Homeದಲಿತ್ ಫೈಲ್ಸ್ಮಹಾರಾಷ್ಟ್ರ| ದೇವಸ್ಥಾನದ ಹೊರಗೆ ದಲಿತ ವ್ಯಕ್ತಿಗೆ ಜಾತಿ ನಿಂದನೆ; ಮೂವರ ವಿರುದ್ಧ ಪ್ರಕರಣ ದಾಖಲು

ಮಹಾರಾಷ್ಟ್ರ| ದೇವಸ್ಥಾನದ ಹೊರಗೆ ದಲಿತ ವ್ಯಕ್ತಿಗೆ ಜಾತಿ ನಿಂದನೆ; ಮೂವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಹಾರಾಷ್ಟ್ರದ ಮುಂಬೈನ ಮಲಾಡ್ ಪಶ್ಚಿಮದಲ್ಲಿರುವ ದೇವಸ್ಥಾನದ ಹೊರಗೆ ದಲಿತ ವ್ಯಕ್ತಿಯ ಮೇಲೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಪ್ರಬಲ ಜಾತಿಗೆ ಸೇರಿದ ಕುಟುಂಬದ ಮೂವರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜೂನ್ 28 ರಂದು ಮಾಲ್ವಾನಿಯ ಓಂಕಾರೇಶ್ವರ ಮಹಾದೇವ್ ದೇವಸ್ಥಾನದಲ್ಲಿ ದಲಿತ ವ್ಯಕ್ತಿಗೆ ನಿಂದನೆ ನಡೆದಿದೆ ಎಂದು 45 ವರ್ಷದ ಸಂತ್ರಸ್ತ ದೂರಿನಲ್ಲಿ ಹೇಳಿದ್ದಾರೆ. ಸಂತ್ರಸ್ತ ಮತ್ತು ದೇವಸ್ಥಾನದ ಟ್ರಸ್ಟ್ ಮುಖ್ಯಸ್ಥ ಮಿಥಿಲೇಶ್ ಸಿಂಗ್ ಅವರು ದೇವಸ್ಥಾನದ ಆವರಣದ ಬಳಿ ನೋ ಪಾರ್ಕಿಂಗ್ ಫಲಕವನ್ನು ಹಾಕುತ್ತಿದ್ದಾಗ, ಸ್ಥಳೀಯ ನಿವಾಸಿ ಸೋನು ಉಪಾಧ್ಯಾಯ ದೂರುದಾರರ ಮೇಲೆ ನಿಂದನೆ ಮಾಡಲು ಪ್ರಾರಂಭಿಸಿದ್ದಾರೆ.

“ಆರೋಪಿ ಉಪಾಧ್ಯಾಯ ಕುಟುಂಬವು ಬಹಳ ಸಮಯದಿಂದ ನನ್ನೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದೆ. ಸೋನು ಉಪಾಧ್ಯಾಯ ಮತ್ತು ಅವರ ಪೋಷಕರು ದೂರುದಾರರನ್ನು ನಿಂದಿಸಿದಾಗ ನಾವು ದೇವಸ್ಥಾನದ ಹೊರಗೆ ನೋ-ಪಾರ್ಕಿಂಗ್ ಬೋರ್ಡ್ ಹಾಕುತ್ತಿದ್ದೆವು” ಎಂದು ಸಿಂಗ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಸೋನು ಅವರ ಪೋಷಕರಾದ ಓಂಕಾರನಾಥ್ ಮತ್ತು ಪಾರ್ವತಿ ಉಪಾಧ್ಯಾಯ ಕೂಡ ಮಾತಿನ ಚಕಮಕಿ ನಡೆಸಿದ್ದಾರೆ. ದೂರುದಾರರ ಜಾತಿ ಹಿನ್ನೆಲೆಯ ಆಧಾರದ ಮೇಲೆ ದೇವಸ್ಥಾನದಲ್ಲಿ ಅವರ ಉಪಸ್ಥಿತಿಯನ್ನು ಮತ್ತಷ್ಟು ಪ್ರಶ್ನಿಸಿದರು. “ಇಂತಹ ಜಾತಿವಾದಿ ಮತ್ತು ತಾರತಮ್ಯದ ಕೃತ್ಯ ನಾಚಿಕೆಗೇಡಿನ ಸಂಗತಿ. ನಾವು 21 ನೇ ಶತಮಾನದಲ್ಲಿದ್ದೇವೆ” ಎಂದು ದೂರುದಾರರು ಹೇಳಿದರು.

“ನಾಲ್ಕು ವರ್ಷಗಳ ಹಿಂದೆ, ದೇವಸ್ಥಾನ ನಿರ್ಮಾಣವಾಗುತ್ತಿದ್ದಾಗ, ಎಲ್ಲ ಸಮುದಾಯಗಳು ಮತ್ತು ಧರ್ಮಗಳ ಜನರು ಒಟ್ಟಾಗಿ ಬಂದು ಉದ್ಘಾಟನೆಗಾಗಿ ಕೆಲಸ ಮಾಡಿದರು. ದೇವಸ್ಥಾನದ ಉದ್ಘಾಟನಾ ದಿನದಂದು ದಲಿತ ಕುಟುಂಬವೊಂದು ಪೂಜೆ ಸಲ್ಲಿಸಿದಾಗಿನಿಂದ, ಉಪಾಧ್ಯಾಯ ಕುಟುಂಬವು ಇದರಿಂದ ಅಸಮಾಧಾನಗೊಂಡಿದೆ” ಎಂದು ಸಂತ್ರಸ್ತರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಓಂಕಾರೇಶ್ವರ ಮಹಾದೇವ ದೇವಸ್ಥಾನ ಪ್ರತಿಷ್ಠಾನದ ಅಧ್ಯಕ್ಷ ಮಿಥಿಲೇಶ್ ಸಿಂಗ್ ವರದಿಗಾರರೊಂದಿಗೆ ಮಾತನಾಡಿ, ಸಂತ್ರಸ್ತ ಆಗಾಗ್ಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತಾ ಸ್ವಯಂಸೇವೆಗಳನ್ನು ಸಹ ಮಾಡುತ್ತಾನೆ ಎಂದುಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಾಧ್ಯಾಯ ಕುಟುಂಬದ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇವನಹಳ್ಳಿ ಭೂಮಿ ಹೋರಾಟಕ್ಕೆ ‘ಸಂಯುಕ್ತ ಕಿಸಾನ್ ಮೋರ್ಚಾ’ ಬೆಂಬಲವಿದೆ: ಡಾ. ದರ್ಶನ್‌ ಪಾಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is common in our country. Only for vote sake politicians use daliths. Otherwise daliths they themselves become supporters of upper castes and position will remain the same.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...