Homeದಲಿತ್ ಫೈಲ್ಸ್ಮಹಾರಾಷ್ಟ್ರ| ದೇವಸ್ಥಾನದ ಹೊರಗೆ ದಲಿತ ವ್ಯಕ್ತಿಗೆ ಜಾತಿ ನಿಂದನೆ; ಮೂವರ ವಿರುದ್ಧ ಪ್ರಕರಣ ದಾಖಲು

ಮಹಾರಾಷ್ಟ್ರ| ದೇವಸ್ಥಾನದ ಹೊರಗೆ ದಲಿತ ವ್ಯಕ್ತಿಗೆ ಜಾತಿ ನಿಂದನೆ; ಮೂವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಹಾರಾಷ್ಟ್ರದ ಮುಂಬೈನ ಮಲಾಡ್ ಪಶ್ಚಿಮದಲ್ಲಿರುವ ದೇವಸ್ಥಾನದ ಹೊರಗೆ ದಲಿತ ವ್ಯಕ್ತಿಯ ಮೇಲೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಪ್ರಬಲ ಜಾತಿಗೆ ಸೇರಿದ ಕುಟುಂಬದ ಮೂವರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜೂನ್ 28 ರಂದು ಮಾಲ್ವಾನಿಯ ಓಂಕಾರೇಶ್ವರ ಮಹಾದೇವ್ ದೇವಸ್ಥಾನದಲ್ಲಿ ದಲಿತ ವ್ಯಕ್ತಿಗೆ ನಿಂದನೆ ನಡೆದಿದೆ ಎಂದು 45 ವರ್ಷದ ಸಂತ್ರಸ್ತ ದೂರಿನಲ್ಲಿ ಹೇಳಿದ್ದಾರೆ. ಸಂತ್ರಸ್ತ ಮತ್ತು ದೇವಸ್ಥಾನದ ಟ್ರಸ್ಟ್ ಮುಖ್ಯಸ್ಥ ಮಿಥಿಲೇಶ್ ಸಿಂಗ್ ಅವರು ದೇವಸ್ಥಾನದ ಆವರಣದ ಬಳಿ ನೋ ಪಾರ್ಕಿಂಗ್ ಫಲಕವನ್ನು ಹಾಕುತ್ತಿದ್ದಾಗ, ಸ್ಥಳೀಯ ನಿವಾಸಿ ಸೋನು ಉಪಾಧ್ಯಾಯ ದೂರುದಾರರ ಮೇಲೆ ನಿಂದನೆ ಮಾಡಲು ಪ್ರಾರಂಭಿಸಿದ್ದಾರೆ.

“ಆರೋಪಿ ಉಪಾಧ್ಯಾಯ ಕುಟುಂಬವು ಬಹಳ ಸಮಯದಿಂದ ನನ್ನೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದೆ. ಸೋನು ಉಪಾಧ್ಯಾಯ ಮತ್ತು ಅವರ ಪೋಷಕರು ದೂರುದಾರರನ್ನು ನಿಂದಿಸಿದಾಗ ನಾವು ದೇವಸ್ಥಾನದ ಹೊರಗೆ ನೋ-ಪಾರ್ಕಿಂಗ್ ಬೋರ್ಡ್ ಹಾಕುತ್ತಿದ್ದೆವು” ಎಂದು ಸಿಂಗ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಸೋನು ಅವರ ಪೋಷಕರಾದ ಓಂಕಾರನಾಥ್ ಮತ್ತು ಪಾರ್ವತಿ ಉಪಾಧ್ಯಾಯ ಕೂಡ ಮಾತಿನ ಚಕಮಕಿ ನಡೆಸಿದ್ದಾರೆ. ದೂರುದಾರರ ಜಾತಿ ಹಿನ್ನೆಲೆಯ ಆಧಾರದ ಮೇಲೆ ದೇವಸ್ಥಾನದಲ್ಲಿ ಅವರ ಉಪಸ್ಥಿತಿಯನ್ನು ಮತ್ತಷ್ಟು ಪ್ರಶ್ನಿಸಿದರು. “ಇಂತಹ ಜಾತಿವಾದಿ ಮತ್ತು ತಾರತಮ್ಯದ ಕೃತ್ಯ ನಾಚಿಕೆಗೇಡಿನ ಸಂಗತಿ. ನಾವು 21 ನೇ ಶತಮಾನದಲ್ಲಿದ್ದೇವೆ” ಎಂದು ದೂರುದಾರರು ಹೇಳಿದರು.

“ನಾಲ್ಕು ವರ್ಷಗಳ ಹಿಂದೆ, ದೇವಸ್ಥಾನ ನಿರ್ಮಾಣವಾಗುತ್ತಿದ್ದಾಗ, ಎಲ್ಲ ಸಮುದಾಯಗಳು ಮತ್ತು ಧರ್ಮಗಳ ಜನರು ಒಟ್ಟಾಗಿ ಬಂದು ಉದ್ಘಾಟನೆಗಾಗಿ ಕೆಲಸ ಮಾಡಿದರು. ದೇವಸ್ಥಾನದ ಉದ್ಘಾಟನಾ ದಿನದಂದು ದಲಿತ ಕುಟುಂಬವೊಂದು ಪೂಜೆ ಸಲ್ಲಿಸಿದಾಗಿನಿಂದ, ಉಪಾಧ್ಯಾಯ ಕುಟುಂಬವು ಇದರಿಂದ ಅಸಮಾಧಾನಗೊಂಡಿದೆ” ಎಂದು ಸಂತ್ರಸ್ತರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಓಂಕಾರೇಶ್ವರ ಮಹಾದೇವ ದೇವಸ್ಥಾನ ಪ್ರತಿಷ್ಠಾನದ ಅಧ್ಯಕ್ಷ ಮಿಥಿಲೇಶ್ ಸಿಂಗ್ ವರದಿಗಾರರೊಂದಿಗೆ ಮಾತನಾಡಿ, ಸಂತ್ರಸ್ತ ಆಗಾಗ್ಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತಾ ಸ್ವಯಂಸೇವೆಗಳನ್ನು ಸಹ ಮಾಡುತ್ತಾನೆ ಎಂದುಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಾಧ್ಯಾಯ ಕುಟುಂಬದ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇವನಹಳ್ಳಿ ಭೂಮಿ ಹೋರಾಟಕ್ಕೆ ‘ಸಂಯುಕ್ತ ಕಿಸಾನ್ ಮೋರ್ಚಾ’ ಬೆಂಬಲವಿದೆ: ಡಾ. ದರ್ಶನ್‌ ಪಾಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is common in our country. Only for vote sake politicians use daliths. Otherwise daliths they themselves become supporters of upper castes and position will remain the same.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...