Homeಮುಖಪುಟಸೋಮವಾರ ಬಹುಮತ ಯಾಚಿಸಲಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ: ಉದ್ಧವ್, ಆದಿತ್ಯ ಠಾಕ್ರೆ ಉಚ್ಛಾಟನೆ?

ಸೋಮವಾರ ಬಹುಮತ ಯಾಚಿಸಲಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ: ಉದ್ಧವ್, ಆದಿತ್ಯ ಠಾಕ್ರೆ ಉಚ್ಛಾಟನೆ?

- Advertisement -
- Advertisement -

ಮಹಾರಾಷ್ಟ್ರ ಶಿವಸೇನೆಯ ಮುಖಂಡ ಏಕನಾಥ್ ಶಿಂಧೆ 40 ಶಿವಸೇನಾ ಪಕ್ಷದ ಶಾಸಕರ ಬೆಂಬಲದೊಂದಿಗೆ ಬಂಡಾಯವೆದ್ದು, ಬಿಜೆಪಿ ಬೆಂಬಲದೊಂದಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಸೋಮವಾರ ಬಹುಮತ ಸಾಬೀತುಪಡಿಸಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮಾಜಿ ಸಿಎಂ ಉದ್ಧವ್ ಠಾಕ್ರೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ, ಸಭೆಗೆ ಹಾಜರಾಗದ ಆರೋಪದ ಮೇಲೆ ಸಿಎಂ ಶಿಂಧೆ ಸೇರಿದಂತೆ 15 ಜನ ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಿದೆ. ಅದರ ಸಿಂಧುತ್ವವನ್ನು ಪ್ರಶ್ನಿಸಿ ಸಿಎಂ ಶಿಂಧೆ ಸಹ ಅರ್ಜಿ ಸಲ್ಲಿಸಿದ್ದಾರೆ.

55 ಶಿವಸೇನೆ ಶಾಸಕರ ಪೈಕಿ 39 ಜನ ತನ್ನ ಜೊತೆಗಿದ್ದಾರೆ ಎಂದು ವಾದಿಸುತ್ತಿರುವ ಸಿಎಂ ಶಿಂಧೆ ತನ್ನದೇ ಅಧಿಕೃತ ಶಿವಸೇನೆ ಎಂದಿದ್ದಾರೆ. ಅವರು ತಮ್ಮೊಡನೆ 37ಕ್ಕಿಂತ ಹೆಚ್ಚು ಶಿವಸೇನೆ ಶಾಸಕರನ್ನು (ಮೂರನೇ ಎರಡು ಬಹುಮತ) ಹೊಂದಿದ್ದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಿಂದ ಬಚಾವ್ ಆಗಬಹುದು. ಹಾಗಾಗಿ ಮಾಜಿ ಸಿಎಂ ಉದ್ಧವ್ ಠಾಕ್ರೆಯ ನಿರ್ದೇಶನಗಳನ್ನು ಪಾಲಿಸುವ ಅಗತ್ಯವಿಲ್ಲ ಎಂದಿದ್ದಾರೆ. ಅಲ್ಲದೆ ಅವರು ಶಿವಸೇನೆಯ ಅಧಿಕೃತ ಚಿಹ್ನೆ ಪಡೆಯಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಈ ರೀತಿಯ ಪ್ರಕರಣಗಳು ಎದುರಾದಾಗ ಮೂರನೇ ಎರಡು ಬಹುಮತ ಹೊಂದಿದವರಿಗೆ ಪಕ್ಷದ ಚಿಹ್ನೆ ನೀಡಿದ ಉದಾಹರಣೆಗಳಿವೆ.

ಸೋಮವಾರದ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸಿಎಂ ಶಿಂಧೆ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಸೇರಿದಂತೆ ಅವರ ಜೊತೆಗಿರುವ 15 ಶಾಸಕರಿಗೆ ತನ್ನ ಪರ ಮತ ಚಲಾಯಿಸುವಂತೆ ವಿಪ್ ಜಾರಿಗೊಳಿಸಲಿದ್ದು, ವಿಪ್ ಉಲ್ಲಂಘಿಸಿದರೆ ಅವರನ್ನು ಉಚ್ಛಾಟಿಸುವ ಸಾಧ್ಯತೆಯಿದೆ. ಅಂತ ಸಂದರ್ಭದಲ್ಲಿ ಅವರ ತಂದೆ ಬಾಳಾ ಸಾಹೇಬ್ ಠಾಕ್ರೆ ಸ್ಥಾಪಿಸಿದ್ದ ಶಿವಸೇನೆಯನ್ನು ಅವರು ಕಳೆದುಕೊಳ್ಳಲಿದ್ದಾರೆ.

ಒಂದು ವೇಳೆ ಸುಪ್ರೀಂ ಕೋರ್ಟ್ ಮಾಜಿ ಸಿಎಂ ಉದ್ಧವ್ ಠಾಕ್ರೆಯವರ ಮನವಿ ಪುರಸ್ಕರಿಸಿ 15 ಬಂಡಾಯ ಶಾಸಕರನ್ನು ಅನರ್ಹಗೊಳಿಸಿದರೆ ಮಾತ್ರ ಶಿವಸೇನೆ ಉದ್ಧವ್ ಠಾಕ್ರೆ ಕೈಯಲ್ಲಿ ಉಳಿಯಲಿದೆ. ಆದರೆ ಆ ಸಾಧ್ಯತೆ ಕಡಿಮೆಯಿದೆ.

ಮಹಾರಾಷ್ಟ್ರ ವಿಧಾನಸಭೆಯು 288 ಸದಸ್ಯರನ್ನು ಹೊಂದಿದೆ. ಒಬ್ಬ ಸದಸ್ಯ ಸಾವನಪ್ಪಿದ್ದು, ಇಬ್ಬರು ಜೈಲಿನಲ್ಲಿದ್ದಾರೆ. ಹಾಗಾಗಿ ಸದಸ್ಯಬಲ 285ಕ್ಕೆ ಕುಸಿದಿದೆ. ಅಲ್ಲಿಗೆ ಯಾವುದೇ ಸರ್ಕಾರಕ್ಕೆ ಬಹುಮತ ತೋರಿಸಲು 143 ಸದಸ್ಯರ ಬೆಂಬಲ ಬೇಕಿದೆ. ಸದ್ಯ ಏಕನಾಥ್ ಶಿಂಧೆ ತನಗೆ 175ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ; ಫಡ್ನವೀಸ್‌ಗೆ ದಕ್ಕದ ಸಿಎಂ ಪಟ್ಟ: ಬಿಜೆಪಿ ಹೈಕಮಾಂಡ್ ಎದುರು ಮಂಡಿಯೂರಿದ್ದೇಕೆ?

ಇತ್ತೀಚಿಗೆ ಬಿಹಾರದಲ್ಲಿ ಲೋಕಜನಶಕ್ತಿ ಪಕ್ಷದ ಐವರು ಸಂಸದರಲ್ಲಿ ನಾಲ್ವರು ಸಾಮೂಹಿಕವಾಗಿ ಬಿಜೆಪಿ ಸೇರಿದರು. ಅದನ್ನು ಚಿರಾಗ್ ಪಾಸ್ವಾನ್ ಪ್ರಶ್ನಿಸಿದ್ದರು. ಆದರೆ ಪಕ್ಷಾಂತಗೊಂಡವರು ಮೂರನೇ ಎರಡು ಬಹುಮತ ಹೊಂದಿದ್ದ ಕಾರಣ ಇಡೀ ಪಕ್ಷವೇ ಅವರದ್ದಾಗಿ ಅವರು ಬಿಜೆಪಿಯೊಡನೆ ವಿಲೀನಗೊಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...