Homeಅಂತರಾಷ್ಟ್ರೀಯಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

ಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

- Advertisement -
- Advertisement -

ಭಾರತೀಯ ದಂಪತಿ ಅಮೆರಿಕದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ನ್ಯೂಜೆರ್ಸಿಯಲ್ಲಿ ನಡೆದಿದೆ. ಮೃತರ ನಾಲ್ಕು ವರ್ಷದ ಮಗಳು ತಮ್ಮ ಮನೆಯ ಬಾಲ್ಕನಿಯಲ್ಲಿ ಏಕಾಂಗಿಯಾಗಿ ಅಳುತ್ತಿರುವುದನ್ನು ನೋಡಿದ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಅಮೆರಿಕದ ಮಾಧ್ಯಮಗಳು ಉತ್ತರ ಆರ್ಲಿಂಗ್ಟನ್ ಅಪಾರ್ಟ್ಮೆಂಟ್‌ನಲ್ಲಿ ಇರಿತದಿಂದ ದಂಪತಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿವೆ. ಕೌಟುಂಬಿಕ ಕಲಹದಲ್ಲಿ ಗಂಡ ತನ್ನ ಹೆಂಡತಿಯ ಹೊಟ್ಟೆಗೆ ಚಾಕು ಇರಿದು, ನಂತರ ತಾನು ಇರಿದುಕೊಂಡಿದ್ದಾರೆ ಎಂದು ಯುಎಸ್ ಮಾಧ್ಯಮಗಳು ವರದಿಯಲ್ಲಿ ತಿಳಿಸಿದೆ.

ನ್ಯೂಜೆರ್ಸಿಯ ನಾರ್ತ್ ಆರ್ಲಿಂಗ್ಟನ್ ಪ್ರಾಂತ್ಯದ ರಿವರ್ ವ್ಯೂ ಗಾರ್ಡನ್ಸ್ ಅಪಾರ್ಟ್ಮೆಂಟ್‌ನ 21 ಗಾರ್ಡನ್ ಟೆರೇಸ್ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ಭಾರತ ಮೂಲದ ಬಾಲಾಜಿ ಭಾರತ್ ರುದ್ರಾವರ್ (32) ಮತ್ತು ಅವರ ಪತ್ನಿ ಆರತಿ ಬಾಲಾಜಿ ರುದ್ರಾವರ್ (30) ಮೃತರು. ಈ ಅಪಾರ್ಟ್ಮೆಂಟ್‌ನಲ್ಲಿ 15,000 ಕ್ಕೂ ಹೆಚ್ಚು ಜನರು ವಾಸವಿದ್ದಾರೆ.

ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

“ನನ್ನ ಮೊಮ್ಮಗಳು ಬಾಲ್ಕನಿಯಲ್ಲಿ ಅಳುತ್ತಿರುವುದನ್ನು ನೆರೆಹೊರೆಯವರು ನೋಡಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯೊಳಗೆ ಪ್ರವೇಶಿಸಿದ ನಂತರ ಬುಧವಾರ ಶವಗಳು ಪತ್ತೆಯಾಗಿವೆ” ಎಂದು ಬಾಲಾಜಿ ತಂದೆ ಭಾರತ್ ರುದ್ರಾವರ್ ಪಿಟಿಐಗೆ ತಿಳಿಸಿದ್ದಾರೆ.

“ಅಲ್ಲಿನ ಸ್ಥಳೀಯ ಪೊಲೀಸರು ಗುರುವಾರ ದುರಂತದ ಬಗ್ಗೆ ನನಗೆ ಮಾಹಿತಿ ನೀಡಿದರು. ಸಾವಿಗೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿಯ ವಿಚಾರಗಳನ್ನು ಹಂಚಿಕೊಳ್ಳುವುದಾಗಿ ಯುಎಸ್ ಪೊಲೀಸರು ಹೇಳಿದ್ದಾರೆ” ಎಂದು ರುದ್ರಾವರ್ ಹೇಳಿದ್ದಾರೆ.

“ನನ್ನ ಸೊಸೆ ಏಳು ತಿಂಗಳ ಗರ್ಭಿಣಿಯಾಗಿದ್ದಳು. ತುಂಬಾ ಸಂತೋಷದಿಂದ ಅವರು ಜೀವನ ನಡೆಸುತ್ತಿದ್ದರು. ನೆರೆಹೊರೆಯವರು ಕೂಡ ಒಳ್ಳೆಯವರಾಗಿದ್ದರು. ಯಾರ ಮೇಲೂ ನನಗೆ ಅನುಮಾನಗಳಿಲ್ಲ. ಸದ್ಯ ನನ್ನ ಮೊಮ್ಮಗಳು ನನ್ನ ಮಗನ ಸ್ನೇಹಿತನೊಂದಿಗೆ ಇದ್ದಾರೆ. ಮೃತದೇಹಗಳು ಇಲ್ಲಿಗೆ ತಲುಪಲು 8 ರಿಂದ 10 ದಿನಗಳು ಬೇಕಾಗುತ್ತದೆ ಎಂದು ನನಗೆ ಯುಎಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಜೋಗೈ ಮೂಲದ ಐಟಿ ಉದ್ಯಮಿ ಬಾಲಾಜಿ ರುದ್ರಾವರ್ ಅವರು 2014 ರ ಡಿಸೆಂಬರ್‌ನಲ್ಲಿ ಆರತಿ ಅವರನ್ನು ವಿವಾಹವಾಗಿ, 2015 ರ ಆಗಸ್ಟ್‌ನಲ್ಲಿ ತಮ್ಮ ಹೆಂಡತಿಯೊಂದಿಗೆ ಯುಎಸ್‌ಗೆ ತೆರಳಿದ್ದರು. ಬಾಲಾಜಿ ಅವರು ಭಾರತದ ಪ್ರಮುಖ ಇನ್ಫೋಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆತನ ಪತ್ನಿ ಗೃಹಿಣಿಯಾಗಿದ್ದರು ಎಂದು ಮೃತ ಬಾಲಾಜಿ ಅವರ ತಂದೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೇ ತಿಂಗಳಲ್ಲೇ ಅಮರಿಂದರ್‌ ಪರವಾಗಿ ಕೆಲಸ ಪ್ರಾರಂಭಿಸಲಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್‌‌ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...