HomeUncategorizedಮಹಾರಾಷ್ಟ್ರ | ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ 3 ಎಫ್‌ಐಆರ್‌

ಮಹಾರಾಷ್ಟ್ರ | ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ 3 ಎಫ್‌ಐಆರ್‌

- Advertisement -
- Advertisement -

ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿಡಂಬನಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಹಾರಾಷ್ಟ್ರದಲ್ಲಿ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶನಿವಾರ ವರದಿ ಮಾಡಿದೆ. ಶಿಂಧೆ ನೇತೃತ್ವದ ಶಿವಸೇನೆಯ ಬಣದ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಲ್ಲಿ ಎಫ್‌ಐಆರ್‌ ಅನ್ನು ದಾಖಲಿಸಿದ್ದಾರೆ.

ಮೂರು ಎಫ್‌ಐಆರ್‌ಗಳನ್ನು ಶುಕ್ರವಾರ ಮುಂಬೈನ ಖಾರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಈ ಠಾಣೆ ಈಗಾಗಲೇ ಕುನಾಲ್ ವಿರುದ್ಧ ದಾಖಲಾಗಿರುವ ಮತ್ತೊಂದು ಮಾನನಷ್ಟ ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಮಾರ್ಚ್ 23 ರಂದು, ಕುನಾಲ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಿಂದಿ ಚಲನಚಿತ್ರವೊಂದರ ಹಾಡಿನ ವಿಡಂಬನಾತ್ಮಕ ಆವೃತ್ತಿಯನ್ನು ಪ್ರದರ್ಶಿಸಿ ಶಿಂಧೆ ಅವರನ್ನು ಟೀಕಿಸುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಕುನಾಲ್ ಅವರು ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ “ದೇಶದ್ರೋಹಿ” ಎಂದು ಹೇಳಿದ್ದರು.

ಈ ಪ್ರದರ್ಶನದ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ, ಮಾರ್ಚ್ 23 ರ ರಾತ್ರಿ ಶಿಂಧೆ ನೇತೃತ್ವದ ಶಿವಸೇನೆಯ ಸದಸ್ಯರು ಮುಂಬೈನ ಖಾರ್ ಪ್ರದೇಶದಲ್ಲಿರುವ ದಿ ಹ್ಯಾಬಿಟಾಟ್ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಯಾಕೆಂದರೆ ಈ ವಿವಾದಾತ್ಮಕ ಕಾರ್ಯಕ್ರಮವನ್ನು ಅವರು ಅಲ್ಲಿ ಅದನ್ನು ರೆಕಾರ್ಡ್ ಮಾಡಿದ್ದರು.

ಮರುದಿನ, ಮುಂಬೈ ಪೊಲೀಸರು ಭಾರತೀಯ ನ್ಯಾಯ ಸಂಹಿತದ ಮಾನನಷ್ಟ ಮತ್ತು ಸಾರ್ವಜನಿಕ ದುಷ್ಕೃತ್ಯಕ್ಕೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಕುನಾಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಾರ್ಚ್ 31 ರ ಮೊದಲು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕುನಾಲ್ ಅವರಿಗೆ ಎರಡು ಸಮನ್ಸ್ ಕಳುಹಿಸಿದ್ದಾರೆ. ಜೊತೆಗೆ ಮುಂಬೈಗೆ ಪ್ರಯಾಣಿಸಲು ಏಳು ದಿನಗಳನ್ನು ಕೋರಿದ್ದ ಕುನಾಲ್ ಅವರ ಮನವಿಯನ್ನು ನಗರದ ಪೊಲೀಸರು ನಿರಾಕರಿಸಿದ್ದಾರೆ.

ಖಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಮಾನನಷ್ಟ ಮೊಕದ್ದಮೆಯಲ್ಲಿ ಮದ್ರಾಸ್ ಹೈಕೋರ್ಟ್ ಶುಕ್ರವಾರ ಕುನಾಲ್ ಅವರಿಗೆ ಏಪ್ರಿಲ್ 7 ರವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಕುನಾಲ್ ಅವರು ನಿರೀಕ್ಷಣಾ ಜಾಮೀನಿಗಾಗಿ ಮಹಾರಾಷ್ಟ್ರದ ನ್ಯಾಯಾಲಯಗಳನ್ನು ಸಂಪರ್ಕಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರಾಥಮಿಕ ಹಂತದಲ್ಲಿ ಒಪ್ಪಿರುವುದಾಗಿ ನ್ಯಾಯಮೂರ್ತಿ ಸುಂದರ್ ಮೋಹನ್ ಹೇಳಿದ್ದಾರೆ.

ತಮಿಳುನಾಡಿನ ವಿಲ್ಲುಪುರಂ ಪಟ್ಟಣದ ಖಾಯಂ ನಿವಾಸಿಯಾಗಿರುವುದರಿಂದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆಲಿಸುವ ಅಧಿಕಾರ ಮದ್ರಾಸ್ ಹೈಕೋರ್ಟ್‌ಗೆ ಇದೆ ಎಂದು ಹಾಸ್ಯನಟ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಹಾಸ್ಯನಟ ಕುನಾಲ್ ಕಾಮ್ರಾ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಸೀದಿಯಲ್ಲಿ ನಮಾಜ್‌ ಮಾಡಿದ ಹಿಂದೂ ವ್ಯಾಪಾರಿಯ ‘ಶುದ್ಧೀಕರಣ’ಕ್ಕೆ ಪ್ರಯತ್ನಿಸಿದ ಬಿಜೆಪಿ ಪರ ದುಷ್ಕರ್ಮಿಗಳು!

ಮಸೀದಿಯಲ್ಲಿ ನಮಾಜ್‌ ಮಾಡಿದ ಹಿಂದೂ ವ್ಯಾಪಾರಿಯ ‘ಶುದ್ಧೀಕರಣ’ಕ್ಕೆ ಪ್ರಯತ್ನಿಸಿದ ಬಿಜೆಪಿ ಪರ ದುಷ್ಕರ್ಮಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...