Homeಮುಖಪುಟಮಹಾರಾಷ್ಟ್ರ | ಬಿಜೆಪಿ-ಎನ್‌ಸಿಪಿ ಮೈತ್ರಿ ಮಾತುಕತೆ ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿ ಗೌತಮ್ ಅದಾನಿ!

ಮಹಾರಾಷ್ಟ್ರ | ಬಿಜೆಪಿ-ಎನ್‌ಸಿಪಿ ಮೈತ್ರಿ ಮಾತುಕತೆ ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿ ಗೌತಮ್ ಅದಾನಿ!

- Advertisement -
- Advertisement -

ಮಹಾರಾಷ್ಟ್ರದ 2019ರ ವಿಧಾನಸಭೆಯ ಚುನಾವಣೆಯ ನಂತರ ಬಿಜೆಪಿ ಮತ್ತು ಅವಿಭಜಿತ ಎನ್‌ಸಿಪಿ ಜೊತೆಗೆ ನಡೆದಿದ್ದ ಸಭೆಯಲ್ಲಿ ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಕೂಡಾ ಭಾಗವಹಿಸಿದ್ದರು ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿಯಾಗಿ ಮತ್ತು ತಾನು (ಅವಿಭಜಿತ ಎನ್‌ಸಿಪಿಯ ಭಾಗವಾಗಿದ್ದ) ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮುಂಜಾನೆ ಸಮಾರಂಭಕ್ಕೂ ಮುನ್ನ ನಡೆದ ಬೆಳವಣಿಗೆಗಳ ಬಗ್ಗೆ ಅಜಿತ್ ಪವಾರ ಮಾತನಾಡಿದ್ದಾರೆ. ಮಹಾರಾಷ್ಟ್ರ

“ನಿಮಗೆ ಗೊತ್ತಿಲ್ಲವೇ? ಇದು ಐದು ವರ್ಷಗಳ ಹಿಂದೆ ನಡೆದ ಘಟನೆ. ಸಭೆ ಎಲ್ಲಿ ನಡೆಯಿತು ಎಂಬುದು ಎಲ್ಲರಿಗೂ ಗೊತ್ತು… ಎಲ್ಲರೂ ಅಲ್ಲಿದ್ದರು. ಮತ್ತೊಮ್ಮೆ ಹೇಳುತ್ತೇನೆ. ಅಮಿತ್ ಶಾ ಇದ್ದರು, ಗೌತಮ್ ಅದಾನಿ ಇದ್ದರು, ಪ್ರಫುಲ್ ಪಟೇಲ್ ಇದ್ದರು, ದೇವೇಂದ್ರ ಫಡ್ನವಿಸ್ ಇದ್ದರು, ಅಜಿತ್ ಪವಾರ್ ಇದ್ದರು, ಪವಾರ್ ಸಾಹೇಬ್(ಶರದ್ ಪವಾರ್) ಇದ್ದರು” ಎಂದು ಸ್ವತಂತ್ರ ಮಾಧ್ಯಮ ನ್ಯೂಸ್‌ ಮಿನಿಟ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಜಿತ್ ಪವಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ, ಶರದ್ ಪವಾರ್ ಅವರನ್ನು ಬೆಂಬಲಿಸದಿರಲು ನಿರ್ಧರಿಸಿದ್ದರಿಂದ, ಅಜಿತ್ ಅವರ ವಿರುದ್ಧ ಬಂಡಾಯ ಎದ್ದಿದ್ದರು. ಆದರೆ ನಂತರ ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಮತ್ತೆ ಶರದ್ ಪವಾರ್ ಅವರ ಪಕ್ಷಕ್ಕೆ ಮರಳಿದ್ದರು. ಅದ ಅದಾಗ್ಯೂ, ಕೇವಲ 5 ದಿನಗಳಿಗೆ ಸರ್ಕಾರ ಪತನವಾಗಿತ್ತು. ಕೆಲವು ದಿನಗಳ ನಂತರ, ಅವಿಭಜಿತ ಎನ್‌ಸಿಪಿ ಮತ್ತು ಶಿವಸೇನೆಯು ಕಾಂಗ್ರೆಸ್‌ನೊಂದಿಗೆ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಿತ್ತು. ಮಹಾರಾಷ್ಟ್ರ

ಈ ವೇಳೆ ಶರದ್ ಪವಾರ್ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಜಿತ್ ಪವಾರ್ “ಶರದ್ ಪವಾರ್ ಅವರ ಮನಸ್ಸನ್ನು ಎಂದಿಗೂ ಊಹಿಸಲು ಸಾಧ್ಯವಿಲ್ಲ. ಜಗತ್ತಿನಲ್ಲಿ ಒಬ್ಬನೇ ವ್ಯಕ್ತಿಯೂ ಊಹಿಸಲು ಸಾಧ್ಯವಿಲ್ಲ. ನಮ್ಮ ಚಿಕ್ಕಮ್ಮ ಆಗಲಿ, ಅವರ ಮಗಳು ಸುಪ್ರಿಯಾ  ಅವರಿಗೆ ಕೂಡ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಅಜಿತ್ ಪವಾರ್ ಅವರ ಹೇಳಿಕೆ ಈಗ ರಾಜಕೀಯ ಚರ್ಚಕ್ಕೆ ದಾರಿ ಮಾಡಿಕೊಟ್ಟಿದೆ.

ಗೌತಮ್ ಅದಾನಿ ಭಾಗವಹಿಸಿದ್ದ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಎನ್‌ಸಿಪಿ-ಎಸ್‌ಪಿ ನಾಯಕಿ ಸುಪ್ರಿಯಾ ಸುಳೆ ಪ್ರತಿಕ್ರಿಯಿಸಿದ್ದು, ಅಂತಹ ಯಾವುದೇ ಸಭೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. “ಅವರು ಸಂದರ್ಶನದಲ್ಲಿ ಪ್ರಸ್ತಾಪಿಸಿದ ಅಂತಹ ಯಾವುದೇ ಸಭೆಯ ಬಗ್ಗೆ ನನಗೆ ಸಂಪೂರ್ಣವಾಗಿ ತಿಳಿದಿಲ್ಲ ಎಂದು ನನಗೆ ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ರಾಜ್ಯಸಭಾ ಸಂಸದೆ ಮತ್ತು ಶಿವಸೇನೆ (ಯುಬಿಟಿ) ವಕ್ತಾರ ಪ್ರಿಯಾಂಕಾ ಚತುರ್ವೇದಿ ಅವರು ‘X’ನಲ್ಲಿ ಪ್ರತಿಕ್ರಿಯಿಸಿದ್ದು, “ಸಚಿವ ಸಂಪುಟದ ಹಿರಿಯ ಸಚಿವರೊಬ್ಬರು ಡಿಜಿಟಲ್ ವೇದಿಕೆಗೆ ನೀಡಿದ ಸಂದರ್ಶನದ ಪ್ರಕಾರ, ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಹೇಗೆ ಅಧಿಕಾರಕ್ಕೆ ತರಬೇಕು ಎಂದು ನಿರ್ಧರಿಸುವ ಸಭೆಗಳಲ್ಲಿ ಗೌತಮ್ ಅದಾನಿ ಭಾಗವಹಿಸಿದ್ದಾರೆ. ಇದು ಕೆಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ಹೇಳಿದ್ದಾರೆ.

“ಅವರು ಬಿಜೆಪಿಯ ಅಧಿಕೃತ ಸಂಧಾನಕಾರರೇ? ಮೈತ್ರಿಗಳನ್ನು ಸರಿಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆಯೇ? ಮಹಾರಾಷ್ಟ್ರದಲ್ಲಿ ಯಾವುದೇ ಬೆಲೆ ತೆತ್ತಾದರೂ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಉದ್ಯಮಿಯೊಬ್ಬರು ಏಕೆ ಇಷ್ಟು ಉತ್ಸಾಹದಿಂದ ಮತ್ತು ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ?” ಎಂದು ಅವರು ಕೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಈ ಬಗ್ಗೆ ಯಾವುದೇ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾಗಿ TNIE ವರದಿ ಮಾಡಿದೆ. ಅಷ್ಟೆ ಅಲ್ಲದೆ, ಅದಾನಿ ಗ್ರೂಪ್‌ನ ವಕ್ತಾರರೂ ಇದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಈ ಸಭೆ ಐದು ವರ್ಷಗಳ ಹಿಂದೆ ನಡೆದಿದೆ ಎಂದು ಅಜಿತ್ ಪವಾರ್ ಸಂದರ್ಶನದಲ್ಲಿ ಹೇಳಿದ್ದರೂ, ಅವರು ಪ್ರಸ್ತಾಪಿಸಿದ ಸಭೆ 2017 ರಲ್ಲಿ ಸಂಭವಿಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...