Homeಮುಖಪುಟಇಂದು ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ: ನಾಳೆ ಚಳಿಗಾಲದ ಅಧಿವೇಶನ; ಇಲ್ಲಿಯವರೆಗೆ ನಮಗೆ ಏನು...

ಇಂದು ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ: ನಾಳೆ ಚಳಿಗಾಲದ ಅಧಿವೇಶನ; ಇಲ್ಲಿಯವರೆಗೆ ನಮಗೆ ಏನು ತಿಳಿದಿದೆ?

- Advertisement -
- Advertisement -

ಮುಂಬೈ: ವಿಧಾನಸಭೆಯ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನದ ಮೊದಲು ಮಹಾರಾಷ್ಟ್ರದಲ್ಲಿ ಮಹಾಯುತಿ ಸರಕಾರದ  ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭವು ಇಂದು ( ಭಾನುವಾರ) ಸಂಜೆ ನಾಗ್ಪುರದಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.

ನವೆಂಬರ್ 23 ರಂದು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅದ್ಭುತ ವಿಜಯವನ್ನು ದಾಖಲಿಸಿದ ಮಹಾಯುತಿ ಮೈತ್ರಿಕೂಟದ ಪಾಲುದಾರರಾದ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ನಡುವಿನ ವಾರಗಳ ತೀವ್ರ ಚರ್ಚೆಯ ನಂತರ ಈ ಘೋಷಣೆ ಹೊರಬಿದ್ದಿದೆ.

ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರದೊಳಗೆ ಸಚಿವ ಸ್ಥಾನಕ್ಕಾಗಿ ಪೈಪೋಟಿ ತೀವ್ರಗೊಂಡಿದ್ದು, ಶಿವಸೇನೆ ಮತ್ತು ಬಿಜೆಪಿಯ ಶಾಸಕರು ಹೊಸ ಸಂಪುಟ ಮತ್ತು ಸಚಿವ ಸಂಪುಟದಲ್ಲಿ ಸ್ಥಾನಗಳಿಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸರ್ಕಾರದಲ್ಲಿ ಮೊದಲ ಸಚಿವ ಸಂಪುಟದ ವಿಸ್ತರಣೆಯು ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಹಂಚಿಕೊಂಡು ಎರಡು ವಾರಗಳ ನಂತರ ನಡೆಯುತ್ತಿದೆ.

ವಿಸ್ತೃತ ಚರ್ಚೆಗಳು ಮತ್ತು ಹಿರಿಯ ನಾಯಕರ ನಡುವೆ ಹಲವಾರು ಸಭೆಗಳ ನಂತರ, ಪ್ರಮುಖ ಖಾತೆಗಳು ಮತ್ತು ಮೂರು ಸಮ್ಮಿಶ್ರ ಪಕ್ಷಗಳ ನಡುವೆ ಅಧಿಕಾರ ಹಂಚಿಕೆಯ ವ್ಯವಸ್ಥೆಗೆ ಸಂಬಂಧಿಸಿದಂತೆ ನಿರ್ಧಾರಕ್ಕೆ ಬರಲಾಗಿದೆ. ಹೊಸ ಸಚಿವರ ಸೇರ್ಪಡೆಗೆ ಹಾದಿಯನ್ನು ತೆರವುಗೊಳಿಸಲಾಗಿದೆ.

ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿ, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹೊಸ ಮುಖಗಳನ್ನು ಪರಿಚಯಿಸುವ ನಿರೀಕ್ಷೆಯಿದೆ. ಬಿಜೆಪಿ 20-21 ಸಚಿವ ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ, ನಂತರ ಶಿವಸೇನೆಗೆ 11-12 ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ 9-10 ಸಚಿವ ಸ್ಥಾನಗಳನ್ನು ನೀಡುವ ಸಾಧ್ಯತೆಯಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಆದರೆ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯಲ್ಲೇ ತೀವ್ರ ಪೈಪೋಟಿ ಏರ್ಪಟ್ಟಿದೆ. ಶುಕ್ರವಾರ ರಾತ್ರಿ, ಪ್ರಮುಖ ಶಾಸಕರಾದ ಸಂಜಯ್ ಶಿರ್ಸಾತ್, ಯೋಗೇಶ್ ಕದಂ, ವಿಜಯ್ ಶಿವತಾರೆ, ಭರತ್ ಗೋಗವಾಲೆ ಮತ್ತು ಬಾಲಾಜಿ ಕಿಣಿಕರ್ ಶಿಂಧೆ ಅವರನ್ನು ಭೇಟಿಯಾಗಿ ತಮ್ಮ ವಾದವನ್ನು ಮಂಡಿಸಿದರು. ಇಬ್ಬರು ಮಾಜಿ ಮಂತ್ರಿಗಳಾದ ದೀಪಕ್ ಕೇಸರ್ಕರ್ ಮತ್ತು ತಾನಾಜಿ ಸಾವಂತ್ ಅವರು ಐದು ಗಂಟೆಗಳ ಕಾಲ ಕಾಯುತ್ತಿದ್ದರೂ ಶಿಂಧೆ ಭೇಟಿ ಮಾಡಲು ಸಾಧ್ಯವಾಗಿಲ್ಲ.

ಕಳಂಕಿತ ಅಥವಾ ವಿವಾದಾತ್ಮಕ ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವುದಿಲ್ಲ ಎಂಬ ತನ್ನ ನಿಲುವಿನಲ್ಲಿ ಬಿಜೆಪಿ ದೃಢವಾಗಿದೆ ಮತ್ತು ಶಿವಸೇನೆಯಿಂದ ಕೇಸರ್ಕರ್, ಸಾವಂತ್, ಅಬ್ದುಲ್ ಸತ್ತಾರ್ ಮತ್ತು ಸಂಜಯ್ ರಾಥೋಡ್ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿದೆ. ಕೇಸರ್ಕರ್ ಮತ್ತು ಸಾವಂತ್ ಅವರನ್ನು ಹೊರತುಪಡಿಸುವುದರಿಂದ ರಾಜಕೀಯವಾಗಿ ಶಿಂಧೆ ಅವರಿಗೆ ಹಾನಿಯಾಗುವ ಸಾಧ್ಯತೆಯಿಲ್ಲದಿದ್ದರೂ, ವಿದರ್ಭದ ಕೆಲವು ಭಾಗಗಳಲ್ಲಿ ಗಮನಾರ್ಹ ಅಸ್ತಿತ್ವವನ್ನು ಹೊಂದಿರುವ ಬಂಜಾರ ಸಮುದಾಯದಿಂದ ಬಂದಿರುವ ಸಂಜಯ್ ರಾಥೋಡ್ ಅವರ ಸೇರ್ಪಡೆ ಶಿಂಧೆ ಅವರ ಸಾಮಾಜಿಕ-ರಾಜಕೀಯ ಲೆಕ್ಕಾಚಾರಗಳಿಗೆ ನಿರ್ಣಾಯಕವಾಗಿದೆ.

ಪುಣೆಯಲ್ಲಿ ಯುವತಿಯ ಆತ್ಮಹತ್ಯೆಗೆ ಸಂಬಂಧಿಸಿ ರಾಥೋಡ್  ಅವರ ಹೆಸರು ಕೇಳಿ ಬಂದಿರುವುದರಿಂದ  ಅವರನ್ನು ಸೇನೆಯ ಸಚಿವ ಸ್ಥಾನದ ಪಟ್ಟಿಯಿಂದ ಹೊರಗಿಡಬೇಕು ಎಂದು ಪಡ್ನವೀಸ್ ಸೂಚಿಸಿದ್ದಾರೆ ಎನ್ನಲಾಗಿದೆ.

ಅಬ್ದುಲ್ ಸತ್ತಾರ್ ವಿರುದ್ಧ ಸರ್ವಾಧಿಕಾರಿ ವರ್ತನೆಯ ದೂರುಗಳಿವೆ ಎಂದು ಮೂಲಗಳು ಸೂಚಿಸುತ್ತವೆ ಮತ್ತು ಆರೋಗ್ಯ ಸಚಿವರಾಗಿ ತಾನಾಜಿ ಸಾವಂತ್ ಅವರು ವಿವಿಧ ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಆಗಾಗ್ಗೆ ದುರ್ನಡತೆ ತೋರಿದ್ದರು ಎನ್ನಲಾಗಿದೆ.

30-32 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಶುಕ್ರವಾರ ಪಿಟಿಐಗೆ ತಿಳಿಸಿದ್ದಾರೆ. ಇದರಲ್ಲಿ 20 ಬಿಜೆಪಿ ನಾಯಕರು ಮತ್ತು ಉಳಿದವರು ಶಿವಸೇನೆಯವರು ಸೇರಿದ್ದಾರೆ ಎಂದು ವರದಿಗಳು ಹೇಳುತ್ತವೆ. ಮಹಾರಾಷ್ಟ್ರದ ಸಚಿವ ಸಂಪುಟವು ಮುಖ್ಯಮಂತ್ರಿ ಸೇರಿದಂತೆ ಗರಿಷ್ಠ 43 ಸದಸ್ಯರನ್ನು ಹೊಂದಬಹುದಾಗಿದೆ.

ನವೆಂಬರ್ 20ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿಯು ರಾಜ್ಯದ 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿತು. ಇದರಲ್ಲಿ ಬಿಜೆಪಿ 132 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಶಿಂಧೆ ಅವರ ಶಿವಸೇನೆ 57 ಮತ್ತು ಪವಾರ್ ಅವರ ಎನ್‌ಸಿಪಿ 41 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದವು.

ಸರ್ಕಾರ ರಚನೆಯು ಈಗಾಗಲೇ ಹಲವು ತಿರುವುಗಳನ್ನು ಕಂಡಿದೆ.  ಸರ್ಕಾರದ ಭಾಗವಾಗಲು ಇಚ್ಛಿಸದ ಮತ್ತು ಪಕ್ಷ ಸಂಘಟನೆಯತ್ತ ಗಮನ ಹರಿಸಲು ಉತ್ಸುಕರಾಗಿದ್ದ ಶಿಂಧೆ ಅವರನ್ನು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಮನವೊಲಿಸಲಾಗಿದೆ.

ಶಿವಸೇನೆಯು ಹಲವಾರು ಸಂದರ್ಭಗಳಲ್ಲಿ ಶಿಂಧೆಗೆ ಅವರ ಸ್ಥಾನಮಾನಕ್ಕೆ ತಕ್ಕ ಹುದ್ದೆಯಾದ ಗೃಹ ಖಾತೆಯನ್ನು ಕೇಳಿತ್ತು. ಇದಕ್ಕೆ ಬಿಜೆಪಿಯು ಒಪ್ಪಿಗೆ ನೀಡಲಿಲ್ಲ.

ಇದನ್ನೂ ಓದಿ…..ದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...