Homeಮುಖಪುಟಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

ಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರಿಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೊಠಡಿ ಸಂಖ್ಯೆ 602 ಅನ್ನು ನೀಡಲಾಗಿದೆ. ಆದರೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದಾಗಿನಿಂದ, ಪವಾರ್ ಅವರು ಕಚೇರಿಯ ಬಳಿ ಒಮ್ಮೆಯು ಹೋಗಿಲ್ಲ, ಏಕೆಂದರೆ ಆ ಕೊಠಡಿಯನ್ನು ದುರದೃಷ್ಟಕರವೆಂದು ಪರಿಗಣಿಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಪ್ರಮಾಣವಚನ ಸ್ವೀಕರಿಸಿದ ನಂತರ ಕೆಲಸ ಮಾಡಿದ ಮೊದಲ ದಿನವಾದ ಮಂಗಳವಾರ, ಅಜಿತ್‌ ಪವಾರ್‌ರವರು ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿಂದಲೇ ಮುಂದೆ ಅವರು ಶಾಶ್ವತವಾಗಿ ಕೆಲಸ ನಿರ್ವಹಿಸಲು ನಿರ್ಧರಿಸಿದ್ದಾರೆ.

ಆರನೇ ಮಹಡಿಯಲ್ಲಿರುವ ಐಎಎಸ್ ಅಧಿಕಾರಿ ಕುಂಟೆ ಅವರ ಕೊಠಡಿಯನ್ನು ಸಿಎಂ ಮತ್ತು ಉಪ ಸಿಎಂ ಕಚೇರಿಗಳ ನಡುವೆ ಇರುವ ಈ ಕಚೇರಿಯು ಇದು ಪವಾರ್ ಅವರ ಕಚೇರಿಯಾಗಿ ಪರಿವರ್ತಿಸುವಷ್ಟು ವಿಶಾಲವಾಗಿದೆ. ಆದ್ದರಿಂದ, ಅಗತ್ಯ ಮಾರ್ಪಾಡುಗಳನ್ನು ಮಾಡಲು ಮತ್ತು ಬದಲಿಗೆ ಕುಂಟೆ ಅವರನ್ನು 602 ಕೋಣೆಗೆ ಸ್ಥಳಾಂತರಿಸಲು ಪಿಡಬ್ಲ್ಯೂಡಿಯನ್ನು ಕೇಳಲಾಗಿದೆ.

‘ದುರದೃಷ್ಟಕರ’ ಕೊಠಡಿ!
602 ನೇ ಕೊಠಡಿಯಲ್ಲಿ ಈ ಹಿಂದೆ ಛಗನ್ ಭುಜ್ಬಾಲ್, ಏಕನಾಥ್ ಖಡ್ಸೆ, ಪಾಂಡುರಾಂಗ್ ಫಂಡ್ಕರ್ ಮತ್ತು ಅನಿಲ್ ಬೊಂಡೆ ಕೆಲಸ ನಿರ್ವಹಿಸಿದ್ದಾರೆ. ಕಾಕತಾಳೀಯವೆಂಬಂತೆ ಆದರೆ ಇವರೆಲ್ಲರೂ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡು ಅವರ ಮಂತ್ರಿ ಪದವಿಯನ್ನು ಕಳೆದುಕೊಳ್ಳಬೇಕಾಗಿ ಬಂದಿತ್ತು. ಅಜಿತ್‌ ಪವಾರ್ ಜ್ಯೋತಿಷಿಗಳು ಅಥವಾ ಧರ್ಮವನ್ನು ನಂಬದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಆದರೂ ಹಿಂದಿನ ಆ ಕೊಠಡಿಯ ನಿವಾಸಿಗಳ ಭವಿಷ್ಯದ ಉದಾಹರಣೆಯಿಂದಾಗಿ ಅವರು ಹೀಗೆ ಮಾಡಿರಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಭಜ್ಬಾಲ್ ಅವರು 1999 ರಿಂದ 2003 ರವರೆಗೆ ಗೃಹ ಖಾತೆಯ ಉಸ್ತುವಾರಿ ವಹಿಸಿಕೊಂಡಾಗ ಈ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದರು. ಆದರೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಹಣ ವರ್ಗಾವಣೆ ಆರೋಪವನ್ನು ತನಿಖೆ ಮಾಡುತ್ತಿತ್ತು. ಅಂತಿಮವಾಗಿ 2003 ರ ಡಿಸೆಂಬರ್‌ನಲ್ಲಿ ಅವರು ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.

ಆದರೆ ಅವರು ನವೆಂಬರ್ 1, 2004 ರಂದು ಲೋಕೋಪಯೋಗಿ ಸಚಿವರಾಗಿ ಕ್ಯಾಬಿನೆಟ್‌ಗೆ ಮರಳಿದರು ಮತ್ತು 26 ಸೆಪ್ಟೆಂಬರ್ 2014 ರವರೆಗೆ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 8 ಡಿಸೆಂಬರ್ 2008 ರಿಂದ 10 ನವೆಂಬರ್ 2010 ರವರೆಗೆ ಉಪಮುಖ್ಯಮಂತ್ರಿ ಆದರು. ಅಂತಿಮವಾಗಿ ಅವರನ್ನು ಮಾರ್ಚ್ 2016 ರಲ್ಲಿ ಇಡಿ ಬಂಧಿಸಿ, ಎರಡು ವರ್ಷ ಜೈಲಿನಲ್ಲಿಟ್ಟಿತ್ತು. 4 ಮೇ 2018 ರಂದು ಅವರಿಗೆ ಜಾಮೀನು ನೀಡಲಾಯಿತು.

2014 ರಿಂದ 2019 ರವರೆಗೆ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ಅವಧಿಯಲ್ಲಿ ಉಪಮುಖ್ಯಮಂತ್ರಿ ಇರಲಿಲ್ಲ. ಆದ್ದರಿಂದ ಆ ಕೋಣೆಯನ್ನು ಕಂದಾಯ ಮತ್ತು ಕೃಷಿ ಸಚಿವರಾದ ಖಡ್ಸೆಗೆ ನೀಡಲಾಯಿತು. ಖಡ್ಸೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಬೇಕಾಯಿತು ಮತ್ತು ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರ-ವಿರೋಧಿ ಬ್ಯೂರೋ ತನಿಖೆಯು ನಂತರ ಅವರಿಗೆ ಕ್ಲೀನ್ ಚಿಟ್ ನೀಡಿದ್ದರೂ, ಖಡ್ಸೆ ಅವರನ್ನು ಮತ್ತೆ ಫಡ್ನವೀಸ್ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಿಲ್ಲ. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರ ಸೇರುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಅವರು ಇತ್ತೀಚೆಗೆ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.

ಜುಲೈ 2016 ರಲ್ಲಿ ಫಂಡ್ಕರ್ ಅವರನ್ನು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು. ಕೃಷಿ ಸಚಿವ ಸ್ಥಾನದೊಂದಿಗೆ ಅವರಿಗೆ 602ನೇ ಕೊಠಡಿಯನ್ನು ನೀಡಲಾಯಿತು. ಒಂದು ಪ್ರಮುಖ ಖಾತೆಯನ್ನು ಹೊಂದಿದ್ದರೂ ಸಹ ಅವರಿಗೆ ಫಡ್ನವೀಸ್ ಅಥವಾ ಬಿಜೆಪಿಯಿಂದ ಸರಿಯಾದ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಫಂಡ್ಕಾರ್ ತೀವ್ರ  ಅಸಮಾಧಾನ ಹೊಂದಿದ್ದರು. ಅವರು ಕೃಷಿ ಸಚಿವರಾಗಿದ್ದಾಗಲೇ 31 ಮಾರ್ಚ್ 2018 ರಂದು ಭಾರಿ ಹೃದಯಘಾತದಿಂದ ನಿಧನರಾದರು.

ಇನ್ನು ಅನಿಲ್ ಬೊಂಡೆ ಅವರನ್ನು ಜುಲೈ 16, 2019 ರಂದು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು ಮತ್ತು ಕೃಷಿ ಖಾತೆಯನ್ನು ನೀಡಲಾಯಿತು. ಆದರೆ ಚುನಾವಣೆಗೆ ಕೆಲವೇ ದಿನಗಳು ಇದ್ದಿದ್ದರಿಂದ ಕೃಷಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಫಡ್ನವೀಸ್ ಅವರೇ ತೆಗೆದುಕೊಂಡರು.

ಇದೆಲ್ಲವನ್ನು ಗಮನಿಸಿರುವ ಅಜಿತ್‌ ಪವಾರ್‌ 602ನೇ ಕೊಠಡಿಗೆ ಹೋಗದಿರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ನೀರಾವರಿ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಆರೋಪಗಳು ಸಹ ಇವರ ಮೇಲಿವೆ. ಕಳೆದ ತಿಂಗಳು ತಾನೇ ಬಿಜೆಪಿಗೆ ಬೆಂಬಲ ಸೂಚಿಸುವ ನಾಟಕವಾಡಿ ಕೆಲವು ಕೇಸುಗಳನ್ನು ಖುಲಾಷೆಗೊಂಡಿದ್ದರು ಎಂಬರ್ಥದ ಮಾತುಗಳು ಸಹ ಕೇಳಿಬಂದಿದ್ದವು. ಇನ್ನೊಂದು ಕಡೆ ಇದೊಂದು ದೊಡ್ಡ ಮೌಢ್ಯವಾಗಿದೆ ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...