Homeಅಂತರಾಷ್ಟ್ರೀಯಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

ಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

- Advertisement -
- Advertisement -

ಭಾರತೀಯ ದಂಪತಿ ಅಮೆರಿಕದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ನ್ಯೂಜೆರ್ಸಿಯಲ್ಲಿ ನಡೆದಿದೆ. ಮೃತರ ನಾಲ್ಕು ವರ್ಷದ ಮಗಳು ತಮ್ಮ ಮನೆಯ ಬಾಲ್ಕನಿಯಲ್ಲಿ ಏಕಾಂಗಿಯಾಗಿ ಅಳುತ್ತಿರುವುದನ್ನು ನೋಡಿದ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಅಮೆರಿಕದ ಮಾಧ್ಯಮಗಳು ಉತ್ತರ ಆರ್ಲಿಂಗ್ಟನ್ ಅಪಾರ್ಟ್ಮೆಂಟ್‌ನಲ್ಲಿ ಇರಿತದಿಂದ ದಂಪತಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿವೆ. ಕೌಟುಂಬಿಕ ಕಲಹದಲ್ಲಿ ಗಂಡ ತನ್ನ ಹೆಂಡತಿಯ ಹೊಟ್ಟೆಗೆ ಚಾಕು ಇರಿದು, ನಂತರ ತಾನು ಇರಿದುಕೊಂಡಿದ್ದಾರೆ ಎಂದು ಯುಎಸ್ ಮಾಧ್ಯಮಗಳು ವರದಿಯಲ್ಲಿ ತಿಳಿಸಿದೆ.

ನ್ಯೂಜೆರ್ಸಿಯ ನಾರ್ತ್ ಆರ್ಲಿಂಗ್ಟನ್ ಪ್ರಾಂತ್ಯದ ರಿವರ್ ವ್ಯೂ ಗಾರ್ಡನ್ಸ್ ಅಪಾರ್ಟ್ಮೆಂಟ್‌ನ 21 ಗಾರ್ಡನ್ ಟೆರೇಸ್ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ಭಾರತ ಮೂಲದ ಬಾಲಾಜಿ ಭಾರತ್ ರುದ್ರಾವರ್ (32) ಮತ್ತು ಅವರ ಪತ್ನಿ ಆರತಿ ಬಾಲಾಜಿ ರುದ್ರಾವರ್ (30) ಮೃತರು. ಈ ಅಪಾರ್ಟ್ಮೆಂಟ್‌ನಲ್ಲಿ 15,000 ಕ್ಕೂ ಹೆಚ್ಚು ಜನರು ವಾಸವಿದ್ದಾರೆ.

ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

“ನನ್ನ ಮೊಮ್ಮಗಳು ಬಾಲ್ಕನಿಯಲ್ಲಿ ಅಳುತ್ತಿರುವುದನ್ನು ನೆರೆಹೊರೆಯವರು ನೋಡಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯೊಳಗೆ ಪ್ರವೇಶಿಸಿದ ನಂತರ ಬುಧವಾರ ಶವಗಳು ಪತ್ತೆಯಾಗಿವೆ” ಎಂದು ಬಾಲಾಜಿ ತಂದೆ ಭಾರತ್ ರುದ್ರಾವರ್ ಪಿಟಿಐಗೆ ತಿಳಿಸಿದ್ದಾರೆ.

“ಅಲ್ಲಿನ ಸ್ಥಳೀಯ ಪೊಲೀಸರು ಗುರುವಾರ ದುರಂತದ ಬಗ್ಗೆ ನನಗೆ ಮಾಹಿತಿ ನೀಡಿದರು. ಸಾವಿಗೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿಯ ವಿಚಾರಗಳನ್ನು ಹಂಚಿಕೊಳ್ಳುವುದಾಗಿ ಯುಎಸ್ ಪೊಲೀಸರು ಹೇಳಿದ್ದಾರೆ” ಎಂದು ರುದ್ರಾವರ್ ಹೇಳಿದ್ದಾರೆ.

“ನನ್ನ ಸೊಸೆ ಏಳು ತಿಂಗಳ ಗರ್ಭಿಣಿಯಾಗಿದ್ದಳು. ತುಂಬಾ ಸಂತೋಷದಿಂದ ಅವರು ಜೀವನ ನಡೆಸುತ್ತಿದ್ದರು. ನೆರೆಹೊರೆಯವರು ಕೂಡ ಒಳ್ಳೆಯವರಾಗಿದ್ದರು. ಯಾರ ಮೇಲೂ ನನಗೆ ಅನುಮಾನಗಳಿಲ್ಲ. ಸದ್ಯ ನನ್ನ ಮೊಮ್ಮಗಳು ನನ್ನ ಮಗನ ಸ್ನೇಹಿತನೊಂದಿಗೆ ಇದ್ದಾರೆ. ಮೃತದೇಹಗಳು ಇಲ್ಲಿಗೆ ತಲುಪಲು 8 ರಿಂದ 10 ದಿನಗಳು ಬೇಕಾಗುತ್ತದೆ ಎಂದು ನನಗೆ ಯುಎಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಜೋಗೈ ಮೂಲದ ಐಟಿ ಉದ್ಯಮಿ ಬಾಲಾಜಿ ರುದ್ರಾವರ್ ಅವರು 2014 ರ ಡಿಸೆಂಬರ್‌ನಲ್ಲಿ ಆರತಿ ಅವರನ್ನು ವಿವಾಹವಾಗಿ, 2015 ರ ಆಗಸ್ಟ್‌ನಲ್ಲಿ ತಮ್ಮ ಹೆಂಡತಿಯೊಂದಿಗೆ ಯುಎಸ್‌ಗೆ ತೆರಳಿದ್ದರು. ಬಾಲಾಜಿ ಅವರು ಭಾರತದ ಪ್ರಮುಖ ಇನ್ಫೋಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆತನ ಪತ್ನಿ ಗೃಹಿಣಿಯಾಗಿದ್ದರು ಎಂದು ಮೃತ ಬಾಲಾಜಿ ಅವರ ತಂದೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೇ ತಿಂಗಳಲ್ಲೇ ಅಮರಿಂದರ್‌ ಪರವಾಗಿ ಕೆಲಸ ಪ್ರಾರಂಭಿಸಲಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್‌‌ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...