Homeಕರೋನಾ ತಲ್ಲಣಮಹಾರಾಷ್ಟ್ರ: ಧಾರ್ಮಿಕ ಮೆರವಣಿಗೆ ನಡೆಸಲು ಅನುಮತಿ ನೀಡದ ಪೊಲೀಸರ ಮೇಲೆ ಹಲ್ಲೆ

ಮಹಾರಾಷ್ಟ್ರ: ಧಾರ್ಮಿಕ ಮೆರವಣಿಗೆ ನಡೆಸಲು ಅನುಮತಿ ನೀಡದ ಪೊಲೀಸರ ಮೇಲೆ ಹಲ್ಲೆ

- Advertisement -
- Advertisement -

ಕತ್ತಿ ಹಿಡಿದ ಸಿಖ್ ಧರ್ಮದ ಪ್ರತಿಭಟನಾಕಾರರ ಗುಂಪೊಂದು ಸೋಮವಾರ (ಮಾರ್ಚ್ 29) ಸಂಜೆ ಮಹಾರಾಷ್ಟ್ರದ ನಾಂದೇಡ್‌ನ ಗುರುದ್ವಾರವೊಂದರಲ್ಲಿ ಬ್ಯಾರಿಕೇಡ್‌ಗಳನ್ನು ಭೇದಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣದಿಂದಾಗಿ ಧಾರ್ಮಿಕ ಮೆರವಣಿಗೆಯನ್ನು ಪೊಲೀಸರು ನಿರಾಕರಿಸಿದ ನಂತರ ಹಿಂಸಾಚಾರ ನಡೆದಿದೆ. ರಾಜ್ಯದ ಕೊರೊನಾ ಸುರಕ್ಷತಾ ನಿಯಮಗಳ ಉಲ್ಲಂಘನೆ, ಕೊಲೆ ಯತ್ನ, ದಾಂಧಲೆ ಕುರಿತು ಪ್ರಕರಣ ದಾಖಲಿಸಲಾಗಿದ್ದು, ಘಟನೆ ಸಂಬಂಧ  ಸುಮಾರು 18 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೊವೊಂದರಲ್ಲಿ, ಗುರುದ್ವಾರದ ಗೇಟ್‌ನಿಂದ ಕತ್ತಿಗಳನ್ನು ಹಿಡಿದ ಜನರ ಗುಂಪೊಂದು ಹೊರಗೆ ನುಗ್ಗಿ, ಪೊಲೀಸರು ಹಾಕಿದ ಬ್ಯಾರಿಕೇಡ್‌ಗಳನ್ನು ಭೇದಿಸಿ, ಪೊಲೀಸ್ ಗಾರ್ಡ್‌ಗಳ ಮೇಲೆ ಹಲ್ಲೆ ನಡೆಸುತ್ತಿರುವುದು ಕಾಣಬಹುದು.

ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಮತ್ತು ಪೊಲೀಸ್ ಕಾರುಗಳಿಗೆ ಹಾನಿಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಇನ್ನು 15 ದಿನ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್‍ಯಾಲಿ ನಡೆಸುವಂತಿಲ್ಲ- ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಂದ “ಹೋಲಾ ಮೊಹಲ್ಲಾ” ಮೆರವಣಿಗೆಯನ್ನು ಅನುಮತಿಸಲಾಗುವುದಿಲ್ಲ ಎಂದು ಗುರುದ್ವಾರಕ್ಕೆ ತಿಳಿಸಲಾಗಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಮೋದ್ ಕುಮಾರ್ ಶೆವಾಲೆ ತಿಳಿಸಿದ್ದಾರೆ.

“ನಾವು ಗುರುದ್ವಾರದ ಅಧಿಕಾರಿಗಳು ಮತ್ತು ಮುಖ್ಯಸ್ಥರೊಂದಿಗೆ ಮಾತನಾಡಿದ್ದೇವೆ. ಅವರಿಗೆ ಪರಿಸ್ಥಿತಿಯನ್ನು ವಿವರಿಸಿದ್ದೇವೆ. ಆದ್ದರಿಂದ ಅವರು ಈ ವರ್ಷ ಯಾವುದೇ ಮೆರವಣಿಗೆ ನಡೆಯುವುದಿಲ್ಲ ಮತ್ತು ಸಂಕೀರ್ಣದೊಳಗೆ ಕಡಿಮೆ ಆಚರಣೆಯನ್ನು ನಡೆಸಲಾಗುವುದು ಎಂದು ಅವರು ಒಪ್ಪಿಕೊಂಡಿದ್ದರು” ಎಂದು ಶೆವಾಲೆ ಹೇಳಿದ್ದಾರೆ.

“ಹೋಲಾ ಮೊಹಲ್ಲಾ” ಮೆರವಣಿಗೆಯಲ್ಲಿ ಸಾಂಪ್ರದಾಯಿಕವಾಗಿ ಸಿಖ್ ಸಮುದಾಯದ ಸಮರ ಕೌಶಲ್ಯಗಳ ಪ್ರದರ್ಶನವಿರುತ್ತದೆ.

ರಾಜ್ಯದಲ್ಲಿ ಸಭೆಗಳನ್ನು ನಿಷೇಧಿಸಿದರೂ, ಸ್ಥಳೀಯರು ಮೆರವಣಿಗೆ ನಡೆಸಲು ಯೋಜಿಸಿದ್ದರು. ಹೀಗಾಗಿ ಗುರುದ್ವಾರ ಬಳಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ನಿಶಾನ್ ಸಾಹಿಬ್ ಅಥವಾ ಸಿಖ್ ಧಾರ್ಮಿಕ ಧ್ವಜವನ್ನು ಗುರುದ್ವಾರದ ಬಾಗಿಲು ಬಳಿ ತಂದು ಅನುಮತಿ ನೀಡದ ಪೊಲೀಸರೊಂದಿಗೆ ವಾದಿಸಲು ಶುರುಮಾಡಿದ್ದರು. ನಂತರ ಒಂದು ದೊಡ್ಡ ಗುಂಪು ಗೇಟ್‌ನಿಂದ ಬ್ಯಾರಿಕೇಡ್‌ಗಳನ್ನು ತಳ್ಳಿ ಹೊರಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಯುಪಿ: ಮನೆ ಹೊರಗೆ ಹೋಳಿ ಆಚರಣೆಗೆ ವಿರೋಧಿಸಿದ್ದಕ್ಕೆ 60 ವರ್ಷದ ಮಹಿಳೆಯ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...