Homeಮುಖಪುಟಮಹಾರಾಷ್ಟ್ರ | ಬಿಜೆಪಿ-ಎನ್‌ಸಿಪಿ ಮೈತ್ರಿ ಮಾತುಕತೆ ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿ ಗೌತಮ್ ಅದಾನಿ!

ಮಹಾರಾಷ್ಟ್ರ | ಬಿಜೆಪಿ-ಎನ್‌ಸಿಪಿ ಮೈತ್ರಿ ಮಾತುಕತೆ ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿ ಗೌತಮ್ ಅದಾನಿ!

- Advertisement -
- Advertisement -

ಮಹಾರಾಷ್ಟ್ರದ 2019ರ ವಿಧಾನಸಭೆಯ ಚುನಾವಣೆಯ ನಂತರ ಬಿಜೆಪಿ ಮತ್ತು ಅವಿಭಜಿತ ಎನ್‌ಸಿಪಿ ಜೊತೆಗೆ ನಡೆದಿದ್ದ ಸಭೆಯಲ್ಲಿ ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಕೂಡಾ ಭಾಗವಹಿಸಿದ್ದರು ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿಯಾಗಿ ಮತ್ತು ತಾನು (ಅವಿಭಜಿತ ಎನ್‌ಸಿಪಿಯ ಭಾಗವಾಗಿದ್ದ) ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮುಂಜಾನೆ ಸಮಾರಂಭಕ್ಕೂ ಮುನ್ನ ನಡೆದ ಬೆಳವಣಿಗೆಗಳ ಬಗ್ಗೆ ಅಜಿತ್ ಪವಾರ ಮಾತನಾಡಿದ್ದಾರೆ. ಮಹಾರಾಷ್ಟ್ರ

“ನಿಮಗೆ ಗೊತ್ತಿಲ್ಲವೇ? ಇದು ಐದು ವರ್ಷಗಳ ಹಿಂದೆ ನಡೆದ ಘಟನೆ. ಸಭೆ ಎಲ್ಲಿ ನಡೆಯಿತು ಎಂಬುದು ಎಲ್ಲರಿಗೂ ಗೊತ್ತು… ಎಲ್ಲರೂ ಅಲ್ಲಿದ್ದರು. ಮತ್ತೊಮ್ಮೆ ಹೇಳುತ್ತೇನೆ. ಅಮಿತ್ ಶಾ ಇದ್ದರು, ಗೌತಮ್ ಅದಾನಿ ಇದ್ದರು, ಪ್ರಫುಲ್ ಪಟೇಲ್ ಇದ್ದರು, ದೇವೇಂದ್ರ ಫಡ್ನವಿಸ್ ಇದ್ದರು, ಅಜಿತ್ ಪವಾರ್ ಇದ್ದರು, ಪವಾರ್ ಸಾಹೇಬ್(ಶರದ್ ಪವಾರ್) ಇದ್ದರು” ಎಂದು ಸ್ವತಂತ್ರ ಮಾಧ್ಯಮ ನ್ಯೂಸ್‌ ಮಿನಿಟ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಜಿತ್ ಪವಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ, ಶರದ್ ಪವಾರ್ ಅವರನ್ನು ಬೆಂಬಲಿಸದಿರಲು ನಿರ್ಧರಿಸಿದ್ದರಿಂದ, ಅಜಿತ್ ಅವರ ವಿರುದ್ಧ ಬಂಡಾಯ ಎದ್ದಿದ್ದರು. ಆದರೆ ನಂತರ ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಮತ್ತೆ ಶರದ್ ಪವಾರ್ ಅವರ ಪಕ್ಷಕ್ಕೆ ಮರಳಿದ್ದರು. ಅದ ಅದಾಗ್ಯೂ, ಕೇವಲ 5 ದಿನಗಳಿಗೆ ಸರ್ಕಾರ ಪತನವಾಗಿತ್ತು. ಕೆಲವು ದಿನಗಳ ನಂತರ, ಅವಿಭಜಿತ ಎನ್‌ಸಿಪಿ ಮತ್ತು ಶಿವಸೇನೆಯು ಕಾಂಗ್ರೆಸ್‌ನೊಂದಿಗೆ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಿತ್ತು. ಮಹಾರಾಷ್ಟ್ರ

ಈ ವೇಳೆ ಶರದ್ ಪವಾರ್ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಜಿತ್ ಪವಾರ್ “ಶರದ್ ಪವಾರ್ ಅವರ ಮನಸ್ಸನ್ನು ಎಂದಿಗೂ ಊಹಿಸಲು ಸಾಧ್ಯವಿಲ್ಲ. ಜಗತ್ತಿನಲ್ಲಿ ಒಬ್ಬನೇ ವ್ಯಕ್ತಿಯೂ ಊಹಿಸಲು ಸಾಧ್ಯವಿಲ್ಲ. ನಮ್ಮ ಚಿಕ್ಕಮ್ಮ ಆಗಲಿ, ಅವರ ಮಗಳು ಸುಪ್ರಿಯಾ  ಅವರಿಗೆ ಕೂಡ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಅಜಿತ್ ಪವಾರ್ ಅವರ ಹೇಳಿಕೆ ಈಗ ರಾಜಕೀಯ ಚರ್ಚಕ್ಕೆ ದಾರಿ ಮಾಡಿಕೊಟ್ಟಿದೆ.

ಗೌತಮ್ ಅದಾನಿ ಭಾಗವಹಿಸಿದ್ದ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಎನ್‌ಸಿಪಿ-ಎಸ್‌ಪಿ ನಾಯಕಿ ಸುಪ್ರಿಯಾ ಸುಳೆ ಪ್ರತಿಕ್ರಿಯಿಸಿದ್ದು, ಅಂತಹ ಯಾವುದೇ ಸಭೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. “ಅವರು ಸಂದರ್ಶನದಲ್ಲಿ ಪ್ರಸ್ತಾಪಿಸಿದ ಅಂತಹ ಯಾವುದೇ ಸಭೆಯ ಬಗ್ಗೆ ನನಗೆ ಸಂಪೂರ್ಣವಾಗಿ ತಿಳಿದಿಲ್ಲ ಎಂದು ನನಗೆ ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ರಾಜ್ಯಸಭಾ ಸಂಸದೆ ಮತ್ತು ಶಿವಸೇನೆ (ಯುಬಿಟಿ) ವಕ್ತಾರ ಪ್ರಿಯಾಂಕಾ ಚತುರ್ವೇದಿ ಅವರು ‘X’ನಲ್ಲಿ ಪ್ರತಿಕ್ರಿಯಿಸಿದ್ದು, “ಸಚಿವ ಸಂಪುಟದ ಹಿರಿಯ ಸಚಿವರೊಬ್ಬರು ಡಿಜಿಟಲ್ ವೇದಿಕೆಗೆ ನೀಡಿದ ಸಂದರ್ಶನದ ಪ್ರಕಾರ, ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಹೇಗೆ ಅಧಿಕಾರಕ್ಕೆ ತರಬೇಕು ಎಂದು ನಿರ್ಧರಿಸುವ ಸಭೆಗಳಲ್ಲಿ ಗೌತಮ್ ಅದಾನಿ ಭಾಗವಹಿಸಿದ್ದಾರೆ. ಇದು ಕೆಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ಹೇಳಿದ್ದಾರೆ.

“ಅವರು ಬಿಜೆಪಿಯ ಅಧಿಕೃತ ಸಂಧಾನಕಾರರೇ? ಮೈತ್ರಿಗಳನ್ನು ಸರಿಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆಯೇ? ಮಹಾರಾಷ್ಟ್ರದಲ್ಲಿ ಯಾವುದೇ ಬೆಲೆ ತೆತ್ತಾದರೂ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಉದ್ಯಮಿಯೊಬ್ಬರು ಏಕೆ ಇಷ್ಟು ಉತ್ಸಾಹದಿಂದ ಮತ್ತು ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ?” ಎಂದು ಅವರು ಕೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಈ ಬಗ್ಗೆ ಯಾವುದೇ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾಗಿ TNIE ವರದಿ ಮಾಡಿದೆ. ಅಷ್ಟೆ ಅಲ್ಲದೆ, ಅದಾನಿ ಗ್ರೂಪ್‌ನ ವಕ್ತಾರರೂ ಇದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಈ ಸಭೆ ಐದು ವರ್ಷಗಳ ಹಿಂದೆ ನಡೆದಿದೆ ಎಂದು ಅಜಿತ್ ಪವಾರ್ ಸಂದರ್ಶನದಲ್ಲಿ ಹೇಳಿದ್ದರೂ, ಅವರು ಪ್ರಸ್ತಾಪಿಸಿದ ಸಭೆ 2017 ರಲ್ಲಿ ಸಂಭವಿಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...