Homeಫ್ಯಾಕ್ಟ್‌ಚೆಕ್ಮಹಾರಾಷ್ಟ್ರ ಬಿಟ್ ಕಾಯಿನ್ ಅಕ್ರಮ ಆರೋಪ : ಬಿಜೆಪಿ ಹಂಚಿಕೊಂಡ ಆಡಿಯೋ ನಕಲಿ ಎಂದ ಫ್ಯಾಕ್ಟ್‌ಚೆಕ್

ಮಹಾರಾಷ್ಟ್ರ ಬಿಟ್ ಕಾಯಿನ್ ಅಕ್ರಮ ಆರೋಪ : ಬಿಜೆಪಿ ಹಂಚಿಕೊಂಡ ಆಡಿಯೋ ನಕಲಿ ಎಂದ ಫ್ಯಾಕ್ಟ್‌ಚೆಕ್

- Advertisement -
- Advertisement -

ಮಹಾರಾಷ್ಟ್ರದ ಪ್ರತಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ನಾಯಕರಾದ ನಾನಾ ಪಟೋಲೆ ಮತ್ತು ಸುಪ್ರಿಯಾ ಸುಳೆ ಬಿಟ್ ಕಾಯಿನ್ ಹಣವನ್ನು ಚುನಾವಣೆಗೆ ಬಳಸಿಕೊಂಡು ಅಕ್ರಮವೆಸಗಿದ್ದಾರೆ ಎಂದು ಬಿಜೆಪಿ ಮಂಗಳವಾರ (ನ.19) ಆರೋಪಿಸಿತ್ತು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ನಿನ್ನೆ(ನ.20) ನಡೆದಿದೆ. ಅದರ ಮುನ್ನಾದಿನ ಮಂಗಳವಾರ (ನ.19) ರಾತ್ರಿ 10.58, 11.00, 11.02 ಮತ್ತು 11.04ಕ್ಕೆ ಬಿಜೆಪಿ ರಾಷ್ಟ್ರೀಯ ಸಮಿತಿಯ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ 4 ಆಡಿಯೋ ರೆಕಾರ್ಡಿಂಗ್ ಕ್ಲಿಪ್‌ಗಳನ್ನು ಅಪ್ಲೋಡ್ ಮಾಡಿತ್ತು.

ಈ ನಾಲ್ಕು ಆಡಿಯೋ ರೆಕಾರ್ಡಿಂಗ್‌ಗಳು ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ, ಕಾಂಗ್ರೆಸ್ ನಾಯಕ ನಾನಾ ಪಟೋಲೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ತಂಡದ ಇನ್‌ಸ್ಪೆಕ್ಟರ್ ಜನರಲ್ ಹಾಗೂ ಐಪಿಎಸ್‌ ಅಧಿಕಾರಿ ಅಮಿತಾಬ್ ಗುಪ್ತಾ ಮತ್ತು ಸಾರಥಿ ಎಂಬ ಆಡಿಟ್ ಸಂಸ್ಥೆಯ ಉದ್ಯೋಗಿ ಗೌರವ್ ಮೆಹ್ತಾ ನಡುವಿನ ಸಂಭಾಷಣೆಯದ್ದು ಎಂದು ಬಿಜೆಪಿ ಆರೋಪಿಸಿತ್ತು.

ಇದಕ್ಕೂ ಮುನ್ನ ಮಂಗಳವಾರ ಪುಣೆಯ ಮಾಜಿ ಪೊಲೀಸ್ ಅಧಿಕಾರಿ ರವೀಂದ್ರನಾಥ್ ಪಾಟೀಲ್ ಅವರು, ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಅವರು 2018ರ ಕ್ರಿಪ್ಟೋ ಕರೆನ್ಸಿ ಹಗರಣ ಪ್ರಕರಣದ ಬಿಟ್‌ ಕಾಯಿನ್‌ಗಳನ್ನು ದುರುಪಯೋಗಪಡಿಸಿಕೊಂಡು, ಅದರ ಹಣವನ್ನು ರಾಜ್ಯ ಚುನಾವಣೆಗೆ ಬಳಸಿದ್ದಾರೆ ಎಂದು ಆರೋಪಿಸಿದ್ದರು.

ಪುಣೆಯ ಮಾಜಿ ಪೊಲೀಸ್ ಆಯುಕ್ತ ಹಾಗೂ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ, ಸಾರಥಿ ಆಡಿಟ್ ಸಂಸ್ಥೆಯ ಉದ್ಯೋಗಿ ಗೌರವ್ ಮೆಹ್ತಾ, ಪ್ರಸ್ತುತ ಚಂದ್ರಾಪುರದಲ್ಲಿ ಮಹಾರಾಷ್ಟ್ರ ಮೀಸಲು ಪೊಲೀಸ್ ಪಡೆಯ ಎಸ್ಪಿಯಾಗಿರುವ ಐಪಿಎಸ್ ಅಧಿಕಾರಿ ಭಾಗ್ಯಶ್ರೀ ನವತಾಕೆ ವಿರುದ್ದ ಕೂಡ ರವೀಂದ್ರನಾಥ್ ಪಾಟೀಲ್ ಆರೋಪ ಹೊರಿಸಿದ್ದರು. ಇವರ ನಡುವಿನ ಸಂಭಾಷಣೆಯ ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳಿದ್ದರು.

ರವೀಂದ್ರನಾಥ್ ಪಾಟೀಲ್ ಆರೋಪ ಮಾಡಿದ ಬೆನ್ನಲ್ಲೇ, ಬಿಜೆಪಿ ನಾಲ್ಕು ಆಡಿಯೋ ಕ್ಲಿಪ್‌ಗಳನ್ನು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿತ್ತು.

ಬಿಜೆಪಿ ಹಂಚಿಕೊಂಡ ಆಡಿಯೋದಲ್ಲಿ ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಎನ್ನಲಾದ ವ್ಯಕ್ತಿಗಳು ನಾಲ್ಕು ಕ್ರಿಪ್ಟೋ ವ್ಯಾಲೆಟ್‌ಗಳಲ್ಲಿ ಸಂಗ್ರಹವಾಗಿರುವ ಬಿಟ್‌ಕಾಯಿನ್‌ಗಳಿಗೆ ಬದಲಾಗಿ ಹಣ ಕೇಳುವುದು ಮತ್ತು ಈ ವಿಷಯದಲ್ಲಿ ಯಾವುದೇ ತನಿಖೆ ನಡೆಯುವುದಿಲ್ಲ ಎಂದು ಭರವಸೆ ಕೊಡುವುದು ಇದೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ಬುಧವಾರ (ನ.20) ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ, ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ವಿರುದ್ದ ಗಂಭೀರ ಆರೋಪ ಮಾಡಿದ್ದರು. “ತನಿಖೆ ನಡೆದರೆ ಎಲ್ಲಾ ಹಗರಣ ಹೊರ ಬರಲಿದೆ. ಪ್ರತಿಪಕ್ಷಗಳ ಮೈತ್ರಿಕೂಟ ‘ಎಂವಿಎ ಗೋಡೆ ಮೇಲೆ ಬರೆದ ಬರಹದಂತೆ ತಮ್ಮ ಸೋಲನ್ನು ಎದುರು ನೋಡುತ್ತಿದೆ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ಪ್ರಮುಖ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆಯಾದ boomlive.in ಬಿಜೆಪಿ ಹಂಚಿಕೊಂಡಿರುವ ಆಡಿಯೋ ಕ್ಲಿಪ್‌ಗಳು ನಕಲಿ ಎಂದು ಹೇಳಿವೆ. ನಾನಾ ಪಟೋಲೆ, ಸುಪ್ರಿಯಾ ಸುಳೆ ಹಾಗೂ ಮತ್ತಿರರ ಹೆಸರಿನಲ್ಲಿ ಬಿಜೆಪಿ ಹಂಚಿಕೊಂಡಿರುವ ಆಡಿಯೋ ಕ್ಲಿಪ್‌ಗಳನ್ನು ಎಐ (ಕೃತಕ ಬುದ್ದಿಮತ್ತೆ) ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ ಎಂದಿದೆ. ಪತ್ರಕರ್ತರು ಮತ್ತು ಸಂಶೋಧಕರಿಗೆ ಲಭ್ಯವಿರುವ TrueMedia.org ಡೀಪ್‌ಫೇಕ್ ಪತ್ತೆ ಸಾಧನ ಬಳಸಿಕೊಂಡು ನಾವು ಆಡಿಯೊ ಕ್ಲಿಪ್‌ಗಳನ್ನು ಪರೀಕ್ಷಿಸಿದ್ದೇವೆ ಎಂದು ತಿಳಿಸಿದೆ.

ಬಿಜೆಪಿ ಹಂಚಿಕೊಂಡಿರುವ ನಾಲ್ಕು ಆಡಿಯೋಗಳ ಪೈಕಿ ಮೂರು ಎಐ ಬಳಸಿ ಸೃಷ್ಟಿಸಿರುವುದಕ್ಕೆ ಸಾಕಷ್ಟು ಪುರಾವೆಗಳು ದೊರೆತಿವೆ. ಒಂದು ಆಡಿಯೋ ಮಾತ್ರ ಎಐ ಎಂಬುವುದನ್ನು ಸಂಪೂರ್ಣವಾಗಿ ಖಚಿತಪಡಿಸಲು ಸಾಧ್ಯವಾಗಿಲ್ಲ. ಅದು ಕೇವಲ ಐದು ಸೆಕೆಂಡ್‌ಗಳಿವೆ. ಆ ಕ್ಲಿಪ್ ತುಂಬಾ ಚಿಕ್ಕದಾಗಿರುವುದರಿಂದ ಪರೀಕ್ಷಿಸಲು ಸಾಧ್ಯವಾಗಿಲ್ಲ ಎಂದು ಹೇಳಿದೆ.

ನಾವು ಸುಪ್ರಿಯಾ ಸುಳೆ, ನಾನಾ ಪಟೋಲೆ ಮತ್ತು ಐಪಿಎಸ್‌ ಅಧಿಕಾರಿ ಅಮಿತಾಬ್ ಗುಪ್ತಾ ಅವರ ಅಸಲಿ ಧ್ವನಿಯನ್ನು ಯೂಟ್ಯೂಬ್‌ ಸಂದರ್ಶನಗಳಿಂದ ಆಲಿಸಿದ್ದೇವೆ. ಬಿಜೆಪಿ ಹಂಚಿಕೊಂಡಿರುವ ಆಡಿಯೋಗಳಿಗೂ ಈ ಮೂವರ ಅಸಲಿ ಧ್ವನಿಗೂ ಸಾಮ್ಯತೆ ಕಂಡು ಬಂದಿಲ್ಲ ಎಂದು ಬೂಮ್ ತಿಳಿಸಿದೆ.

ಆಡಿಯೋ-1  ಆಡಿಟ್ ಸಂಸ್ಥೆ ಉದ್ಯೋಗಿ ಗೌರವ್ ಮೆಹ್ತಾ ಮತ್ತು ಐಪಿಎಸ್ ಅಧಿಕಾರಿ ಅಮಿತಾಬ್ ಮೆಹ್ತಾ ನಡುವಿನ ಸಂಭಾಷಣೆ

ಈ ಆಡಿಯೋದಲ್ಲಿ ಆಡಿಟ್ ಸಂಸ್ಥೆ ಸಾರಥಿ ಅಸೋಸಿಯೇಟ್ಸ್‌ನ ಉದ್ಯೋಗಿ ಗೌರವ್ ಮೆಹ್ತಾ, ಪುಣೆಯ ಮಾಜಿ ಪೊಲೀಸ್ ಆಯುಕ್ತ ಹಾಗೂ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ ಅವರೊಂದಿಗೆ ಮಾತನಾಡುತ್ತಿರುವುದು ಎನ್ನಲಾಗಿದೆ.

ಬ್ಲೂಮ್ TrueMedia ದ AI ಡೀಪ್‌ಫೇಕ್ ಪತ್ತೆ ಸಾಧನವನ್ನು ಬಳಸಿಕೊಂಡು ಈ ಆಡಿಯೋ ಕ್ಲಿಪ್ ಅನ್ನು ಪರೀಕ್ಷಿಸಿದೆ. ಇದರಲ್ಲಿ ಆಡಿಯೋವನ್ನು ಎಐ ಮೂಲಕ ಸೃಷ್ಟಿಸಿದ್ದು ಎನ್ನುವುದಕ್ಕೆ ಹಲವು ಪುರಾವೆಗಳು ದೊರೆತಿವೆ..ಅದು ಇಲ್ಲಿದೆ.

ಆಡಿಯೋ-2 ಎನ್‌ಸಿಪಿ (ಶರದ್ ಪವಾರ್) ನಾಯಕಿ ಸುಪ್ರಿಯಾ ಸುಳೆ ಮತ್ತು ಗೌರವ್ ಮೆಹ್ತಾ ನಡುವಿನ ಸಂಭಾಷಣೆ

ಈ ಆಡಿಯೋದಲ್ಲಿ ಸುಳೆ ಅವರು “ತನಿಖೆಯ ಬಗ್ಗೆ ಚಿಂತಿಸಬೇಡಿ, ಬಿಟ್‌ಕಾಯಿನ್‌ಗಳಿಗೆ ಬದಲಾಗಿ ಹಣ ಕೊಡಿ” ಎಂದು ಗೌರವ ಮೆಹ್ತಾ ಬಳಿ ಕೇಳುತ್ತಿರುವುದು ಎನ್ನಲಾಗಿದೆ.

ಬೂಮ್ ಸಂಸ್ಥೆ, 2023ರಲ್ಲಿ ಸಮ್ದೀಶ್ ಭಾಟಿಯಾ ಅವರ ವಿಡಿಯೋ ಪಾಡ್‌ಕಾಸ್ಟ್‌ ‘ಅನ್‌ಫಿಲ್ಟರ್ಡ್ ಬೈ ಸಮ್ದೀಶ್’ ಸಂದರ್ಶನಲ್ಲಿ ಸುಪ್ರಿಯಾ ಸುಳೆ ಮಾತನಾಡಿರುವ ಧ್ವನಿ ಜೊತೆ ಈ ಆಡಿಯೋವನ್ನು ಹೋಲಿಸಿ ನೋಡಿದೆ. ಈ ವೇಳೆ ಎರಡೂ ಧ್ವನಿಗಳು ಸಂಪೂರ್ಣ ಭಿನ್ನವಾಗಿ ಕಂಡು ಬಂದಿದೆ. ಸಮ್ದೀಶ್ ಭಾಟಿಯಾ ಪಾಡ್‌ಕಾಸ್ಟ್‌ನಲ್ಲಿ ಸುಪ್ರಿಯಾ ಸುಳೆ ಮಾತನಾಡಿರುವುದು ಇಲ್ಲಿದೆ.

TrueMedia AI ಡೀಪ್‌ಫೇಕ್ ಪತ್ತೆ ಸಾಧನವು ಈ ಆಡಿಯೋ ಕೃತವಾಗಿ ಸೃಷ್ಟಿಸಿದ್ದು ಎಂಬುವುದಕ್ಕೆ ಹಲವು ಪುರಾವೆಗಳನ್ನು ಕಂಡು ಹಿಡಿದಿದೆ. ಅದರ ಫಲಿತಾಂಶ ಇಲ್ಲಿದೆ 

ಆಡಿಯೋ-3  ಕಾಂಗ್ರೆಸ್ ನಾಯಕ ನಾನಾ ಪಟೋಲೆ ಮತ್ತು ಐಪಿಎಲ್ ಅಧಿಕಾರಿ ಅಮಿತಾಬ್ ಗುಪ್ತಾ ನಡುವಿನ ಸಂಭಾಷಣೆ

ಈ ಆಡಿಯೋ ಪಟೋಲೆ ಅವರು ಬಿಟ್‌ಕಾಯಿನ್ ಅನ್ನು ನಗದು ರೂಪದಲ್ಲಿ ಪರಿವರ್ತಿಸುವಂತೆ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ ಅವರಿಗೆ ಬೆದರಿಕೆ ಹಾಕುತ್ತಿರುವುದು ಎಂದು ಆರೋಪಿಸಲಾಗಿದೆ.

TrueMedia.org ಈ ಆಡಿಯೋ ಎಐ ಎಂಬುವುದನ್ನು ನಿರ್ಧಿರಿಸಲು ಕೆಲವೊಂದು ಪುರಾವೆಗಳು ಇವೆ ಎಂದಿವೆ. ಅದರ ಫಲಿತಾಂಶ ಇಲ್ಲಿದೆ. ಆದರೆ, ಈ ಆಡಿಯೋ ಕೇವಲ 5 ಸೆಕೆಂಡ್‌ ಇರುವುದರಿಂದ ಈಗ ಲಭ್ಯವಿರುವ ಸಾಧನಗಳನ್ನು ಬಳಸಿಕೊಂಡು ಇದರ ಸತ್ಯಾಸತ್ಯತೆ ಕಂಡು ಖಚಿತಪಡಿಸುವುದು ಸಾಧ್ಯವಿಲ್ಲ ಎಂದು ಬೂಮ್ ಹೇಳಿದೆ.

ನಾವು ಆಡಿಯೋ ರೆಕಾರ್ಡಿಂಗ್‌ನಲ್ಲಿರುವ ಪಟೋಲೆ ಅವರ ಧ್ವನಿಯನ್ನು ನವೆಂಬರ್ 19,2024 ರಂದು ಯುಟ್ಯೂಬ್ ಚಾನೆಲ್ ಜಿಸ್ಟ್‌ನ್ಯೂಸ್‌ನಲ್ಲಿ ಪ್ರಕಟಿಸಿದ ಪಟೋಲೆ ಅವರ ಸಂದರ್ಶನದ ಧ್ವನಿಯೊಂದಿಗೆ ಹೋಲಿಕೆ ಮಾಡಿದ್ದೇವೆ. ಈ ವೇಳೆ ಎರಡು ಧ್ವನಿಗಳು ಹೋಲಿಕೆಯಾಗಿಲ್ಲ ಎಂದು ಬ್ಲೂಮ್ ತಿಳಿಸಿದೆ. ಜಿಸ್ಟ್‌ನ್ಯೂಸ್‌ ಜೊತೆಗಿನ ನಾನಾ ಪಟೋಲೆ ಅವರ ಸಂದರ್ಶನದ ವಿಡಿಯೋ ಇಲ್ಲಿದೆ.

ಆಡಿಯೋ-4 ಐಪಿಎಸ್‌ ಅಧಿಕಾರಿ ಅಮಿತಾಬ್ ಗುಪ್ತಾ ಮತ್ತು ಗೌರವ್ ಮೆಹ್ತಾ ನಡುವಿನ ಸಂಭಾಷಣೆ

ಇದು ಪುಣೆಯ ಮಾಜಿ ಪೊಲೀಸ್ ಆಯುಕ್ತ ಹಾಗೂ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ ಮತ್ತು ಗೌರವ್ ಮೆಹ್ತಾ ನಡುವಿನ ಸಂಭಾಷಣೆಯ ಆಡಿಯೋ ಎನ್ನಲಾಗಿದೆ. ಇದರಲ್ಲಿ ನಾನಾ ಪಟೋಲೆ ಮತ್ತು ಸುಪ್ರಿಯಾ ಸುಳೆ ಹೇಳಿದಂತೆ ಬಿಟ್‌ ಕಾಯಿನ್ ಅನ್ನು ನಗದಾಗಿ ಪರಿವರ್ತಿಸುವ ಕುರಿತು ಇದೆ.

ಯೂಟ್ಯೂಬ್‌ನಲ್ಲಿ ಐಪಿಎಸ್ ಗುಪ್ತಾ ಅವರ ಹಲವಾರು ಸಂದರ್ಶನಗಳನ್ನು ನಾವು ಗಮನಿಸಿದ್ದೇವೆ. ಅವುಗಳಲ್ಲಿ ಯಾವುದೇ ಸಂದರ್ಶನದ ಧ್ವನಿ ಬಿಜೆಪಿ ಪೋಸ್ಟ್ ಮಾಡಿರುವ ಆಡಿಯೋ ರೆಕಾರ್ಡಿಂಗ್‌ಗೆ ಹೋಲಿಕೆಯಾಗಿಲ್ಲ ಎಂದು ಬೂಮ್ ತಿಳಿಸಿದೆ. ಮಾರ್ಚ್ 15, 2024 ರ ಸಂದರ್ಶನದಲ್ಲಿ ಗುಪ್ತಾ ಅವರು ಮಾತನಾಡಿರುವ ಮೂಲ ಧ್ವನಿಯನ್ನು ಇಲ್ಲಿ ಕೇಳಬಹುದು

ಬಿಜೆಪಿ ಹಂಚಿಕೊಂಡಿರುವ ಆಡಿಯೋ ಎಐ ಸೃಷ್ಟಿತ ಎಂಬುವುದಕ್ಕೆ ಪುರಾವೆಗಳು ದೊರೆತಿದೆ ಎಂದು TrueMedia AI ದೃಢಪಡಿಸಿದೆ ಎಂದು ಬೂಮ್ ಹೇಳಿದೆ. ಫಲಿತಾಂಶ ಇಲ್ಲಿ ನೋಡಬಹುದು.

ಇವಿಷ್ಟೆ ಅಲ್ಲದೆ ಇನ್ನೂ ಕೆಲ ಎಐ ಪತ್ತೆ ಸಾಧನಗಳ ಮೂಲಕ ಬೂಮ್ ಸಂಸ್ಥೆ ಬಿಜೆಪಿ ಹಂಚಿಕೊಂಡಿರುವ ಆಡಿಯೋ ನಕಲಿ ಎಂದು ಹೇಳಿದೆ.

ಇದನ್ನೂ ಓದಿ | FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...