Homeಮುಖಪುಟಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

ಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರಿಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೊಠಡಿ ಸಂಖ್ಯೆ 602 ಅನ್ನು ನೀಡಲಾಗಿದೆ. ಆದರೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದಾಗಿನಿಂದ, ಪವಾರ್ ಅವರು ಕಚೇರಿಯ ಬಳಿ ಒಮ್ಮೆಯು ಹೋಗಿಲ್ಲ, ಏಕೆಂದರೆ ಆ ಕೊಠಡಿಯನ್ನು ದುರದೃಷ್ಟಕರವೆಂದು ಪರಿಗಣಿಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಪ್ರಮಾಣವಚನ ಸ್ವೀಕರಿಸಿದ ನಂತರ ಕೆಲಸ ಮಾಡಿದ ಮೊದಲ ದಿನವಾದ ಮಂಗಳವಾರ, ಅಜಿತ್‌ ಪವಾರ್‌ರವರು ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿಂದಲೇ ಮುಂದೆ ಅವರು ಶಾಶ್ವತವಾಗಿ ಕೆಲಸ ನಿರ್ವಹಿಸಲು ನಿರ್ಧರಿಸಿದ್ದಾರೆ.

ಆರನೇ ಮಹಡಿಯಲ್ಲಿರುವ ಐಎಎಸ್ ಅಧಿಕಾರಿ ಕುಂಟೆ ಅವರ ಕೊಠಡಿಯನ್ನು ಸಿಎಂ ಮತ್ತು ಉಪ ಸಿಎಂ ಕಚೇರಿಗಳ ನಡುವೆ ಇರುವ ಈ ಕಚೇರಿಯು ಇದು ಪವಾರ್ ಅವರ ಕಚೇರಿಯಾಗಿ ಪರಿವರ್ತಿಸುವಷ್ಟು ವಿಶಾಲವಾಗಿದೆ. ಆದ್ದರಿಂದ, ಅಗತ್ಯ ಮಾರ್ಪಾಡುಗಳನ್ನು ಮಾಡಲು ಮತ್ತು ಬದಲಿಗೆ ಕುಂಟೆ ಅವರನ್ನು 602 ಕೋಣೆಗೆ ಸ್ಥಳಾಂತರಿಸಲು ಪಿಡಬ್ಲ್ಯೂಡಿಯನ್ನು ಕೇಳಲಾಗಿದೆ.

‘ದುರದೃಷ್ಟಕರ’ ಕೊಠಡಿ!
602 ನೇ ಕೊಠಡಿಯಲ್ಲಿ ಈ ಹಿಂದೆ ಛಗನ್ ಭುಜ್ಬಾಲ್, ಏಕನಾಥ್ ಖಡ್ಸೆ, ಪಾಂಡುರಾಂಗ್ ಫಂಡ್ಕರ್ ಮತ್ತು ಅನಿಲ್ ಬೊಂಡೆ ಕೆಲಸ ನಿರ್ವಹಿಸಿದ್ದಾರೆ. ಕಾಕತಾಳೀಯವೆಂಬಂತೆ ಆದರೆ ಇವರೆಲ್ಲರೂ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡು ಅವರ ಮಂತ್ರಿ ಪದವಿಯನ್ನು ಕಳೆದುಕೊಳ್ಳಬೇಕಾಗಿ ಬಂದಿತ್ತು. ಅಜಿತ್‌ ಪವಾರ್ ಜ್ಯೋತಿಷಿಗಳು ಅಥವಾ ಧರ್ಮವನ್ನು ನಂಬದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಆದರೂ ಹಿಂದಿನ ಆ ಕೊಠಡಿಯ ನಿವಾಸಿಗಳ ಭವಿಷ್ಯದ ಉದಾಹರಣೆಯಿಂದಾಗಿ ಅವರು ಹೀಗೆ ಮಾಡಿರಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಭಜ್ಬಾಲ್ ಅವರು 1999 ರಿಂದ 2003 ರವರೆಗೆ ಗೃಹ ಖಾತೆಯ ಉಸ್ತುವಾರಿ ವಹಿಸಿಕೊಂಡಾಗ ಈ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದರು. ಆದರೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಹಣ ವರ್ಗಾವಣೆ ಆರೋಪವನ್ನು ತನಿಖೆ ಮಾಡುತ್ತಿತ್ತು. ಅಂತಿಮವಾಗಿ 2003 ರ ಡಿಸೆಂಬರ್‌ನಲ್ಲಿ ಅವರು ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.

ಆದರೆ ಅವರು ನವೆಂಬರ್ 1, 2004 ರಂದು ಲೋಕೋಪಯೋಗಿ ಸಚಿವರಾಗಿ ಕ್ಯಾಬಿನೆಟ್‌ಗೆ ಮರಳಿದರು ಮತ್ತು 26 ಸೆಪ್ಟೆಂಬರ್ 2014 ರವರೆಗೆ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 8 ಡಿಸೆಂಬರ್ 2008 ರಿಂದ 10 ನವೆಂಬರ್ 2010 ರವರೆಗೆ ಉಪಮುಖ್ಯಮಂತ್ರಿ ಆದರು. ಅಂತಿಮವಾಗಿ ಅವರನ್ನು ಮಾರ್ಚ್ 2016 ರಲ್ಲಿ ಇಡಿ ಬಂಧಿಸಿ, ಎರಡು ವರ್ಷ ಜೈಲಿನಲ್ಲಿಟ್ಟಿತ್ತು. 4 ಮೇ 2018 ರಂದು ಅವರಿಗೆ ಜಾಮೀನು ನೀಡಲಾಯಿತು.

2014 ರಿಂದ 2019 ರವರೆಗೆ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ಅವಧಿಯಲ್ಲಿ ಉಪಮುಖ್ಯಮಂತ್ರಿ ಇರಲಿಲ್ಲ. ಆದ್ದರಿಂದ ಆ ಕೋಣೆಯನ್ನು ಕಂದಾಯ ಮತ್ತು ಕೃಷಿ ಸಚಿವರಾದ ಖಡ್ಸೆಗೆ ನೀಡಲಾಯಿತು. ಖಡ್ಸೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಬೇಕಾಯಿತು ಮತ್ತು ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರ-ವಿರೋಧಿ ಬ್ಯೂರೋ ತನಿಖೆಯು ನಂತರ ಅವರಿಗೆ ಕ್ಲೀನ್ ಚಿಟ್ ನೀಡಿದ್ದರೂ, ಖಡ್ಸೆ ಅವರನ್ನು ಮತ್ತೆ ಫಡ್ನವೀಸ್ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಿಲ್ಲ. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರ ಸೇರುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಅವರು ಇತ್ತೀಚೆಗೆ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.

ಜುಲೈ 2016 ರಲ್ಲಿ ಫಂಡ್ಕರ್ ಅವರನ್ನು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು. ಕೃಷಿ ಸಚಿವ ಸ್ಥಾನದೊಂದಿಗೆ ಅವರಿಗೆ 602ನೇ ಕೊಠಡಿಯನ್ನು ನೀಡಲಾಯಿತು. ಒಂದು ಪ್ರಮುಖ ಖಾತೆಯನ್ನು ಹೊಂದಿದ್ದರೂ ಸಹ ಅವರಿಗೆ ಫಡ್ನವೀಸ್ ಅಥವಾ ಬಿಜೆಪಿಯಿಂದ ಸರಿಯಾದ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಫಂಡ್ಕಾರ್ ತೀವ್ರ  ಅಸಮಾಧಾನ ಹೊಂದಿದ್ದರು. ಅವರು ಕೃಷಿ ಸಚಿವರಾಗಿದ್ದಾಗಲೇ 31 ಮಾರ್ಚ್ 2018 ರಂದು ಭಾರಿ ಹೃದಯಘಾತದಿಂದ ನಿಧನರಾದರು.

ಇನ್ನು ಅನಿಲ್ ಬೊಂಡೆ ಅವರನ್ನು ಜುಲೈ 16, 2019 ರಂದು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು ಮತ್ತು ಕೃಷಿ ಖಾತೆಯನ್ನು ನೀಡಲಾಯಿತು. ಆದರೆ ಚುನಾವಣೆಗೆ ಕೆಲವೇ ದಿನಗಳು ಇದ್ದಿದ್ದರಿಂದ ಕೃಷಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಫಡ್ನವೀಸ್ ಅವರೇ ತೆಗೆದುಕೊಂಡರು.

ಇದೆಲ್ಲವನ್ನು ಗಮನಿಸಿರುವ ಅಜಿತ್‌ ಪವಾರ್‌ 602ನೇ ಕೊಠಡಿಗೆ ಹೋಗದಿರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ನೀರಾವರಿ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಆರೋಪಗಳು ಸಹ ಇವರ ಮೇಲಿವೆ. ಕಳೆದ ತಿಂಗಳು ತಾನೇ ಬಿಜೆಪಿಗೆ ಬೆಂಬಲ ಸೂಚಿಸುವ ನಾಟಕವಾಡಿ ಕೆಲವು ಕೇಸುಗಳನ್ನು ಖುಲಾಷೆಗೊಂಡಿದ್ದರು ಎಂಬರ್ಥದ ಮಾತುಗಳು ಸಹ ಕೇಳಿಬಂದಿದ್ದವು. ಇನ್ನೊಂದು ಕಡೆ ಇದೊಂದು ದೊಡ್ಡ ಮೌಢ್ಯವಾಗಿದೆ ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...