Homeಮುಖಪುಟಬೊಮ್ಮಾಯಿಯವರನ್ನು ಪ್ರಶ್ನಿಸಲು ಮಹಾರಾಷ್ಟ್ರ ಸಿಎಂಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ

ಬೊಮ್ಮಾಯಿಯವರನ್ನು ಪ್ರಶ್ನಿಸಲು ಮಹಾರಾಷ್ಟ್ರ ಸಿಎಂಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ

- Advertisement -
- Advertisement -

ಉಭಯ ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೀಡಿರುವ ಹೇಳಿಕೆಯನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಕಟುವಾಗಿ ಟೀಕಿಸಿದ್ದಾರೆ.

“ಕರ್ನಾಟಕ ಮುಖ್ಯಮಂತ್ರಿಗಳು ಗಡಿ ಸಮಸ್ಯೆಗಳ ಬಗ್ಗೆ ತಮ್ಮ ಹೇಳಿಕೆಯನ್ನು ನೀಡುತ್ತಿದ್ದಾರೆ. ಮಹಾರಾಷ್ಟ್ರದ 40 ಹಳ್ಳಿಗಳ ಮೇಲೆ ಏಕಾಏಕಿ ಹಕ್ಕು ಚಲಾಯಿಸಿದ್ದಾರೆ” ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಡಿ ವಿವಾದಕ್ಕೆ ಸಂಬಂಧಿಸಿ ರಾಜಕೀಯ ತಿಕ್ಕಾಟ ಹೆಚ್ಚುತ್ತಿರುವಂತೆಯೇ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ವಿರುದ್ಧ ಶಿವಸೇನಾ (ಉದ್ಧವ್‌ ಬಾಳಾ ಠಾಕ್ರೆ ಬಣ) ಮುಖ್ಯಸ್ಥ ಉದ್ಧವ್‌ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.

“ರಾಜ್ಯದ ಕೆಲ ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿದ್ದವು ಎಂದು ಹೇಳಿರುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾತನಾಡಲು ಮುಖ್ಯಮಂತ್ರಿ ಏಕನಾಥ ಶಿಂದೆಗೆ ಧೈರ್ಯ ಇಲ್ಲ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ಮಹಾರಾಷ್ಟ್ರದ ಕೆಲ ಗ್ರಾಮಗಳು ರಾಜ್ಯಕ್ಕೆ ಸೇರಬೇಕು ಎಂಬುದಾಗಿ ಕರ್ನಾಟಕ ಮುಖ್ಯಮಂತ್ರಿ ಸುಲಭವಾಗಿ ಹೇಳಿಕೆ ನೀಡುತ್ತಿರುವುದರರಿಂದಲೇ ನಾವು ಅವರ ವಿರುದ್ಧ ಧ್ವನಿ ಎತ್ತಲು ಧೈರ್ಯ ಕಳೆದುಕೊಂಡಿದ್ದೇವೆಯೇ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದಾರೆ.

“ಈ ವಿಷಯಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿಗೆ ದೆಹಲಿ ನಾಯಕರ ಆಶೀರ್ವಾದ ಇದೆಯೇ? ಕೇಂದ್ರ ಸರ್ಕಾರಕ್ಕೂ ಇದೇ ಬೇಕಾಗಿದೆಯೇ?” ಎಂದು ಕೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್‌ ರಾವುತ್‌, “ಛತ್ರಪತಿ ಶಿವಾಜಿ ಮಹಾರಾಜ್‌ಗೆ ರಾಜ್ಯಪಾಲ ಭಗತ್‌ಸಿಂಗ್‌ ಕೋಶ್ಯಾರಿ ಅವರು ಅವಮಾನಿಸಿದ ವಿಷಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದವನ್ನು ಮತ್ತೆ ಮುನ್ನೆಲೆ ತರಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಂದು ವೇಳೆ ಗುಜರಾತಿಗಳು ಹಾಗೂ ಮಾರವಾಡಿಗಳು ನಗರವನ್ನು ತೊರೆದರೆ ಮುಂಬೈ ಈ ದೇಶದ ಆರ್ಥಿಕ ರಾಜಧಾನಿ ಆಗಿ ಉಳಿಯುವುದಿಲ್ಲ ಎಂದು ಹೇಳುವ ಮೂಲಕ ಈ ಹಿಂದೆಯೂ ರಾಜ್ಯಪಾಲ ಕೋಶ್ಯಾರಿ ಅವರು ಮರಾಠಿ ಭಾಷಿಕರನ್ನು ಅವಮಾನಿಸಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ನೀಡಿರುವ ಹೇಳಿಕೆ ಕುರಿತು ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಗುರುವಾರ ಪ್ರತಿಕ್ರಿಯಿಸಿದ್ದಾರೆ. “ನಮಗೆ ಕಲಿಸಬೇಡಿ” ಎಂದು ಉದ್ಧವ್ ಠಾಕ್ರೆ ಅವರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಗ್ರಾಮಸ್ಥರು

“ಬಾಳಾಸಾಹೇಬರ ಹಿಂದುತ್ವದ ತತ್ವವನ್ನು ಮುರಿದವರಿಗೆ ನಮ್ಮನ್ನು ಟೀಕಿಸುವ ಹಕ್ಕು ಇಲ್ಲ, ಛತ್ರಪತಿ ಶಿವಾಜಿ ಮಹಾರಾಜರ ಹೆಸರನ್ನು ತೆಗೆದುಕೊಳ್ಳುವ ಹಕ್ಕು ಇಲ್ಲ. ಅವರನ್ನು ಯಾರೊಂದಿಗೂ ಹೋಲಿಸಲಾಗುವುದಿಲ್ಲ. ಉದ್ಧವ್ ಠಾಕ್ರೆ ನಮಗೆ ಪಾಠ ಮಾಡಬಾರದು” ಎಂದು ಶಿಂಧೆ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

“ಗವರ್ನರ್ ರೂಪದಲ್ಲಿ ಅವರು ಕಳುಹಿಸಿರುವ ಅಮೆಜಾನ್ ಪಾರ್ಸೆಲ್ ಅನ್ನು ಹಿಂಪಡೆಯಲು ನಾನು ಕೇಂದ್ರ ಸರ್ಕಾರವನ್ನು ವಿನಂತಿಸುತ್ತೇನೆ” ಎಂದು ಠಾಕ್ರೆ ಹೇಳಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳುಹಿಸಲಾದ ಸ್ಯಾಂಪಲ್‌ಗಳನ್ನು ಹಿಂಪಡೆಯಲು ಮತ್ತು ವೃದ್ಧಾಶ್ರಮಕ್ಕೆ ಕಳುಹಿಸಲು ನಾವು ಕೇಂದ್ರವನ್ನು ವಿನಂತಿಸುತ್ತೇವೆ. ಅವರ ಹೇಳಿಕೆಯ ವಿರುದ್ಧ ಪ್ರತಿಭಟಿಸಲು ನಾವು ಎಲ್ಲಾ ಮಹಾರಾಷ್ಟ್ರ ಪ್ರೇಮಿಗಳನ್ನು ಕೋರುತ್ತೇವೆ. ಒಗ್ಗೂಡಿ ಮತ್ತು ಪಕ್ಷ ರಾಜಕೀಯದಿಂದ ಮೇಲಕ್ಕೆ ಬನ್ನಿ. ಮಹಾರಾಷ್ಟ್ರದ ವಿರುದ್ಧದ ಈ ದೇಶದ್ರೋಹದ ವಿರುದ್ಧ ಒಗ್ಗಟ್ಟಿನಿಂದ ಮುಂದೆ ಬನ್ನಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...