Homeಮುಖಪುಟ'ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ' | ಶಿವಸೇನೆ (ಯುಬಿಟಿ) ವಾಗ್ದಾಳಿ

‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

- Advertisement -
- Advertisement -

ತಮ್ಮ ಪಕ್ಷ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ನಡುವಿನ ಸೀಟು ಹಂಚಿಕೆ ಮಾತುಕತೆ ಮುಕ್ತಾಯಗೊಂಡಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಶನಿವಾರ ಹೇಳಿದ್ದಾರೆ. ಈ ಎರಡು ಪಕ್ಷಗಳಿಗೆ ಸಮಸ್ಯೆಗಳನ್ನು ಪರಿಹರಿಸುವ ಬಯಕೆಯಿದ್ದು, ಒಂದೇ ಮನಸ್ಥಿತಿಯಿಂದ ನಡೆಸಲ್ಪಡುತ್ತವೆ ಎಂದು ಅವರು ಹೇಳಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ

ಮೈತ್ರಿಯಲ್ಲಿನ ಸೀಟು ಹಂಚಿಕೆಯ ಮಾತುಕತೆಯ ವಿಳಂಬದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದ ಅವರು, ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸಮರ್ಥರಾಗಿದ್ದಾರೆ ಎಂದು ಶುಕ್ರವಾರ ಆರೋಪಿಸಿದ್ದರು. ಅದಾಗಿ ಮರು ದಿನ ಕೂಡಾ ಅವರು ಕಾಂಗ್ರೆಸ್ ಅನ್ನು ಮತ್ತೊಮ್ಮೆ ಗುರಿಯಾಗಿರಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಪ್ರಸ್ತುತ ರಾಷ್ಟ್ರ ರಾಜಕೀಯವನ್ನು ಪ್ರಾದೇಶಿಕ ಪಕ್ಷಗಳು ನಡೆಸುತ್ತಿವೆ. ಅದ್ದರಿಂದ ಆಯಾ ರಾಜ್ಯಗಳಲ್ಲಿ ಅವರು ಜಾಗವನ್ನು ಪಡೆಯಬೇಕು ಎಂಬುದು ತಮ್ಮ ಪಕ್ಷದ ನಿಲುವಾಗಿದೆ ಎಂದು ಹೇಳಿದ್ದಾರೆ.

“ನಾವು (ಶಿವಸೇನೆ-ಯುಬಿಟಿ) ಶುಕ್ರವಾರ ಇಡೀ ದಿನ ಎನ್‌ಸಿಪಿ (ಎಸ್‌ಪಿ) ಜೊತೆ ಮಾತುಕತೆ ನಡೆಸಿದ್ದೇವೆ. ಎನ್‌ಸಿಪಿ (ಎಸ್‌ಪಿ) ಯ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಮತ್ತು ನಾವು ಮಾತುಕತೆ ನಡೆಸಿದ್ದೇವೆ. ನಮ್ಮ ನಡುವಿನ ಬಹುತೇಕ ಸಮಸ್ಯೆಗಳು ಬಗೆಹರಿಯುತ್ತಿವೆ. ಅಂತಿಮವಾಗಿ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ನಿಮಗೆ ಮನಸ್ಸು ಮತ್ತು ಇಚ್ಛೆ ಬೇಕಾಗುತ್ತದೆ, ಅದು ನಮ್ಮಿಬ್ಬರಿಗೂ ಇವೆ” ಎಂದು ರಾವತ್ ಹೇಳಿದ್ದಾರೆ.

“ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ನಡುವಿನ ಸೀಟು ಹಂಚಿಕೆ ಮಾತುಕತೆ ಮುಕ್ತಾಯಗೊಂಡಿದೆ. ನಮ್ಮ ಹೈಕಮಾಂಡ್ ಮುಂಬೈನಲ್ಲಿ ಇರುವುದರಿಂದ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ವೈಯಕ್ತಿಕವಾಗಿ ಪರಿಶೀಲಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ (ಯುನೈಟೆಡ್) (ಜೆಡಿ-ಯು) ನಂತಹ ಪ್ರಾದೇಶಿಕ ಪಕ್ಷಗಳ ನೆರವಿನಿಂದ ನರೇಂದ್ರ ಮೋದಿ ದೇಶದ ಪ್ರಧಾನಿಯಾದರು. ಇಂಡಿಯಾ ಮೈತ್ರಿಯಲ್ಲಿ ಬಹುಪಾಲು ಪ್ರಾದೇಶಿಕ ಪಕ್ಷಗಳಿವೆ ಎಂದು ಅವರು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರೊಂದಿಗೆ ಮಾತನಾಡಿದ್ದಾರೆ. ಉಭಯ ನಾಯಕರ ನಡುವಿನ ಮಾತುಕತೆ ಉತ್ತಮವಾಗಿದೆ ಎಂದು ಸಂಜತ್ ರಾವತ್ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಮೈತ್ರಿಯ ಇತರ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯದ ಹಿನ್ನಲೆ, ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರು ಶನಿವಾರ ಠಾಕ್ರೆ ಅವರನ್ನು ಭೇಟಿಯಾಗಿದ್ದಾರೆ. ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿರುವ ಅವರು ಭೇಟಿಯು ಉದ್ಧವ್ ಠಾಕ್ರೆ ಅವರ ಆರೋಗ್ಯದ ಬಗ್ಗೆ ವಿಚಾರಿಸಲು ನಡೆದಿದೆ ಎಂದು ಹೇಳಿದ್ದಾರೆ.

ಬಾಂದ್ರಾದಲ್ಲಿರುವ ಠಾಕ್ರೆ ಅವರ ನಿವಾಸ ‘ಮಾತೋಶ್ರೀ’ಯಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಚೆನ್ನಿತಲ, ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅವರ ಆರೋಗ್ಯದ ಬಗ್ಗೆ ವಿಚಾರಿಸಲು ಭೇಟಿಯಾಗಲು ಬಂದಿದ್ದೇನೆ ಎಂದು ತಮ್ಮ ಭೇಟಿಯನ್ನು ರಾಜಕಿಯೇತರ ಎಂದು ಬಿಂಬಿಸಲು ನೋಡಿದ್ದಾರೆ.

ಮಿತ್ರಪಕ್ಷಗಳ ನಡುವಿನ ಮಾತುಕತೆ ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ನಡುವಿನ ಸೀಟು ಹಂಚಿಕೆಯ ಚೌಕಾಶಿ ಮುರಿಯುವ ಹಂತವನ್ನು ತಲುಪಲು ಬಿಡಬಾರದು ಎಂದು ಶುಕ್ರವಾರ ಠಾಕ್ರೆ ಎಚ್ಚರಿಸಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸಭಾ ಕ್ಷೇತ್ರಗಳ ಹಂಚಿಕೆಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸಮರ್ಥರಾಗಿದ್ದಾರೆ ಎಂದು ರಾವತ್ ಹೇಳಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಪಟೋಲೆ ಅವರು ಮೈತ್ರಿಯಲ್ಲಿ 25 ರಿಂದ 30 ವಿಧಾನಸಭಾ ಸ್ಥಾನಗಳಲ್ಲಿ ಅಸ್ಥಿರತೆ ಇದೆ. ಪಕ್ಷದ ರಾಜ್ಯ ಘಟಕವು ಅದರ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.

ಎಂವಿಎ ಮತ್ತು ಆಡಳಿತಾರೂಢ ಮಹಾಯುತಿ ತಮ್ಮ ಬಹು ನಿರೀಕ್ಷಿತ ಸೀಟು ಹಂಚಿಕೆ ಒಪ್ಪಂದವನ್ನು ಇನ್ನೂ ಘೋಷಿಸಿಲ್ಲ. 288 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಆರೋಗ್ಯ ಕಾರ್ಯದರ್ಶಿ ವಜಾಗೊಳಿಸುವ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಆರೋಗ್ಯ ಕಾರ್ಯದರ್ಶಿ ವಜಾಗೊಳಿಸುವ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...