Homeಮುಖಪುಟಮಹಾರಾಷ್ಟ್ರ ಉಪಚುನಾವಣೆ; ಬಿಜೆಪಿ ಭದ್ರಕೋಟೆ ಕಸ್ಬಾ ಪೇಠ್‌ನಲ್ಲಿ ಕಾಂಗ್ರೆಸ್‌ ಜಯಭೇರಿ

ಮಹಾರಾಷ್ಟ್ರ ಉಪಚುನಾವಣೆ; ಬಿಜೆಪಿ ಭದ್ರಕೋಟೆ ಕಸ್ಬಾ ಪೇಠ್‌ನಲ್ಲಿ ಕಾಂಗ್ರೆಸ್‌ ಜಯಭೇರಿ

ಪುಣೆಯ ಹೃದಯ ಭಾಗವಾದ ಕಸ್ಬಾ ಪೇಟ್‌ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಬಿಜೆಪಿ ಗೆಲ್ಲುತ್ತಾ ಬಂದಿತ್ತು

- Advertisement -
- Advertisement -

ಪುಣೆ ನಗರದ ಹೃದಯಭಾಗದಲ್ಲಿರುವ, ಬಿಜೆಪಿಯ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟ ಕಸ್ಬಾ ಪೇಠ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ.

ಸುಮಾರು ಮೂರು ದಶಕ ಕಾಲ ಕಬ್ಬಾ ಪೇಠ್‌ನಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿದೆ. ಪ್ರತಿಪಕ್ಷವಾದ ಮಹಾ ವಿಕಾಸ್ ಅಘಾಡಿಯ ಅಭ್ಯರ್ಥಿಯಾಗಿದ್ದ ರವೀಂದ್ರ ಧಾಂಗೇಕರ್ ಅವರು ಚುನಾವಣೆಯಲ್ಲಿ ಗೆದ್ದಿದ್ದಾರೆ.

ರವೀಂದ್ರ ಧಾಂಗೇಕರ್ ಅವರು ಬಿಜೆಪಿಯ ಹೇಮಂತ್ ರಸಾನೆ ಅವರನ್ನು 11,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. 1980ರಿಂದ ಎರಡು ಬಾರಿ ಹೊರತುಪಡಿಸಿ ಈ ಕ್ಷೇತ್ರದಲ್ಲಿ ಬಿಜೆಪಿ ಸತತವಾಗಿ ಗೆಲ್ಲುತ್ತಾ ಬಂದಿತ್ತು.

ಸ್ವಾತಂತ್ರ್ಯ ಹೋರಾಟಗಾರರಾದ ಲೋಕಮಾನ್ಯ ತಿಲಕ್ ಅವರ ಮರಿ ಮೊಮ್ಮಗಳು, ಬಿಜೆಪಿ ಶಾಸಕಿ ಮುಕ್ತಾ ತಿಲಕ್ ಅವರು ನಿಧನರಾಗಿದ್ದರಿಂದ ಕ್ಷೇತ್ರದಲ್ಲಿ ಚುನಾವಣೆ ನಿಗದಿಯಾಗಿತ್ತು. ಮುಕ್ತಾ ಅವರು 2019ರ ಚುನಾವಣೆಯಲ್ಲಿ ಗೆದ್ದಿದ್ದರು.

ಅದಕ್ಕೂ ಮೊದಲು 1995, 1999, 2004, 2009 ಮತ್ತು 2014 ರಲ್ಲಿ ಬಿಜೆಪಿಯ ಗಿರೀಶ್ ಬಾಪಟ್ ಅವರು ಐದು ಭಾರಿ ಕಸ್ಬಾ ಪೇಠ್‌ನಲ್ಲಿ ಗೆದ್ದು ದಾಖಲೆ ನಿರ್ಮಿಸಿದ್ದರು. ಬಾಪಟ್ ಅವರೀಗ ಪುಣೆ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದಾರೆ.

ಉಪಚುನಾವಣೆಯ ಫಲಿತಾಂಶ ಹೊರಬಿದ್ದ ಬಳಿಕ ಕಾಂಗ್ರೆಸ್‌ ಸಂಭ್ರಮಾಚರಣೆ ಮಾಡಿದೆ. ಲೋಕಮಾನ್ಯ ತಿಲಕ್ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಪುಣೆಯ ಬಹುತೇಕ ನಿವಾಸಿಗಳು ಅತೃಪ್ತಿ ಹೊಂದಿದ್ದರು ಎನ್ನಲಾಗುತ್ತಿದೆ.

ಕಸ್ಬಾ ಪೇಠ್‌ ಪುಣೆಯ ಅತ್ಯಂತ ಹಳೆಯ ವಸತಿ ಪ್ರದೇಶವಾಗಿದೆ. ಇದನ್ನು ಕಸ್ಬಾ ಪುಣೆ ಎಂದೂ ಕರೆಯಲಾಗುತ್ತಿತ್ತು. ಜೊತೆಗೆ ಪುಣೆಯ ಹೃದಯ ಭಾಗವೆಂದೇ ಕಸ್ಬಾ ಪೇಠ್‌‌ ಪರಿಗಣಿಸಲ್ಪಟ್ಟಿದೆ.

ಚಿಂಚವಾಡ್‌ನಲ್ಲಿ ಬಿಜೆಪಿ ಗೆಲುವು

ಬಿಜೆಪಿ ಶಾಸಕರಾದ ಲಕ್ಷ್ಮಣ್ ಜಗತಾಪ್ ಅವರು ನಿಧನರಾಗಿದ್ದರಿಂದ ಚಿಂಚವಾಡ್ ಕ್ಷೇತ್ರಕ್ಕೂ ಚುನಾವಣೆ ನಿಗದಿಯಾಗಿತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

25ನೇ ಸುತ್ತಿನ ಮತ ಎಣಿಕೆ ಮುಗಿದ ನಂತರ ಬಿಜೆಪಿಯ ಅಶ್ವಿನಿ ಜಗತಾಪ್ 90,266 ಮತಗಳನ್ನು, ಎನ್‌ಸಿಪಿಯ ನಾನಾ ಕಾಟೆ 76,983 ಮತ್ತು ಸ್ವತಂತ್ರ ಅಭ್ಯರ್ಥಿ ರಾಹುಲ್ ಕಲಟೆ 29,200 ಮತಗಳನ್ನು ಪಡೆದಿದ್ದಾರೆ.

ಅಭ್ಯರ್ಥಿಗಳನ್ನು ಹಾಕದಂತೆ ಎಂವಿಎಗೆ ಮನವಿ ಮಾಡಿದ್ದ ಸಿಎಂ ಶಿಂಧೆ

ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಕೂಟವು ಉಪಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹಾಕದಿರುವಂತೆ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಮನವಿ ಮಾಡಿದ್ದರು.

“ಮಹಾರಾಷ್ಟ್ರವನ್ನು ಗಮನದಲ್ಲಿಟ್ಟುಕೊಂಡು ಕಸ್ಬಾ ಪೇಠ್ ಮತ್ತು ಚಿಂಚ್‌ವಾಡ್ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳಿಗೆ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಬೇಡಿ” ಎಂದಿದ್ದರು ಶಿಂಧೆ.

ಇದನ್ನೂ ಓದಿರಿ: ಚುನಾವಣಾ ಆಯುಕ್ತರ ನೇಮಕ ಸಮಿತಿಯಲ್ಲಿ ಪಿಎಂ, ಲೋಕಸಭೆ ವಿಪಕ್ಷ ನಾಯಕ, ಸಿಜೆಐ ಇರಬೇಕು: ಸುಪ್ರೀಂ ಕೋರ್ಟ್

ಮೂರು ಅವಧಿಯಲ್ಲಿ ಕಾರ್ಪೊರೇಟರ್ ಆಗಿದ್ದ ಹೇಮಂತ್ ರಸಾನೆ ಅವರನ್ನು ಕಸ್ಬಾ ಪೇಠ್‌ನಿಂದ ಮತ್ತು ಲಕ್ಷ್ಮಣ್ ಜಗತಾಪ್ ಅವರ ಪತ್ನಿ ಅಶ್ವಿನಿ ಜಗತಾಪ್ ಅವರನ್ನು ಚಿಂಚವಾಡದಿಂದ ಬಿಜೆಪಿ ಕಣಕ್ಕಿಳಿಸಿತ್ತು.

ಅಭ್ಯರ್ಥಿ ಘೋಷಣೆಯ ನಂತರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಪ್ರಮುಖ ಎಂವಿಎ ನಾಯಕರಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಅಜಿತ್ ಪವಾರ್, ಜಯಂತ್ ಪಾಟೀಲ್ ಮತ್ತು ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಅವರನ್ನು ಕರೆದು ಮಾತನಾಡಿದ್ದರು. ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಎಂವಿಎ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಾರದು ಎಂದು ಮನವಿ ಮಾಡಿದ್ದರು. ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿ ಎಂದು ಸಿಎಂ ಆಶಿಸಿದ್ದರು.

ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮೂಲಕ ಪ್ರತಿಪಕ್ಷಗಳಿಗೆ ಮನವಿ ಮಾಡಿದ್ದರು. ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಅವಿರೋಧ ಆಯ್ಕೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...