Homeಕರೋನಾ ತಲ್ಲಣಮಹಾರಾಷ್ಟ್ರ: ಆಕ್ಸಿಜನ್‌ ಮಾಸ್ಕ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದು ಸಾವನ್ನಪ್ಪಿದ ಕೊರೊನಾ ಸೋಂಕಿತ

ಮಹಾರಾಷ್ಟ್ರ: ಆಕ್ಸಿಜನ್‌ ಮಾಸ್ಕ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದು ಸಾವನ್ನಪ್ಪಿದ ಕೊರೊನಾ ಸೋಂಕಿತ

ಮಹಾನಗರ ಪಾಲಿಕೆ ಕಟ್ಟಡದ ಬಳಿ ಪ್ರತಿಭಟನೆ ಮಾಡಲು ರೋಗಿಯನ್ನು ಯಾರು "ಪ್ರಚೋದಿಸಿದರು" ಎಂದು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕಿತ ರೋಗಿಯೊಬ್ಬರು ಹಲವಾರು ಆಸ್ಪತ್ರೆಗಳನ್ನುಅಲೆದು ಎಲ್ಲಿಯೂ ಬೆಡ್ ಸಿಕ್ಕಿಲ್ಲ ಎಂದು ಆರೋಪಿಸಿ, ಮಹಾರಾಷ್ಟ್ರದ ನಾಸಿಕ್‌ನ ಮಹಾನಗರ ಪಾಲಿಕೆಯ ಹೊರಗೆ ಆಕ್ಸಿಜನ್ ಮಾಸ್ಕ್‌ನೊಂದಿಗೆ ಪ್ರತಿಭಟನೆಗೆ ಕುಳಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ರೋಗಿಯು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

38 ವರ್ಷದ ಬಾಬಾಸಾಹೇಬ್ ಕೋಲ್ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಆದರೆ ಚಿಕಿತ್ಸೆಗೆ ಯಾವ ಆಸ್ಪತ್ರೆಯೂ ಸ್ಪಂದಿಸುತ್ತಿಲ್ಲ ಎಂದು ಮಹಾನಗರ ಪಾಲಿಕೆಯ ಹೊರಗೆ ನಿನ್ನೆ ಸಂಜೆ ಸಿಲಿಂಡರ್‌ಗೆ ಸಂಪರ್ಕ ಹೊಂದಿದ ಆಕ್ಸಿಜನ್ ಮಾಸ್ಕ್‌ನೊಂದಿಗೆ ಪ್ರತಿಭಟನೆ ನಡೆಸಿದ್ದರು.

ಸರಿ ಸುಮಾರು ಒಂದು ಗಂಟೆ ಪ್ರತಿಭಟನೆ ನಡೆಸಿದ ನಂತರ, ಮಹಾನಗರ ಪಾಲಿಕೆಯ ಆಂಬ್ಯುಲೆನ್ಸ್ ಅವರನ್ನು ಪುರಸಭೆಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ಮಧ್ಯರಾತ್ರಿ  ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಮೃತ ವ್ಯಕ್ತಿಯ ಕುಟುಂಬದ ಪ್ರಕಾರ, ಮಧ್ಯರಾತ್ರಿಯಲ್ಲಿ ಅವರ ಆಕ್ಸಿಜನ್ ಲೆವೆಲ್ ಮಟ್ಟವು ಶೇಕಡಾ 40 ಕ್ಕೆ ತಲುಪಿತ್ತು. ಸಾಮಾನ್ಯವಾಗಿ ಆಕ್ಸಿಜನ್ ಲೆವೆಲ್ ಶೇಕಡಾ 95 ಅಥವಾ ಅದಕ್ಕಿಂತ ಹೆಚ್ಚಿನದಾಗಿರುತ್ತದೆ. ಆದರೆ, ರಾತ್ರಿ 1 ಗಂಟೆ ಸುಮಾರಿಗೆ ಬಾಬಾಸಾಹೇಬ್ ನಿಧನರಾದರು ಎಂದು ತಿಳಿಸಿದ್ದಾರೆ.

“ಎರಡು-ಮೂರು ದಿನಗಳ ಹಿಂದೆ ಅವರನ್ನು ಬೈಟ್ಕೊ (ಆಸ್ಪತ್ರೆ) ಗೆ ಕರೆದೊಯ್ಯಲಾಯಿತು. ಅಲ್ಲಿಂದ ಅವರು ಮತ್ತೊಂದು ಆಸ್ಪತ್ರೆಗೆ, ಅಲ್ಲಿಂದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಹೋದೆವು. ವೈದ್ಯಕೀಯ ಕಾಲೇಜಿನಲ್ಲಿ ಬೆಡ್ ಇಲ್ಲ ಎಂದು ಹೇಳಿದರು. ನಾವು ಬಹಳಷ್ಟು ಆಸ್ಪತ್ರೆಗಳಿಗೆ ಹೋಗಿದೆವು. ಯಾರೂ ಅವರನ್ನು ದಾಖಲಿಸಿಕೊಳ್ಳಲಿಲ್ಲ. ನಂತರ ನಾವು ಸಿವಿಲ್ ಆಸ್ಪತ್ರೆಗೆ ಹಿಂತಿರುಗಿ ಅವರಿಗೆ ಆಕ್ಸಿಜನ್ ಮಾಸ್ಕ್‌ ತೆಗೆದುಕೊಂಡೆವು. ಯಾವ ಆಸ್ಪತ್ರೆಯವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಮೃತರ ಪತ್ನಿ ಸ್ಥಳೀಯ ಪತ್ರಕರ್ತರಿಗೆ ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ಕಟ್ಟಡದ ಬಳಿ ಪ್ರತಿಭಟನೆ ಮಾಡಲು ರೋಗಿಯನ್ನು ಯಾರು “ಪ್ರಚೋದಿಸಿದರು” ಎಂದು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ದೇಶದಲ್ಲಿ ಮಹಾರಾಷ್ಟ್ರವು ಅತಿಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿದ್ದು, ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಗಣನೀಯ ಏರಿಕೆ ಕಂಡಿದೆ. ಇದರಿಂದ ರಾಜ್ಯದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಮೂಲಸೌಕರ್ಯಗಳ ವ್ಯವಸ್ಥೆ ಕಡಿಮೆಯಾಗುವ ಸಂಭವವಿದೆ ಎಂದು ಸರ್ಕಾರ ತಿಳಿಸಿತ್ತು.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...