Homeಅಂತರಾಷ್ಟ್ರೀಯಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

ಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

- Advertisement -
- Advertisement -

ಭಾರತೀಯ ದಂಪತಿ ಅಮೆರಿಕದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ನ್ಯೂಜೆರ್ಸಿಯಲ್ಲಿ ನಡೆದಿದೆ. ಮೃತರ ನಾಲ್ಕು ವರ್ಷದ ಮಗಳು ತಮ್ಮ ಮನೆಯ ಬಾಲ್ಕನಿಯಲ್ಲಿ ಏಕಾಂಗಿಯಾಗಿ ಅಳುತ್ತಿರುವುದನ್ನು ನೋಡಿದ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಅಮೆರಿಕದ ಮಾಧ್ಯಮಗಳು ಉತ್ತರ ಆರ್ಲಿಂಗ್ಟನ್ ಅಪಾರ್ಟ್ಮೆಂಟ್‌ನಲ್ಲಿ ಇರಿತದಿಂದ ದಂಪತಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿವೆ. ಕೌಟುಂಬಿಕ ಕಲಹದಲ್ಲಿ ಗಂಡ ತನ್ನ ಹೆಂಡತಿಯ ಹೊಟ್ಟೆಗೆ ಚಾಕು ಇರಿದು, ನಂತರ ತಾನು ಇರಿದುಕೊಂಡಿದ್ದಾರೆ ಎಂದು ಯುಎಸ್ ಮಾಧ್ಯಮಗಳು ವರದಿಯಲ್ಲಿ ತಿಳಿಸಿದೆ.

ನ್ಯೂಜೆರ್ಸಿಯ ನಾರ್ತ್ ಆರ್ಲಿಂಗ್ಟನ್ ಪ್ರಾಂತ್ಯದ ರಿವರ್ ವ್ಯೂ ಗಾರ್ಡನ್ಸ್ ಅಪಾರ್ಟ್ಮೆಂಟ್‌ನ 21 ಗಾರ್ಡನ್ ಟೆರೇಸ್ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ಭಾರತ ಮೂಲದ ಬಾಲಾಜಿ ಭಾರತ್ ರುದ್ರಾವರ್ (32) ಮತ್ತು ಅವರ ಪತ್ನಿ ಆರತಿ ಬಾಲಾಜಿ ರುದ್ರಾವರ್ (30) ಮೃತರು. ಈ ಅಪಾರ್ಟ್ಮೆಂಟ್‌ನಲ್ಲಿ 15,000 ಕ್ಕೂ ಹೆಚ್ಚು ಜನರು ವಾಸವಿದ್ದಾರೆ.

ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

“ನನ್ನ ಮೊಮ್ಮಗಳು ಬಾಲ್ಕನಿಯಲ್ಲಿ ಅಳುತ್ತಿರುವುದನ್ನು ನೆರೆಹೊರೆಯವರು ನೋಡಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯೊಳಗೆ ಪ್ರವೇಶಿಸಿದ ನಂತರ ಬುಧವಾರ ಶವಗಳು ಪತ್ತೆಯಾಗಿವೆ” ಎಂದು ಬಾಲಾಜಿ ತಂದೆ ಭಾರತ್ ರುದ್ರಾವರ್ ಪಿಟಿಐಗೆ ತಿಳಿಸಿದ್ದಾರೆ.

“ಅಲ್ಲಿನ ಸ್ಥಳೀಯ ಪೊಲೀಸರು ಗುರುವಾರ ದುರಂತದ ಬಗ್ಗೆ ನನಗೆ ಮಾಹಿತಿ ನೀಡಿದರು. ಸಾವಿಗೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿಯ ವಿಚಾರಗಳನ್ನು ಹಂಚಿಕೊಳ್ಳುವುದಾಗಿ ಯುಎಸ್ ಪೊಲೀಸರು ಹೇಳಿದ್ದಾರೆ” ಎಂದು ರುದ್ರಾವರ್ ಹೇಳಿದ್ದಾರೆ.

“ನನ್ನ ಸೊಸೆ ಏಳು ತಿಂಗಳ ಗರ್ಭಿಣಿಯಾಗಿದ್ದಳು. ತುಂಬಾ ಸಂತೋಷದಿಂದ ಅವರು ಜೀವನ ನಡೆಸುತ್ತಿದ್ದರು. ನೆರೆಹೊರೆಯವರು ಕೂಡ ಒಳ್ಳೆಯವರಾಗಿದ್ದರು. ಯಾರ ಮೇಲೂ ನನಗೆ ಅನುಮಾನಗಳಿಲ್ಲ. ಸದ್ಯ ನನ್ನ ಮೊಮ್ಮಗಳು ನನ್ನ ಮಗನ ಸ್ನೇಹಿತನೊಂದಿಗೆ ಇದ್ದಾರೆ. ಮೃತದೇಹಗಳು ಇಲ್ಲಿಗೆ ತಲುಪಲು 8 ರಿಂದ 10 ದಿನಗಳು ಬೇಕಾಗುತ್ತದೆ ಎಂದು ನನಗೆ ಯುಎಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಜೋಗೈ ಮೂಲದ ಐಟಿ ಉದ್ಯಮಿ ಬಾಲಾಜಿ ರುದ್ರಾವರ್ ಅವರು 2014 ರ ಡಿಸೆಂಬರ್‌ನಲ್ಲಿ ಆರತಿ ಅವರನ್ನು ವಿವಾಹವಾಗಿ, 2015 ರ ಆಗಸ್ಟ್‌ನಲ್ಲಿ ತಮ್ಮ ಹೆಂಡತಿಯೊಂದಿಗೆ ಯುಎಸ್‌ಗೆ ತೆರಳಿದ್ದರು. ಬಾಲಾಜಿ ಅವರು ಭಾರತದ ಪ್ರಮುಖ ಇನ್ಫೋಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆತನ ಪತ್ನಿ ಗೃಹಿಣಿಯಾಗಿದ್ದರು ಎಂದು ಮೃತ ಬಾಲಾಜಿ ಅವರ ತಂದೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೇ ತಿಂಗಳಲ್ಲೇ ಅಮರಿಂದರ್‌ ಪರವಾಗಿ ಕೆಲಸ ಪ್ರಾರಂಭಿಸಲಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್‌‌ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...