Homeಮುಖಪುಟಮಹಾರಾಷ್ಟ್ರ | ಬ್ಯಾಲೆಟ್ ಪೇಪರ್‌ನಲ್ಲಿ 'ಮರು ಚುನಾವಣೆ' ನಡೆಸಲು ಯತ್ನಿಸಿದವರ ವಿರುದ್ಧ ಪ್ರಕರಣ ದಾಖಲು

ಮಹಾರಾಷ್ಟ್ರ | ಬ್ಯಾಲೆಟ್ ಪೇಪರ್‌ನಲ್ಲಿ ‘ಮರು ಚುನಾವಣೆ’ ನಡೆಸಲು ಯತ್ನಿಸಿದವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಸೋಲಾಪುರ ಜಿಲ್ಲೆಯ ಮರ್ಕಡವಾಡಿ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರು ಮತ ಪತ್ರಗಳನ್ನು ಬಳಸಿ “ಮರು ಚುನಾವಣೆ” ನಡೆಸಲು ಯತ್ನಿಸಿದ ನಂತರ ಎನ್‌ಸಿಪಿ (ಎಸ್‌ಪಿ) ನಾಯಕ ಉತ್ತಮ್‌ರಾವ್ ಜನಕರ್ ಮತ್ತು ಇತರ 88 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ

ಇದಕ್ಕೂ ಮೊದಲು, ನಿಷೇಧಾಜ್ಞೆಗಳನ್ನು ಧಿಕ್ಕರಿಸಿ “ಮರು ಚುನಾವಣೆ” ನಡೆಸಲು ಯತ್ನಿಸಿದ ಆರೋಪದ ಮೇಲೆ 200 ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಮರ್ಕಡವಾಡಿ ಗ್ರಾಮವು ಮಲ್ಶಿರಸ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಇತ್ತಿಚೆಗೆ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಎನ್‌ಸಿಪಿ (ಎಸ್‌ಪಿ) ನಾಯಕ ಉತ್ತಮ್‌ರಾವ್ ಜನಕರ್ ಗೆಲುವು ಕಂಡಿದ್ದರು. ಆದರೆ ಗ್ರಾಮದಲ್ಲಿ ಹೆಚ್ಚಿನ ಮತಗಳು ಬಿಜೆಪಿ ಪಾಲಾಗಿದ್ದಕ್ಕೆ ಗ್ರಾಮಸ್ಥರು ಮತ ಪತ್ರಗಳ ಮೂಲಕ ಮರು ಮತದಾನಕ್ಕೆ ಮುಂದಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ, ಇತ್ತೀಚಿನ ಮಹಾರಾಷ್ಟ್ರ ಚುನಾವಣೆಯಲ್ಲಿ ಮಲ್ಶಿರಾಸ್ ವಿಧಾನಸಭಾ ಸ್ಥಾನವನ್ನು ಗೆದ್ದ ಉತ್ತಮ್‌ರಾವ್ ಜನಕರ್ ಮತ್ತು ಇತರರ ಮೇಲೆ ಕಾನೂನುಬಾಹಿರ ಸಭೆ ಮತ್ತು ಸಾರ್ವಜನಿಕ ಸೇವಕ ನೀಡಿದ ಆದೇಶಗಳನ್ನು ಉಲ್ಲಂಘಿಸಿದ ಆರೋಪವನ್ನು ಭಾರತೀಯ ನ್ಯಾಯ ಸಂಹಿತೆಯ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ, 250 ರಿಂದ 300 ಜನರು ಮಾರ್ಕಡ್ವಾಡಿ ಗ್ರಾಮದಲ್ಲಿ ಉದ್ದೇಶಪೂರ್ವಕವಾಗಿ ನಿಷೇಧಾಜ್ಞೆಗಳನ್ನು ಧಿಕ್ಕರಿಸುವ ಮೂಲಕ “ಮರು ಮತದಾನ” ನಡೆಸಲು ಮತ್ತು ಅನಧಿಕೃತ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇತರರನ್ನು ಉತ್ತೇಜಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ

ಇತ್ತೀಚೆಗೆ ನಡೆದ ರಾಜ್ಯ ಚುನಾವಣೆಯಲ್ಲಿ ಮರ್ಕಡವಾಡಿಯ ಮತಗಟ್ಟೆಯಿಂದ ಇವಿಎಂಗಳ ಮೂಲಕ ಎಣಿಕೆಯಾದ ಮತಗಳ ಸಂಖ್ಯೆಯ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ನಂತರ ಬ್ಯಾಲೆಟ್ ಪೇಪರ್‌ಗಳೊಂದಿಗೆ “ಮರು ಚುನಾವಣೆ” ನಡೆಸುವ ನಿರ್ಧಾರಕ್ಕೆ ಗ್ರಾಮಸ್ಥರು ಬಂದಿದ್ದರು. ಅದಾಗ್ಯೂ, ಪೊಲೀಸರ ಮಧ್ಯಪ್ರವೇಶದ ನಂತರ ಈ ಯೋಜನೆಯನ್ನು ಕೈ ಬಿಡಲಾಯಿತು.

ಶಾಸಕ ಜನಕರ್ ಅವರು ಬಿಜೆಪಿಯ ರಾಮ್ ಸತ್ಪುತೆ ಅವರನ್ನು 13,147 ಮತಗಳಿಂದ ಸೋಲಿಸಿದ್ದರು. ಜನಕರ್ ಅವರು ಕ್ಷೇತ್ರವನ್ನು ಗೆದ್ದಿದ್ದರೂ, ಮಾರ್ಕಡ್ವಾಡಿ ನಿವಾಸಿಗಳು ಎನ್‌ಸಿಪಿ (ಎಸ್‌ಪಿ) ನಾಯಕ ಪಡೆದ ಮತಗಳ ಪ್ರಮಾಣವು ಸತ್ಪುತೆ ಅವರಿಗೆ ಹೋಲಿಸಿದರೆ ಕಡಿಮೆ ಎಂದು ಪ್ರತಿಪಾದಿಸಿ, ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ಸೋಲಾಪುರ ಜಿಲ್ಲಾಡಳಿತವು ಮತಪತ್ರಗಳ ಮೇಲೆ “ಮರು ಮತದಾನ” ನಡೆಸಲು ಗ್ರಾಮಸ್ಥರ ಮನವಿಗೆ ಅನುಮತಿ ನಿರಾಕರಿಸಿತ್ತು ಮತ್ತು ಕಾನೂನುಬಾಹಿರ ಸಭೆಯನ್ನು ನಿಷೇಧಿಸುವ ನಿಷೇಧಾಜ್ಞೆಗಳನ್ನು ವಿಧಿಸಿತು. ಆದರೂ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ‘ಮರು ಮತದಾನ’ಕ್ಕೆ ವ್ಯವಸ್ಥೆ ಮಾಡಿದ್ದರು. ಆದರೆ ಮಧ್ಯಪ್ರವೇಶಿಸಿದ ಪೊಲೀಸರು ಜನಕರ್ ಮತ್ತು ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಕಾನೂನು ವಿಧಾನಗಳನ್ನು ವಿವರಿಸಿ, ಪ್ರಕರಣಗಳನ್ನು ದಾಖಲಿಸುವ ಬಗ್ಗೆ ಎಚ್ಚರಿಕೆ ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...