Homeಮುಖಪುಟಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಕರ್ತವ್ಯದಲ್ಲಿ ನಿರತರಾಗಿದ್ದ ಮಹಿಳಾ ಕಂಟಕ್ಟರ್‌ಗಳ ಜೊತೆಗೆ ಕೆಲವು ಪ್ರಯಾಣಿಕರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರು ಸಲ್ಲಿಸಿಲಾಗಿತ್ತು.

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಬಸ್ ಕಂಡಕ್ಟರ್‌ಗಳು ಮತ್ತು ಟಿಕೆಟ್ ಇನ್ಸ್‌ಪೆಕ್ಟರ್‌ಗಳು ಶೀಘ್ರದಲ್ಲೇ ತಮ್ಮ ಸಮವಸ್ತ್ರದಲ್ಲಿ ಕ್ಯಾಮೆರಾ ಹೊಂದಿಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಪ್ರಯಾಣ ಸಮಯದಲ್ಲಿ ಪ್ರಯಾಣಿಕರ ವರ್ತನೆ ಮತ್ತು ಇತರ ಚಟುವಟಿಕೆಗಳ ಬಗ್ಗೆ ಗಮನ ಇರಿಸಲಾಗುತ್ತದೆ.

ಕೆಲವು ದಿನಗಳ ಹಿಂದೆ, ಕರ್ತವ್ಯದಲ್ಲಿ ನಿರತರಾಗಿದ್ದ ಮಹಿಳಾ ಕಂಡಕ್ಟರ್‌ಗಳ ಜೊತೆಗೆ ಕೆಲವು ಪ್ರಯಾಣಿಕರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ಸಮವಸ್ತ್ರದಲ್ಲಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದೆ.

ಕರ್ತವ್ಯದ ಸಮಯದಲ್ಲಿ ಸಾರಿಗೆ ವಾಹನಗಳಲ್ಲಿನ ಚಟುವಟಿಕೆಗಳನ್ನು ದಾಖಲಿಸಲು ಔರಂಗಾಬಾದ್‌ ಸ್ಮಾರ್ಟ್ ಸಿಟಿ ಡೆವಲಪ್‌ಮೆಂಟ್ ಕಾರ್ಪೊರೇಷನ್ (ASCDCL) ಕಂಡಕ್ಟರ್‌ಗಳು ಮತ್ತು ಇನ್ಸ್‌ಪೆಕ್ಟರ್‌ಗಳ ಶರ್ಟ್‌ಗಳ ಮುಂಭಾಗದ ಜೇಬು‌ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ ಎಂದು ಎಎಸ್‌ಸಿಡಿಸಿಎಲ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ಕ್ಯಾಮೆರಾಗಳು ಟಿಕೆಟ್‌ಗಳ ನೈಜ-ಸಮಯದ ಪರೀಕ್ಷೆಗೆ ಸಹಾಯ ಮಾಡುತ್ತದೆ ಮತ್ತು ಬಸ್‌ಗಳಲ್ಲಿನ ಇತರ ಚಟುವಟಿಕೆಗಳ ಮೇಲೆ ಕಣ್ಣಿಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಎಎಸ್ಸಿಡಿಸಿಎಲ್ ಆಡಳಿತವು ಮಾಜಿ ಯೋಧರನ್ನು ಲೈನ್ ಇನ್‌ಸ್ಪೆಕ್ಟರ್‌ಗಳಾಗಿ ನಿಯೋಜಿಸಿದೆ, ಅವರು ಪ್ರಯಾಣಿಕರ ಟಿಕೆಟ್ ಪರಿಶೀಲನೆ ಮತ್ತು ಅವರ ನಡವಳಿಕೆಯನ್ನು ಪರಿಶೀಲಿಸುತ್ತಾರೆ. ಜೊತೆಗೆ ಪ್ರಯಾಣಿಕರ ಸುರಕ್ಷತೆ ಬಗ್ಗೆಯೂ ಕಾಳಜಿ ವಹಿಸಲಿದ್ದಾರೆ ಎಂದು ಅಧಿಕಾರಿ ಹೇಳಿದರು.

ASCDCL 100 ಬಸ್‌ಗಳನ್ನು ಹೊಂದಿದ್ದು, ಅದರಲ್ಲಿ 29 ಬಸ್‌ಗಳನ್ನು ಮಾತ್ರ ನಗರದಲ್ಲಿ ಕಾರ್ಯಾಚರಣೆಗೆ ಬಿಡಲಾಗಿದ್ದು, ನಗರದ 12 ಮಾರ್ಗಗಳಲ್ಲಿ ಸಂಚರಿಸುತ್ತಿವೆ. ಪ್ರತಿದಿನ ಸುಮಾರು 5,000 ಪ್ರಯಾಣಿಕರು ಸಾರಿಗೆ ಬಳಸುತ್ತಿದ್ದಾರೆ ಎಂದು ಎಎಸ್‌ಸಿಡಿಸಿಎಲ್ ಅಧಿಕಾರಿ ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರನ್ನು ಈ ಬಸ್‌ಗಳ ಚಾಲಕರು ಮತ್ತು ಕಂಡಕ್ಟರ್‌ಗಳಾಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು. ಲಾಕ್‌ಡೌನ್ ಅವಧಿಯಲ್ಲಿ, ಈ ನಾಗರಿಕ-ಚಾಲಿತ ಬಸ್‌ಗಳನ್ನು ಕೊರೊನಾ ರೋಗಿಗಳನ್ನು ಕರೆದೊಯ್ಯಲು ಬಳಸಲಾಗುತ್ತಿತ್ತು.

ಕಳೆದ ತಿಂಗಳಿನಿಂದ ASCDCL ಸಾಮಾನ್ಯ ಪ್ರಯಾಣಿಕರಿಗಾಗಿ ತನ್ನ ಬಸ್ ಸೇವೆಗಳನ್ನು ಪುನರಾರಂಭಿಸಿದೆ. ಸ್ಮಾರ್ಟ್ ಸಿಟಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಎಎಸ್ಸಿಡಿಸಿಎಲ್ ಅನ್ನು ರಚಿಸಿದೆ. ಔರಂಗಾಬಾದ್ ಮುನ್ಸಿಪಲ್ ಕಮಿಷನರ್ ಆಸ್ತಿಕ್ ಕುಮಾರ್ ಪಾಂಡೆ ಎಎಸ್ಸಿಡಿಸಿಎಲ್ ಮುಖ್ಯಸ್ಥರಾಗಿದ್ದಾರೆ.


ಇದನ್ನೂ ಓದಿ: ಪ್ರತಿ ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿ 700 ರೂ. ನೀಡಲಿರುವ ಮಹಾರಾಷ್ಟ್ರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...