Homeಫ್ಯಾಕ್ಟ್‌ಚೆಕ್ಮಹಾರಾಷ್ಟ್ರ ಬಿಟ್ ಕಾಯಿನ್ ಅಕ್ರಮ ಆರೋಪ : ಬಿಜೆಪಿ ಹಂಚಿಕೊಂಡ ಆಡಿಯೋ ನಕಲಿ ಎಂದ ಫ್ಯಾಕ್ಟ್‌ಚೆಕ್

ಮಹಾರಾಷ್ಟ್ರ ಬಿಟ್ ಕಾಯಿನ್ ಅಕ್ರಮ ಆರೋಪ : ಬಿಜೆಪಿ ಹಂಚಿಕೊಂಡ ಆಡಿಯೋ ನಕಲಿ ಎಂದ ಫ್ಯಾಕ್ಟ್‌ಚೆಕ್

- Advertisement -
- Advertisement -

ಮಹಾರಾಷ್ಟ್ರದ ಪ್ರತಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ನಾಯಕರಾದ ನಾನಾ ಪಟೋಲೆ ಮತ್ತು ಸುಪ್ರಿಯಾ ಸುಳೆ ಬಿಟ್ ಕಾಯಿನ್ ಹಣವನ್ನು ಚುನಾವಣೆಗೆ ಬಳಸಿಕೊಂಡು ಅಕ್ರಮವೆಸಗಿದ್ದಾರೆ ಎಂದು ಬಿಜೆಪಿ ಮಂಗಳವಾರ (ನ.19) ಆರೋಪಿಸಿತ್ತು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ನಿನ್ನೆ(ನ.20) ನಡೆದಿದೆ. ಅದರ ಮುನ್ನಾದಿನ ಮಂಗಳವಾರ (ನ.19) ರಾತ್ರಿ 10.58, 11.00, 11.02 ಮತ್ತು 11.04ಕ್ಕೆ ಬಿಜೆಪಿ ರಾಷ್ಟ್ರೀಯ ಸಮಿತಿಯ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ 4 ಆಡಿಯೋ ರೆಕಾರ್ಡಿಂಗ್ ಕ್ಲಿಪ್‌ಗಳನ್ನು ಅಪ್ಲೋಡ್ ಮಾಡಿತ್ತು.

ಈ ನಾಲ್ಕು ಆಡಿಯೋ ರೆಕಾರ್ಡಿಂಗ್‌ಗಳು ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ, ಕಾಂಗ್ರೆಸ್ ನಾಯಕ ನಾನಾ ಪಟೋಲೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ತಂಡದ ಇನ್‌ಸ್ಪೆಕ್ಟರ್ ಜನರಲ್ ಹಾಗೂ ಐಪಿಎಸ್‌ ಅಧಿಕಾರಿ ಅಮಿತಾಬ್ ಗುಪ್ತಾ ಮತ್ತು ಸಾರಥಿ ಎಂಬ ಆಡಿಟ್ ಸಂಸ್ಥೆಯ ಉದ್ಯೋಗಿ ಗೌರವ್ ಮೆಹ್ತಾ ನಡುವಿನ ಸಂಭಾಷಣೆಯದ್ದು ಎಂದು ಬಿಜೆಪಿ ಆರೋಪಿಸಿತ್ತು.

ಇದಕ್ಕೂ ಮುನ್ನ ಮಂಗಳವಾರ ಪುಣೆಯ ಮಾಜಿ ಪೊಲೀಸ್ ಅಧಿಕಾರಿ ರವೀಂದ್ರನಾಥ್ ಪಾಟೀಲ್ ಅವರು, ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಅವರು 2018ರ ಕ್ರಿಪ್ಟೋ ಕರೆನ್ಸಿ ಹಗರಣ ಪ್ರಕರಣದ ಬಿಟ್‌ ಕಾಯಿನ್‌ಗಳನ್ನು ದುರುಪಯೋಗಪಡಿಸಿಕೊಂಡು, ಅದರ ಹಣವನ್ನು ರಾಜ್ಯ ಚುನಾವಣೆಗೆ ಬಳಸಿದ್ದಾರೆ ಎಂದು ಆರೋಪಿಸಿದ್ದರು.

ಪುಣೆಯ ಮಾಜಿ ಪೊಲೀಸ್ ಆಯುಕ್ತ ಹಾಗೂ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ, ಸಾರಥಿ ಆಡಿಟ್ ಸಂಸ್ಥೆಯ ಉದ್ಯೋಗಿ ಗೌರವ್ ಮೆಹ್ತಾ, ಪ್ರಸ್ತುತ ಚಂದ್ರಾಪುರದಲ್ಲಿ ಮಹಾರಾಷ್ಟ್ರ ಮೀಸಲು ಪೊಲೀಸ್ ಪಡೆಯ ಎಸ್ಪಿಯಾಗಿರುವ ಐಪಿಎಸ್ ಅಧಿಕಾರಿ ಭಾಗ್ಯಶ್ರೀ ನವತಾಕೆ ವಿರುದ್ದ ಕೂಡ ರವೀಂದ್ರನಾಥ್ ಪಾಟೀಲ್ ಆರೋಪ ಹೊರಿಸಿದ್ದರು. ಇವರ ನಡುವಿನ ಸಂಭಾಷಣೆಯ ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳಿದ್ದರು.

ರವೀಂದ್ರನಾಥ್ ಪಾಟೀಲ್ ಆರೋಪ ಮಾಡಿದ ಬೆನ್ನಲ್ಲೇ, ಬಿಜೆಪಿ ನಾಲ್ಕು ಆಡಿಯೋ ಕ್ಲಿಪ್‌ಗಳನ್ನು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿತ್ತು.

ಬಿಜೆಪಿ ಹಂಚಿಕೊಂಡ ಆಡಿಯೋದಲ್ಲಿ ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಎನ್ನಲಾದ ವ್ಯಕ್ತಿಗಳು ನಾಲ್ಕು ಕ್ರಿಪ್ಟೋ ವ್ಯಾಲೆಟ್‌ಗಳಲ್ಲಿ ಸಂಗ್ರಹವಾಗಿರುವ ಬಿಟ್‌ಕಾಯಿನ್‌ಗಳಿಗೆ ಬದಲಾಗಿ ಹಣ ಕೇಳುವುದು ಮತ್ತು ಈ ವಿಷಯದಲ್ಲಿ ಯಾವುದೇ ತನಿಖೆ ನಡೆಯುವುದಿಲ್ಲ ಎಂದು ಭರವಸೆ ಕೊಡುವುದು ಇದೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ಬುಧವಾರ (ನ.20) ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ, ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ವಿರುದ್ದ ಗಂಭೀರ ಆರೋಪ ಮಾಡಿದ್ದರು. “ತನಿಖೆ ನಡೆದರೆ ಎಲ್ಲಾ ಹಗರಣ ಹೊರ ಬರಲಿದೆ. ಪ್ರತಿಪಕ್ಷಗಳ ಮೈತ್ರಿಕೂಟ ‘ಎಂವಿಎ ಗೋಡೆ ಮೇಲೆ ಬರೆದ ಬರಹದಂತೆ ತಮ್ಮ ಸೋಲನ್ನು ಎದುರು ನೋಡುತ್ತಿದೆ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ಪ್ರಮುಖ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆಯಾದ boomlive.in ಬಿಜೆಪಿ ಹಂಚಿಕೊಂಡಿರುವ ಆಡಿಯೋ ಕ್ಲಿಪ್‌ಗಳು ನಕಲಿ ಎಂದು ಹೇಳಿವೆ. ನಾನಾ ಪಟೋಲೆ, ಸುಪ್ರಿಯಾ ಸುಳೆ ಹಾಗೂ ಮತ್ತಿರರ ಹೆಸರಿನಲ್ಲಿ ಬಿಜೆಪಿ ಹಂಚಿಕೊಂಡಿರುವ ಆಡಿಯೋ ಕ್ಲಿಪ್‌ಗಳನ್ನು ಎಐ (ಕೃತಕ ಬುದ್ದಿಮತ್ತೆ) ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ ಎಂದಿದೆ. ಪತ್ರಕರ್ತರು ಮತ್ತು ಸಂಶೋಧಕರಿಗೆ ಲಭ್ಯವಿರುವ TrueMedia.org ಡೀಪ್‌ಫೇಕ್ ಪತ್ತೆ ಸಾಧನ ಬಳಸಿಕೊಂಡು ನಾವು ಆಡಿಯೊ ಕ್ಲಿಪ್‌ಗಳನ್ನು ಪರೀಕ್ಷಿಸಿದ್ದೇವೆ ಎಂದು ತಿಳಿಸಿದೆ.

ಬಿಜೆಪಿ ಹಂಚಿಕೊಂಡಿರುವ ನಾಲ್ಕು ಆಡಿಯೋಗಳ ಪೈಕಿ ಮೂರು ಎಐ ಬಳಸಿ ಸೃಷ್ಟಿಸಿರುವುದಕ್ಕೆ ಸಾಕಷ್ಟು ಪುರಾವೆಗಳು ದೊರೆತಿವೆ. ಒಂದು ಆಡಿಯೋ ಮಾತ್ರ ಎಐ ಎಂಬುವುದನ್ನು ಸಂಪೂರ್ಣವಾಗಿ ಖಚಿತಪಡಿಸಲು ಸಾಧ್ಯವಾಗಿಲ್ಲ. ಅದು ಕೇವಲ ಐದು ಸೆಕೆಂಡ್‌ಗಳಿವೆ. ಆ ಕ್ಲಿಪ್ ತುಂಬಾ ಚಿಕ್ಕದಾಗಿರುವುದರಿಂದ ಪರೀಕ್ಷಿಸಲು ಸಾಧ್ಯವಾಗಿಲ್ಲ ಎಂದು ಹೇಳಿದೆ.

ನಾವು ಸುಪ್ರಿಯಾ ಸುಳೆ, ನಾನಾ ಪಟೋಲೆ ಮತ್ತು ಐಪಿಎಸ್‌ ಅಧಿಕಾರಿ ಅಮಿತಾಬ್ ಗುಪ್ತಾ ಅವರ ಅಸಲಿ ಧ್ವನಿಯನ್ನು ಯೂಟ್ಯೂಬ್‌ ಸಂದರ್ಶನಗಳಿಂದ ಆಲಿಸಿದ್ದೇವೆ. ಬಿಜೆಪಿ ಹಂಚಿಕೊಂಡಿರುವ ಆಡಿಯೋಗಳಿಗೂ ಈ ಮೂವರ ಅಸಲಿ ಧ್ವನಿಗೂ ಸಾಮ್ಯತೆ ಕಂಡು ಬಂದಿಲ್ಲ ಎಂದು ಬೂಮ್ ತಿಳಿಸಿದೆ.

ಆಡಿಯೋ-1  ಆಡಿಟ್ ಸಂಸ್ಥೆ ಉದ್ಯೋಗಿ ಗೌರವ್ ಮೆಹ್ತಾ ಮತ್ತು ಐಪಿಎಸ್ ಅಧಿಕಾರಿ ಅಮಿತಾಬ್ ಮೆಹ್ತಾ ನಡುವಿನ ಸಂಭಾಷಣೆ

ಈ ಆಡಿಯೋದಲ್ಲಿ ಆಡಿಟ್ ಸಂಸ್ಥೆ ಸಾರಥಿ ಅಸೋಸಿಯೇಟ್ಸ್‌ನ ಉದ್ಯೋಗಿ ಗೌರವ್ ಮೆಹ್ತಾ, ಪುಣೆಯ ಮಾಜಿ ಪೊಲೀಸ್ ಆಯುಕ್ತ ಹಾಗೂ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ ಅವರೊಂದಿಗೆ ಮಾತನಾಡುತ್ತಿರುವುದು ಎನ್ನಲಾಗಿದೆ.

ಬ್ಲೂಮ್ TrueMedia ದ AI ಡೀಪ್‌ಫೇಕ್ ಪತ್ತೆ ಸಾಧನವನ್ನು ಬಳಸಿಕೊಂಡು ಈ ಆಡಿಯೋ ಕ್ಲಿಪ್ ಅನ್ನು ಪರೀಕ್ಷಿಸಿದೆ. ಇದರಲ್ಲಿ ಆಡಿಯೋವನ್ನು ಎಐ ಮೂಲಕ ಸೃಷ್ಟಿಸಿದ್ದು ಎನ್ನುವುದಕ್ಕೆ ಹಲವು ಪುರಾವೆಗಳು ದೊರೆತಿವೆ..ಅದು ಇಲ್ಲಿದೆ.

ಆಡಿಯೋ-2 ಎನ್‌ಸಿಪಿ (ಶರದ್ ಪವಾರ್) ನಾಯಕಿ ಸುಪ್ರಿಯಾ ಸುಳೆ ಮತ್ತು ಗೌರವ್ ಮೆಹ್ತಾ ನಡುವಿನ ಸಂಭಾಷಣೆ

ಈ ಆಡಿಯೋದಲ್ಲಿ ಸುಳೆ ಅವರು “ತನಿಖೆಯ ಬಗ್ಗೆ ಚಿಂತಿಸಬೇಡಿ, ಬಿಟ್‌ಕಾಯಿನ್‌ಗಳಿಗೆ ಬದಲಾಗಿ ಹಣ ಕೊಡಿ” ಎಂದು ಗೌರವ ಮೆಹ್ತಾ ಬಳಿ ಕೇಳುತ್ತಿರುವುದು ಎನ್ನಲಾಗಿದೆ.

ಬೂಮ್ ಸಂಸ್ಥೆ, 2023ರಲ್ಲಿ ಸಮ್ದೀಶ್ ಭಾಟಿಯಾ ಅವರ ವಿಡಿಯೋ ಪಾಡ್‌ಕಾಸ್ಟ್‌ ‘ಅನ್‌ಫಿಲ್ಟರ್ಡ್ ಬೈ ಸಮ್ದೀಶ್’ ಸಂದರ್ಶನಲ್ಲಿ ಸುಪ್ರಿಯಾ ಸುಳೆ ಮಾತನಾಡಿರುವ ಧ್ವನಿ ಜೊತೆ ಈ ಆಡಿಯೋವನ್ನು ಹೋಲಿಸಿ ನೋಡಿದೆ. ಈ ವೇಳೆ ಎರಡೂ ಧ್ವನಿಗಳು ಸಂಪೂರ್ಣ ಭಿನ್ನವಾಗಿ ಕಂಡು ಬಂದಿದೆ. ಸಮ್ದೀಶ್ ಭಾಟಿಯಾ ಪಾಡ್‌ಕಾಸ್ಟ್‌ನಲ್ಲಿ ಸುಪ್ರಿಯಾ ಸುಳೆ ಮಾತನಾಡಿರುವುದು ಇಲ್ಲಿದೆ.

TrueMedia AI ಡೀಪ್‌ಫೇಕ್ ಪತ್ತೆ ಸಾಧನವು ಈ ಆಡಿಯೋ ಕೃತವಾಗಿ ಸೃಷ್ಟಿಸಿದ್ದು ಎಂಬುವುದಕ್ಕೆ ಹಲವು ಪುರಾವೆಗಳನ್ನು ಕಂಡು ಹಿಡಿದಿದೆ. ಅದರ ಫಲಿತಾಂಶ ಇಲ್ಲಿದೆ 

ಆಡಿಯೋ-3  ಕಾಂಗ್ರೆಸ್ ನಾಯಕ ನಾನಾ ಪಟೋಲೆ ಮತ್ತು ಐಪಿಎಲ್ ಅಧಿಕಾರಿ ಅಮಿತಾಬ್ ಗುಪ್ತಾ ನಡುವಿನ ಸಂಭಾಷಣೆ

ಈ ಆಡಿಯೋ ಪಟೋಲೆ ಅವರು ಬಿಟ್‌ಕಾಯಿನ್ ಅನ್ನು ನಗದು ರೂಪದಲ್ಲಿ ಪರಿವರ್ತಿಸುವಂತೆ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ ಅವರಿಗೆ ಬೆದರಿಕೆ ಹಾಕುತ್ತಿರುವುದು ಎಂದು ಆರೋಪಿಸಲಾಗಿದೆ.

TrueMedia.org ಈ ಆಡಿಯೋ ಎಐ ಎಂಬುವುದನ್ನು ನಿರ್ಧಿರಿಸಲು ಕೆಲವೊಂದು ಪುರಾವೆಗಳು ಇವೆ ಎಂದಿವೆ. ಅದರ ಫಲಿತಾಂಶ ಇಲ್ಲಿದೆ. ಆದರೆ, ಈ ಆಡಿಯೋ ಕೇವಲ 5 ಸೆಕೆಂಡ್‌ ಇರುವುದರಿಂದ ಈಗ ಲಭ್ಯವಿರುವ ಸಾಧನಗಳನ್ನು ಬಳಸಿಕೊಂಡು ಇದರ ಸತ್ಯಾಸತ್ಯತೆ ಕಂಡು ಖಚಿತಪಡಿಸುವುದು ಸಾಧ್ಯವಿಲ್ಲ ಎಂದು ಬೂಮ್ ಹೇಳಿದೆ.

ನಾವು ಆಡಿಯೋ ರೆಕಾರ್ಡಿಂಗ್‌ನಲ್ಲಿರುವ ಪಟೋಲೆ ಅವರ ಧ್ವನಿಯನ್ನು ನವೆಂಬರ್ 19,2024 ರಂದು ಯುಟ್ಯೂಬ್ ಚಾನೆಲ್ ಜಿಸ್ಟ್‌ನ್ಯೂಸ್‌ನಲ್ಲಿ ಪ್ರಕಟಿಸಿದ ಪಟೋಲೆ ಅವರ ಸಂದರ್ಶನದ ಧ್ವನಿಯೊಂದಿಗೆ ಹೋಲಿಕೆ ಮಾಡಿದ್ದೇವೆ. ಈ ವೇಳೆ ಎರಡು ಧ್ವನಿಗಳು ಹೋಲಿಕೆಯಾಗಿಲ್ಲ ಎಂದು ಬ್ಲೂಮ್ ತಿಳಿಸಿದೆ. ಜಿಸ್ಟ್‌ನ್ಯೂಸ್‌ ಜೊತೆಗಿನ ನಾನಾ ಪಟೋಲೆ ಅವರ ಸಂದರ್ಶನದ ವಿಡಿಯೋ ಇಲ್ಲಿದೆ.

ಆಡಿಯೋ-4 ಐಪಿಎಸ್‌ ಅಧಿಕಾರಿ ಅಮಿತಾಬ್ ಗುಪ್ತಾ ಮತ್ತು ಗೌರವ್ ಮೆಹ್ತಾ ನಡುವಿನ ಸಂಭಾಷಣೆ

ಇದು ಪುಣೆಯ ಮಾಜಿ ಪೊಲೀಸ್ ಆಯುಕ್ತ ಹಾಗೂ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ ಮತ್ತು ಗೌರವ್ ಮೆಹ್ತಾ ನಡುವಿನ ಸಂಭಾಷಣೆಯ ಆಡಿಯೋ ಎನ್ನಲಾಗಿದೆ. ಇದರಲ್ಲಿ ನಾನಾ ಪಟೋಲೆ ಮತ್ತು ಸುಪ್ರಿಯಾ ಸುಳೆ ಹೇಳಿದಂತೆ ಬಿಟ್‌ ಕಾಯಿನ್ ಅನ್ನು ನಗದಾಗಿ ಪರಿವರ್ತಿಸುವ ಕುರಿತು ಇದೆ.

ಯೂಟ್ಯೂಬ್‌ನಲ್ಲಿ ಐಪಿಎಸ್ ಗುಪ್ತಾ ಅವರ ಹಲವಾರು ಸಂದರ್ಶನಗಳನ್ನು ನಾವು ಗಮನಿಸಿದ್ದೇವೆ. ಅವುಗಳಲ್ಲಿ ಯಾವುದೇ ಸಂದರ್ಶನದ ಧ್ವನಿ ಬಿಜೆಪಿ ಪೋಸ್ಟ್ ಮಾಡಿರುವ ಆಡಿಯೋ ರೆಕಾರ್ಡಿಂಗ್‌ಗೆ ಹೋಲಿಕೆಯಾಗಿಲ್ಲ ಎಂದು ಬೂಮ್ ತಿಳಿಸಿದೆ. ಮಾರ್ಚ್ 15, 2024 ರ ಸಂದರ್ಶನದಲ್ಲಿ ಗುಪ್ತಾ ಅವರು ಮಾತನಾಡಿರುವ ಮೂಲ ಧ್ವನಿಯನ್ನು ಇಲ್ಲಿ ಕೇಳಬಹುದು

ಬಿಜೆಪಿ ಹಂಚಿಕೊಂಡಿರುವ ಆಡಿಯೋ ಎಐ ಸೃಷ್ಟಿತ ಎಂಬುವುದಕ್ಕೆ ಪುರಾವೆಗಳು ದೊರೆತಿದೆ ಎಂದು TrueMedia AI ದೃಢಪಡಿಸಿದೆ ಎಂದು ಬೂಮ್ ಹೇಳಿದೆ. ಫಲಿತಾಂಶ ಇಲ್ಲಿ ನೋಡಬಹುದು.

ಇವಿಷ್ಟೆ ಅಲ್ಲದೆ ಇನ್ನೂ ಕೆಲ ಎಐ ಪತ್ತೆ ಸಾಧನಗಳ ಮೂಲಕ ಬೂಮ್ ಸಂಸ್ಥೆ ಬಿಜೆಪಿ ಹಂಚಿಕೊಂಡಿರುವ ಆಡಿಯೋ ನಕಲಿ ಎಂದು ಹೇಳಿದೆ.

ಇದನ್ನೂ ಓದಿ | FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...