Homeಮುಖಪುಟ'ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ' | ಶಿವಸೇನೆ (ಯುಬಿಟಿ) ವಾಗ್ದಾಳಿ

‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

- Advertisement -
- Advertisement -

ತಮ್ಮ ಪಕ್ಷ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ನಡುವಿನ ಸೀಟು ಹಂಚಿಕೆ ಮಾತುಕತೆ ಮುಕ್ತಾಯಗೊಂಡಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಶನಿವಾರ ಹೇಳಿದ್ದಾರೆ. ಈ ಎರಡು ಪಕ್ಷಗಳಿಗೆ ಸಮಸ್ಯೆಗಳನ್ನು ಪರಿಹರಿಸುವ ಬಯಕೆಯಿದ್ದು, ಒಂದೇ ಮನಸ್ಥಿತಿಯಿಂದ ನಡೆಸಲ್ಪಡುತ್ತವೆ ಎಂದು ಅವರು ಹೇಳಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ

ಮೈತ್ರಿಯಲ್ಲಿನ ಸೀಟು ಹಂಚಿಕೆಯ ಮಾತುಕತೆಯ ವಿಳಂಬದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದ ಅವರು, ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸಮರ್ಥರಾಗಿದ್ದಾರೆ ಎಂದು ಶುಕ್ರವಾರ ಆರೋಪಿಸಿದ್ದರು. ಅದಾಗಿ ಮರು ದಿನ ಕೂಡಾ ಅವರು ಕಾಂಗ್ರೆಸ್ ಅನ್ನು ಮತ್ತೊಮ್ಮೆ ಗುರಿಯಾಗಿರಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಪ್ರಸ್ತುತ ರಾಷ್ಟ್ರ ರಾಜಕೀಯವನ್ನು ಪ್ರಾದೇಶಿಕ ಪಕ್ಷಗಳು ನಡೆಸುತ್ತಿವೆ. ಅದ್ದರಿಂದ ಆಯಾ ರಾಜ್ಯಗಳಲ್ಲಿ ಅವರು ಜಾಗವನ್ನು ಪಡೆಯಬೇಕು ಎಂಬುದು ತಮ್ಮ ಪಕ್ಷದ ನಿಲುವಾಗಿದೆ ಎಂದು ಹೇಳಿದ್ದಾರೆ.

“ನಾವು (ಶಿವಸೇನೆ-ಯುಬಿಟಿ) ಶುಕ್ರವಾರ ಇಡೀ ದಿನ ಎನ್‌ಸಿಪಿ (ಎಸ್‌ಪಿ) ಜೊತೆ ಮಾತುಕತೆ ನಡೆಸಿದ್ದೇವೆ. ಎನ್‌ಸಿಪಿ (ಎಸ್‌ಪಿ) ಯ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಮತ್ತು ನಾವು ಮಾತುಕತೆ ನಡೆಸಿದ್ದೇವೆ. ನಮ್ಮ ನಡುವಿನ ಬಹುತೇಕ ಸಮಸ್ಯೆಗಳು ಬಗೆಹರಿಯುತ್ತಿವೆ. ಅಂತಿಮವಾಗಿ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ನಿಮಗೆ ಮನಸ್ಸು ಮತ್ತು ಇಚ್ಛೆ ಬೇಕಾಗುತ್ತದೆ, ಅದು ನಮ್ಮಿಬ್ಬರಿಗೂ ಇವೆ” ಎಂದು ರಾವತ್ ಹೇಳಿದ್ದಾರೆ.

“ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ನಡುವಿನ ಸೀಟು ಹಂಚಿಕೆ ಮಾತುಕತೆ ಮುಕ್ತಾಯಗೊಂಡಿದೆ. ನಮ್ಮ ಹೈಕಮಾಂಡ್ ಮುಂಬೈನಲ್ಲಿ ಇರುವುದರಿಂದ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ವೈಯಕ್ತಿಕವಾಗಿ ಪರಿಶೀಲಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ (ಯುನೈಟೆಡ್) (ಜೆಡಿ-ಯು) ನಂತಹ ಪ್ರಾದೇಶಿಕ ಪಕ್ಷಗಳ ನೆರವಿನಿಂದ ನರೇಂದ್ರ ಮೋದಿ ದೇಶದ ಪ್ರಧಾನಿಯಾದರು. ಇಂಡಿಯಾ ಮೈತ್ರಿಯಲ್ಲಿ ಬಹುಪಾಲು ಪ್ರಾದೇಶಿಕ ಪಕ್ಷಗಳಿವೆ ಎಂದು ಅವರು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರೊಂದಿಗೆ ಮಾತನಾಡಿದ್ದಾರೆ. ಉಭಯ ನಾಯಕರ ನಡುವಿನ ಮಾತುಕತೆ ಉತ್ತಮವಾಗಿದೆ ಎಂದು ಸಂಜತ್ ರಾವತ್ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಮೈತ್ರಿಯ ಇತರ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯದ ಹಿನ್ನಲೆ, ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರು ಶನಿವಾರ ಠಾಕ್ರೆ ಅವರನ್ನು ಭೇಟಿಯಾಗಿದ್ದಾರೆ. ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿರುವ ಅವರು ಭೇಟಿಯು ಉದ್ಧವ್ ಠಾಕ್ರೆ ಅವರ ಆರೋಗ್ಯದ ಬಗ್ಗೆ ವಿಚಾರಿಸಲು ನಡೆದಿದೆ ಎಂದು ಹೇಳಿದ್ದಾರೆ.

ಬಾಂದ್ರಾದಲ್ಲಿರುವ ಠಾಕ್ರೆ ಅವರ ನಿವಾಸ ‘ಮಾತೋಶ್ರೀ’ಯಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಚೆನ್ನಿತಲ, ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅವರ ಆರೋಗ್ಯದ ಬಗ್ಗೆ ವಿಚಾರಿಸಲು ಭೇಟಿಯಾಗಲು ಬಂದಿದ್ದೇನೆ ಎಂದು ತಮ್ಮ ಭೇಟಿಯನ್ನು ರಾಜಕಿಯೇತರ ಎಂದು ಬಿಂಬಿಸಲು ನೋಡಿದ್ದಾರೆ.

ಮಿತ್ರಪಕ್ಷಗಳ ನಡುವಿನ ಮಾತುಕತೆ ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ನಡುವಿನ ಸೀಟು ಹಂಚಿಕೆಯ ಚೌಕಾಶಿ ಮುರಿಯುವ ಹಂತವನ್ನು ತಲುಪಲು ಬಿಡಬಾರದು ಎಂದು ಶುಕ್ರವಾರ ಠಾಕ್ರೆ ಎಚ್ಚರಿಸಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸಭಾ ಕ್ಷೇತ್ರಗಳ ಹಂಚಿಕೆಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸಮರ್ಥರಾಗಿದ್ದಾರೆ ಎಂದು ರಾವತ್ ಹೇಳಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಪಟೋಲೆ ಅವರು ಮೈತ್ರಿಯಲ್ಲಿ 25 ರಿಂದ 30 ವಿಧಾನಸಭಾ ಸ್ಥಾನಗಳಲ್ಲಿ ಅಸ್ಥಿರತೆ ಇದೆ. ಪಕ್ಷದ ರಾಜ್ಯ ಘಟಕವು ಅದರ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.

ಎಂವಿಎ ಮತ್ತು ಆಡಳಿತಾರೂಢ ಮಹಾಯುತಿ ತಮ್ಮ ಬಹು ನಿರೀಕ್ಷಿತ ಸೀಟು ಹಂಚಿಕೆ ಒಪ್ಪಂದವನ್ನು ಇನ್ನೂ ಘೋಷಿಸಿಲ್ಲ. 288 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಆರೋಗ್ಯ ಕಾರ್ಯದರ್ಶಿ ವಜಾಗೊಳಿಸುವ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಆರೋಗ್ಯ ಕಾರ್ಯದರ್ಶಿ ವಜಾಗೊಳಿಸುವ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...