Homeಮುಖಪುಟ2005ರ ನವೆಂಬರ್‌ ಬಳಿಕ ಸೇವೆಗೆ ಸೇರಿದವರಿಗೂ ಒಪಿಎಸ್: ಮಹಾರಾಷ್ಟ್ರ ಸರ್ಕಾರ

2005ರ ನವೆಂಬರ್‌ ಬಳಿಕ ಸೇವೆಗೆ ಸೇರಿದವರಿಗೂ ಒಪಿಎಸ್: ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ನವೆಂಬರ್ 2005ರ ನಂತರ ಸೇವೆಗೆ ಸೇರ್ಪಡೆಗೊಂಡ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಆಯ್ದುಕೊಳ್ಳಲು ಅವಕಾಶ ನೀಡುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅನುಮೋದಿಸಿದೆ.

ಒಪಿಎಸ್ ಮರುಸ್ಥಾಪಿಸಲು ಒತ್ತಾಯಿಸಿ ಕಳೆದ ವರ್ಷ ಎರಡು ಬಾರಿ ನೌಕರರು ಮುಷ್ಕರ ನಡೆಸಿದ್ದರು. ಇದೀಗ ಸರ್ಕಾರ ಒಪಿಸ್ ಆಯ್ದುಕೊಳ್ಳಲು ಅವಕಾಶ ನೀಡಲು ಮುಂದಾಗಿರುವುದರಿಂದ ಸರಿ ಸುಮಾರು 26,000 ರಾಜ್ಯ ಸರ್ಕಾರಿ ಉದ್ಯೋಗಿಗಳಿಗೆ ಪ್ರಯೋಜನವಾಗಲಿದೆ.

“ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಪ್ರಸಾವನೆಯ ಪ್ರಕಾರ, ರಾಜ್ಯ ಸರ್ಕಾರಿ ನೌಕರರು ನವೆಂಬರ್ 2005ರ ನಂತರ ಸೇವೆಗಳಿಗೆ ಸೇರಿದ್ದರೆ, ಅಂದರೆ ನವೆಂಬರ್ 2005ರ ಮೊದಲು ಜಾಹೀರಾತು ಮಾಡಲಾದ ಹುದ್ದೆಗಳಿಗೆ ಒಪಿಎಸ್ ಆಯ್ಕೆಯನ್ನು ಪಡೆಯಲಿದ್ದಾರೆ. ಇದು ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿದೆ ಮತ್ತು ಕೇಂದ್ರ ಸರ್ಕಾರ ಇದರಲ್ಲಿ ಬದಲಾವಣೆಗಳನ್ನು ಮಾಡಿದೆ” ಎಂದು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ನಿತಿನ್ ಕರೀರ್ ತಿಳಿಸಿದ್ದಾರೆ.

ಒಪಿಎಸ್ ಆಯ್ಕೆ ಮಾಡಿಕೊಳ್ಳಲು ಆರು ತಿಂಗಳ ಸೀಮಿತ ಸಮಯ ನೀಡಲಾಗಿದೆ. ನಂತರ ಉದ್ಯೋಗಿಗಳು ಎನ್‌ಪಿಎಸ್‌ನಿಂದ ಒಪಿಎಸ್‌ ಅಥವಾ ಒಪಿಎಸ್‌ನಿಂದ ಎನ್‌ಪಿಎಸ್‌ಗೆ ಬದಲಾವಣೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಹೊರಡಿಸಿದ ಪ್ರಕಟನೆಯಲ್ಲಿ ಹೇಳಿದೆ.

ಒಪಿಎಸ್ ಆಯ್ದುಕೊಳ್ಳುವವರು, ಅದಕ್ಕಾಗಿ ಗೊತ್ತುಪಡಿಸಿದ ಪ್ರಾಧಿಕಾರವನ್ನು ಸಂಪರ್ಕಿಸಬೇಕು. ಪ್ರಾಧಿಕಾರ ಅನುಮೋದಿಸಿದರೆ ಉದ್ಯೋಗಿಗಳು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ನಿಂದ ಒಪಿಎಸ್‌ ಬದಲಾಗಳಿದ್ದಾರೆ. ಎನ್‌ಪಿಎಸ್‌ನಲ್ಲಿ ಉದ್ಯೋಗಿಗಳ ಕೊಡುಗೆಯನ್ನು ವ್ಯಕ್ತಿಯ ಸಾಮಾನ್ಯ ಭವಿಷ್ಯ ನಿಧಿಗೆ (ಜಿಪಿಎಫ್) ಜಮಾ ಮಾಡಲಾಗುತ್ತದೆ ಎಂದು ಸಿಎಂ ಕಚೇರಿ ತಿಳಿಸಿದೆ.

ಒಪಿಎಸ್ ಆಯ್ದುಕೊಳ್ಳಲು ಅವಕಾಶ ನೀಡುವ ನಿರ್ಧಾರದಿಂದ ನವೆಂಬರ್ 2005 ರ ನಂತರ ರಾಜ್ಯ ಸರ್ಕಾರದ ಹುದ್ದೆಗಳಿಗೆ ಆಯ್ಕೆಯಾದ ಸುಮಾರು 26,000 ನೌಕರರಿಗೆ ಪ್ರಯೋಜನವಾಗಲಿದೆ. ನವೆಂಬರ್ 2005ರ ಮೊದಲು ಸೇವೆಗೆ ಸೇರಿದ 9.5 ಲಕ್ಷ ರಾಜ್ಯ ಸರ್ಕಾರಿ ಉದ್ಯೋಗಿಗಳು ಈಗಾಗಲೇ ಒಪಿಎಸ್ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಶ್ವಾಸ್ ಕಾಟ್ಕರ್ ಹೇಳಿದ್ದಾರೆ.

ಮಹಾರಾಷ್ಟ್ರದ 1.6 ದಶ ಲಕ್ಷಕ್ಕೂ ಹೆಚ್ಚು ರಾಜ್ಯ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಪರಿಚಯಿಸಲು ಒತ್ತಾಯಿಸುತ್ತಿದ್ದಾರೆ. ಇದಕ್ಕಾಗಿ ಅವರು ಕಳೆದ ವರ್ಷ ಎರಡು ಬಾರಿ ಮುಷ್ಕರ ನಡೆಸಿದ್ದಾರೆ. ಒಪಿಎಸ್ ಮರುಸ್ಥಾಪನೆಯ ಕಾರ್ಯಸಾಧ್ಯತೆಯ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಸುಬೋಧ್ ಕುಮಾರ್ ನೇತೃತ್ವದ ಸಮಿತಿಯನ್ನು ರಚಿಸಿದ್ದು, ಅದು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಡಿಸೆಂಬರ್ 2023ರಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

1.6 ದಶ ಲಕ್ಷಕ್ಕಿಂತಲೂ ಹೆಚ್ಚು ಸರ್ಕಾರಿ ಉದ್ಯೋಗಿಗಳಲ್ಲಿ ಅರ್ಧದಷ್ಟು ಜನರು 2005ರ ನಂತರ ಸೇವೆಗೆ ಸೇರಿದ್ದಾರೆ ಮತ್ತು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಇದು ಒಪಿಎಸ್‌ನಷ್ಟು ಲಾಭದಾಯಕವಲ್ಲ. ಎನ್‌ಪಿಎಸ್ ಅಡಿಯಲ್ಲಿ, ರಾಜ್ಯ ಸರ್ಕಾರಿ ನೌಕರನು ತಮ್ಮ ಮೂಲ ವೇತನದ ಶೇ.10 ಮತ್ತು ತುಟ್ಟಿ ಭತ್ಯೆಯನ್ನು ರಾಜ್ಯವು ಹೊಂದಾಣಿಕೆಯ ಕೊಡುಗೆಯಾಗಿ ನೀಡಬೇಕಾಗುತ್ತದೆ. ಈ ಹಣವನ್ನು ನಂತರ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA)ಅನುಮೋದಿಸಿದ ಹಲವಾರು ಪಿಂಚಣಿ ನಿಧಿಗಳ ಪೈಕಿ ಒಂದರಲ್ಲಿ ಹೂಡಿಕೆ ಮಾಡಲಾಗುತ್ತದೆ ಮತ್ತು ಆದಾಯವು ಮಾರುಕಟ್ಟೆಗೆ ಸಂಬಂಧಿಸಿರುತ್ತದೆ.

ಒಪಿಎಸ್ ಅಡಿಯಲ್ಲಿ ನಿವೃತ್ತಿ ಬಳಿಕ ಸರ್ಕಾರಿ ನೌಕರರು ಅವರ ಕೊನೆಯ ಸಂಬಳದ ಶೇ. 50ರಷ್ಟು ಮಾಸಿಕ ಪಿಂಚಣಿ ಪಡೆಯಲಿದ್ದಾರೆ. ಇದಕ್ಕೆ ನೌಕರರ ಕೊಡುಗೆ (Employee Contribution)ಯ ಅಗತ್ಯವಿಲ್ಲ.

ನವೆಂಬರ್ 2005 ರಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಸುಮಾರು ₹1.10 ಲಕ್ಷ ಕೋಟಿಗಳಷ್ಟು ಸಾಲದ ಹಿನ್ನೆಲೆ ಅನಿಶ್ಚಿತ ಆರ್ಥಿಕ ಪರಿಸ್ಥಿತಿಯ ಕಾರಣ ಮುಂದಿಟ್ಟು ಒಪಿಎಸ್ ಸ್ಥಗಿತಗೊಳಿಸಲು ನಿರ್ಧರಿಸಿತ್ತು.

ಇದನ್ನೂ ಓದಿ : ಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...