Homeಮುಖಪುಟಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

ಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರಿಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೊಠಡಿ ಸಂಖ್ಯೆ 602 ಅನ್ನು ನೀಡಲಾಗಿದೆ. ಆದರೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದಾಗಿನಿಂದ, ಪವಾರ್ ಅವರು ಕಚೇರಿಯ ಬಳಿ ಒಮ್ಮೆಯು ಹೋಗಿಲ್ಲ, ಏಕೆಂದರೆ ಆ ಕೊಠಡಿಯನ್ನು ದುರದೃಷ್ಟಕರವೆಂದು ಪರಿಗಣಿಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಪ್ರಮಾಣವಚನ ಸ್ವೀಕರಿಸಿದ ನಂತರ ಕೆಲಸ ಮಾಡಿದ ಮೊದಲ ದಿನವಾದ ಮಂಗಳವಾರ, ಅಜಿತ್‌ ಪವಾರ್‌ರವರು ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿಂದಲೇ ಮುಂದೆ ಅವರು ಶಾಶ್ವತವಾಗಿ ಕೆಲಸ ನಿರ್ವಹಿಸಲು ನಿರ್ಧರಿಸಿದ್ದಾರೆ.

ಆರನೇ ಮಹಡಿಯಲ್ಲಿರುವ ಐಎಎಸ್ ಅಧಿಕಾರಿ ಕುಂಟೆ ಅವರ ಕೊಠಡಿಯನ್ನು ಸಿಎಂ ಮತ್ತು ಉಪ ಸಿಎಂ ಕಚೇರಿಗಳ ನಡುವೆ ಇರುವ ಈ ಕಚೇರಿಯು ಇದು ಪವಾರ್ ಅವರ ಕಚೇರಿಯಾಗಿ ಪರಿವರ್ತಿಸುವಷ್ಟು ವಿಶಾಲವಾಗಿದೆ. ಆದ್ದರಿಂದ, ಅಗತ್ಯ ಮಾರ್ಪಾಡುಗಳನ್ನು ಮಾಡಲು ಮತ್ತು ಬದಲಿಗೆ ಕುಂಟೆ ಅವರನ್ನು 602 ಕೋಣೆಗೆ ಸ್ಥಳಾಂತರಿಸಲು ಪಿಡಬ್ಲ್ಯೂಡಿಯನ್ನು ಕೇಳಲಾಗಿದೆ.

‘ದುರದೃಷ್ಟಕರ’ ಕೊಠಡಿ!
602 ನೇ ಕೊಠಡಿಯಲ್ಲಿ ಈ ಹಿಂದೆ ಛಗನ್ ಭುಜ್ಬಾಲ್, ಏಕನಾಥ್ ಖಡ್ಸೆ, ಪಾಂಡುರಾಂಗ್ ಫಂಡ್ಕರ್ ಮತ್ತು ಅನಿಲ್ ಬೊಂಡೆ ಕೆಲಸ ನಿರ್ವಹಿಸಿದ್ದಾರೆ. ಕಾಕತಾಳೀಯವೆಂಬಂತೆ ಆದರೆ ಇವರೆಲ್ಲರೂ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡು ಅವರ ಮಂತ್ರಿ ಪದವಿಯನ್ನು ಕಳೆದುಕೊಳ್ಳಬೇಕಾಗಿ ಬಂದಿತ್ತು. ಅಜಿತ್‌ ಪವಾರ್ ಜ್ಯೋತಿಷಿಗಳು ಅಥವಾ ಧರ್ಮವನ್ನು ನಂಬದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಆದರೂ ಹಿಂದಿನ ಆ ಕೊಠಡಿಯ ನಿವಾಸಿಗಳ ಭವಿಷ್ಯದ ಉದಾಹರಣೆಯಿಂದಾಗಿ ಅವರು ಹೀಗೆ ಮಾಡಿರಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಭಜ್ಬಾಲ್ ಅವರು 1999 ರಿಂದ 2003 ರವರೆಗೆ ಗೃಹ ಖಾತೆಯ ಉಸ್ತುವಾರಿ ವಹಿಸಿಕೊಂಡಾಗ ಈ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದರು. ಆದರೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಹಣ ವರ್ಗಾವಣೆ ಆರೋಪವನ್ನು ತನಿಖೆ ಮಾಡುತ್ತಿತ್ತು. ಅಂತಿಮವಾಗಿ 2003 ರ ಡಿಸೆಂಬರ್‌ನಲ್ಲಿ ಅವರು ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.

ಆದರೆ ಅವರು ನವೆಂಬರ್ 1, 2004 ರಂದು ಲೋಕೋಪಯೋಗಿ ಸಚಿವರಾಗಿ ಕ್ಯಾಬಿನೆಟ್‌ಗೆ ಮರಳಿದರು ಮತ್ತು 26 ಸೆಪ್ಟೆಂಬರ್ 2014 ರವರೆಗೆ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 8 ಡಿಸೆಂಬರ್ 2008 ರಿಂದ 10 ನವೆಂಬರ್ 2010 ರವರೆಗೆ ಉಪಮುಖ್ಯಮಂತ್ರಿ ಆದರು. ಅಂತಿಮವಾಗಿ ಅವರನ್ನು ಮಾರ್ಚ್ 2016 ರಲ್ಲಿ ಇಡಿ ಬಂಧಿಸಿ, ಎರಡು ವರ್ಷ ಜೈಲಿನಲ್ಲಿಟ್ಟಿತ್ತು. 4 ಮೇ 2018 ರಂದು ಅವರಿಗೆ ಜಾಮೀನು ನೀಡಲಾಯಿತು.

2014 ರಿಂದ 2019 ರವರೆಗೆ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ಅವಧಿಯಲ್ಲಿ ಉಪಮುಖ್ಯಮಂತ್ರಿ ಇರಲಿಲ್ಲ. ಆದ್ದರಿಂದ ಆ ಕೋಣೆಯನ್ನು ಕಂದಾಯ ಮತ್ತು ಕೃಷಿ ಸಚಿವರಾದ ಖಡ್ಸೆಗೆ ನೀಡಲಾಯಿತು. ಖಡ್ಸೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಬೇಕಾಯಿತು ಮತ್ತು ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರ-ವಿರೋಧಿ ಬ್ಯೂರೋ ತನಿಖೆಯು ನಂತರ ಅವರಿಗೆ ಕ್ಲೀನ್ ಚಿಟ್ ನೀಡಿದ್ದರೂ, ಖಡ್ಸೆ ಅವರನ್ನು ಮತ್ತೆ ಫಡ್ನವೀಸ್ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಿಲ್ಲ. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರ ಸೇರುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಅವರು ಇತ್ತೀಚೆಗೆ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.

ಜುಲೈ 2016 ರಲ್ಲಿ ಫಂಡ್ಕರ್ ಅವರನ್ನು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು. ಕೃಷಿ ಸಚಿವ ಸ್ಥಾನದೊಂದಿಗೆ ಅವರಿಗೆ 602ನೇ ಕೊಠಡಿಯನ್ನು ನೀಡಲಾಯಿತು. ಒಂದು ಪ್ರಮುಖ ಖಾತೆಯನ್ನು ಹೊಂದಿದ್ದರೂ ಸಹ ಅವರಿಗೆ ಫಡ್ನವೀಸ್ ಅಥವಾ ಬಿಜೆಪಿಯಿಂದ ಸರಿಯಾದ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಫಂಡ್ಕಾರ್ ತೀವ್ರ  ಅಸಮಾಧಾನ ಹೊಂದಿದ್ದರು. ಅವರು ಕೃಷಿ ಸಚಿವರಾಗಿದ್ದಾಗಲೇ 31 ಮಾರ್ಚ್ 2018 ರಂದು ಭಾರಿ ಹೃದಯಘಾತದಿಂದ ನಿಧನರಾದರು.

ಇನ್ನು ಅನಿಲ್ ಬೊಂಡೆ ಅವರನ್ನು ಜುಲೈ 16, 2019 ರಂದು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು ಮತ್ತು ಕೃಷಿ ಖಾತೆಯನ್ನು ನೀಡಲಾಯಿತು. ಆದರೆ ಚುನಾವಣೆಗೆ ಕೆಲವೇ ದಿನಗಳು ಇದ್ದಿದ್ದರಿಂದ ಕೃಷಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಫಡ್ನವೀಸ್ ಅವರೇ ತೆಗೆದುಕೊಂಡರು.

ಇದೆಲ್ಲವನ್ನು ಗಮನಿಸಿರುವ ಅಜಿತ್‌ ಪವಾರ್‌ 602ನೇ ಕೊಠಡಿಗೆ ಹೋಗದಿರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ನೀರಾವರಿ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಆರೋಪಗಳು ಸಹ ಇವರ ಮೇಲಿವೆ. ಕಳೆದ ತಿಂಗಳು ತಾನೇ ಬಿಜೆಪಿಗೆ ಬೆಂಬಲ ಸೂಚಿಸುವ ನಾಟಕವಾಡಿ ಕೆಲವು ಕೇಸುಗಳನ್ನು ಖುಲಾಷೆಗೊಂಡಿದ್ದರು ಎಂಬರ್ಥದ ಮಾತುಗಳು ಸಹ ಕೇಳಿಬಂದಿದ್ದವು. ಇನ್ನೊಂದು ಕಡೆ ಇದೊಂದು ದೊಡ್ಡ ಮೌಢ್ಯವಾಗಿದೆ ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...