Homeಅಂತರಾಷ್ಟ್ರೀಯಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

ಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಮಹಾರಾಷ್ಟ್ರ ಮೂಲದ ದಂಪತಿ

- Advertisement -
- Advertisement -

ಭಾರತೀಯ ದಂಪತಿ ಅಮೆರಿಕದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ನ್ಯೂಜೆರ್ಸಿಯಲ್ಲಿ ನಡೆದಿದೆ. ಮೃತರ ನಾಲ್ಕು ವರ್ಷದ ಮಗಳು ತಮ್ಮ ಮನೆಯ ಬಾಲ್ಕನಿಯಲ್ಲಿ ಏಕಾಂಗಿಯಾಗಿ ಅಳುತ್ತಿರುವುದನ್ನು ನೋಡಿದ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಅಮೆರಿಕದ ಮಾಧ್ಯಮಗಳು ಉತ್ತರ ಆರ್ಲಿಂಗ್ಟನ್ ಅಪಾರ್ಟ್ಮೆಂಟ್‌ನಲ್ಲಿ ಇರಿತದಿಂದ ದಂಪತಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿವೆ. ಕೌಟುಂಬಿಕ ಕಲಹದಲ್ಲಿ ಗಂಡ ತನ್ನ ಹೆಂಡತಿಯ ಹೊಟ್ಟೆಗೆ ಚಾಕು ಇರಿದು, ನಂತರ ತಾನು ಇರಿದುಕೊಂಡಿದ್ದಾರೆ ಎಂದು ಯುಎಸ್ ಮಾಧ್ಯಮಗಳು ವರದಿಯಲ್ಲಿ ತಿಳಿಸಿದೆ.

ನ್ಯೂಜೆರ್ಸಿಯ ನಾರ್ತ್ ಆರ್ಲಿಂಗ್ಟನ್ ಪ್ರಾಂತ್ಯದ ರಿವರ್ ವ್ಯೂ ಗಾರ್ಡನ್ಸ್ ಅಪಾರ್ಟ್ಮೆಂಟ್‌ನ 21 ಗಾರ್ಡನ್ ಟೆರೇಸ್ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ಭಾರತ ಮೂಲದ ಬಾಲಾಜಿ ಭಾರತ್ ರುದ್ರಾವರ್ (32) ಮತ್ತು ಅವರ ಪತ್ನಿ ಆರತಿ ಬಾಲಾಜಿ ರುದ್ರಾವರ್ (30) ಮೃತರು. ಈ ಅಪಾರ್ಟ್ಮೆಂಟ್‌ನಲ್ಲಿ 15,000 ಕ್ಕೂ ಹೆಚ್ಚು ಜನರು ವಾಸವಿದ್ದಾರೆ.

ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

“ನನ್ನ ಮೊಮ್ಮಗಳು ಬಾಲ್ಕನಿಯಲ್ಲಿ ಅಳುತ್ತಿರುವುದನ್ನು ನೆರೆಹೊರೆಯವರು ನೋಡಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯೊಳಗೆ ಪ್ರವೇಶಿಸಿದ ನಂತರ ಬುಧವಾರ ಶವಗಳು ಪತ್ತೆಯಾಗಿವೆ” ಎಂದು ಬಾಲಾಜಿ ತಂದೆ ಭಾರತ್ ರುದ್ರಾವರ್ ಪಿಟಿಐಗೆ ತಿಳಿಸಿದ್ದಾರೆ.

“ಅಲ್ಲಿನ ಸ್ಥಳೀಯ ಪೊಲೀಸರು ಗುರುವಾರ ದುರಂತದ ಬಗ್ಗೆ ನನಗೆ ಮಾಹಿತಿ ನೀಡಿದರು. ಸಾವಿಗೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿಯ ವಿಚಾರಗಳನ್ನು ಹಂಚಿಕೊಳ್ಳುವುದಾಗಿ ಯುಎಸ್ ಪೊಲೀಸರು ಹೇಳಿದ್ದಾರೆ” ಎಂದು ರುದ್ರಾವರ್ ಹೇಳಿದ್ದಾರೆ.

“ನನ್ನ ಸೊಸೆ ಏಳು ತಿಂಗಳ ಗರ್ಭಿಣಿಯಾಗಿದ್ದಳು. ತುಂಬಾ ಸಂತೋಷದಿಂದ ಅವರು ಜೀವನ ನಡೆಸುತ್ತಿದ್ದರು. ನೆರೆಹೊರೆಯವರು ಕೂಡ ಒಳ್ಳೆಯವರಾಗಿದ್ದರು. ಯಾರ ಮೇಲೂ ನನಗೆ ಅನುಮಾನಗಳಿಲ್ಲ. ಸದ್ಯ ನನ್ನ ಮೊಮ್ಮಗಳು ನನ್ನ ಮಗನ ಸ್ನೇಹಿತನೊಂದಿಗೆ ಇದ್ದಾರೆ. ಮೃತದೇಹಗಳು ಇಲ್ಲಿಗೆ ತಲುಪಲು 8 ರಿಂದ 10 ದಿನಗಳು ಬೇಕಾಗುತ್ತದೆ ಎಂದು ನನಗೆ ಯುಎಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಜೋಗೈ ಮೂಲದ ಐಟಿ ಉದ್ಯಮಿ ಬಾಲಾಜಿ ರುದ್ರಾವರ್ ಅವರು 2014 ರ ಡಿಸೆಂಬರ್‌ನಲ್ಲಿ ಆರತಿ ಅವರನ್ನು ವಿವಾಹವಾಗಿ, 2015 ರ ಆಗಸ್ಟ್‌ನಲ್ಲಿ ತಮ್ಮ ಹೆಂಡತಿಯೊಂದಿಗೆ ಯುಎಸ್‌ಗೆ ತೆರಳಿದ್ದರು. ಬಾಲಾಜಿ ಅವರು ಭಾರತದ ಪ್ರಮುಖ ಇನ್ಫೋಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆತನ ಪತ್ನಿ ಗೃಹಿಣಿಯಾಗಿದ್ದರು ಎಂದು ಮೃತ ಬಾಲಾಜಿ ಅವರ ತಂದೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೇ ತಿಂಗಳಲ್ಲೇ ಅಮರಿಂದರ್‌ ಪರವಾಗಿ ಕೆಲಸ ಪ್ರಾರಂಭಿಸಲಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್‌‌ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...