Homeಮುಖಪುಟ2005ರ ನವೆಂಬರ್‌ ಬಳಿಕ ಸೇವೆಗೆ ಸೇರಿದವರಿಗೂ ಒಪಿಎಸ್: ಮಹಾರಾಷ್ಟ್ರ ಸರ್ಕಾರ

2005ರ ನವೆಂಬರ್‌ ಬಳಿಕ ಸೇವೆಗೆ ಸೇರಿದವರಿಗೂ ಒಪಿಎಸ್: ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ನವೆಂಬರ್ 2005ರ ನಂತರ ಸೇವೆಗೆ ಸೇರ್ಪಡೆಗೊಂಡ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಆಯ್ದುಕೊಳ್ಳಲು ಅವಕಾಶ ನೀಡುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅನುಮೋದಿಸಿದೆ.

ಒಪಿಎಸ್ ಮರುಸ್ಥಾಪಿಸಲು ಒತ್ತಾಯಿಸಿ ಕಳೆದ ವರ್ಷ ಎರಡು ಬಾರಿ ನೌಕರರು ಮುಷ್ಕರ ನಡೆಸಿದ್ದರು. ಇದೀಗ ಸರ್ಕಾರ ಒಪಿಸ್ ಆಯ್ದುಕೊಳ್ಳಲು ಅವಕಾಶ ನೀಡಲು ಮುಂದಾಗಿರುವುದರಿಂದ ಸರಿ ಸುಮಾರು 26,000 ರಾಜ್ಯ ಸರ್ಕಾರಿ ಉದ್ಯೋಗಿಗಳಿಗೆ ಪ್ರಯೋಜನವಾಗಲಿದೆ.

“ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಪ್ರಸಾವನೆಯ ಪ್ರಕಾರ, ರಾಜ್ಯ ಸರ್ಕಾರಿ ನೌಕರರು ನವೆಂಬರ್ 2005ರ ನಂತರ ಸೇವೆಗಳಿಗೆ ಸೇರಿದ್ದರೆ, ಅಂದರೆ ನವೆಂಬರ್ 2005ರ ಮೊದಲು ಜಾಹೀರಾತು ಮಾಡಲಾದ ಹುದ್ದೆಗಳಿಗೆ ಒಪಿಎಸ್ ಆಯ್ಕೆಯನ್ನು ಪಡೆಯಲಿದ್ದಾರೆ. ಇದು ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿದೆ ಮತ್ತು ಕೇಂದ್ರ ಸರ್ಕಾರ ಇದರಲ್ಲಿ ಬದಲಾವಣೆಗಳನ್ನು ಮಾಡಿದೆ” ಎಂದು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ನಿತಿನ್ ಕರೀರ್ ತಿಳಿಸಿದ್ದಾರೆ.

ಒಪಿಎಸ್ ಆಯ್ಕೆ ಮಾಡಿಕೊಳ್ಳಲು ಆರು ತಿಂಗಳ ಸೀಮಿತ ಸಮಯ ನೀಡಲಾಗಿದೆ. ನಂತರ ಉದ್ಯೋಗಿಗಳು ಎನ್‌ಪಿಎಸ್‌ನಿಂದ ಒಪಿಎಸ್‌ ಅಥವಾ ಒಪಿಎಸ್‌ನಿಂದ ಎನ್‌ಪಿಎಸ್‌ಗೆ ಬದಲಾವಣೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಹೊರಡಿಸಿದ ಪ್ರಕಟನೆಯಲ್ಲಿ ಹೇಳಿದೆ.

ಒಪಿಎಸ್ ಆಯ್ದುಕೊಳ್ಳುವವರು, ಅದಕ್ಕಾಗಿ ಗೊತ್ತುಪಡಿಸಿದ ಪ್ರಾಧಿಕಾರವನ್ನು ಸಂಪರ್ಕಿಸಬೇಕು. ಪ್ರಾಧಿಕಾರ ಅನುಮೋದಿಸಿದರೆ ಉದ್ಯೋಗಿಗಳು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ನಿಂದ ಒಪಿಎಸ್‌ ಬದಲಾಗಳಿದ್ದಾರೆ. ಎನ್‌ಪಿಎಸ್‌ನಲ್ಲಿ ಉದ್ಯೋಗಿಗಳ ಕೊಡುಗೆಯನ್ನು ವ್ಯಕ್ತಿಯ ಸಾಮಾನ್ಯ ಭವಿಷ್ಯ ನಿಧಿಗೆ (ಜಿಪಿಎಫ್) ಜಮಾ ಮಾಡಲಾಗುತ್ತದೆ ಎಂದು ಸಿಎಂ ಕಚೇರಿ ತಿಳಿಸಿದೆ.

ಒಪಿಎಸ್ ಆಯ್ದುಕೊಳ್ಳಲು ಅವಕಾಶ ನೀಡುವ ನಿರ್ಧಾರದಿಂದ ನವೆಂಬರ್ 2005 ರ ನಂತರ ರಾಜ್ಯ ಸರ್ಕಾರದ ಹುದ್ದೆಗಳಿಗೆ ಆಯ್ಕೆಯಾದ ಸುಮಾರು 26,000 ನೌಕರರಿಗೆ ಪ್ರಯೋಜನವಾಗಲಿದೆ. ನವೆಂಬರ್ 2005ರ ಮೊದಲು ಸೇವೆಗೆ ಸೇರಿದ 9.5 ಲಕ್ಷ ರಾಜ್ಯ ಸರ್ಕಾರಿ ಉದ್ಯೋಗಿಗಳು ಈಗಾಗಲೇ ಒಪಿಎಸ್ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಶ್ವಾಸ್ ಕಾಟ್ಕರ್ ಹೇಳಿದ್ದಾರೆ.

ಮಹಾರಾಷ್ಟ್ರದ 1.6 ದಶ ಲಕ್ಷಕ್ಕೂ ಹೆಚ್ಚು ರಾಜ್ಯ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಪರಿಚಯಿಸಲು ಒತ್ತಾಯಿಸುತ್ತಿದ್ದಾರೆ. ಇದಕ್ಕಾಗಿ ಅವರು ಕಳೆದ ವರ್ಷ ಎರಡು ಬಾರಿ ಮುಷ್ಕರ ನಡೆಸಿದ್ದಾರೆ. ಒಪಿಎಸ್ ಮರುಸ್ಥಾಪನೆಯ ಕಾರ್ಯಸಾಧ್ಯತೆಯ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಸುಬೋಧ್ ಕುಮಾರ್ ನೇತೃತ್ವದ ಸಮಿತಿಯನ್ನು ರಚಿಸಿದ್ದು, ಅದು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಡಿಸೆಂಬರ್ 2023ರಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

1.6 ದಶ ಲಕ್ಷಕ್ಕಿಂತಲೂ ಹೆಚ್ಚು ಸರ್ಕಾರಿ ಉದ್ಯೋಗಿಗಳಲ್ಲಿ ಅರ್ಧದಷ್ಟು ಜನರು 2005ರ ನಂತರ ಸೇವೆಗೆ ಸೇರಿದ್ದಾರೆ ಮತ್ತು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಇದು ಒಪಿಎಸ್‌ನಷ್ಟು ಲಾಭದಾಯಕವಲ್ಲ. ಎನ್‌ಪಿಎಸ್ ಅಡಿಯಲ್ಲಿ, ರಾಜ್ಯ ಸರ್ಕಾರಿ ನೌಕರನು ತಮ್ಮ ಮೂಲ ವೇತನದ ಶೇ.10 ಮತ್ತು ತುಟ್ಟಿ ಭತ್ಯೆಯನ್ನು ರಾಜ್ಯವು ಹೊಂದಾಣಿಕೆಯ ಕೊಡುಗೆಯಾಗಿ ನೀಡಬೇಕಾಗುತ್ತದೆ. ಈ ಹಣವನ್ನು ನಂತರ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA)ಅನುಮೋದಿಸಿದ ಹಲವಾರು ಪಿಂಚಣಿ ನಿಧಿಗಳ ಪೈಕಿ ಒಂದರಲ್ಲಿ ಹೂಡಿಕೆ ಮಾಡಲಾಗುತ್ತದೆ ಮತ್ತು ಆದಾಯವು ಮಾರುಕಟ್ಟೆಗೆ ಸಂಬಂಧಿಸಿರುತ್ತದೆ.

ಒಪಿಎಸ್ ಅಡಿಯಲ್ಲಿ ನಿವೃತ್ತಿ ಬಳಿಕ ಸರ್ಕಾರಿ ನೌಕರರು ಅವರ ಕೊನೆಯ ಸಂಬಳದ ಶೇ. 50ರಷ್ಟು ಮಾಸಿಕ ಪಿಂಚಣಿ ಪಡೆಯಲಿದ್ದಾರೆ. ಇದಕ್ಕೆ ನೌಕರರ ಕೊಡುಗೆ (Employee Contribution)ಯ ಅಗತ್ಯವಿಲ್ಲ.

ನವೆಂಬರ್ 2005 ರಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಸುಮಾರು ₹1.10 ಲಕ್ಷ ಕೋಟಿಗಳಷ್ಟು ಸಾಲದ ಹಿನ್ನೆಲೆ ಅನಿಶ್ಚಿತ ಆರ್ಥಿಕ ಪರಿಸ್ಥಿತಿಯ ಕಾರಣ ಮುಂದಿಟ್ಟು ಒಪಿಎಸ್ ಸ್ಥಗಿತಗೊಳಿಸಲು ನಿರ್ಧರಿಸಿತ್ತು.

ಇದನ್ನೂ ಓದಿ : ಬೆಂಗಳೂರು: ಖಾಯಂ ನೇಮಕಾತಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...