Homeಮುಖಪುಟಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಕರ್ತವ್ಯದಲ್ಲಿ ನಿರತರಾಗಿದ್ದ ಮಹಿಳಾ ಕಂಟಕ್ಟರ್‌ಗಳ ಜೊತೆಗೆ ಕೆಲವು ಪ್ರಯಾಣಿಕರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರು ಸಲ್ಲಿಸಿಲಾಗಿತ್ತು.

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಬಸ್ ಕಂಡಕ್ಟರ್‌ಗಳು ಮತ್ತು ಟಿಕೆಟ್ ಇನ್ಸ್‌ಪೆಕ್ಟರ್‌ಗಳು ಶೀಘ್ರದಲ್ಲೇ ತಮ್ಮ ಸಮವಸ್ತ್ರದಲ್ಲಿ ಕ್ಯಾಮೆರಾ ಹೊಂದಿಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಪ್ರಯಾಣ ಸಮಯದಲ್ಲಿ ಪ್ರಯಾಣಿಕರ ವರ್ತನೆ ಮತ್ತು ಇತರ ಚಟುವಟಿಕೆಗಳ ಬಗ್ಗೆ ಗಮನ ಇರಿಸಲಾಗುತ್ತದೆ.

ಕೆಲವು ದಿನಗಳ ಹಿಂದೆ, ಕರ್ತವ್ಯದಲ್ಲಿ ನಿರತರಾಗಿದ್ದ ಮಹಿಳಾ ಕಂಡಕ್ಟರ್‌ಗಳ ಜೊತೆಗೆ ಕೆಲವು ಪ್ರಯಾಣಿಕರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ಸಮವಸ್ತ್ರದಲ್ಲಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದೆ.

ಕರ್ತವ್ಯದ ಸಮಯದಲ್ಲಿ ಸಾರಿಗೆ ವಾಹನಗಳಲ್ಲಿನ ಚಟುವಟಿಕೆಗಳನ್ನು ದಾಖಲಿಸಲು ಔರಂಗಾಬಾದ್‌ ಸ್ಮಾರ್ಟ್ ಸಿಟಿ ಡೆವಲಪ್‌ಮೆಂಟ್ ಕಾರ್ಪೊರೇಷನ್ (ASCDCL) ಕಂಡಕ್ಟರ್‌ಗಳು ಮತ್ತು ಇನ್ಸ್‌ಪೆಕ್ಟರ್‌ಗಳ ಶರ್ಟ್‌ಗಳ ಮುಂಭಾಗದ ಜೇಬು‌ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ ಎಂದು ಎಎಸ್‌ಸಿಡಿಸಿಎಲ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ಕ್ಯಾಮೆರಾಗಳು ಟಿಕೆಟ್‌ಗಳ ನೈಜ-ಸಮಯದ ಪರೀಕ್ಷೆಗೆ ಸಹಾಯ ಮಾಡುತ್ತದೆ ಮತ್ತು ಬಸ್‌ಗಳಲ್ಲಿನ ಇತರ ಚಟುವಟಿಕೆಗಳ ಮೇಲೆ ಕಣ್ಣಿಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಎಎಸ್ಸಿಡಿಸಿಎಲ್ ಆಡಳಿತವು ಮಾಜಿ ಯೋಧರನ್ನು ಲೈನ್ ಇನ್‌ಸ್ಪೆಕ್ಟರ್‌ಗಳಾಗಿ ನಿಯೋಜಿಸಿದೆ, ಅವರು ಪ್ರಯಾಣಿಕರ ಟಿಕೆಟ್ ಪರಿಶೀಲನೆ ಮತ್ತು ಅವರ ನಡವಳಿಕೆಯನ್ನು ಪರಿಶೀಲಿಸುತ್ತಾರೆ. ಜೊತೆಗೆ ಪ್ರಯಾಣಿಕರ ಸುರಕ್ಷತೆ ಬಗ್ಗೆಯೂ ಕಾಳಜಿ ವಹಿಸಲಿದ್ದಾರೆ ಎಂದು ಅಧಿಕಾರಿ ಹೇಳಿದರು.

ASCDCL 100 ಬಸ್‌ಗಳನ್ನು ಹೊಂದಿದ್ದು, ಅದರಲ್ಲಿ 29 ಬಸ್‌ಗಳನ್ನು ಮಾತ್ರ ನಗರದಲ್ಲಿ ಕಾರ್ಯಾಚರಣೆಗೆ ಬಿಡಲಾಗಿದ್ದು, ನಗರದ 12 ಮಾರ್ಗಗಳಲ್ಲಿ ಸಂಚರಿಸುತ್ತಿವೆ. ಪ್ರತಿದಿನ ಸುಮಾರು 5,000 ಪ್ರಯಾಣಿಕರು ಸಾರಿಗೆ ಬಳಸುತ್ತಿದ್ದಾರೆ ಎಂದು ಎಎಸ್‌ಸಿಡಿಸಿಎಲ್ ಅಧಿಕಾರಿ ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರನ್ನು ಈ ಬಸ್‌ಗಳ ಚಾಲಕರು ಮತ್ತು ಕಂಡಕ್ಟರ್‌ಗಳಾಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು. ಲಾಕ್‌ಡೌನ್ ಅವಧಿಯಲ್ಲಿ, ಈ ನಾಗರಿಕ-ಚಾಲಿತ ಬಸ್‌ಗಳನ್ನು ಕೊರೊನಾ ರೋಗಿಗಳನ್ನು ಕರೆದೊಯ್ಯಲು ಬಳಸಲಾಗುತ್ತಿತ್ತು.

ಕಳೆದ ತಿಂಗಳಿನಿಂದ ASCDCL ಸಾಮಾನ್ಯ ಪ್ರಯಾಣಿಕರಿಗಾಗಿ ತನ್ನ ಬಸ್ ಸೇವೆಗಳನ್ನು ಪುನರಾರಂಭಿಸಿದೆ. ಸ್ಮಾರ್ಟ್ ಸಿಟಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಎಎಸ್ಸಿಡಿಸಿಎಲ್ ಅನ್ನು ರಚಿಸಿದೆ. ಔರಂಗಾಬಾದ್ ಮುನ್ಸಿಪಲ್ ಕಮಿಷನರ್ ಆಸ್ತಿಕ್ ಕುಮಾರ್ ಪಾಂಡೆ ಎಎಸ್ಸಿಡಿಸಿಎಲ್ ಮುಖ್ಯಸ್ಥರಾಗಿದ್ದಾರೆ.


ಇದನ್ನೂ ಓದಿ: ಪ್ರತಿ ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿ 700 ರೂ. ನೀಡಲಿರುವ ಮಹಾರಾಷ್ಟ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...