Homeಮುಖಪುಟಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮೈತ್ರಿ | ಇನ್ನೂ ತೀರ್ಮಾನವಾಗದ 163 ಕ್ಷೇತ್ರಗಳು

ಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮೈತ್ರಿ | ಇನ್ನೂ ತೀರ್ಮಾನವಾಗದ 163 ಕ್ಷೇತ್ರಗಳು

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ 125 ಸ್ಥಾನಗಳ ಭಿನ್ನಾಭಿಪ್ರಾಯಗಳು ನಿವಾರಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಉಳಿದ 163 ಸ್ಥಾನಗಳು ಯಾರಿಗೆ ಎಂಬ ವಿಚಾರದಲ್ಲಿ ಮಿತ್ರಪಕ್ಷಗಳ ನಡುವೆ ಇನ್ನೂ ತೀರ್ಮಾನವಾಗಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಆದಾಗ್ಯೂ, ಗಣೇಶ ಹಬ್ಬದ ನಂತರ ಮಿತ್ರಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಿ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಪ್ರಕಟಿಸಲಿವೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ವಿಜಯ್ ವಡೆತ್ತಿವಾರ್ ಮಾತನಾಡಿ, “ಎಂವಿಎ ಮೈತ್ರಿಕೂಟದ ಪಕ್ಷಗಳ ನಡುವೆ ವಿಧಾನಸಭೆಯ 125 ಸ್ಥಾನಗಳ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ಉಳಿದ 163 ಸ್ಥಾನಗಳ ಬಗ್ಗೆಗಿನ ಭಿನ್ನಾಭಿಪ್ರಾಯಗಳನ್ನು ಇನ್ನಷ್ಟೆ ಪರಿಹರಿಸಬೇಕಾಗಿದೆ” ಎಂದು ಹೇಳಿದ್ದಾರೆ.

ಆದಾಗ್ಯೂ, ಗಣೇಶ ಹಬ್ಬದ ನಂತರ ಮಿತ್ರಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಶರದ್ ಪವಾರ್) ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಿ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಪ್ರಕಟಿಸಲಿವೆ ಎಂದು ಅವರು ಹೇಳಿದ್ದಾರೆ.

“ನಾವು ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಆಂತರಿಕ ಮತ್ತು ಬಾಹ್ಯ ಸಮೀಕ್ಷೆಗಳು ಎಂವಿಎ ಪ್ರಬಲವಾಗಿದೆ ಮತ್ತು ಲೋಕಸಭೆಯ ಕಾರ್ಯಕ್ಷಮತೆ ಪುನರಾವರ್ತನೆಯಾಗುವ ಸಾಧ್ಯತೆಯಿದೆ ಎಂದು ಸುಳಿವು ನೀಡಿದೆ. ಹಾಗಾಗಿ ಫಲಿತಾಂಶ ಇನ್ನೂ ಉತ್ತಮವಾಗಿ ಬರಬಹುದು”ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಇದನ್ನೂಓದಿ:ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

“ಮಹಾರಾಷ್ಟ್ರ ವಿರೋಧಿ ಮಹಾಯುತಿ ಸರ್ಕಾರವನ್ನು ಅಧಿಕಾರದಿಂದ ಹೊರಹಾಕಲು ಮತ್ತು ಸ್ಥಳೀಯ ಜನರು ಮತ್ತು ರೈತರ ಹಿತಾಸಕ್ತಿಗಳ ಪರವಾಗಿರುವ ಸರ್ಕಾರವನ್ನು ಮರಳಿ ತರಲು ಮಹಾರಾಷ್ಟ್ರದ ಜನರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದ ಆಧಾರದ ಮೇಲೆ ಪಕ್ಷವು 110ಕ್ಕೂ ಹೆಚ್ಚು ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 13 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿ ತಾನು ಸ್ಪರ್ಧಿಸಿದ್ದ 10 ಸ್ಥಾನಗಳಲ್ಲಿ ಎಂಟು ಸ್ಥಾನಗಳನ್ನು ಗೆದ್ದಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತಾನು ಸ್ಪರ್ಧಿಸಿದ್ದ 21 ಸ್ಥಾನಗಳ ವಿರುದ್ಧ ಒಂಬತ್ತು ಸ್ಥಾನಗಳನ್ನು ಗೆದ್ದಿತ್ತು.

ಎನ್‌ಸಿಪಿ (ಎಸ್‌ಪಿ) ಕೂಡ ವಿಧಾನಸಭೆ ಚುನಾವಣೆಯಲ್ಲಿ ಸಮಾನ ಸಂಖ್ಯೆಯ ಸ್ಥಾನಗಳನ್ನು ಕೇಳುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆಯಲ್ಲಿ ಎನ್‌ಸಿಪಿ (ಎಸ್‌ಪಿ) ಹೊಂದಾಣಿಕೆ ಮಾಡಿಕೊಂಡಿತ್ತು. ಜೊತೆಗೆ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಗಿಂತ ಕಡಿಮೆ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿತ್ತು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನಕ್ಕೆ ಒಪ್ಪಿಕೊಳ್ಳಲು ಪಕ್ಷವೂ ಸಿದ್ಧವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಶಿವಸೇನೆ (ಯುಬಿಟಿ) ಕೂಡ 100ಕ್ಕೂ ಹೆಚ್ಚು ಸ್ಥಾನಗಳನ್ನು ಕೇಳುತ್ತಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...