Homeಮುಖಪುಟಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

ಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರಿಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೊಠಡಿ ಸಂಖ್ಯೆ 602 ಅನ್ನು ನೀಡಲಾಗಿದೆ. ಆದರೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದಾಗಿನಿಂದ, ಪವಾರ್ ಅವರು ಕಚೇರಿಯ ಬಳಿ ಒಮ್ಮೆಯು ಹೋಗಿಲ್ಲ, ಏಕೆಂದರೆ ಆ ಕೊಠಡಿಯನ್ನು ದುರದೃಷ್ಟಕರವೆಂದು ಪರಿಗಣಿಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಪ್ರಮಾಣವಚನ ಸ್ವೀಕರಿಸಿದ ನಂತರ ಕೆಲಸ ಮಾಡಿದ ಮೊದಲ ದಿನವಾದ ಮಂಗಳವಾರ, ಅಜಿತ್‌ ಪವಾರ್‌ರವರು ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿಂದಲೇ ಮುಂದೆ ಅವರು ಶಾಶ್ವತವಾಗಿ ಕೆಲಸ ನಿರ್ವಹಿಸಲು ನಿರ್ಧರಿಸಿದ್ದಾರೆ.

ಆರನೇ ಮಹಡಿಯಲ್ಲಿರುವ ಐಎಎಸ್ ಅಧಿಕಾರಿ ಕುಂಟೆ ಅವರ ಕೊಠಡಿಯನ್ನು ಸಿಎಂ ಮತ್ತು ಉಪ ಸಿಎಂ ಕಚೇರಿಗಳ ನಡುವೆ ಇರುವ ಈ ಕಚೇರಿಯು ಇದು ಪವಾರ್ ಅವರ ಕಚೇರಿಯಾಗಿ ಪರಿವರ್ತಿಸುವಷ್ಟು ವಿಶಾಲವಾಗಿದೆ. ಆದ್ದರಿಂದ, ಅಗತ್ಯ ಮಾರ್ಪಾಡುಗಳನ್ನು ಮಾಡಲು ಮತ್ತು ಬದಲಿಗೆ ಕುಂಟೆ ಅವರನ್ನು 602 ಕೋಣೆಗೆ ಸ್ಥಳಾಂತರಿಸಲು ಪಿಡಬ್ಲ್ಯೂಡಿಯನ್ನು ಕೇಳಲಾಗಿದೆ.

‘ದುರದೃಷ್ಟಕರ’ ಕೊಠಡಿ!
602 ನೇ ಕೊಠಡಿಯಲ್ಲಿ ಈ ಹಿಂದೆ ಛಗನ್ ಭುಜ್ಬಾಲ್, ಏಕನಾಥ್ ಖಡ್ಸೆ, ಪಾಂಡುರಾಂಗ್ ಫಂಡ್ಕರ್ ಮತ್ತು ಅನಿಲ್ ಬೊಂಡೆ ಕೆಲಸ ನಿರ್ವಹಿಸಿದ್ದಾರೆ. ಕಾಕತಾಳೀಯವೆಂಬಂತೆ ಆದರೆ ಇವರೆಲ್ಲರೂ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡು ಅವರ ಮಂತ್ರಿ ಪದವಿಯನ್ನು ಕಳೆದುಕೊಳ್ಳಬೇಕಾಗಿ ಬಂದಿತ್ತು. ಅಜಿತ್‌ ಪವಾರ್ ಜ್ಯೋತಿಷಿಗಳು ಅಥವಾ ಧರ್ಮವನ್ನು ನಂಬದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಆದರೂ ಹಿಂದಿನ ಆ ಕೊಠಡಿಯ ನಿವಾಸಿಗಳ ಭವಿಷ್ಯದ ಉದಾಹರಣೆಯಿಂದಾಗಿ ಅವರು ಹೀಗೆ ಮಾಡಿರಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಭಜ್ಬಾಲ್ ಅವರು 1999 ರಿಂದ 2003 ರವರೆಗೆ ಗೃಹ ಖಾತೆಯ ಉಸ್ತುವಾರಿ ವಹಿಸಿಕೊಂಡಾಗ ಈ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದರು. ಆದರೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಹಣ ವರ್ಗಾವಣೆ ಆರೋಪವನ್ನು ತನಿಖೆ ಮಾಡುತ್ತಿತ್ತು. ಅಂತಿಮವಾಗಿ 2003 ರ ಡಿಸೆಂಬರ್‌ನಲ್ಲಿ ಅವರು ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.

ಆದರೆ ಅವರು ನವೆಂಬರ್ 1, 2004 ರಂದು ಲೋಕೋಪಯೋಗಿ ಸಚಿವರಾಗಿ ಕ್ಯಾಬಿನೆಟ್‌ಗೆ ಮರಳಿದರು ಮತ್ತು 26 ಸೆಪ್ಟೆಂಬರ್ 2014 ರವರೆಗೆ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 8 ಡಿಸೆಂಬರ್ 2008 ರಿಂದ 10 ನವೆಂಬರ್ 2010 ರವರೆಗೆ ಉಪಮುಖ್ಯಮಂತ್ರಿ ಆದರು. ಅಂತಿಮವಾಗಿ ಅವರನ್ನು ಮಾರ್ಚ್ 2016 ರಲ್ಲಿ ಇಡಿ ಬಂಧಿಸಿ, ಎರಡು ವರ್ಷ ಜೈಲಿನಲ್ಲಿಟ್ಟಿತ್ತು. 4 ಮೇ 2018 ರಂದು ಅವರಿಗೆ ಜಾಮೀನು ನೀಡಲಾಯಿತು.

2014 ರಿಂದ 2019 ರವರೆಗೆ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ಅವಧಿಯಲ್ಲಿ ಉಪಮುಖ್ಯಮಂತ್ರಿ ಇರಲಿಲ್ಲ. ಆದ್ದರಿಂದ ಆ ಕೋಣೆಯನ್ನು ಕಂದಾಯ ಮತ್ತು ಕೃಷಿ ಸಚಿವರಾದ ಖಡ್ಸೆಗೆ ನೀಡಲಾಯಿತು. ಖಡ್ಸೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಬೇಕಾಯಿತು ಮತ್ತು ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರ-ವಿರೋಧಿ ಬ್ಯೂರೋ ತನಿಖೆಯು ನಂತರ ಅವರಿಗೆ ಕ್ಲೀನ್ ಚಿಟ್ ನೀಡಿದ್ದರೂ, ಖಡ್ಸೆ ಅವರನ್ನು ಮತ್ತೆ ಫಡ್ನವೀಸ್ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಿಲ್ಲ. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರ ಸೇರುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಅವರು ಇತ್ತೀಚೆಗೆ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.

ಜುಲೈ 2016 ರಲ್ಲಿ ಫಂಡ್ಕರ್ ಅವರನ್ನು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು. ಕೃಷಿ ಸಚಿವ ಸ್ಥಾನದೊಂದಿಗೆ ಅವರಿಗೆ 602ನೇ ಕೊಠಡಿಯನ್ನು ನೀಡಲಾಯಿತು. ಒಂದು ಪ್ರಮುಖ ಖಾತೆಯನ್ನು ಹೊಂದಿದ್ದರೂ ಸಹ ಅವರಿಗೆ ಫಡ್ನವೀಸ್ ಅಥವಾ ಬಿಜೆಪಿಯಿಂದ ಸರಿಯಾದ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಫಂಡ್ಕಾರ್ ತೀವ್ರ  ಅಸಮಾಧಾನ ಹೊಂದಿದ್ದರು. ಅವರು ಕೃಷಿ ಸಚಿವರಾಗಿದ್ದಾಗಲೇ 31 ಮಾರ್ಚ್ 2018 ರಂದು ಭಾರಿ ಹೃದಯಘಾತದಿಂದ ನಿಧನರಾದರು.

ಇನ್ನು ಅನಿಲ್ ಬೊಂಡೆ ಅವರನ್ನು ಜುಲೈ 16, 2019 ರಂದು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು ಮತ್ತು ಕೃಷಿ ಖಾತೆಯನ್ನು ನೀಡಲಾಯಿತು. ಆದರೆ ಚುನಾವಣೆಗೆ ಕೆಲವೇ ದಿನಗಳು ಇದ್ದಿದ್ದರಿಂದ ಕೃಷಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಫಡ್ನವೀಸ್ ಅವರೇ ತೆಗೆದುಕೊಂಡರು.

ಇದೆಲ್ಲವನ್ನು ಗಮನಿಸಿರುವ ಅಜಿತ್‌ ಪವಾರ್‌ 602ನೇ ಕೊಠಡಿಗೆ ಹೋಗದಿರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ನೀರಾವರಿ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಆರೋಪಗಳು ಸಹ ಇವರ ಮೇಲಿವೆ. ಕಳೆದ ತಿಂಗಳು ತಾನೇ ಬಿಜೆಪಿಗೆ ಬೆಂಬಲ ಸೂಚಿಸುವ ನಾಟಕವಾಡಿ ಕೆಲವು ಕೇಸುಗಳನ್ನು ಖುಲಾಷೆಗೊಂಡಿದ್ದರು ಎಂಬರ್ಥದ ಮಾತುಗಳು ಸಹ ಕೇಳಿಬಂದಿದ್ದವು. ಇನ್ನೊಂದು ಕಡೆ ಇದೊಂದು ದೊಡ್ಡ ಮೌಢ್ಯವಾಗಿದೆ ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...