Homeಮುಖಪುಟಬೊಮ್ಮಾಯಿಯವರನ್ನು ಪ್ರಶ್ನಿಸಲು ಮಹಾರಾಷ್ಟ್ರ ಸಿಎಂಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ

ಬೊಮ್ಮಾಯಿಯವರನ್ನು ಪ್ರಶ್ನಿಸಲು ಮಹಾರಾಷ್ಟ್ರ ಸಿಎಂಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ

- Advertisement -
- Advertisement -

ಉಭಯ ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೀಡಿರುವ ಹೇಳಿಕೆಯನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಕಟುವಾಗಿ ಟೀಕಿಸಿದ್ದಾರೆ.

“ಕರ್ನಾಟಕ ಮುಖ್ಯಮಂತ್ರಿಗಳು ಗಡಿ ಸಮಸ್ಯೆಗಳ ಬಗ್ಗೆ ತಮ್ಮ ಹೇಳಿಕೆಯನ್ನು ನೀಡುತ್ತಿದ್ದಾರೆ. ಮಹಾರಾಷ್ಟ್ರದ 40 ಹಳ್ಳಿಗಳ ಮೇಲೆ ಏಕಾಏಕಿ ಹಕ್ಕು ಚಲಾಯಿಸಿದ್ದಾರೆ” ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಡಿ ವಿವಾದಕ್ಕೆ ಸಂಬಂಧಿಸಿ ರಾಜಕೀಯ ತಿಕ್ಕಾಟ ಹೆಚ್ಚುತ್ತಿರುವಂತೆಯೇ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ವಿರುದ್ಧ ಶಿವಸೇನಾ (ಉದ್ಧವ್‌ ಬಾಳಾ ಠಾಕ್ರೆ ಬಣ) ಮುಖ್ಯಸ್ಥ ಉದ್ಧವ್‌ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.

“ರಾಜ್ಯದ ಕೆಲ ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿದ್ದವು ಎಂದು ಹೇಳಿರುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾತನಾಡಲು ಮುಖ್ಯಮಂತ್ರಿ ಏಕನಾಥ ಶಿಂದೆಗೆ ಧೈರ್ಯ ಇಲ್ಲ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ಮಹಾರಾಷ್ಟ್ರದ ಕೆಲ ಗ್ರಾಮಗಳು ರಾಜ್ಯಕ್ಕೆ ಸೇರಬೇಕು ಎಂಬುದಾಗಿ ಕರ್ನಾಟಕ ಮುಖ್ಯಮಂತ್ರಿ ಸುಲಭವಾಗಿ ಹೇಳಿಕೆ ನೀಡುತ್ತಿರುವುದರರಿಂದಲೇ ನಾವು ಅವರ ವಿರುದ್ಧ ಧ್ವನಿ ಎತ್ತಲು ಧೈರ್ಯ ಕಳೆದುಕೊಂಡಿದ್ದೇವೆಯೇ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದಾರೆ.

“ಈ ವಿಷಯಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿಗೆ ದೆಹಲಿ ನಾಯಕರ ಆಶೀರ್ವಾದ ಇದೆಯೇ? ಕೇಂದ್ರ ಸರ್ಕಾರಕ್ಕೂ ಇದೇ ಬೇಕಾಗಿದೆಯೇ?” ಎಂದು ಕೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್‌ ರಾವುತ್‌, “ಛತ್ರಪತಿ ಶಿವಾಜಿ ಮಹಾರಾಜ್‌ಗೆ ರಾಜ್ಯಪಾಲ ಭಗತ್‌ಸಿಂಗ್‌ ಕೋಶ್ಯಾರಿ ಅವರು ಅವಮಾನಿಸಿದ ವಿಷಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದವನ್ನು ಮತ್ತೆ ಮುನ್ನೆಲೆ ತರಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಂದು ವೇಳೆ ಗುಜರಾತಿಗಳು ಹಾಗೂ ಮಾರವಾಡಿಗಳು ನಗರವನ್ನು ತೊರೆದರೆ ಮುಂಬೈ ಈ ದೇಶದ ಆರ್ಥಿಕ ರಾಜಧಾನಿ ಆಗಿ ಉಳಿಯುವುದಿಲ್ಲ ಎಂದು ಹೇಳುವ ಮೂಲಕ ಈ ಹಿಂದೆಯೂ ರಾಜ್ಯಪಾಲ ಕೋಶ್ಯಾರಿ ಅವರು ಮರಾಠಿ ಭಾಷಿಕರನ್ನು ಅವಮಾನಿಸಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ನೀಡಿರುವ ಹೇಳಿಕೆ ಕುರಿತು ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಗುರುವಾರ ಪ್ರತಿಕ್ರಿಯಿಸಿದ್ದಾರೆ. “ನಮಗೆ ಕಲಿಸಬೇಡಿ” ಎಂದು ಉದ್ಧವ್ ಠಾಕ್ರೆ ಅವರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಗ್ರಾಮಸ್ಥರು

“ಬಾಳಾಸಾಹೇಬರ ಹಿಂದುತ್ವದ ತತ್ವವನ್ನು ಮುರಿದವರಿಗೆ ನಮ್ಮನ್ನು ಟೀಕಿಸುವ ಹಕ್ಕು ಇಲ್ಲ, ಛತ್ರಪತಿ ಶಿವಾಜಿ ಮಹಾರಾಜರ ಹೆಸರನ್ನು ತೆಗೆದುಕೊಳ್ಳುವ ಹಕ್ಕು ಇಲ್ಲ. ಅವರನ್ನು ಯಾರೊಂದಿಗೂ ಹೋಲಿಸಲಾಗುವುದಿಲ್ಲ. ಉದ್ಧವ್ ಠಾಕ್ರೆ ನಮಗೆ ಪಾಠ ಮಾಡಬಾರದು” ಎಂದು ಶಿಂಧೆ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

“ಗವರ್ನರ್ ರೂಪದಲ್ಲಿ ಅವರು ಕಳುಹಿಸಿರುವ ಅಮೆಜಾನ್ ಪಾರ್ಸೆಲ್ ಅನ್ನು ಹಿಂಪಡೆಯಲು ನಾನು ಕೇಂದ್ರ ಸರ್ಕಾರವನ್ನು ವಿನಂತಿಸುತ್ತೇನೆ” ಎಂದು ಠಾಕ್ರೆ ಹೇಳಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳುಹಿಸಲಾದ ಸ್ಯಾಂಪಲ್‌ಗಳನ್ನು ಹಿಂಪಡೆಯಲು ಮತ್ತು ವೃದ್ಧಾಶ್ರಮಕ್ಕೆ ಕಳುಹಿಸಲು ನಾವು ಕೇಂದ್ರವನ್ನು ವಿನಂತಿಸುತ್ತೇವೆ. ಅವರ ಹೇಳಿಕೆಯ ವಿರುದ್ಧ ಪ್ರತಿಭಟಿಸಲು ನಾವು ಎಲ್ಲಾ ಮಹಾರಾಷ್ಟ್ರ ಪ್ರೇಮಿಗಳನ್ನು ಕೋರುತ್ತೇವೆ. ಒಗ್ಗೂಡಿ ಮತ್ತು ಪಕ್ಷ ರಾಜಕೀಯದಿಂದ ಮೇಲಕ್ಕೆ ಬನ್ನಿ. ಮಹಾರಾಷ್ಟ್ರದ ವಿರುದ್ಧದ ಈ ದೇಶದ್ರೋಹದ ವಿರುದ್ಧ ಒಗ್ಗಟ್ಟಿನಿಂದ ಮುಂದೆ ಬನ್ನಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...