್ ಇಲ್ಲದಿದ್ದರೂ ಟ್ರಾನ್ಸ್‌ಮಿಷನ್ ಮುಂದುವರಿಯುತ್ತದೆ ಎಂದು ಶುಜಾ ತಿಳಿಸಿದ್ದಾನೆ ಎಂದಿದೆ.

“ಇವಿಎಂ ತೆರೆದಾಗ, ಹೊಸ ಫೈಲ್ ಬರುತ್ತದೆ. ನಂತರ ಟ್ರಾನ್ಸ್‌ಮಿಷನ್ ಎಣಿಸಲಾಗುತ್ತದೆ. ಈ ಪ್ರಕ್ರಿಯೆ ಬಹಳ ಸುಲಭದ್ದಾಗಿದೆ. ಇವಿಎಂ ಟ್ಯಾಂಪರ್ ಮಾಡಿದ ಮುಂದಿನ ಮೂರು ದಿನಗಳವರೆಗೆ ನಾನು ಜಾಗರೂಕನಾಗಿರಬೇಕು. ಟ್ರಾನ್ಸ್‌ಮಿಷನ್ ಆಗುತ್ತಿದೆಯೋ ಇಲ್ಲವೋ ಎಂದು ಪ್ರತಿ ಗಂಟೆಗೆ ಸ್ಕ್ಯಾನ್ ಮಾಡಬೇಕು” ಎಂದು ಶುಜಾ ಹೇಳಿಕೊಂಡಿದ್ದಾನೆ.

ಗಣಿತಶಾಸ್ತ್ರದಲ್ಲಿ ಪಿಹೆಚ್‌ಡಿ ಮೈನರ್ ಆಗಿರುವ ಶುಜಾ ಇವಿಎಂ ಹ್ಯಾಕ್ ಮಾಡುವ ತನ್ನ ಕೆಲಸಕ್ಕಾಗಿ 6 ಮಿಲಿಯನ್ ಡಾಲರ್ (ಅಂದಾಜು ರೂ. 52-53 ಕೋಟಿ) ಬೇಡಿಕೆಯಿಟ್ಟಿದ್ದಾನೆ. ಇವಿಎಂ ಹ್ಯಾಕಿಂಗ್ ಕುರಿತು ಶುಜಾ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. 2019ರಲ್ಲಿ, ಶುಜಾ ಇವಿಎಂಗಳನ್ನು ಹ್ಯಾಕ್ ಮತ್ತು ರಿಗ್ಗಿಂಗ್ ಮಾಡಿರುವುದಾಗಿ ಆರೋಪಿಸಿ ಚುನಾವಣಾ ಆಯೋಗ ದೆಹಲಿ ಪೊಲೀರಿಗೆ ದೂರು ನೀಡಿತ್ತು. ಪೊಲೀಸರು ಪ್ರಕರಣ ದಾಖಲಿಸಿದ್ದರು.

ಸ್ಕೈಪ್ ಮೂಲಕ ಲಂಡನ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶುಜಾ, 2014 ರಲ್ಲಿ ತನ್ನ ತಂಡದ ಸದಸ್ಯರನ್ನು ಕೊಂದ ನಂತರ ದೇಶದಲ್ಲಿ ಬೆದರಿಕೆ ಇದೆ ಎಂದು ಭಾವಿಸಿದ್ದರಿಂದ ಭಾರತದಿಂದ ಪಲಾಯನ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಚುನಾವಣೆಯಲ್ಲಿ ಇವಿಎಂ ಹ್ಯಾಕಿಂಗ್ ಬಗ್ಗೆ ತಿಳಿದಿದ್ದರಿಂದ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರನ್ನು ‘ಕೊಲ್ಲಲಾಗಿದೆ’ ಎಂದು ಶುಜಾ ಆರೋಪಿಸಿದ್ದಾನೆ.

ಇವಿಎಂ ಟ್ಯಾಂಪರಿಂಗ್‌ನ ಆರೋಪಗಳು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೂ ಮಹಾರಾಷ್ಟ್ರದಲ್ಲಿ ಪ್ರತಿಧ್ವನಿಸಿತ್ತು. ಗೆದ್ದ ಶಿವಸೇನಾ ಸಂಸದ ರವೀಂದ್ರ ವೈಕರ್ ಅವರ ಸಂಬಂಧಿಯೋರ್ವ ಮತ ಎಣಿಕೆ ಕೇಂದ್ರದಲ್ಲಿ ಇವಿಎಂ ಹ್ಯಾಕ್ ಮಾಡಲು ಮೊಬೈಲ್ ಮೂಲಕ ಒಟಿಪಿ ಕ್ರಿಯೇಟ್ ಮಾಡುತ್ತಿದ್ದುದು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಚುನಾವಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಆಗಿದೆ ಎಂದು ಕಾಂಗ್ರೆಸ್ ಮಾಡಿದ್ದ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿತ್ತು. ಪ್ರತಿ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್ ಚುನಾವಣಾ ಆಯೋಗದ ಮೇಲೆ ಅನುಮಾನ ವ್ಯಕ್ತಪಡಿಸಿದೆ. ಇದು ಒಂದು ರಾಷ್ಟ್ರೀಯ ಪಕ್ಷದ ಕೀಳು ನಡೆ ಎಂದು ಹೇಳಿಕೊಂಡಿತ್ತು.

ಹರಿಯಾಣದ ಸುಮಾರು 26 ಕ್ಷೇತ್ರಗಳಲ್ಲಿ ಇವಿಎಂ ಟ್ಯಾಂಪರಿಂಗ್ ಆದ ಕುರಿತು ಅನುಮಾನ ವ್ಯಕ್ತಪಡಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿತ್ತು. ಇವಿಎಂಗಳ ಬ್ಯಾಟರಿಯ ಭಿನ್ನತೆಗಳ ಕುರಿತು ಗಮನ ಸೆಳೆದಿತ್ತು. ಆದರೆ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...