Homeಕರೋನಾ ತಲ್ಲಣಮಹಾರಾಷ್ಟ್ರ: ಆಕ್ಸಿಜನ್‌ ಮಾಸ್ಕ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದು ಸಾವನ್ನಪ್ಪಿದ ಕೊರೊನಾ ಸೋಂಕಿತ

ಮಹಾರಾಷ್ಟ್ರ: ಆಕ್ಸಿಜನ್‌ ಮಾಸ್ಕ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದು ಸಾವನ್ನಪ್ಪಿದ ಕೊರೊನಾ ಸೋಂಕಿತ

ಮಹಾನಗರ ಪಾಲಿಕೆ ಕಟ್ಟಡದ ಬಳಿ ಪ್ರತಿಭಟನೆ ಮಾಡಲು ರೋಗಿಯನ್ನು ಯಾರು "ಪ್ರಚೋದಿಸಿದರು" ಎಂದು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕಿತ ರೋಗಿಯೊಬ್ಬರು ಹಲವಾರು ಆಸ್ಪತ್ರೆಗಳನ್ನುಅಲೆದು ಎಲ್ಲಿಯೂ ಬೆಡ್ ಸಿಕ್ಕಿಲ್ಲ ಎಂದು ಆರೋಪಿಸಿ, ಮಹಾರಾಷ್ಟ್ರದ ನಾಸಿಕ್‌ನ ಮಹಾನಗರ ಪಾಲಿಕೆಯ ಹೊರಗೆ ಆಕ್ಸಿಜನ್ ಮಾಸ್ಕ್‌ನೊಂದಿಗೆ ಪ್ರತಿಭಟನೆಗೆ ಕುಳಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ರೋಗಿಯು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

38 ವರ್ಷದ ಬಾಬಾಸಾಹೇಬ್ ಕೋಲ್ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಆದರೆ ಚಿಕಿತ್ಸೆಗೆ ಯಾವ ಆಸ್ಪತ್ರೆಯೂ ಸ್ಪಂದಿಸುತ್ತಿಲ್ಲ ಎಂದು ಮಹಾನಗರ ಪಾಲಿಕೆಯ ಹೊರಗೆ ನಿನ್ನೆ ಸಂಜೆ ಸಿಲಿಂಡರ್‌ಗೆ ಸಂಪರ್ಕ ಹೊಂದಿದ ಆಕ್ಸಿಜನ್ ಮಾಸ್ಕ್‌ನೊಂದಿಗೆ ಪ್ರತಿಭಟನೆ ನಡೆಸಿದ್ದರು.

ಸರಿ ಸುಮಾರು ಒಂದು ಗಂಟೆ ಪ್ರತಿಭಟನೆ ನಡೆಸಿದ ನಂತರ, ಮಹಾನಗರ ಪಾಲಿಕೆಯ ಆಂಬ್ಯುಲೆನ್ಸ್ ಅವರನ್ನು ಪುರಸಭೆಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ಮಧ್ಯರಾತ್ರಿ  ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಮೃತ ವ್ಯಕ್ತಿಯ ಕುಟುಂಬದ ಪ್ರಕಾರ, ಮಧ್ಯರಾತ್ರಿಯಲ್ಲಿ ಅವರ ಆಕ್ಸಿಜನ್ ಲೆವೆಲ್ ಮಟ್ಟವು ಶೇಕಡಾ 40 ಕ್ಕೆ ತಲುಪಿತ್ತು. ಸಾಮಾನ್ಯವಾಗಿ ಆಕ್ಸಿಜನ್ ಲೆವೆಲ್ ಶೇಕಡಾ 95 ಅಥವಾ ಅದಕ್ಕಿಂತ ಹೆಚ್ಚಿನದಾಗಿರುತ್ತದೆ. ಆದರೆ, ರಾತ್ರಿ 1 ಗಂಟೆ ಸುಮಾರಿಗೆ ಬಾಬಾಸಾಹೇಬ್ ನಿಧನರಾದರು ಎಂದು ತಿಳಿಸಿದ್ದಾರೆ.

“ಎರಡು-ಮೂರು ದಿನಗಳ ಹಿಂದೆ ಅವರನ್ನು ಬೈಟ್ಕೊ (ಆಸ್ಪತ್ರೆ) ಗೆ ಕರೆದೊಯ್ಯಲಾಯಿತು. ಅಲ್ಲಿಂದ ಅವರು ಮತ್ತೊಂದು ಆಸ್ಪತ್ರೆಗೆ, ಅಲ್ಲಿಂದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಹೋದೆವು. ವೈದ್ಯಕೀಯ ಕಾಲೇಜಿನಲ್ಲಿ ಬೆಡ್ ಇಲ್ಲ ಎಂದು ಹೇಳಿದರು. ನಾವು ಬಹಳಷ್ಟು ಆಸ್ಪತ್ರೆಗಳಿಗೆ ಹೋಗಿದೆವು. ಯಾರೂ ಅವರನ್ನು ದಾಖಲಿಸಿಕೊಳ್ಳಲಿಲ್ಲ. ನಂತರ ನಾವು ಸಿವಿಲ್ ಆಸ್ಪತ್ರೆಗೆ ಹಿಂತಿರುಗಿ ಅವರಿಗೆ ಆಕ್ಸಿಜನ್ ಮಾಸ್ಕ್‌ ತೆಗೆದುಕೊಂಡೆವು. ಯಾವ ಆಸ್ಪತ್ರೆಯವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಮೃತರ ಪತ್ನಿ ಸ್ಥಳೀಯ ಪತ್ರಕರ್ತರಿಗೆ ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ಕಟ್ಟಡದ ಬಳಿ ಪ್ರತಿಭಟನೆ ಮಾಡಲು ರೋಗಿಯನ್ನು ಯಾರು “ಪ್ರಚೋದಿಸಿದರು” ಎಂದು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ದೇಶದಲ್ಲಿ ಮಹಾರಾಷ್ಟ್ರವು ಅತಿಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿದ್ದು, ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಗಣನೀಯ ಏರಿಕೆ ಕಂಡಿದೆ. ಇದರಿಂದ ರಾಜ್ಯದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಮೂಲಸೌಕರ್ಯಗಳ ವ್ಯವಸ್ಥೆ ಕಡಿಮೆಯಾಗುವ ಸಂಭವವಿದೆ ಎಂದು ಸರ್ಕಾರ ತಿಳಿಸಿತ್ತು.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...