Homeಮುಖಪುಟಸೋಮವಾರ ಬಹುಮತ ಯಾಚಿಸಲಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ: ಉದ್ಧವ್, ಆದಿತ್ಯ ಠಾಕ್ರೆ ಉಚ್ಛಾಟನೆ?

ಸೋಮವಾರ ಬಹುಮತ ಯಾಚಿಸಲಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ: ಉದ್ಧವ್, ಆದಿತ್ಯ ಠಾಕ್ರೆ ಉಚ್ಛಾಟನೆ?

- Advertisement -
- Advertisement -

ಮಹಾರಾಷ್ಟ್ರ ಶಿವಸೇನೆಯ ಮುಖಂಡ ಏಕನಾಥ್ ಶಿಂಧೆ 40 ಶಿವಸೇನಾ ಪಕ್ಷದ ಶಾಸಕರ ಬೆಂಬಲದೊಂದಿಗೆ ಬಂಡಾಯವೆದ್ದು, ಬಿಜೆಪಿ ಬೆಂಬಲದೊಂದಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಸೋಮವಾರ ಬಹುಮತ ಸಾಬೀತುಪಡಿಸಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮಾಜಿ ಸಿಎಂ ಉದ್ಧವ್ ಠಾಕ್ರೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ, ಸಭೆಗೆ ಹಾಜರಾಗದ ಆರೋಪದ ಮೇಲೆ ಸಿಎಂ ಶಿಂಧೆ ಸೇರಿದಂತೆ 15 ಜನ ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಿದೆ. ಅದರ ಸಿಂಧುತ್ವವನ್ನು ಪ್ರಶ್ನಿಸಿ ಸಿಎಂ ಶಿಂಧೆ ಸಹ ಅರ್ಜಿ ಸಲ್ಲಿಸಿದ್ದಾರೆ.

55 ಶಿವಸೇನೆ ಶಾಸಕರ ಪೈಕಿ 39 ಜನ ತನ್ನ ಜೊತೆಗಿದ್ದಾರೆ ಎಂದು ವಾದಿಸುತ್ತಿರುವ ಸಿಎಂ ಶಿಂಧೆ ತನ್ನದೇ ಅಧಿಕೃತ ಶಿವಸೇನೆ ಎಂದಿದ್ದಾರೆ. ಅವರು ತಮ್ಮೊಡನೆ 37ಕ್ಕಿಂತ ಹೆಚ್ಚು ಶಿವಸೇನೆ ಶಾಸಕರನ್ನು (ಮೂರನೇ ಎರಡು ಬಹುಮತ) ಹೊಂದಿದ್ದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಿಂದ ಬಚಾವ್ ಆಗಬಹುದು. ಹಾಗಾಗಿ ಮಾಜಿ ಸಿಎಂ ಉದ್ಧವ್ ಠಾಕ್ರೆಯ ನಿರ್ದೇಶನಗಳನ್ನು ಪಾಲಿಸುವ ಅಗತ್ಯವಿಲ್ಲ ಎಂದಿದ್ದಾರೆ. ಅಲ್ಲದೆ ಅವರು ಶಿವಸೇನೆಯ ಅಧಿಕೃತ ಚಿಹ್ನೆ ಪಡೆಯಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಈ ರೀತಿಯ ಪ್ರಕರಣಗಳು ಎದುರಾದಾಗ ಮೂರನೇ ಎರಡು ಬಹುಮತ ಹೊಂದಿದವರಿಗೆ ಪಕ್ಷದ ಚಿಹ್ನೆ ನೀಡಿದ ಉದಾಹರಣೆಗಳಿವೆ.

ಸೋಮವಾರದ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸಿಎಂ ಶಿಂಧೆ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಸೇರಿದಂತೆ ಅವರ ಜೊತೆಗಿರುವ 15 ಶಾಸಕರಿಗೆ ತನ್ನ ಪರ ಮತ ಚಲಾಯಿಸುವಂತೆ ವಿಪ್ ಜಾರಿಗೊಳಿಸಲಿದ್ದು, ವಿಪ್ ಉಲ್ಲಂಘಿಸಿದರೆ ಅವರನ್ನು ಉಚ್ಛಾಟಿಸುವ ಸಾಧ್ಯತೆಯಿದೆ. ಅಂತ ಸಂದರ್ಭದಲ್ಲಿ ಅವರ ತಂದೆ ಬಾಳಾ ಸಾಹೇಬ್ ಠಾಕ್ರೆ ಸ್ಥಾಪಿಸಿದ್ದ ಶಿವಸೇನೆಯನ್ನು ಅವರು ಕಳೆದುಕೊಳ್ಳಲಿದ್ದಾರೆ.

ಒಂದು ವೇಳೆ ಸುಪ್ರೀಂ ಕೋರ್ಟ್ ಮಾಜಿ ಸಿಎಂ ಉದ್ಧವ್ ಠಾಕ್ರೆಯವರ ಮನವಿ ಪುರಸ್ಕರಿಸಿ 15 ಬಂಡಾಯ ಶಾಸಕರನ್ನು ಅನರ್ಹಗೊಳಿಸಿದರೆ ಮಾತ್ರ ಶಿವಸೇನೆ ಉದ್ಧವ್ ಠಾಕ್ರೆ ಕೈಯಲ್ಲಿ ಉಳಿಯಲಿದೆ. ಆದರೆ ಆ ಸಾಧ್ಯತೆ ಕಡಿಮೆಯಿದೆ.

ಮಹಾರಾಷ್ಟ್ರ ವಿಧಾನಸಭೆಯು 288 ಸದಸ್ಯರನ್ನು ಹೊಂದಿದೆ. ಒಬ್ಬ ಸದಸ್ಯ ಸಾವನಪ್ಪಿದ್ದು, ಇಬ್ಬರು ಜೈಲಿನಲ್ಲಿದ್ದಾರೆ. ಹಾಗಾಗಿ ಸದಸ್ಯಬಲ 285ಕ್ಕೆ ಕುಸಿದಿದೆ. ಅಲ್ಲಿಗೆ ಯಾವುದೇ ಸರ್ಕಾರಕ್ಕೆ ಬಹುಮತ ತೋರಿಸಲು 143 ಸದಸ್ಯರ ಬೆಂಬಲ ಬೇಕಿದೆ. ಸದ್ಯ ಏಕನಾಥ್ ಶಿಂಧೆ ತನಗೆ 175ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ; ಫಡ್ನವೀಸ್‌ಗೆ ದಕ್ಕದ ಸಿಎಂ ಪಟ್ಟ: ಬಿಜೆಪಿ ಹೈಕಮಾಂಡ್ ಎದುರು ಮಂಡಿಯೂರಿದ್ದೇಕೆ?

ಇತ್ತೀಚಿಗೆ ಬಿಹಾರದಲ್ಲಿ ಲೋಕಜನಶಕ್ತಿ ಪಕ್ಷದ ಐವರು ಸಂಸದರಲ್ಲಿ ನಾಲ್ವರು ಸಾಮೂಹಿಕವಾಗಿ ಬಿಜೆಪಿ ಸೇರಿದರು. ಅದನ್ನು ಚಿರಾಗ್ ಪಾಸ್ವಾನ್ ಪ್ರಶ್ನಿಸಿದ್ದರು. ಆದರೆ ಪಕ್ಷಾಂತಗೊಂಡವರು ಮೂರನೇ ಎರಡು ಬಹುಮತ ಹೊಂದಿದ್ದ ಕಾರಣ ಇಡೀ ಪಕ್ಷವೇ ಅವರದ್ದಾಗಿ ಅವರು ಬಿಜೆಪಿಯೊಡನೆ ವಿಲೀನಗೊಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...