Homeಮುಖಪುಟಇಂದು ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ: ನಾಳೆ ಚಳಿಗಾಲದ ಅಧಿವೇಶನ; ಇಲ್ಲಿಯವರೆಗೆ ನಮಗೆ ಏನು...

ಇಂದು ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ: ನಾಳೆ ಚಳಿಗಾಲದ ಅಧಿವೇಶನ; ಇಲ್ಲಿಯವರೆಗೆ ನಮಗೆ ಏನು ತಿಳಿದಿದೆ?

- Advertisement -
- Advertisement -

ಮುಂಬೈ: ವಿಧಾನಸಭೆಯ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನದ ಮೊದಲು ಮಹಾರಾಷ್ಟ್ರದಲ್ಲಿ ಮಹಾಯುತಿ ಸರಕಾರದ  ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭವು ಇಂದು ( ಭಾನುವಾರ) ಸಂಜೆ ನಾಗ್ಪುರದಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.

ನವೆಂಬರ್ 23 ರಂದು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅದ್ಭುತ ವಿಜಯವನ್ನು ದಾಖಲಿಸಿದ ಮಹಾಯುತಿ ಮೈತ್ರಿಕೂಟದ ಪಾಲುದಾರರಾದ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ನಡುವಿನ ವಾರಗಳ ತೀವ್ರ ಚರ್ಚೆಯ ನಂತರ ಈ ಘೋಷಣೆ ಹೊರಬಿದ್ದಿದೆ.

ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರದೊಳಗೆ ಸಚಿವ ಸ್ಥಾನಕ್ಕಾಗಿ ಪೈಪೋಟಿ ತೀವ್ರಗೊಂಡಿದ್ದು, ಶಿವಸೇನೆ ಮತ್ತು ಬಿಜೆಪಿಯ ಶಾಸಕರು ಹೊಸ ಸಂಪುಟ ಮತ್ತು ಸಚಿವ ಸಂಪುಟದಲ್ಲಿ ಸ್ಥಾನಗಳಿಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸರ್ಕಾರದಲ್ಲಿ ಮೊದಲ ಸಚಿವ ಸಂಪುಟದ ವಿಸ್ತರಣೆಯು ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಹಂಚಿಕೊಂಡು ಎರಡು ವಾರಗಳ ನಂತರ ನಡೆಯುತ್ತಿದೆ.

ವಿಸ್ತೃತ ಚರ್ಚೆಗಳು ಮತ್ತು ಹಿರಿಯ ನಾಯಕರ ನಡುವೆ ಹಲವಾರು ಸಭೆಗಳ ನಂತರ, ಪ್ರಮುಖ ಖಾತೆಗಳು ಮತ್ತು ಮೂರು ಸಮ್ಮಿಶ್ರ ಪಕ್ಷಗಳ ನಡುವೆ ಅಧಿಕಾರ ಹಂಚಿಕೆಯ ವ್ಯವಸ್ಥೆಗೆ ಸಂಬಂಧಿಸಿದಂತೆ ನಿರ್ಧಾರಕ್ಕೆ ಬರಲಾಗಿದೆ. ಹೊಸ ಸಚಿವರ ಸೇರ್ಪಡೆಗೆ ಹಾದಿಯನ್ನು ತೆರವುಗೊಳಿಸಲಾಗಿದೆ.

ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿ, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹೊಸ ಮುಖಗಳನ್ನು ಪರಿಚಯಿಸುವ ನಿರೀಕ್ಷೆಯಿದೆ. ಬಿಜೆಪಿ 20-21 ಸಚಿವ ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ, ನಂತರ ಶಿವಸೇನೆಗೆ 11-12 ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ 9-10 ಸಚಿವ ಸ್ಥಾನಗಳನ್ನು ನೀಡುವ ಸಾಧ್ಯತೆಯಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಆದರೆ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯಲ್ಲೇ ತೀವ್ರ ಪೈಪೋಟಿ ಏರ್ಪಟ್ಟಿದೆ. ಶುಕ್ರವಾರ ರಾತ್ರಿ, ಪ್ರಮುಖ ಶಾಸಕರಾದ ಸಂಜಯ್ ಶಿರ್ಸಾತ್, ಯೋಗೇಶ್ ಕದಂ, ವಿಜಯ್ ಶಿವತಾರೆ, ಭರತ್ ಗೋಗವಾಲೆ ಮತ್ತು ಬಾಲಾಜಿ ಕಿಣಿಕರ್ ಶಿಂಧೆ ಅವರನ್ನು ಭೇಟಿಯಾಗಿ ತಮ್ಮ ವಾದವನ್ನು ಮಂಡಿಸಿದರು. ಇಬ್ಬರು ಮಾಜಿ ಮಂತ್ರಿಗಳಾದ ದೀಪಕ್ ಕೇಸರ್ಕರ್ ಮತ್ತು ತಾನಾಜಿ ಸಾವಂತ್ ಅವರು ಐದು ಗಂಟೆಗಳ ಕಾಲ ಕಾಯುತ್ತಿದ್ದರೂ ಶಿಂಧೆ ಭೇಟಿ ಮಾಡಲು ಸಾಧ್ಯವಾಗಿಲ್ಲ.

ಕಳಂಕಿತ ಅಥವಾ ವಿವಾದಾತ್ಮಕ ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವುದಿಲ್ಲ ಎಂಬ ತನ್ನ ನಿಲುವಿನಲ್ಲಿ ಬಿಜೆಪಿ ದೃಢವಾಗಿದೆ ಮತ್ತು ಶಿವಸೇನೆಯಿಂದ ಕೇಸರ್ಕರ್, ಸಾವಂತ್, ಅಬ್ದುಲ್ ಸತ್ತಾರ್ ಮತ್ತು ಸಂಜಯ್ ರಾಥೋಡ್ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿದೆ. ಕೇಸರ್ಕರ್ ಮತ್ತು ಸಾವಂತ್ ಅವರನ್ನು ಹೊರತುಪಡಿಸುವುದರಿಂದ ರಾಜಕೀಯವಾಗಿ ಶಿಂಧೆ ಅವರಿಗೆ ಹಾನಿಯಾಗುವ ಸಾಧ್ಯತೆಯಿಲ್ಲದಿದ್ದರೂ, ವಿದರ್ಭದ ಕೆಲವು ಭಾಗಗಳಲ್ಲಿ ಗಮನಾರ್ಹ ಅಸ್ತಿತ್ವವನ್ನು ಹೊಂದಿರುವ ಬಂಜಾರ ಸಮುದಾಯದಿಂದ ಬಂದಿರುವ ಸಂಜಯ್ ರಾಥೋಡ್ ಅವರ ಸೇರ್ಪಡೆ ಶಿಂಧೆ ಅವರ ಸಾಮಾಜಿಕ-ರಾಜಕೀಯ ಲೆಕ್ಕಾಚಾರಗಳಿಗೆ ನಿರ್ಣಾಯಕವಾಗಿದೆ.

ಪುಣೆಯಲ್ಲಿ ಯುವತಿಯ ಆತ್ಮಹತ್ಯೆಗೆ ಸಂಬಂಧಿಸಿ ರಾಥೋಡ್  ಅವರ ಹೆಸರು ಕೇಳಿ ಬಂದಿರುವುದರಿಂದ  ಅವರನ್ನು ಸೇನೆಯ ಸಚಿವ ಸ್ಥಾನದ ಪಟ್ಟಿಯಿಂದ ಹೊರಗಿಡಬೇಕು ಎಂದು ಪಡ್ನವೀಸ್ ಸೂಚಿಸಿದ್ದಾರೆ ಎನ್ನಲಾಗಿದೆ.

ಅಬ್ದುಲ್ ಸತ್ತಾರ್ ವಿರುದ್ಧ ಸರ್ವಾಧಿಕಾರಿ ವರ್ತನೆಯ ದೂರುಗಳಿವೆ ಎಂದು ಮೂಲಗಳು ಸೂಚಿಸುತ್ತವೆ ಮತ್ತು ಆರೋಗ್ಯ ಸಚಿವರಾಗಿ ತಾನಾಜಿ ಸಾವಂತ್ ಅವರು ವಿವಿಧ ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಆಗಾಗ್ಗೆ ದುರ್ನಡತೆ ತೋರಿದ್ದರು ಎನ್ನಲಾಗಿದೆ.

30-32 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಶುಕ್ರವಾರ ಪಿಟಿಐಗೆ ತಿಳಿಸಿದ್ದಾರೆ. ಇದರಲ್ಲಿ 20 ಬಿಜೆಪಿ ನಾಯಕರು ಮತ್ತು ಉಳಿದವರು ಶಿವಸೇನೆಯವರು ಸೇರಿದ್ದಾರೆ ಎಂದು ವರದಿಗಳು ಹೇಳುತ್ತವೆ. ಮಹಾರಾಷ್ಟ್ರದ ಸಚಿವ ಸಂಪುಟವು ಮುಖ್ಯಮಂತ್ರಿ ಸೇರಿದಂತೆ ಗರಿಷ್ಠ 43 ಸದಸ್ಯರನ್ನು ಹೊಂದಬಹುದಾಗಿದೆ.

ನವೆಂಬರ್ 20ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿಯು ರಾಜ್ಯದ 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿತು. ಇದರಲ್ಲಿ ಬಿಜೆಪಿ 132 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಶಿಂಧೆ ಅವರ ಶಿವಸೇನೆ 57 ಮತ್ತು ಪವಾರ್ ಅವರ ಎನ್‌ಸಿಪಿ 41 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದವು.

ಸರ್ಕಾರ ರಚನೆಯು ಈಗಾಗಲೇ ಹಲವು ತಿರುವುಗಳನ್ನು ಕಂಡಿದೆ.  ಸರ್ಕಾರದ ಭಾಗವಾಗಲು ಇಚ್ಛಿಸದ ಮತ್ತು ಪಕ್ಷ ಸಂಘಟನೆಯತ್ತ ಗಮನ ಹರಿಸಲು ಉತ್ಸುಕರಾಗಿದ್ದ ಶಿಂಧೆ ಅವರನ್ನು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಮನವೊಲಿಸಲಾಗಿದೆ.

ಶಿವಸೇನೆಯು ಹಲವಾರು ಸಂದರ್ಭಗಳಲ್ಲಿ ಶಿಂಧೆಗೆ ಅವರ ಸ್ಥಾನಮಾನಕ್ಕೆ ತಕ್ಕ ಹುದ್ದೆಯಾದ ಗೃಹ ಖಾತೆಯನ್ನು ಕೇಳಿತ್ತು. ಇದಕ್ಕೆ ಬಿಜೆಪಿಯು ಒಪ್ಪಿಗೆ ನೀಡಲಿಲ್ಲ.

ಇದನ್ನೂ ಓದಿ…..ದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...