Homeಮುಖಪುಟಮಹಾರಾಷ್ಟ್ರ | ಬ್ಯಾಲೆಟ್ ಪೇಪರ್‌ನಲ್ಲಿ 'ಮರು ಚುನಾವಣೆ' ನಡೆಸಲು ಯತ್ನಿಸಿದವರ ವಿರುದ್ಧ ಪ್ರಕರಣ ದಾಖಲು

ಮಹಾರಾಷ್ಟ್ರ | ಬ್ಯಾಲೆಟ್ ಪೇಪರ್‌ನಲ್ಲಿ ‘ಮರು ಚುನಾವಣೆ’ ನಡೆಸಲು ಯತ್ನಿಸಿದವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಸೋಲಾಪುರ ಜಿಲ್ಲೆಯ ಮರ್ಕಡವಾಡಿ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರು ಮತ ಪತ್ರಗಳನ್ನು ಬಳಸಿ “ಮರು ಚುನಾವಣೆ” ನಡೆಸಲು ಯತ್ನಿಸಿದ ನಂತರ ಎನ್‌ಸಿಪಿ (ಎಸ್‌ಪಿ) ನಾಯಕ ಉತ್ತಮ್‌ರಾವ್ ಜನಕರ್ ಮತ್ತು ಇತರ 88 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ

ಇದಕ್ಕೂ ಮೊದಲು, ನಿಷೇಧಾಜ್ಞೆಗಳನ್ನು ಧಿಕ್ಕರಿಸಿ “ಮರು ಚುನಾವಣೆ” ನಡೆಸಲು ಯತ್ನಿಸಿದ ಆರೋಪದ ಮೇಲೆ 200 ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಮರ್ಕಡವಾಡಿ ಗ್ರಾಮವು ಮಲ್ಶಿರಸ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಇತ್ತಿಚೆಗೆ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಎನ್‌ಸಿಪಿ (ಎಸ್‌ಪಿ) ನಾಯಕ ಉತ್ತಮ್‌ರಾವ್ ಜನಕರ್ ಗೆಲುವು ಕಂಡಿದ್ದರು. ಆದರೆ ಗ್ರಾಮದಲ್ಲಿ ಹೆಚ್ಚಿನ ಮತಗಳು ಬಿಜೆಪಿ ಪಾಲಾಗಿದ್ದಕ್ಕೆ ಗ್ರಾಮಸ್ಥರು ಮತ ಪತ್ರಗಳ ಮೂಲಕ ಮರು ಮತದಾನಕ್ಕೆ ಮುಂದಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ, ಇತ್ತೀಚಿನ ಮಹಾರಾಷ್ಟ್ರ ಚುನಾವಣೆಯಲ್ಲಿ ಮಲ್ಶಿರಾಸ್ ವಿಧಾನಸಭಾ ಸ್ಥಾನವನ್ನು ಗೆದ್ದ ಉತ್ತಮ್‌ರಾವ್ ಜನಕರ್ ಮತ್ತು ಇತರರ ಮೇಲೆ ಕಾನೂನುಬಾಹಿರ ಸಭೆ ಮತ್ತು ಸಾರ್ವಜನಿಕ ಸೇವಕ ನೀಡಿದ ಆದೇಶಗಳನ್ನು ಉಲ್ಲಂಘಿಸಿದ ಆರೋಪವನ್ನು ಭಾರತೀಯ ನ್ಯಾಯ ಸಂಹಿತೆಯ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ, 250 ರಿಂದ 300 ಜನರು ಮಾರ್ಕಡ್ವಾಡಿ ಗ್ರಾಮದಲ್ಲಿ ಉದ್ದೇಶಪೂರ್ವಕವಾಗಿ ನಿಷೇಧಾಜ್ಞೆಗಳನ್ನು ಧಿಕ್ಕರಿಸುವ ಮೂಲಕ “ಮರು ಮತದಾನ” ನಡೆಸಲು ಮತ್ತು ಅನಧಿಕೃತ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇತರರನ್ನು ಉತ್ತೇಜಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ

ಇತ್ತೀಚೆಗೆ ನಡೆದ ರಾಜ್ಯ ಚುನಾವಣೆಯಲ್ಲಿ ಮರ್ಕಡವಾಡಿಯ ಮತಗಟ್ಟೆಯಿಂದ ಇವಿಎಂಗಳ ಮೂಲಕ ಎಣಿಕೆಯಾದ ಮತಗಳ ಸಂಖ್ಯೆಯ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ನಂತರ ಬ್ಯಾಲೆಟ್ ಪೇಪರ್‌ಗಳೊಂದಿಗೆ “ಮರು ಚುನಾವಣೆ” ನಡೆಸುವ ನಿರ್ಧಾರಕ್ಕೆ ಗ್ರಾಮಸ್ಥರು ಬಂದಿದ್ದರು. ಅದಾಗ್ಯೂ, ಪೊಲೀಸರ ಮಧ್ಯಪ್ರವೇಶದ ನಂತರ ಈ ಯೋಜನೆಯನ್ನು ಕೈ ಬಿಡಲಾಯಿತು.

ಶಾಸಕ ಜನಕರ್ ಅವರು ಬಿಜೆಪಿಯ ರಾಮ್ ಸತ್ಪುತೆ ಅವರನ್ನು 13,147 ಮತಗಳಿಂದ ಸೋಲಿಸಿದ್ದರು. ಜನಕರ್ ಅವರು ಕ್ಷೇತ್ರವನ್ನು ಗೆದ್ದಿದ್ದರೂ, ಮಾರ್ಕಡ್ವಾಡಿ ನಿವಾಸಿಗಳು ಎನ್‌ಸಿಪಿ (ಎಸ್‌ಪಿ) ನಾಯಕ ಪಡೆದ ಮತಗಳ ಪ್ರಮಾಣವು ಸತ್ಪುತೆ ಅವರಿಗೆ ಹೋಲಿಸಿದರೆ ಕಡಿಮೆ ಎಂದು ಪ್ರತಿಪಾದಿಸಿ, ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ಸೋಲಾಪುರ ಜಿಲ್ಲಾಡಳಿತವು ಮತಪತ್ರಗಳ ಮೇಲೆ “ಮರು ಮತದಾನ” ನಡೆಸಲು ಗ್ರಾಮಸ್ಥರ ಮನವಿಗೆ ಅನುಮತಿ ನಿರಾಕರಿಸಿತ್ತು ಮತ್ತು ಕಾನೂನುಬಾಹಿರ ಸಭೆಯನ್ನು ನಿಷೇಧಿಸುವ ನಿಷೇಧಾಜ್ಞೆಗಳನ್ನು ವಿಧಿಸಿತು. ಆದರೂ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ‘ಮರು ಮತದಾನ’ಕ್ಕೆ ವ್ಯವಸ್ಥೆ ಮಾಡಿದ್ದರು. ಆದರೆ ಮಧ್ಯಪ್ರವೇಶಿಸಿದ ಪೊಲೀಸರು ಜನಕರ್ ಮತ್ತು ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಕಾನೂನು ವಿಧಾನಗಳನ್ನು ವಿವರಿಸಿ, ಪ್ರಕರಣಗಳನ್ನು ದಾಖಲಿಸುವ ಬಗ್ಗೆ ಎಚ್ಚರಿಕೆ ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...