HomeUncategorizedಮಹಾರಾಷ್ಟ್ರ | ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ 3 ಎಫ್‌ಐಆರ್‌

ಮಹಾರಾಷ್ಟ್ರ | ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ 3 ಎಫ್‌ಐಆರ್‌

- Advertisement -
- Advertisement -

ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿಡಂಬನಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಹಾರಾಷ್ಟ್ರದಲ್ಲಿ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶನಿವಾರ ವರದಿ ಮಾಡಿದೆ. ಶಿಂಧೆ ನೇತೃತ್ವದ ಶಿವಸೇನೆಯ ಬಣದ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಲ್ಲಿ ಎಫ್‌ಐಆರ್‌ ಅನ್ನು ದಾಖಲಿಸಿದ್ದಾರೆ.

ಮೂರು ಎಫ್‌ಐಆರ್‌ಗಳನ್ನು ಶುಕ್ರವಾರ ಮುಂಬೈನ ಖಾರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಈ ಠಾಣೆ ಈಗಾಗಲೇ ಕುನಾಲ್ ವಿರುದ್ಧ ದಾಖಲಾಗಿರುವ ಮತ್ತೊಂದು ಮಾನನಷ್ಟ ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಮಾರ್ಚ್ 23 ರಂದು, ಕುನಾಲ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಿಂದಿ ಚಲನಚಿತ್ರವೊಂದರ ಹಾಡಿನ ವಿಡಂಬನಾತ್ಮಕ ಆವೃತ್ತಿಯನ್ನು ಪ್ರದರ್ಶಿಸಿ ಶಿಂಧೆ ಅವರನ್ನು ಟೀಕಿಸುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಕುನಾಲ್ ಅವರು ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ “ದೇಶದ್ರೋಹಿ” ಎಂದು ಹೇಳಿದ್ದರು.

ಈ ಪ್ರದರ್ಶನದ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ, ಮಾರ್ಚ್ 23 ರ ರಾತ್ರಿ ಶಿಂಧೆ ನೇತೃತ್ವದ ಶಿವಸೇನೆಯ ಸದಸ್ಯರು ಮುಂಬೈನ ಖಾರ್ ಪ್ರದೇಶದಲ್ಲಿರುವ ದಿ ಹ್ಯಾಬಿಟಾಟ್ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಯಾಕೆಂದರೆ ಈ ವಿವಾದಾತ್ಮಕ ಕಾರ್ಯಕ್ರಮವನ್ನು ಅವರು ಅಲ್ಲಿ ಅದನ್ನು ರೆಕಾರ್ಡ್ ಮಾಡಿದ್ದರು.

ಮರುದಿನ, ಮುಂಬೈ ಪೊಲೀಸರು ಭಾರತೀಯ ನ್ಯಾಯ ಸಂಹಿತದ ಮಾನನಷ್ಟ ಮತ್ತು ಸಾರ್ವಜನಿಕ ದುಷ್ಕೃತ್ಯಕ್ಕೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಕುನಾಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಾರ್ಚ್ 31 ರ ಮೊದಲು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕುನಾಲ್ ಅವರಿಗೆ ಎರಡು ಸಮನ್ಸ್ ಕಳುಹಿಸಿದ್ದಾರೆ. ಜೊತೆಗೆ ಮುಂಬೈಗೆ ಪ್ರಯಾಣಿಸಲು ಏಳು ದಿನಗಳನ್ನು ಕೋರಿದ್ದ ಕುನಾಲ್ ಅವರ ಮನವಿಯನ್ನು ನಗರದ ಪೊಲೀಸರು ನಿರಾಕರಿಸಿದ್ದಾರೆ.

ಖಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಮಾನನಷ್ಟ ಮೊಕದ್ದಮೆಯಲ್ಲಿ ಮದ್ರಾಸ್ ಹೈಕೋರ್ಟ್ ಶುಕ್ರವಾರ ಕುನಾಲ್ ಅವರಿಗೆ ಏಪ್ರಿಲ್ 7 ರವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಕುನಾಲ್ ಅವರು ನಿರೀಕ್ಷಣಾ ಜಾಮೀನಿಗಾಗಿ ಮಹಾರಾಷ್ಟ್ರದ ನ್ಯಾಯಾಲಯಗಳನ್ನು ಸಂಪರ್ಕಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರಾಥಮಿಕ ಹಂತದಲ್ಲಿ ಒಪ್ಪಿರುವುದಾಗಿ ನ್ಯಾಯಮೂರ್ತಿ ಸುಂದರ್ ಮೋಹನ್ ಹೇಳಿದ್ದಾರೆ.

ತಮಿಳುನಾಡಿನ ವಿಲ್ಲುಪುರಂ ಪಟ್ಟಣದ ಖಾಯಂ ನಿವಾಸಿಯಾಗಿರುವುದರಿಂದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆಲಿಸುವ ಅಧಿಕಾರ ಮದ್ರಾಸ್ ಹೈಕೋರ್ಟ್‌ಗೆ ಇದೆ ಎಂದು ಹಾಸ್ಯನಟ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಹಾಸ್ಯನಟ ಕುನಾಲ್ ಕಾಮ್ರಾ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಸೀದಿಯಲ್ಲಿ ನಮಾಜ್‌ ಮಾಡಿದ ಹಿಂದೂ ವ್ಯಾಪಾರಿಯ ‘ಶುದ್ಧೀಕರಣ’ಕ್ಕೆ ಪ್ರಯತ್ನಿಸಿದ ಬಿಜೆಪಿ ಪರ ದುಷ್ಕರ್ಮಿಗಳು!

ಮಸೀದಿಯಲ್ಲಿ ನಮಾಜ್‌ ಮಾಡಿದ ಹಿಂದೂ ವ್ಯಾಪಾರಿಯ ‘ಶುದ್ಧೀಕರಣ’ಕ್ಕೆ ಪ್ರಯತ್ನಿಸಿದ ಬಿಜೆಪಿ ಪರ ದುಷ್ಕರ್ಮಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...