Homeಮುಖಪುಟಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

- Advertisement -
- Advertisement -

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ.

ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ ಘೋರ್ಪಡೆ ಅವರು ಆಪ್ಟೆಯ ನಾಮನಿರ್ದೇಶನದ ಕುರಿತು ದೃಢಪಡಿಸಿದ್ದಾರೆ. ಒಟ್ಟು ಐವರು ನಾಮನಿರ್ದೇಶಿತ ಸದಸ್ಯರಲ್ಲಿ ತುಷಾರ್ ಆಪ್ಟೆ ಕೂಡ ಒಬ್ಬ. ನಾಮನಿರ್ದೇಶನ ಪೂರ್ಣಗೊಂಡ ನಂತರ ಅವರನ್ನು ಮುನ್ಸಿಪಲ್ ಕೌನ್ಸಿಲ್‌ಗೆ ಸ್ವಾಗತಿಸಲಾಗಿದೆ. ಆಪ್ಟೆ ಜೊತೆಗೆ ಇಬ್ಬರು ಶಿವಸೇನೆಯಿಂದ ಮತ್ತು ಒಬ್ಬರನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದಿಂದ (ಎನ್‌ಸಿಪಿ) ನಾಮನಿರ್ದೇಶನ ಮಾಡಲಾಗಿದೆ.

ಲೈಂಗಿಕ ದೌರ್ಜನ್ಯ ನಡೆದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿದ್ದ ಆಪ್ಟೆ ವಿರುದ್ಧ, ಅಪರಾಧವನ್ನು ವರದಿ ಮಾಡಲು ವಿಫಲವಾದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ದಾಖಲಿಸದಿದ್ದಕ್ಕಾಗಿ ಶಾಲಾ ಆಡಳಿತ ಮಂಡಳಿಯ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 21(2) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ನಡೆದ 44 ದಿನಗಳ ನಂತರ ಆಪ್ಟೆ ಅವರನ್ನು ಬಂಧಿಸಲಾಗಿತ್ತು ಮತ್ತು 48 ಗಂಟೆಗಳಲ್ಲಿ ಜಾಮೀನು ನೀಡಲಾಗಿತ್ತು. ಪ್ರಕರಣವು ಪ್ರಸ್ತುತ ವಿಚಾರಣೆಯ ಹಂತದಲ್ಲಿದೆ.

ಮುನ್ಸಿಪಲ್ ಕೌನ್ಸಿಲ್‌ಗೆ ಆಪ್ಟೆಯ ನಾಮನಿರ್ದೇಶನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ಕೌನ್ಸಿಲರ್ ರಾಜನ್ ಘೋರ್ಪಡೆ, ಆಪ್ಟೆ ಒಬ್ಬ ಸಾಮಾಜಿಕ ಕಾರ್ಯಕರ್ತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಪದಾಧಿಕಾರಿ ಎಂದು ಹೇಳಿದ್ದಾರೆ.

“ಆಪ್ಟೆ ಅವರನ್ನು ಆರೋಪಿ ಎಂದು ಹೆಸರಿಸಲಾಗಿದ್ದರೂ, ಅವರ ಮೇಲಿನ ಅಪರಾಧ ಸಾಬೀತಾಗಿಲ್ಲ. ಪ್ರಕರಣದ ಪ್ರಮುಖ ಆರೋಪಿಗೆ ಈಗಾಗಲೇ ಶಿಕ್ಷೆಯಾಗಿದೆ. ಆಪ್ಟೆ ಪಕ್ಷಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡಿದವರು ಮತ್ತು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕೊಡುಗೆ ನೀಡಿದವರು. ಆದ್ದರಿಂದ ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ” ಎಂದು ಘೋರ್ಪಡೆ ತಿಳಿಸಿದ್ದಾರೆ.

ಆಪ್ಟೆ ಕಾರ್ಯದರ್ಶಿಯಾಗಿದ್ದ ಶಾಲೆಯ ಆವರಣದಲ್ಲಿ ಅಕ್ಷಯ್ ಶಿಂಧೆ ಎಂಬಾತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಘಟನೆ ವಿರುದ್ದ ಪೋಷಕರು ಮತ್ತು ನಾಗರಿಕರಿಂದ ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು.

ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯ ಶೌಚಾಲಯದೊಳಗೆ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಮುಖ ಆರೋಪಿ ಅಕ್ಷಯ್ ಶಿಂಧೆ (24) ಅನ್ನು ಆಗಸ್ಟ್ 2024ರಲ್ಲಿ ಬಂಧಿಸಲಾಯಿಗಿತ್ತು.

ಸೆಪ್ಟೆಂಬರ್ 23ರಂದು, ನವಿ ಮುಂಬೈನ ತಲೋಜಾ ಜೈಲಿನಿಂದ ವಿಚಾರಣೆಗಾಗಿ ಕರೆದೊಯ್ಯುತ್ತಿದ್ದಾಗ ಪೊಲೀಸ್ ಎನ್‌ಕೌಂಟರ್‌ನಲ್ಲಿ ಆತನ ಸಾವನ್ನಪ್ಪಿದ್ದಾನೆ. ಅಕ್ಷಯ್ ವ್ಯಾನ್‌ನಲ್ಲಿದ್ದ ಒಬ್ಬ ಪೊಲೀಸ್ ಅಧಿಕಾರಿಯ ಬಂದೂಕನ್ನು ಕಸಿದುಕೊಂಡು ಗುಂಡು ಹಾರಿಸಿದ್ದ. ಈ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಎಂದು ಹೇಳಲಾಗಿದೆ. ಆರೋಪಿಯ ವಿರುದ್ಧ ಪತ್ನಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಆತನನ್ನು ಕರೆದೊಯ್ಯಲಾಗುತ್ತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....