Homeಮುಖಪುಟ2005ರ ನವೆಂಬರ್‌ ಬಳಿಕ ಸೇವೆಗೆ ಸೇರಿದವರಿಗೂ ಒಪಿಎಸ್: ಮಹಾರಾಷ್ಟ್ರ ಸರ್ಕಾರ

2005ರ ನವೆಂಬರ್‌ ಬಳಿಕ ಸೇವೆಗೆ ಸೇರಿದವರಿಗೂ ಒಪಿಎಸ್: ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ನವೆಂಬರ್ 2005ರ ನಂತರ ಸೇವೆಗೆ ಸೇರ್ಪಡೆಗೊಂಡ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಆಯ್ದುಕೊಳ್ಳಲು ಅವಕಾಶ ನೀಡುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅನುಮೋದಿಸಿದೆ.

ಒಪಿಎಸ್ ಮರುಸ್ಥಾಪಿಸಲು ಒತ್ತಾಯಿಸಿ ಕಳೆದ ವರ್ಷ ಎರಡು ಬಾರಿ ನೌಕರರು ಮುಷ್ಕರ ನಡೆಸಿದ್ದರು. ಇದೀಗ ಸರ್ಕಾರ ಒಪಿಸ್ ಆಯ್ದುಕೊಳ್ಳಲು ಅವಕಾಶ ನೀಡಲು ಮುಂದಾಗಿರುವುದರಿಂದ ಸರಿ ಸುಮಾರು 26,000 ರಾಜ್ಯ ಸರ್ಕಾರಿ ಉದ್ಯೋಗಿಗಳಿಗೆ ಪ್ರಯೋಜನವಾಗಲಿದೆ.

“ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಪ್ರಸಾವನೆಯ ಪ್ರಕಾರ, ರಾಜ್ಯ ಸರ್ಕಾರಿ ನೌಕರರು ನವೆಂಬರ್ 2005ರ ನಂತರ ಸೇವೆಗಳಿಗೆ ಸೇರಿದ್ದರೆ, ಅಂದರೆ ನವೆಂಬರ್ 2005ರ ಮೊದಲು ಜಾಹೀರಾತು ಮಾಡಲಾದ ಹುದ್ದೆಗಳಿಗೆ ಒಪಿಎಸ್ ಆಯ್ಕೆಯನ್ನು ಪಡೆಯಲಿದ್ದಾರೆ. ಇದು ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿದೆ ಮತ್ತು ಕೇಂದ್ರ ಸರ್ಕಾರ ಇದರಲ್ಲಿ ಬದಲಾವಣೆಗಳನ್ನು ಮಾಡಿದೆ” ಎಂದು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ನಿತಿನ್ ಕರೀರ್ ತಿಳಿಸಿದ್ದಾರೆ.

ಒಪಿಎಸ್ ಆಯ್ಕೆ ಮಾಡಿಕೊಳ್ಳಲು ಆರು ತಿಂಗಳ ಸೀಮಿತ ಸಮಯ ನೀಡಲಾಗಿದೆ. ನಂತರ ಉದ್ಯೋಗಿಗಳು ಎನ್‌ಪಿಎಸ್‌ನಿಂದ ಒಪಿಎಸ್‌ ಅಥವಾ ಒಪಿಎಸ್‌ನಿಂದ ಎನ್‌ಪಿಎಸ್‌ಗೆ ಬದಲಾವಣೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಹೊರಡಿಸಿದ ಪ್ರಕಟನೆಯಲ್ಲಿ ಹೇಳಿದೆ.

ಒಪಿಎಸ್ ಆಯ್ದುಕೊಳ್ಳುವವರು, ಅದಕ್ಕಾಗಿ ಗೊತ್ತುಪಡಿಸಿದ ಪ್ರಾಧಿಕಾರವನ್ನು ಸಂಪರ್ಕಿಸಬೇಕು. ಪ್ರಾಧಿಕಾರ ಅನುಮೋದಿಸಿದರೆ ಉದ್ಯೋಗಿಗಳು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ನಿಂದ ಒಪಿಎಸ್‌ ಬದಲಾಗಳಿದ್ದಾರೆ. ಎನ್‌ಪಿಎಸ್‌ನಲ್ಲಿ ಉದ್ಯೋಗಿಗಳ ಕೊಡುಗೆಯನ್ನು ವ್ಯಕ್ತಿಯ ಸಾಮಾನ್ಯ ಭವಿಷ್ಯ ನಿಧಿಗೆ (ಜಿಪಿಎಫ್) ಜಮಾ ಮಾಡಲಾಗುತ್ತದೆ ಎಂದು ಸಿಎಂ ಕಚೇರಿ ತಿಳಿಸಿದೆ.

ಒಪಿಎಸ್ ಆಯ್ದುಕೊಳ್ಳಲು ಅವಕಾಶ ನೀಡುವ ನಿರ್ಧಾರದಿಂದ ನವೆಂಬರ್ 2005 ರ ನಂತರ ರಾಜ್ಯ ಸರ್ಕಾರದ ಹುದ್ದೆಗಳಿಗೆ ಆಯ್ಕೆಯಾದ ಸುಮಾರು 26,000 ನೌಕರರಿಗೆ ಪ್ರಯೋಜನವಾಗಲಿದೆ. ನವೆಂಬರ್ 2005ರ ಮೊದಲು ಸೇವೆಗೆ ಸೇರಿದ 9.5 ಲಕ್ಷ ರಾಜ್ಯ ಸರ್ಕಾರಿ ಉದ್ಯೋಗಿಗಳು ಈಗಾಗಲೇ ಒಪಿಎಸ್ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಶ್ವಾಸ್ ಕಾಟ್ಕರ್ ಹೇಳಿದ್ದಾರೆ.

ಮಹಾರಾಷ್ಟ್ರದ 1.6 ದಶ ಲಕ್ಷಕ್ಕೂ ಹೆಚ್ಚು ರಾಜ್ಯ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಪರಿಚಯಿಸಲು ಒತ್ತಾಯಿಸುತ್ತಿದ್ದಾರೆ. ಇದಕ್ಕಾಗಿ ಅವರು ಕಳೆದ ವರ್ಷ ಎರಡು ಬಾರಿ ಮುಷ್ಕರ ನಡೆಸಿದ್ದಾರೆ. ಒಪಿಎಸ್ ಮರುಸ್ಥಾಪನೆಯ ಕಾರ್ಯಸಾಧ್ಯತೆಯ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಸುಬೋಧ್ ಕುಮಾರ್ ನೇತೃತ್ವದ ಸಮಿತಿಯನ್ನು ರಚಿಸಿದ್ದು, ಅದು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಡಿಸೆಂಬರ್ 2023ರಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

1.6 ದಶ ಲಕ್ಷಕ್ಕಿಂತಲೂ ಹೆಚ್ಚು ಸರ್ಕಾರಿ ಉದ್ಯೋಗಿಗಳಲ್ಲಿ ಅರ್ಧದಷ್ಟು ಜನರು 2005ರ ನಂತರ ಸೇವೆಗೆ ಸೇರಿದ್ದಾರೆ ಮತ್ತು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಇದು ಒಪಿಎಸ್‌ನಷ್ಟು ಲಾಭದಾಯಕವಲ್ಲ. ಎನ್‌ಪಿಎಸ್ ಅಡಿಯಲ್ಲಿ, ರಾಜ್ಯ ಸರ್ಕಾರಿ ನೌಕರನು ತಮ್ಮ ಮೂಲ ವೇತನದ ಶೇ.10 ಮತ್ತು ತುಟ್ಟಿ ಭತ್ಯೆಯನ್ನು ರಾಜ್ಯವು ಹೊಂದಾಣಿಕೆಯ ಕೊಡುಗೆಯಾಗಿ ನೀಡಬೇಕಾಗುತ್ತದೆ. ಈ ಹಣವನ್ನು ನಂತರ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA)ಅನುಮೋದಿಸಿದ ಹಲವಾರು ಪಿಂಚಣಿ ನಿಧಿಗಳ ಪೈಕಿ ಒಂದರಲ್ಲಿ ಹೂಡಿಕೆ ಮಾಡಲಾಗುತ್ತದೆ ಮತ್ತು ಆದಾಯವು ಮಾರುಕಟ್ಟೆಗೆ ಸಂಬಂಧಿಸಿರುತ್ತದೆ.

ಒಪಿಎಸ್ ಅಡಿಯಲ್ಲಿ ನಿವೃತ್ತಿ ಬಳಿಕ ಸರ್ಕಾರಿ ನೌಕರರು ಅವರ ಕೊನೆಯ ಸಂಬಳದ ಶೇ. 50ರಷ್ಟು ಮಾಸಿಕ ಪಿಂಚಣಿ ಪಡೆಯಲಿದ್ದಾರೆ. ಇದಕ್ಕೆ ನೌಕರರ ಕೊಡುಗೆ (Employee Contribution)ಯ ಅಗತ್ಯವಿಲ್ಲ.

ನವೆಂಬರ್ 2005 ರಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಸುಮಾರು ₹1.10 ಲಕ್ಷ ಕೋಟಿಗಳಷ್ಟು ಸಾಲದ ಹಿನ್ನೆಲೆ ಅನಿಶ್ಚಿತ ಆರ್ಥಿಕ ಪರಿಸ್ಥಿತಿಯ ಕಾರಣ ಮುಂದಿಟ್ಟು ಒಪಿಎಸ್ ಸ್ಥಗಿತಗೊಳಿಸಲು ನಿರ್ಧರಿಸಿತ್ತು.

ಇದನ್ನೂ ಓದಿ : ಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...