Homeಮುಖಪುಟಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

ಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರಿಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೊಠಡಿ ಸಂಖ್ಯೆ 602 ಅನ್ನು ನೀಡಲಾಗಿದೆ. ಆದರೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದಾಗಿನಿಂದ, ಪವಾರ್ ಅವರು ಕಚೇರಿಯ ಬಳಿ ಒಮ್ಮೆಯು ಹೋಗಿಲ್ಲ, ಏಕೆಂದರೆ ಆ ಕೊಠಡಿಯನ್ನು ದುರದೃಷ್ಟಕರವೆಂದು ಪರಿಗಣಿಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಪ್ರಮಾಣವಚನ ಸ್ವೀಕರಿಸಿದ ನಂತರ ಕೆಲಸ ಮಾಡಿದ ಮೊದಲ ದಿನವಾದ ಮಂಗಳವಾರ, ಅಜಿತ್‌ ಪವಾರ್‌ರವರು ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿಂದಲೇ ಮುಂದೆ ಅವರು ಶಾಶ್ವತವಾಗಿ ಕೆಲಸ ನಿರ್ವಹಿಸಲು ನಿರ್ಧರಿಸಿದ್ದಾರೆ.

ಆರನೇ ಮಹಡಿಯಲ್ಲಿರುವ ಐಎಎಸ್ ಅಧಿಕಾರಿ ಕುಂಟೆ ಅವರ ಕೊಠಡಿಯನ್ನು ಸಿಎಂ ಮತ್ತು ಉಪ ಸಿಎಂ ಕಚೇರಿಗಳ ನಡುವೆ ಇರುವ ಈ ಕಚೇರಿಯು ಇದು ಪವಾರ್ ಅವರ ಕಚೇರಿಯಾಗಿ ಪರಿವರ್ತಿಸುವಷ್ಟು ವಿಶಾಲವಾಗಿದೆ. ಆದ್ದರಿಂದ, ಅಗತ್ಯ ಮಾರ್ಪಾಡುಗಳನ್ನು ಮಾಡಲು ಮತ್ತು ಬದಲಿಗೆ ಕುಂಟೆ ಅವರನ್ನು 602 ಕೋಣೆಗೆ ಸ್ಥಳಾಂತರಿಸಲು ಪಿಡಬ್ಲ್ಯೂಡಿಯನ್ನು ಕೇಳಲಾಗಿದೆ.

‘ದುರದೃಷ್ಟಕರ’ ಕೊಠಡಿ!
602 ನೇ ಕೊಠಡಿಯಲ್ಲಿ ಈ ಹಿಂದೆ ಛಗನ್ ಭುಜ್ಬಾಲ್, ಏಕನಾಥ್ ಖಡ್ಸೆ, ಪಾಂಡುರಾಂಗ್ ಫಂಡ್ಕರ್ ಮತ್ತು ಅನಿಲ್ ಬೊಂಡೆ ಕೆಲಸ ನಿರ್ವಹಿಸಿದ್ದಾರೆ. ಕಾಕತಾಳೀಯವೆಂಬಂತೆ ಆದರೆ ಇವರೆಲ್ಲರೂ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡು ಅವರ ಮಂತ್ರಿ ಪದವಿಯನ್ನು ಕಳೆದುಕೊಳ್ಳಬೇಕಾಗಿ ಬಂದಿತ್ತು. ಅಜಿತ್‌ ಪವಾರ್ ಜ್ಯೋತಿಷಿಗಳು ಅಥವಾ ಧರ್ಮವನ್ನು ನಂಬದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಆದರೂ ಹಿಂದಿನ ಆ ಕೊಠಡಿಯ ನಿವಾಸಿಗಳ ಭವಿಷ್ಯದ ಉದಾಹರಣೆಯಿಂದಾಗಿ ಅವರು ಹೀಗೆ ಮಾಡಿರಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಭಜ್ಬಾಲ್ ಅವರು 1999 ರಿಂದ 2003 ರವರೆಗೆ ಗೃಹ ಖಾತೆಯ ಉಸ್ತುವಾರಿ ವಹಿಸಿಕೊಂಡಾಗ ಈ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದರು. ಆದರೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಹಣ ವರ್ಗಾವಣೆ ಆರೋಪವನ್ನು ತನಿಖೆ ಮಾಡುತ್ತಿತ್ತು. ಅಂತಿಮವಾಗಿ 2003 ರ ಡಿಸೆಂಬರ್‌ನಲ್ಲಿ ಅವರು ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.

ಆದರೆ ಅವರು ನವೆಂಬರ್ 1, 2004 ರಂದು ಲೋಕೋಪಯೋಗಿ ಸಚಿವರಾಗಿ ಕ್ಯಾಬಿನೆಟ್‌ಗೆ ಮರಳಿದರು ಮತ್ತು 26 ಸೆಪ್ಟೆಂಬರ್ 2014 ರವರೆಗೆ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 8 ಡಿಸೆಂಬರ್ 2008 ರಿಂದ 10 ನವೆಂಬರ್ 2010 ರವರೆಗೆ ಉಪಮುಖ್ಯಮಂತ್ರಿ ಆದರು. ಅಂತಿಮವಾಗಿ ಅವರನ್ನು ಮಾರ್ಚ್ 2016 ರಲ್ಲಿ ಇಡಿ ಬಂಧಿಸಿ, ಎರಡು ವರ್ಷ ಜೈಲಿನಲ್ಲಿಟ್ಟಿತ್ತು. 4 ಮೇ 2018 ರಂದು ಅವರಿಗೆ ಜಾಮೀನು ನೀಡಲಾಯಿತು.

2014 ರಿಂದ 2019 ರವರೆಗೆ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ಅವಧಿಯಲ್ಲಿ ಉಪಮುಖ್ಯಮಂತ್ರಿ ಇರಲಿಲ್ಲ. ಆದ್ದರಿಂದ ಆ ಕೋಣೆಯನ್ನು ಕಂದಾಯ ಮತ್ತು ಕೃಷಿ ಸಚಿವರಾದ ಖಡ್ಸೆಗೆ ನೀಡಲಾಯಿತು. ಖಡ್ಸೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಬೇಕಾಯಿತು ಮತ್ತು ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರ-ವಿರೋಧಿ ಬ್ಯೂರೋ ತನಿಖೆಯು ನಂತರ ಅವರಿಗೆ ಕ್ಲೀನ್ ಚಿಟ್ ನೀಡಿದ್ದರೂ, ಖಡ್ಸೆ ಅವರನ್ನು ಮತ್ತೆ ಫಡ್ನವೀಸ್ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಿಲ್ಲ. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರ ಸೇರುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಅವರು ಇತ್ತೀಚೆಗೆ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.

ಜುಲೈ 2016 ರಲ್ಲಿ ಫಂಡ್ಕರ್ ಅವರನ್ನು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು. ಕೃಷಿ ಸಚಿವ ಸ್ಥಾನದೊಂದಿಗೆ ಅವರಿಗೆ 602ನೇ ಕೊಠಡಿಯನ್ನು ನೀಡಲಾಯಿತು. ಒಂದು ಪ್ರಮುಖ ಖಾತೆಯನ್ನು ಹೊಂದಿದ್ದರೂ ಸಹ ಅವರಿಗೆ ಫಡ್ನವೀಸ್ ಅಥವಾ ಬಿಜೆಪಿಯಿಂದ ಸರಿಯಾದ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಫಂಡ್ಕಾರ್ ತೀವ್ರ  ಅಸಮಾಧಾನ ಹೊಂದಿದ್ದರು. ಅವರು ಕೃಷಿ ಸಚಿವರಾಗಿದ್ದಾಗಲೇ 31 ಮಾರ್ಚ್ 2018 ರಂದು ಭಾರಿ ಹೃದಯಘಾತದಿಂದ ನಿಧನರಾದರು.

ಇನ್ನು ಅನಿಲ್ ಬೊಂಡೆ ಅವರನ್ನು ಜುಲೈ 16, 2019 ರಂದು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು ಮತ್ತು ಕೃಷಿ ಖಾತೆಯನ್ನು ನೀಡಲಾಯಿತು. ಆದರೆ ಚುನಾವಣೆಗೆ ಕೆಲವೇ ದಿನಗಳು ಇದ್ದಿದ್ದರಿಂದ ಕೃಷಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಫಡ್ನವೀಸ್ ಅವರೇ ತೆಗೆದುಕೊಂಡರು.

ಇದೆಲ್ಲವನ್ನು ಗಮನಿಸಿರುವ ಅಜಿತ್‌ ಪವಾರ್‌ 602ನೇ ಕೊಠಡಿಗೆ ಹೋಗದಿರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ನೀರಾವರಿ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಆರೋಪಗಳು ಸಹ ಇವರ ಮೇಲಿವೆ. ಕಳೆದ ತಿಂಗಳು ತಾನೇ ಬಿಜೆಪಿಗೆ ಬೆಂಬಲ ಸೂಚಿಸುವ ನಾಟಕವಾಡಿ ಕೆಲವು ಕೇಸುಗಳನ್ನು ಖುಲಾಷೆಗೊಂಡಿದ್ದರು ಎಂಬರ್ಥದ ಮಾತುಗಳು ಸಹ ಕೇಳಿಬಂದಿದ್ದವು. ಇನ್ನೊಂದು ಕಡೆ ಇದೊಂದು ದೊಡ್ಡ ಮೌಢ್ಯವಾಗಿದೆ ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...