Homeಮುಖಪುಟಮಹಾರಾಷ್ಟ್ರ ಉಪಚುನಾವಣೆ; ಬಿಜೆಪಿ ಭದ್ರಕೋಟೆ ಕಸ್ಬಾ ಪೇಠ್‌ನಲ್ಲಿ ಕಾಂಗ್ರೆಸ್‌ ಜಯಭೇರಿ

ಮಹಾರಾಷ್ಟ್ರ ಉಪಚುನಾವಣೆ; ಬಿಜೆಪಿ ಭದ್ರಕೋಟೆ ಕಸ್ಬಾ ಪೇಠ್‌ನಲ್ಲಿ ಕಾಂಗ್ರೆಸ್‌ ಜಯಭೇರಿ

ಪುಣೆಯ ಹೃದಯ ಭಾಗವಾದ ಕಸ್ಬಾ ಪೇಟ್‌ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಬಿಜೆಪಿ ಗೆಲ್ಲುತ್ತಾ ಬಂದಿತ್ತು

- Advertisement -
- Advertisement -

ಪುಣೆ ನಗರದ ಹೃದಯಭಾಗದಲ್ಲಿರುವ, ಬಿಜೆಪಿಯ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟ ಕಸ್ಬಾ ಪೇಠ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ.

ಸುಮಾರು ಮೂರು ದಶಕ ಕಾಲ ಕಬ್ಬಾ ಪೇಠ್‌ನಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿದೆ. ಪ್ರತಿಪಕ್ಷವಾದ ಮಹಾ ವಿಕಾಸ್ ಅಘಾಡಿಯ ಅಭ್ಯರ್ಥಿಯಾಗಿದ್ದ ರವೀಂದ್ರ ಧಾಂಗೇಕರ್ ಅವರು ಚುನಾವಣೆಯಲ್ಲಿ ಗೆದ್ದಿದ್ದಾರೆ.

ರವೀಂದ್ರ ಧಾಂಗೇಕರ್ ಅವರು ಬಿಜೆಪಿಯ ಹೇಮಂತ್ ರಸಾನೆ ಅವರನ್ನು 11,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. 1980ರಿಂದ ಎರಡು ಬಾರಿ ಹೊರತುಪಡಿಸಿ ಈ ಕ್ಷೇತ್ರದಲ್ಲಿ ಬಿಜೆಪಿ ಸತತವಾಗಿ ಗೆಲ್ಲುತ್ತಾ ಬಂದಿತ್ತು.

ಸ್ವಾತಂತ್ರ್ಯ ಹೋರಾಟಗಾರರಾದ ಲೋಕಮಾನ್ಯ ತಿಲಕ್ ಅವರ ಮರಿ ಮೊಮ್ಮಗಳು, ಬಿಜೆಪಿ ಶಾಸಕಿ ಮುಕ್ತಾ ತಿಲಕ್ ಅವರು ನಿಧನರಾಗಿದ್ದರಿಂದ ಕ್ಷೇತ್ರದಲ್ಲಿ ಚುನಾವಣೆ ನಿಗದಿಯಾಗಿತ್ತು. ಮುಕ್ತಾ ಅವರು 2019ರ ಚುನಾವಣೆಯಲ್ಲಿ ಗೆದ್ದಿದ್ದರು.

ಅದಕ್ಕೂ ಮೊದಲು 1995, 1999, 2004, 2009 ಮತ್ತು 2014 ರಲ್ಲಿ ಬಿಜೆಪಿಯ ಗಿರೀಶ್ ಬಾಪಟ್ ಅವರು ಐದು ಭಾರಿ ಕಸ್ಬಾ ಪೇಠ್‌ನಲ್ಲಿ ಗೆದ್ದು ದಾಖಲೆ ನಿರ್ಮಿಸಿದ್ದರು. ಬಾಪಟ್ ಅವರೀಗ ಪುಣೆ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದಾರೆ.

ಉಪಚುನಾವಣೆಯ ಫಲಿತಾಂಶ ಹೊರಬಿದ್ದ ಬಳಿಕ ಕಾಂಗ್ರೆಸ್‌ ಸಂಭ್ರಮಾಚರಣೆ ಮಾಡಿದೆ. ಲೋಕಮಾನ್ಯ ತಿಲಕ್ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಪುಣೆಯ ಬಹುತೇಕ ನಿವಾಸಿಗಳು ಅತೃಪ್ತಿ ಹೊಂದಿದ್ದರು ಎನ್ನಲಾಗುತ್ತಿದೆ.

ಕಸ್ಬಾ ಪೇಠ್‌ ಪುಣೆಯ ಅತ್ಯಂತ ಹಳೆಯ ವಸತಿ ಪ್ರದೇಶವಾಗಿದೆ. ಇದನ್ನು ಕಸ್ಬಾ ಪುಣೆ ಎಂದೂ ಕರೆಯಲಾಗುತ್ತಿತ್ತು. ಜೊತೆಗೆ ಪುಣೆಯ ಹೃದಯ ಭಾಗವೆಂದೇ ಕಸ್ಬಾ ಪೇಠ್‌‌ ಪರಿಗಣಿಸಲ್ಪಟ್ಟಿದೆ.

ಚಿಂಚವಾಡ್‌ನಲ್ಲಿ ಬಿಜೆಪಿ ಗೆಲುವು

ಬಿಜೆಪಿ ಶಾಸಕರಾದ ಲಕ್ಷ್ಮಣ್ ಜಗತಾಪ್ ಅವರು ನಿಧನರಾಗಿದ್ದರಿಂದ ಚಿಂಚವಾಡ್ ಕ್ಷೇತ್ರಕ್ಕೂ ಚುನಾವಣೆ ನಿಗದಿಯಾಗಿತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

25ನೇ ಸುತ್ತಿನ ಮತ ಎಣಿಕೆ ಮುಗಿದ ನಂತರ ಬಿಜೆಪಿಯ ಅಶ್ವಿನಿ ಜಗತಾಪ್ 90,266 ಮತಗಳನ್ನು, ಎನ್‌ಸಿಪಿಯ ನಾನಾ ಕಾಟೆ 76,983 ಮತ್ತು ಸ್ವತಂತ್ರ ಅಭ್ಯರ್ಥಿ ರಾಹುಲ್ ಕಲಟೆ 29,200 ಮತಗಳನ್ನು ಪಡೆದಿದ್ದಾರೆ.

ಅಭ್ಯರ್ಥಿಗಳನ್ನು ಹಾಕದಂತೆ ಎಂವಿಎಗೆ ಮನವಿ ಮಾಡಿದ್ದ ಸಿಎಂ ಶಿಂಧೆ

ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಕೂಟವು ಉಪಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹಾಕದಿರುವಂತೆ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಮನವಿ ಮಾಡಿದ್ದರು.

“ಮಹಾರಾಷ್ಟ್ರವನ್ನು ಗಮನದಲ್ಲಿಟ್ಟುಕೊಂಡು ಕಸ್ಬಾ ಪೇಠ್ ಮತ್ತು ಚಿಂಚ್‌ವಾಡ್ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳಿಗೆ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಬೇಡಿ” ಎಂದಿದ್ದರು ಶಿಂಧೆ.

ಇದನ್ನೂ ಓದಿರಿ: ಚುನಾವಣಾ ಆಯುಕ್ತರ ನೇಮಕ ಸಮಿತಿಯಲ್ಲಿ ಪಿಎಂ, ಲೋಕಸಭೆ ವಿಪಕ್ಷ ನಾಯಕ, ಸಿಜೆಐ ಇರಬೇಕು: ಸುಪ್ರೀಂ ಕೋರ್ಟ್

ಮೂರು ಅವಧಿಯಲ್ಲಿ ಕಾರ್ಪೊರೇಟರ್ ಆಗಿದ್ದ ಹೇಮಂತ್ ರಸಾನೆ ಅವರನ್ನು ಕಸ್ಬಾ ಪೇಠ್‌ನಿಂದ ಮತ್ತು ಲಕ್ಷ್ಮಣ್ ಜಗತಾಪ್ ಅವರ ಪತ್ನಿ ಅಶ್ವಿನಿ ಜಗತಾಪ್ ಅವರನ್ನು ಚಿಂಚವಾಡದಿಂದ ಬಿಜೆಪಿ ಕಣಕ್ಕಿಳಿಸಿತ್ತು.

ಅಭ್ಯರ್ಥಿ ಘೋಷಣೆಯ ನಂತರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಪ್ರಮುಖ ಎಂವಿಎ ನಾಯಕರಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಅಜಿತ್ ಪವಾರ್, ಜಯಂತ್ ಪಾಟೀಲ್ ಮತ್ತು ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಅವರನ್ನು ಕರೆದು ಮಾತನಾಡಿದ್ದರು. ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಎಂವಿಎ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಾರದು ಎಂದು ಮನವಿ ಮಾಡಿದ್ದರು. ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿ ಎಂದು ಸಿಎಂ ಆಶಿಸಿದ್ದರು.

ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮೂಲಕ ಪ್ರತಿಪಕ್ಷಗಳಿಗೆ ಮನವಿ ಮಾಡಿದ್ದರು. ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಅವಿರೋಧ ಆಯ್ಕೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...