Homeಮುಖಪುಟಬೊಮ್ಮಾಯಿಯವರನ್ನು ಪ್ರಶ್ನಿಸಲು ಮಹಾರಾಷ್ಟ್ರ ಸಿಎಂಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ

ಬೊಮ್ಮಾಯಿಯವರನ್ನು ಪ್ರಶ್ನಿಸಲು ಮಹಾರಾಷ್ಟ್ರ ಸಿಎಂಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ

- Advertisement -
- Advertisement -

ಉಭಯ ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೀಡಿರುವ ಹೇಳಿಕೆಯನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಕಟುವಾಗಿ ಟೀಕಿಸಿದ್ದಾರೆ.

“ಕರ್ನಾಟಕ ಮುಖ್ಯಮಂತ್ರಿಗಳು ಗಡಿ ಸಮಸ್ಯೆಗಳ ಬಗ್ಗೆ ತಮ್ಮ ಹೇಳಿಕೆಯನ್ನು ನೀಡುತ್ತಿದ್ದಾರೆ. ಮಹಾರಾಷ್ಟ್ರದ 40 ಹಳ್ಳಿಗಳ ಮೇಲೆ ಏಕಾಏಕಿ ಹಕ್ಕು ಚಲಾಯಿಸಿದ್ದಾರೆ” ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಡಿ ವಿವಾದಕ್ಕೆ ಸಂಬಂಧಿಸಿ ರಾಜಕೀಯ ತಿಕ್ಕಾಟ ಹೆಚ್ಚುತ್ತಿರುವಂತೆಯೇ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ವಿರುದ್ಧ ಶಿವಸೇನಾ (ಉದ್ಧವ್‌ ಬಾಳಾ ಠಾಕ್ರೆ ಬಣ) ಮುಖ್ಯಸ್ಥ ಉದ್ಧವ್‌ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.

“ರಾಜ್ಯದ ಕೆಲ ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿದ್ದವು ಎಂದು ಹೇಳಿರುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾತನಾಡಲು ಮುಖ್ಯಮಂತ್ರಿ ಏಕನಾಥ ಶಿಂದೆಗೆ ಧೈರ್ಯ ಇಲ್ಲ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ಮಹಾರಾಷ್ಟ್ರದ ಕೆಲ ಗ್ರಾಮಗಳು ರಾಜ್ಯಕ್ಕೆ ಸೇರಬೇಕು ಎಂಬುದಾಗಿ ಕರ್ನಾಟಕ ಮುಖ್ಯಮಂತ್ರಿ ಸುಲಭವಾಗಿ ಹೇಳಿಕೆ ನೀಡುತ್ತಿರುವುದರರಿಂದಲೇ ನಾವು ಅವರ ವಿರುದ್ಧ ಧ್ವನಿ ಎತ್ತಲು ಧೈರ್ಯ ಕಳೆದುಕೊಂಡಿದ್ದೇವೆಯೇ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದಾರೆ.

“ಈ ವಿಷಯಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿಗೆ ದೆಹಲಿ ನಾಯಕರ ಆಶೀರ್ವಾದ ಇದೆಯೇ? ಕೇಂದ್ರ ಸರ್ಕಾರಕ್ಕೂ ಇದೇ ಬೇಕಾಗಿದೆಯೇ?” ಎಂದು ಕೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್‌ ರಾವುತ್‌, “ಛತ್ರಪತಿ ಶಿವಾಜಿ ಮಹಾರಾಜ್‌ಗೆ ರಾಜ್ಯಪಾಲ ಭಗತ್‌ಸಿಂಗ್‌ ಕೋಶ್ಯಾರಿ ಅವರು ಅವಮಾನಿಸಿದ ವಿಷಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದವನ್ನು ಮತ್ತೆ ಮುನ್ನೆಲೆ ತರಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಂದು ವೇಳೆ ಗುಜರಾತಿಗಳು ಹಾಗೂ ಮಾರವಾಡಿಗಳು ನಗರವನ್ನು ತೊರೆದರೆ ಮುಂಬೈ ಈ ದೇಶದ ಆರ್ಥಿಕ ರಾಜಧಾನಿ ಆಗಿ ಉಳಿಯುವುದಿಲ್ಲ ಎಂದು ಹೇಳುವ ಮೂಲಕ ಈ ಹಿಂದೆಯೂ ರಾಜ್ಯಪಾಲ ಕೋಶ್ಯಾರಿ ಅವರು ಮರಾಠಿ ಭಾಷಿಕರನ್ನು ಅವಮಾನಿಸಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ನೀಡಿರುವ ಹೇಳಿಕೆ ಕುರಿತು ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಗುರುವಾರ ಪ್ರತಿಕ್ರಿಯಿಸಿದ್ದಾರೆ. “ನಮಗೆ ಕಲಿಸಬೇಡಿ” ಎಂದು ಉದ್ಧವ್ ಠಾಕ್ರೆ ಅವರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಗ್ರಾಮಸ್ಥರು

“ಬಾಳಾಸಾಹೇಬರ ಹಿಂದುತ್ವದ ತತ್ವವನ್ನು ಮುರಿದವರಿಗೆ ನಮ್ಮನ್ನು ಟೀಕಿಸುವ ಹಕ್ಕು ಇಲ್ಲ, ಛತ್ರಪತಿ ಶಿವಾಜಿ ಮಹಾರಾಜರ ಹೆಸರನ್ನು ತೆಗೆದುಕೊಳ್ಳುವ ಹಕ್ಕು ಇಲ್ಲ. ಅವರನ್ನು ಯಾರೊಂದಿಗೂ ಹೋಲಿಸಲಾಗುವುದಿಲ್ಲ. ಉದ್ಧವ್ ಠಾಕ್ರೆ ನಮಗೆ ಪಾಠ ಮಾಡಬಾರದು” ಎಂದು ಶಿಂಧೆ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

“ಗವರ್ನರ್ ರೂಪದಲ್ಲಿ ಅವರು ಕಳುಹಿಸಿರುವ ಅಮೆಜಾನ್ ಪಾರ್ಸೆಲ್ ಅನ್ನು ಹಿಂಪಡೆಯಲು ನಾನು ಕೇಂದ್ರ ಸರ್ಕಾರವನ್ನು ವಿನಂತಿಸುತ್ತೇನೆ” ಎಂದು ಠಾಕ್ರೆ ಹೇಳಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳುಹಿಸಲಾದ ಸ್ಯಾಂಪಲ್‌ಗಳನ್ನು ಹಿಂಪಡೆಯಲು ಮತ್ತು ವೃದ್ಧಾಶ್ರಮಕ್ಕೆ ಕಳುಹಿಸಲು ನಾವು ಕೇಂದ್ರವನ್ನು ವಿನಂತಿಸುತ್ತೇವೆ. ಅವರ ಹೇಳಿಕೆಯ ವಿರುದ್ಧ ಪ್ರತಿಭಟಿಸಲು ನಾವು ಎಲ್ಲಾ ಮಹಾರಾಷ್ಟ್ರ ಪ್ರೇಮಿಗಳನ್ನು ಕೋರುತ್ತೇವೆ. ಒಗ್ಗೂಡಿ ಮತ್ತು ಪಕ್ಷ ರಾಜಕೀಯದಿಂದ ಮೇಲಕ್ಕೆ ಬನ್ನಿ. ಮಹಾರಾಷ್ಟ್ರದ ವಿರುದ್ಧದ ಈ ದೇಶದ್ರೋಹದ ವಿರುದ್ಧ ಒಗ್ಗಟ್ಟಿನಿಂದ ಮುಂದೆ ಬನ್ನಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...